ETV Bharat / bharat

ಪಿಎಂ ಮೋದಿಗೆ 'ಮೆಟ್ರೋ ಮ್ಯಾನ್' ಸನ್ಮಾನ: ಪಾಲಕ್ಕಾಡ್ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್​ ಎಂದ ಶ್ರೀಧರನ್

author img

By

Published : Mar 30, 2021, 12:14 PM IST

ಪಾಲಕ್ಕಾಡ್​ನಲ್ಲಿ ಮುಂದಿನ 5 ವರ್ಷಗಳಲ್ಲಿ 25 ಲಕ್ಷ ಮರಗಳನ್ನು ನೆಡುವ ಮೂಲಕ ಈ ಪ್ರದೇಶವನ್ನು ಹಸಿರಾಗಿಸುವೆ ಎಂದು ಮೆಟ್ರೋ ಮ್ಯಾನ್ ಇ. ಶ್ರೀಧರನ್ ಭರವಸೆ ನೀಡಿದ್ದಾರೆ.

'Metro Man' E Sreedharan felicitates PM Narendra Modi in Palakkad
ಪಿಎಂ ಮೋದಿಗೆ 'ಮೆಟ್ರೋ ಮ್ಯಾನ್' ಸನ್ಮಾನ

ಪಾಲಕ್ಕಾಡ್​ (ಕೇರಳ): ವಿಧಾನಸಭಾ ಚುನಾವಣೆ ಹತ್ತಿರದಲ್ಲಿದ್ದು, ಕೇರಳದ ಪಾಲಕ್ಕಾಡ್​ನಲ್ಲಿ ಸಾರ್ವಜನಿಕ ರ‍್ಯಾಲಿಯ್ನನುದ್ದೇಶಿಸಿ ಮಾತನಾಡಲು ಬಂದಿರುವ ಪ್ರಧಾನಿ ನರೇಂದ್ರ ಮೋದಿಗೆ 'ಮೆಟ್ರೋ ಮ್ಯಾನ್' ಎಂದು ಹೆಸರುವಾಸಿಯಾಗಿರುವ ಇ. ಶ್ರೀಧರನ್ ಸನ್ಮಾನ ಮಾಡಿದ್ದಾರೆ.

ಬಳಿಕ ಮಾತನಾಡಿದ ಶ್ರೀಧರನ್, ಪಾಲಕ್ಕಾಡ್ ಕ್ಷೇತ್ರದ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್​ ರೂಪಿಸಿರುವುದಾಗಿ ತಿಳಿಸಿದರು. ಪಾಲಕ್ಕಾಡ್​ಗೆ ದಿನದ 24 ಗಂಟೆಗಳ ನೀರು ಸರಬರಾಜು ಮಾಡಿಸುವೆ, ಘನತ್ಯಾಜ್ಯ ನಿರ್ವಹಣಾ ಯೋಜನೆ ಜಾರಿಗೆ ತರುವೆ ಎಂದ ಅವರು, ಮುಂದಿನ 5 ವರ್ಷಗಳಲ್ಲಿ 25 ಲಕ್ಷ ಮರಗಳನ್ನು ನೆಡುವ ಮೂಲಕ ಈ ಪ್ರದೇಶವನ್ನು ಹಸಿರಾಗಿಸುವೆ ಎಂದು ಭರವಸೆಗಳನ್ನು ನೀಡಿದರು.

ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತನಿಗೆ ಕಪಾಳ ಮೋಕ್ಷ ಮಾಡಿ ವಿವಾದದಲ್ಲಿ ಸಿಲುಕಿದ ಬಾಬುಲ್​ ಸುಪ್ರಿಯೋ

ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಯಾಗಿದ್ದ ಇ. ಶ್ರೀಧರನ್ ಅವರಿಗೆ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪಾಲಕ್ಕಾಡ್ ಕ್ಷೇತ್ರದಿಂದ ಬಿಜೆಪಿ ಟಿಕೆಟ್​ ನೀಡಿದೆ. ಶ್ರೀಧರನ್ ಅವರು ದೆಹಲಿ ಮೆಟ್ರೋದ ಮಾಜಿ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದು, ಮೆಟ್ರೋ ಮ್ಯಾನ್ ಎಂದೇ ಪ್ರಸಿದ್ಧಿ ಪಡೆದಿದ್ದರು.

ಕೇರಳದಲ್ಲಿ ಏಪ್ರಿಲ್​ 6ರಂದು ಒಂದೇ ಹಂತದಲ್ಲಿ 140 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಪಾಲಕ್ಕಾಡ್​ (ಕೇರಳ): ವಿಧಾನಸಭಾ ಚುನಾವಣೆ ಹತ್ತಿರದಲ್ಲಿದ್ದು, ಕೇರಳದ ಪಾಲಕ್ಕಾಡ್​ನಲ್ಲಿ ಸಾರ್ವಜನಿಕ ರ‍್ಯಾಲಿಯ್ನನುದ್ದೇಶಿಸಿ ಮಾತನಾಡಲು ಬಂದಿರುವ ಪ್ರಧಾನಿ ನರೇಂದ್ರ ಮೋದಿಗೆ 'ಮೆಟ್ರೋ ಮ್ಯಾನ್' ಎಂದು ಹೆಸರುವಾಸಿಯಾಗಿರುವ ಇ. ಶ್ರೀಧರನ್ ಸನ್ಮಾನ ಮಾಡಿದ್ದಾರೆ.

ಬಳಿಕ ಮಾತನಾಡಿದ ಶ್ರೀಧರನ್, ಪಾಲಕ್ಕಾಡ್ ಕ್ಷೇತ್ರದ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್​ ರೂಪಿಸಿರುವುದಾಗಿ ತಿಳಿಸಿದರು. ಪಾಲಕ್ಕಾಡ್​ಗೆ ದಿನದ 24 ಗಂಟೆಗಳ ನೀರು ಸರಬರಾಜು ಮಾಡಿಸುವೆ, ಘನತ್ಯಾಜ್ಯ ನಿರ್ವಹಣಾ ಯೋಜನೆ ಜಾರಿಗೆ ತರುವೆ ಎಂದ ಅವರು, ಮುಂದಿನ 5 ವರ್ಷಗಳಲ್ಲಿ 25 ಲಕ್ಷ ಮರಗಳನ್ನು ನೆಡುವ ಮೂಲಕ ಈ ಪ್ರದೇಶವನ್ನು ಹಸಿರಾಗಿಸುವೆ ಎಂದು ಭರವಸೆಗಳನ್ನು ನೀಡಿದರು.

ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತನಿಗೆ ಕಪಾಳ ಮೋಕ್ಷ ಮಾಡಿ ವಿವಾದದಲ್ಲಿ ಸಿಲುಕಿದ ಬಾಬುಲ್​ ಸುಪ್ರಿಯೋ

ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಯಾಗಿದ್ದ ಇ. ಶ್ರೀಧರನ್ ಅವರಿಗೆ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪಾಲಕ್ಕಾಡ್ ಕ್ಷೇತ್ರದಿಂದ ಬಿಜೆಪಿ ಟಿಕೆಟ್​ ನೀಡಿದೆ. ಶ್ರೀಧರನ್ ಅವರು ದೆಹಲಿ ಮೆಟ್ರೋದ ಮಾಜಿ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದು, ಮೆಟ್ರೋ ಮ್ಯಾನ್ ಎಂದೇ ಪ್ರಸಿದ್ಧಿ ಪಡೆದಿದ್ದರು.

ಕೇರಳದಲ್ಲಿ ಏಪ್ರಿಲ್​ 6ರಂದು ಒಂದೇ ಹಂತದಲ್ಲಿ 140 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.