ETV Bharat / bharat

Mega opposition meet: ಪಾಟ್ನಾದ ಬೃಹತ್ ಪ್ರತಿಪಕ್ಷಗಳ ಸಭೆಗೆ ಕೆಸಿಆರ್ ಅನುಮಾನ, ಉಳಿದ ನಾಯಕರ ಹಾಜರಿ ಖಚಿತ

ದೇಶದ ಪ್ರಮುಖ ವಿರೋಧ ಪಕ್ಷದ ನಾಯಕರು ಜೂನ್ 23ರಂದು ಪಾಟ್ನಾದಲ್ಲಿ ಭೇಟಿಯಾಗಲು ಸಿದ್ಧರಾಗಿದ್ದಾರೆ. ತೆಲಂಗಾಣ ಸಿಎಂ ಕೆಸಿಆರ್ ಹೊರತುಪಡಿಸಿ, ಎಲ್ಲರೂ ಭಾಗವಹಿಸುವುದನ್ನು ಖಚಿತಪಡಿಸಿದ್ದಾರೆ. 2024ರ ಲೋಕಸಭೆ ಚುನಾವಣೆಗೆ ಮುನ್ನ ಪ್ರಧಾನಿ ಮೋದಿ ವಿರುದ್ಧ ಪ್ರತಿಪಕ್ಷಗಳನ್ನು ಸಜ್ಜುಗೊಳಿಸಲು ಬಿಹಾರ ಸಿಎಂ ನಿತೀಶ್ ಕುಮಾರ್ ಸಭೆ ಕರೆದಿದ್ದಾರೆ.

author img

By

Published : Jun 8, 2023, 9:18 PM IST

Mega opposition meet
ಬೃಹತ್ ಪ್ರತಿಪಕ್ಷಗಳ ಸಭೆಗೆ ಕೆಸಿಆರ್ ಅನುಮಾನ, ಉಳಿದ ನಾಯಕರು ಭಾಗಿಯಾಗೋದು ಖಚಿತ

ಪಾಟ್ನಾ (ಬಿಹಾರ): ಜೂನ್ 23ರಂದು ಪಾಟ್ನಾದಲ್ಲಿ ವಿರೋಧ ಪಕ್ಷಗಳ ಬೃಹತ್ ಸಭೆ ನಡೆಯಲಿದೆ. ಇದಕ್ಕೆ ಮುಂಚಿತವಾಗಿ ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು, ಸಭೆಯಲ್ಲಿ ಎಲ್ಲ ನಾಯಕರು ಭಾಗವಹಿಸುವಂತೆ ಮನವಿ ಮಾಡಿದ್ದಾರೆ. ಇದೇ ವೇಳೆ, ತಮ್ಮ ಪ್ರತಿನಿಧಿಗಳನ್ನು ಕಳುಹಿಸದಂತೆ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ತೇಜಸ್ವಿ ಯಾದವ್, 15 ವಿರೋಧ ಪಕ್ಷಗಳು ಸಭೆಯಲ್ಲಿ ಭಾಗವಹಿಸುವುದನ್ನು ಖಚಿತಪಡಿಸಿವೆ. ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಹೊರತುಪಡಿಸಿ ಉಳಿದೆಲ್ಲ ನಾಯಕರು ಬರುತ್ತಿದ್ದಾರೆ ಎಂದು ಹೇಳಿದರು.

ವಿಪಕ್ಷಗಳ ಸಭೆಯಲ್ಲಿ ಭಾಗವಹಿಸುವ ನಾಯಕರು: ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ, ಅಖಿಲೇಶ್ ಯಾದವ್, ಹೇಮಂತ್ ಸೋರೆನ್, ಉದ್ಧವ್ ಠಾಕ್ರೆ, ಶರದ್ ಪವಾರ್, ಎಂ.ಕೆ. ಸ್ಟಾಲಿನ್, ಅರವಿಂದ್ ಕೇಜ್ರಿವಾಲ್, ಡಿ.ರಾಜಾ, ಸೀತಾರಾಮ್ ಯೆಚೂರಿ ಮತ್ತು ದೀಪಂಕರ್ ಭಟ್ಟಾಚಾರ್ಯ ಸೇರಿದಂತೆ ಇನ್ನುಳಿದ ವಿವಿಧ ಪಕ್ಷಗಳ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಣಿಯಲು ಭಾರಿ ಪ್ಲ್ಯಾನ್​: 2024ರ ಲೋಕಸಭೆ ಚುನಾವಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಪ್ರತಿಪಕ್ಷಗಳನ್ನು ಸಜ್ಜುಗೊಳಿಸಲು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಹತ್ವದ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ತಮ್ಮ ಭಾಗವಹಿಸುವಿಕೆಯ ಕುರಿತು ಪ್ರತಿಕ್ರಿಯಿಸಿದ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು, ''ನಿತೀಶ್ ಕುಮಾರ್ ಅವರು ತಮ್ಮನ್ನು ಕರೆದು ಆಹ್ವಾನ ನೀಡಿದ್ದಾರೆ. ಅವರು ದೇಶದ ವಿರೋಧ ಪಕ್ಷದ ನಾಯಕರನ್ನು ಆಹ್ವಾನಿಸಿದ್ದಾರೆ. ನಾನು ಅಲ್ಲಿಗೆ ಹೋಗುತ್ತೇನೆ. ಅವರು ರಾಷ್ಟ್ರೀಯ ಸಮಸ್ಯೆಯೊಂದರಲ್ಲಿ ಒಟ್ಟಾಗಿ ಕೆಲಸ ಮಾಡುವ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಆಹ್ವಾನವನ್ನು ನೀಡಿದ್ದಾರೆ" ಎಂದು ಹೇಳಿದರು.

ಬಿಜೆಪಿ ವಿರುದ್ಧ ತೇಜಸ್ವಿ ಯಾದವ್ ವಾಗ್ದಾಳಿ: ಪ್ರತಿಪಕ್ಷಗಳ ಸಭೆ ಯಾವ ಪರಿಣಾಮ ಬೀರಲಿದೆ ಎಂಬುದನ್ನು ಬಿಜೆಪಿ ನಿರ್ಧರಿಸುವುದಿಲ್ಲ. ಲೋಕಸಭೆ ಚುನಾವಣೆ ಎದುರಿಸಲು ಅವರು ಹೆದರುತ್ತಿದ್ದಾರೆ. ಅವರು ಇತ್ತೀಚೆಗೆ ಹಿಮಾಚಲ ಪ್ರದೇಶ ಮತ್ತು ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಬಿಜೆಪಿ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ದೆಹಲಿ ಮತ್ತು ಹರಿಯಾಣ ರಾಜ್ಯಗಳಲ್ಲಿ ಸರಣಿ ಸೋಲು ಅನುಭವಿಸಲಿದ್ದಾರೆ'' ಎಂದು ತೇಜಸ್ವಿ ಯಾದವ್ ವಾಗ್ದಾಳಿ ನಡೆಸಿದರು.

ಕಳೆದ ವರ್ಷ ಬಿಜೆಪಿಯನ್ನು ತ್ಯಜಿಸಿದ ಜೆಡಿಯುನ ನಾಯಕ ನಿತೀಶ್ ಕುಮಾರ್ ಅವರು ಅಂದಿನಿಂದ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎಯನ್ನು ಎದುರಿಸಲು " ವಿರೋಧಿ ಒಕ್ಕೂಟ"ವನ್ನು ಪ್ರತಿಪಾದಿಸುತ್ತಿದ್ದಾರೆ. ಕೆಸಿಆರ್ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ನಿತೀಶ್​ ಕುಮಾರ್​ ಅವರು, "ನಾವು ಅವರೊಂದಿಗೆ ಮಾತನಾಡಿಲ್ಲ" ಎಂದರು. ನಿತೀಶ್ ಕುಮಾರ್ ಎನ್‌ಡಿಎಯಿಂದ ನಿರ್ಗಮಿಸಿದ ಸ್ವಲ್ಪ ಸಮಯದ ನಂತರ ಕೆಸಿಆರ್ ಅವರು ಕಳೆದ ವರ್ಷ ಪಾಟ್ನಾಗೆ ಹಾರಿದ್ದರು. ರಾಷ್ಟ್ರೀಯ ಏಕತೆಗಾಗಿ ನಂತರದ ಕೈ ಜೋಡಿಸಲು ಅನುಮೋದಿಸಿದರು ಎಂಬುದನ್ನು ನೆನಪು ಮಾಡಿಕೊಳ್ಳಬಹುದು.

ಇದನ್ನೂ ಓದಿ: ಅಸ್ತಮ ನಿವಾರಣೆಗೆ ಮೀನಿನ ಪ್ರಸಾದ; ಮುತ್ತಿನ ನಗರಿಯಲ್ಲಿ ಬಥಿನಿ ಪ್ರಸಾದ ವಿತರಣೆಗೆ ಸಕಲ ಸಿದ್ಧತೆ

ಪಾಟ್ನಾ (ಬಿಹಾರ): ಜೂನ್ 23ರಂದು ಪಾಟ್ನಾದಲ್ಲಿ ವಿರೋಧ ಪಕ್ಷಗಳ ಬೃಹತ್ ಸಭೆ ನಡೆಯಲಿದೆ. ಇದಕ್ಕೆ ಮುಂಚಿತವಾಗಿ ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು, ಸಭೆಯಲ್ಲಿ ಎಲ್ಲ ನಾಯಕರು ಭಾಗವಹಿಸುವಂತೆ ಮನವಿ ಮಾಡಿದ್ದಾರೆ. ಇದೇ ವೇಳೆ, ತಮ್ಮ ಪ್ರತಿನಿಧಿಗಳನ್ನು ಕಳುಹಿಸದಂತೆ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ತೇಜಸ್ವಿ ಯಾದವ್, 15 ವಿರೋಧ ಪಕ್ಷಗಳು ಸಭೆಯಲ್ಲಿ ಭಾಗವಹಿಸುವುದನ್ನು ಖಚಿತಪಡಿಸಿವೆ. ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಹೊರತುಪಡಿಸಿ ಉಳಿದೆಲ್ಲ ನಾಯಕರು ಬರುತ್ತಿದ್ದಾರೆ ಎಂದು ಹೇಳಿದರು.

ವಿಪಕ್ಷಗಳ ಸಭೆಯಲ್ಲಿ ಭಾಗವಹಿಸುವ ನಾಯಕರು: ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ, ಅಖಿಲೇಶ್ ಯಾದವ್, ಹೇಮಂತ್ ಸೋರೆನ್, ಉದ್ಧವ್ ಠಾಕ್ರೆ, ಶರದ್ ಪವಾರ್, ಎಂ.ಕೆ. ಸ್ಟಾಲಿನ್, ಅರವಿಂದ್ ಕೇಜ್ರಿವಾಲ್, ಡಿ.ರಾಜಾ, ಸೀತಾರಾಮ್ ಯೆಚೂರಿ ಮತ್ತು ದೀಪಂಕರ್ ಭಟ್ಟಾಚಾರ್ಯ ಸೇರಿದಂತೆ ಇನ್ನುಳಿದ ವಿವಿಧ ಪಕ್ಷಗಳ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಣಿಯಲು ಭಾರಿ ಪ್ಲ್ಯಾನ್​: 2024ರ ಲೋಕಸಭೆ ಚುನಾವಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಪ್ರತಿಪಕ್ಷಗಳನ್ನು ಸಜ್ಜುಗೊಳಿಸಲು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಹತ್ವದ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ತಮ್ಮ ಭಾಗವಹಿಸುವಿಕೆಯ ಕುರಿತು ಪ್ರತಿಕ್ರಿಯಿಸಿದ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು, ''ನಿತೀಶ್ ಕುಮಾರ್ ಅವರು ತಮ್ಮನ್ನು ಕರೆದು ಆಹ್ವಾನ ನೀಡಿದ್ದಾರೆ. ಅವರು ದೇಶದ ವಿರೋಧ ಪಕ್ಷದ ನಾಯಕರನ್ನು ಆಹ್ವಾನಿಸಿದ್ದಾರೆ. ನಾನು ಅಲ್ಲಿಗೆ ಹೋಗುತ್ತೇನೆ. ಅವರು ರಾಷ್ಟ್ರೀಯ ಸಮಸ್ಯೆಯೊಂದರಲ್ಲಿ ಒಟ್ಟಾಗಿ ಕೆಲಸ ಮಾಡುವ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಆಹ್ವಾನವನ್ನು ನೀಡಿದ್ದಾರೆ" ಎಂದು ಹೇಳಿದರು.

ಬಿಜೆಪಿ ವಿರುದ್ಧ ತೇಜಸ್ವಿ ಯಾದವ್ ವಾಗ್ದಾಳಿ: ಪ್ರತಿಪಕ್ಷಗಳ ಸಭೆ ಯಾವ ಪರಿಣಾಮ ಬೀರಲಿದೆ ಎಂಬುದನ್ನು ಬಿಜೆಪಿ ನಿರ್ಧರಿಸುವುದಿಲ್ಲ. ಲೋಕಸಭೆ ಚುನಾವಣೆ ಎದುರಿಸಲು ಅವರು ಹೆದರುತ್ತಿದ್ದಾರೆ. ಅವರು ಇತ್ತೀಚೆಗೆ ಹಿಮಾಚಲ ಪ್ರದೇಶ ಮತ್ತು ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಬಿಜೆಪಿ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ದೆಹಲಿ ಮತ್ತು ಹರಿಯಾಣ ರಾಜ್ಯಗಳಲ್ಲಿ ಸರಣಿ ಸೋಲು ಅನುಭವಿಸಲಿದ್ದಾರೆ'' ಎಂದು ತೇಜಸ್ವಿ ಯಾದವ್ ವಾಗ್ದಾಳಿ ನಡೆಸಿದರು.

ಕಳೆದ ವರ್ಷ ಬಿಜೆಪಿಯನ್ನು ತ್ಯಜಿಸಿದ ಜೆಡಿಯುನ ನಾಯಕ ನಿತೀಶ್ ಕುಮಾರ್ ಅವರು ಅಂದಿನಿಂದ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎಯನ್ನು ಎದುರಿಸಲು " ವಿರೋಧಿ ಒಕ್ಕೂಟ"ವನ್ನು ಪ್ರತಿಪಾದಿಸುತ್ತಿದ್ದಾರೆ. ಕೆಸಿಆರ್ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ನಿತೀಶ್​ ಕುಮಾರ್​ ಅವರು, "ನಾವು ಅವರೊಂದಿಗೆ ಮಾತನಾಡಿಲ್ಲ" ಎಂದರು. ನಿತೀಶ್ ಕುಮಾರ್ ಎನ್‌ಡಿಎಯಿಂದ ನಿರ್ಗಮಿಸಿದ ಸ್ವಲ್ಪ ಸಮಯದ ನಂತರ ಕೆಸಿಆರ್ ಅವರು ಕಳೆದ ವರ್ಷ ಪಾಟ್ನಾಗೆ ಹಾರಿದ್ದರು. ರಾಷ್ಟ್ರೀಯ ಏಕತೆಗಾಗಿ ನಂತರದ ಕೈ ಜೋಡಿಸಲು ಅನುಮೋದಿಸಿದರು ಎಂಬುದನ್ನು ನೆನಪು ಮಾಡಿಕೊಳ್ಳಬಹುದು.

ಇದನ್ನೂ ಓದಿ: ಅಸ್ತಮ ನಿವಾರಣೆಗೆ ಮೀನಿನ ಪ್ರಸಾದ; ಮುತ್ತಿನ ನಗರಿಯಲ್ಲಿ ಬಥಿನಿ ಪ್ರಸಾದ ವಿತರಣೆಗೆ ಸಕಲ ಸಿದ್ಧತೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.