ETV Bharat / bharat

Manipur violence: 'ಮಗ, ಗಂಡನ ಮೃತದೇಹ ನೋಡಬೇಕು..': ಮಣಿಪುರ ಸಂತ್ರಸ್ತೆಯ ತಾಯಿಯ ಹೇಳಿಕೆ

author img

By

Published : Jul 30, 2023, 9:24 AM IST

Manipur violence update: ಮಣಿಪುರದಲ್ಲಿ ನಡೆದ ಭೀಕರ ಹಿಂಸಾಚಾರ ಸಂದರ್ಭದಲ್ಲಿ ಇಬ್ಬರು ಮಹಿಳೆಯರನ್ನು ನಗ್ನಗೊಳಿಸಿ ಮೆರವಣಿಗೆ ಮಾಡಿದ ದುರುಳರಿಗೆ ಮರಣದಂಡನೆ ವಿಧಿಸುವಂತೆ ಸಂತ್ರಸ್ತೆಯ ತಾಯಿ ಪ್ರತಿಪಕ್ಷಗಳ ನಿಯೋಗದ ಮೂಲಕ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Etv Bharat
Etv Bharat

ಇಂಫಾಲ್​ (ಮಣಿಪುರ) : "ಮಗಳನ್ನು ನಗ್ನಗೊಳಿಸಿ ಮೆರವಣಿಗೆ ಮಾಡಿದ ದುಷ್ಕರ್ಮಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕು. ಇನ್ನು ಮುಂದೆ ನಮಗೆ ಮೈಥೇಯಿ ಸಮುದಾಯದವರೊಂದಿಗೆ ಬದುಕಲು ಸಾಧ್ಯವಿಲ್ಲ" ಎಂದು ಸಂತ್ರಸ್ತೆಯೊಬ್ಬರ ತಾಯಿ ವೇದನೆ ವ್ಯಕ್ತಪಡಿಸಿದರು. ಪ್ರತಿಪಕ್ಷಗಳ 'ಇಂಡಿಯಾ' ಒಕ್ಕೂಟದ ನಿಯೋಗವು ಶನಿವಾರ ಮಣಿಪುರಕ್ಕೆ ಭೇಟಿ ನೀಡಿ ಸಂತ್ರಸ್ತರ ಜೊತೆ ಮಾತುಕತೆ ನಡೆಸಿದ ಸಂದರ್ಭದಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಅವರು ಮನವಿ ಮಾಡಿದ್ದಾರೆ.

"ಅಂದು ನಡೆದ ಹಿಂಸಾಚಾರದಲ್ಲಿ ನಾನು ನನ್ನ ಗಂಡ ಮತ್ತು ಮಗನನ್ನು ಕಳೆದುಕೊಂಡಿದ್ದೇನೆ. ನಮಗೆ ಸೂಕ್ತ ಪರಿಹಾರ ನೀಡಬೇಕು. ನಾನು ಇಲ್ಲಿನ ರಾಜ್ಯ ಸರ್ಕಾರವನ್ನು ನಂಬಲಾರೆ. ಆದರೆ ಕೇಂದ್ರ ಸರ್ಕಾರವನ್ನು ನಂಬುತ್ತೇನೆ" ಎಂದರು. ಇದೇ ವೇಳೆ, "ನಾನು ನನ್ನ ಮಗ ಹಾಗೂ ಗಂಡನ ಶವವನ್ನು ನೋಡಬೇಕು" ಎಂದು ನಿಯೋಗದ ಸದಸ್ಯರಾದ ಟಿಎಂಸಿ ಸಂಸದೆ ಸುಶ್ಮಿತಾ ದೇವ್​ ಮತ್ತು ಡಿಎಂಕೆ ಸಂಸದೆ ಕನಿಮೋಳಿ ಅವರಲ್ಲಿ ಕಣ್ಣೀರಿನ ಬೇಡಿಕೆ ಇಟ್ಟರು.

ಸಂಸದೆ ಸುಶ್ಮಿತಾ ದೇವ್ ಪ್ರತಿಕ್ರಿಯಿಸಿ​​, "ದುಷ್ಕರ್ಮಿಗಳು ಇವರ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾರೆ. ಇವರ ಪತಿ ಮತ್ತು ಮಗನನ್ನು ಮಣಿಪುರ ಪೊಲೀಸರ ಸಮ್ಮುಖದಲ್ಲಿಯೇ ಕೊಂದು ಹಾಕಿದ್ದಾರೆ. ಇದುವರೆಗೂ ಓರ್ವ ಪೊಲೀಸ್ ಅಧಿಕಾರಿಯನ್ನೂ ಅಮಾನತುಗೊಳಿಸಿಲ್ಲ. ಸಂತ್ರಸ್ತೆಯು ತನ್ನ ಮೇಲೆ ಪೊಲೀಸರ ಮುಂದೆಯೇ ಅತ್ಯಾಚಾರ ನಡೆಯಿತು ಎಂದು ತಿಳಿಸಿದ್ದಾರೆ. ಆಕೆಯನ್ನು ರಕ್ಷಿಸಲು ಪೊಲೀಸರು ಕ್ರಮ ಕೈಗೊಂಡಿಲ್ಲ. ಇದೀಗ ಸಂತ್ರಸ್ತೆ ಪೊಲೀಸರಿಗೆ ಹೆದರುತ್ತಿದ್ದಾಳೆ. ಸಂತ್ರಸ್ತೆ ಪೊಲೀಸರನ್ನು ನಂಬದಿದ್ದರೆ ಅದು ಸಾಂವಿಧಾನಿಕ ಬಿಕ್ಕಟ್ಟಾಗುತ್ತದೆ" ಎಂದು ಹೇಳಿದರು.

ಡಿಎಂಕೆ ಸಂಸದೆ ಕನಿಮೋಳಿ ಮಾತನಾಡಿ, "ಸಂತ್ರಸ್ತೆಯ ತಂದೆ ಸೇನೆಯಲ್ಲಿ ಕಾರ್ಯನಿರ್ವಹಿಸಿದ್ದರು. ದೇಶವನ್ನು ರಕ್ಷಿಸಿದ ಅವರಿಗೆ ತನ್ನ ಕುಟುಂಬವನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಸಂತ್ರಸ್ತೆಯ ತಾಯಿಯನ್ನು ನೋಡಿದಾಗ ತುಂಬಾ ಬೇಸರವಾಗುತ್ತಿದೆ. ಇವರ ಮಗಳ ಮೇಲೆ ಅತ್ಯಾಚಾರ ಮತ್ತು ಅದೇ ದಿನ ನಡೆದ ಹಿಂಸಾಚಾರದಲ್ಲಿ ಗಂಡ ಮತ್ತು ಮಗನನ್ನು ಕಳೆದುಕೊಂಡಿದ್ದಾರೆ. ಇದುವರೆಗೂ ಇವರಿಗೆ ನ್ಯಾಯ ಸಿಕ್ಕಿಲ್ಲ" ಎಂದರು.

ಮೇ 3ರಂದು ಮೀಸಲಾತಿ ವಿಚಾರವಾಗಿ ಮೈಥೇಯಿ ಸಮುದಾಯದ ಬೇಡಿಕೆ ಖಂಡಿಸಿ ಕುಕಿ ಸಮುದಾಯವು 'ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ' ಆಯೋಜಿಸಿತ್ತು. ಇದು ಭೀಕರ ಜನಾಂಗೀಯ ಹಿಂಸಾಚಾರಕ್ಕೆ ತಿರುಗಿತ್ತು. ಮೇ 4ರಂದು ನಡೆದ ಮಹಿಳೆಯರ ನಗ್ನ ಮೆರವಣಿಗೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಇತ್ತೀಚೆಗೆ ವೈರಲ್​ ಆಗಿತ್ತು. ಈ ಅಮಾನವೀಯ ವಿಡಿಯೋ ಭಾರಿ ಜನಾಕ್ರೋಶಕ್ಕೆ ಕಾರಣವಾಗಿತ್ತು. ಕಳೆದ ಮೂರು ತಿಂಗಳುಗಳಿಂದ ನಡೆಯುತ್ತಿರುವ ಹಿಂಸಾಚಾರದಲ್ಲಿ ಒಟ್ಟು 160 ಜನ ಸಾವನ್ನಪ್ಪಿದ್ದು, ನೂರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಮಣಿಪುರದ ಪರಿಸ್ಥಿತಿ ಇನ್ನೂ ತಣ್ಣಗಾಗಿಲ್ಲ. ಹೀಗಾಗಿ ಪ್ರತಿಪಕ್ಷಗಳು ಸಂಸತ್ತಿನ ಉಭಯ ಸದನಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಸದನದಲ್ಲಿ ಹೇಳಿಕೆ ನೀಡಬೇಕು ಎಂಬುದು ಪ್ರತಿಪಕ್ಷಗಳ ಆಗ್ರಹವಾಗಿದೆ.

ಇದನ್ನೂ ಓದಿ :Watch.. ಹಿಂಸಾಚಾರಕ್ಕೆ ತುತ್ತಾಗಿರುವ ಮಣಿಪುರಕ್ಕೆ ಈರುಳ್ಳಿ ರವಾನೆ!

ಇಂಫಾಲ್​ (ಮಣಿಪುರ) : "ಮಗಳನ್ನು ನಗ್ನಗೊಳಿಸಿ ಮೆರವಣಿಗೆ ಮಾಡಿದ ದುಷ್ಕರ್ಮಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕು. ಇನ್ನು ಮುಂದೆ ನಮಗೆ ಮೈಥೇಯಿ ಸಮುದಾಯದವರೊಂದಿಗೆ ಬದುಕಲು ಸಾಧ್ಯವಿಲ್ಲ" ಎಂದು ಸಂತ್ರಸ್ತೆಯೊಬ್ಬರ ತಾಯಿ ವೇದನೆ ವ್ಯಕ್ತಪಡಿಸಿದರು. ಪ್ರತಿಪಕ್ಷಗಳ 'ಇಂಡಿಯಾ' ಒಕ್ಕೂಟದ ನಿಯೋಗವು ಶನಿವಾರ ಮಣಿಪುರಕ್ಕೆ ಭೇಟಿ ನೀಡಿ ಸಂತ್ರಸ್ತರ ಜೊತೆ ಮಾತುಕತೆ ನಡೆಸಿದ ಸಂದರ್ಭದಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಅವರು ಮನವಿ ಮಾಡಿದ್ದಾರೆ.

"ಅಂದು ನಡೆದ ಹಿಂಸಾಚಾರದಲ್ಲಿ ನಾನು ನನ್ನ ಗಂಡ ಮತ್ತು ಮಗನನ್ನು ಕಳೆದುಕೊಂಡಿದ್ದೇನೆ. ನಮಗೆ ಸೂಕ್ತ ಪರಿಹಾರ ನೀಡಬೇಕು. ನಾನು ಇಲ್ಲಿನ ರಾಜ್ಯ ಸರ್ಕಾರವನ್ನು ನಂಬಲಾರೆ. ಆದರೆ ಕೇಂದ್ರ ಸರ್ಕಾರವನ್ನು ನಂಬುತ್ತೇನೆ" ಎಂದರು. ಇದೇ ವೇಳೆ, "ನಾನು ನನ್ನ ಮಗ ಹಾಗೂ ಗಂಡನ ಶವವನ್ನು ನೋಡಬೇಕು" ಎಂದು ನಿಯೋಗದ ಸದಸ್ಯರಾದ ಟಿಎಂಸಿ ಸಂಸದೆ ಸುಶ್ಮಿತಾ ದೇವ್​ ಮತ್ತು ಡಿಎಂಕೆ ಸಂಸದೆ ಕನಿಮೋಳಿ ಅವರಲ್ಲಿ ಕಣ್ಣೀರಿನ ಬೇಡಿಕೆ ಇಟ್ಟರು.

ಸಂಸದೆ ಸುಶ್ಮಿತಾ ದೇವ್ ಪ್ರತಿಕ್ರಿಯಿಸಿ​​, "ದುಷ್ಕರ್ಮಿಗಳು ಇವರ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾರೆ. ಇವರ ಪತಿ ಮತ್ತು ಮಗನನ್ನು ಮಣಿಪುರ ಪೊಲೀಸರ ಸಮ್ಮುಖದಲ್ಲಿಯೇ ಕೊಂದು ಹಾಕಿದ್ದಾರೆ. ಇದುವರೆಗೂ ಓರ್ವ ಪೊಲೀಸ್ ಅಧಿಕಾರಿಯನ್ನೂ ಅಮಾನತುಗೊಳಿಸಿಲ್ಲ. ಸಂತ್ರಸ್ತೆಯು ತನ್ನ ಮೇಲೆ ಪೊಲೀಸರ ಮುಂದೆಯೇ ಅತ್ಯಾಚಾರ ನಡೆಯಿತು ಎಂದು ತಿಳಿಸಿದ್ದಾರೆ. ಆಕೆಯನ್ನು ರಕ್ಷಿಸಲು ಪೊಲೀಸರು ಕ್ರಮ ಕೈಗೊಂಡಿಲ್ಲ. ಇದೀಗ ಸಂತ್ರಸ್ತೆ ಪೊಲೀಸರಿಗೆ ಹೆದರುತ್ತಿದ್ದಾಳೆ. ಸಂತ್ರಸ್ತೆ ಪೊಲೀಸರನ್ನು ನಂಬದಿದ್ದರೆ ಅದು ಸಾಂವಿಧಾನಿಕ ಬಿಕ್ಕಟ್ಟಾಗುತ್ತದೆ" ಎಂದು ಹೇಳಿದರು.

ಡಿಎಂಕೆ ಸಂಸದೆ ಕನಿಮೋಳಿ ಮಾತನಾಡಿ, "ಸಂತ್ರಸ್ತೆಯ ತಂದೆ ಸೇನೆಯಲ್ಲಿ ಕಾರ್ಯನಿರ್ವಹಿಸಿದ್ದರು. ದೇಶವನ್ನು ರಕ್ಷಿಸಿದ ಅವರಿಗೆ ತನ್ನ ಕುಟುಂಬವನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಸಂತ್ರಸ್ತೆಯ ತಾಯಿಯನ್ನು ನೋಡಿದಾಗ ತುಂಬಾ ಬೇಸರವಾಗುತ್ತಿದೆ. ಇವರ ಮಗಳ ಮೇಲೆ ಅತ್ಯಾಚಾರ ಮತ್ತು ಅದೇ ದಿನ ನಡೆದ ಹಿಂಸಾಚಾರದಲ್ಲಿ ಗಂಡ ಮತ್ತು ಮಗನನ್ನು ಕಳೆದುಕೊಂಡಿದ್ದಾರೆ. ಇದುವರೆಗೂ ಇವರಿಗೆ ನ್ಯಾಯ ಸಿಕ್ಕಿಲ್ಲ" ಎಂದರು.

ಮೇ 3ರಂದು ಮೀಸಲಾತಿ ವಿಚಾರವಾಗಿ ಮೈಥೇಯಿ ಸಮುದಾಯದ ಬೇಡಿಕೆ ಖಂಡಿಸಿ ಕುಕಿ ಸಮುದಾಯವು 'ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ' ಆಯೋಜಿಸಿತ್ತು. ಇದು ಭೀಕರ ಜನಾಂಗೀಯ ಹಿಂಸಾಚಾರಕ್ಕೆ ತಿರುಗಿತ್ತು. ಮೇ 4ರಂದು ನಡೆದ ಮಹಿಳೆಯರ ನಗ್ನ ಮೆರವಣಿಗೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಇತ್ತೀಚೆಗೆ ವೈರಲ್​ ಆಗಿತ್ತು. ಈ ಅಮಾನವೀಯ ವಿಡಿಯೋ ಭಾರಿ ಜನಾಕ್ರೋಶಕ್ಕೆ ಕಾರಣವಾಗಿತ್ತು. ಕಳೆದ ಮೂರು ತಿಂಗಳುಗಳಿಂದ ನಡೆಯುತ್ತಿರುವ ಹಿಂಸಾಚಾರದಲ್ಲಿ ಒಟ್ಟು 160 ಜನ ಸಾವನ್ನಪ್ಪಿದ್ದು, ನೂರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಮಣಿಪುರದ ಪರಿಸ್ಥಿತಿ ಇನ್ನೂ ತಣ್ಣಗಾಗಿಲ್ಲ. ಹೀಗಾಗಿ ಪ್ರತಿಪಕ್ಷಗಳು ಸಂಸತ್ತಿನ ಉಭಯ ಸದನಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಸದನದಲ್ಲಿ ಹೇಳಿಕೆ ನೀಡಬೇಕು ಎಂಬುದು ಪ್ರತಿಪಕ್ಷಗಳ ಆಗ್ರಹವಾಗಿದೆ.

ಇದನ್ನೂ ಓದಿ :Watch.. ಹಿಂಸಾಚಾರಕ್ಕೆ ತುತ್ತಾಗಿರುವ ಮಣಿಪುರಕ್ಕೆ ಈರುಳ್ಳಿ ರವಾನೆ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.