ETV Bharat / bharat

ದೆಹಲಿಯಲ್ಲಿ ಲಾಕ್​ಡೌನ್​ ನಿರ್ಬಂಧ ಸಡಿಲ : ರಾಜಧಾನಿಯತ್ತ ಪ್ರಯಾಣ ಆರಂಭಿಸಿದ ವಲಸೆ ಕಾರ್ಮಿಕರು

author img

By

Published : Jun 4, 2021, 3:58 PM IST

ದೆಹಲಿಯಲ್ಲಿ ಕೊರೊನಾ ಪ್ರಕರಣಗಳು ಇಳಿಮುಖವಾಗುತ್ತಿವೆ. ಈ ಹಿನ್ನೆಲೆ ಸರ್ಕಾರ ಕೈಗಾರಿಕೆಗಳು, ಉತ್ಪಾದಕ ಕಂಪೆನಿಗಳ ಆರಂಭಕ್ಕೆ ಅವಕಾಶ ನೀಡಿದ ಹಿನ್ನೆಲೆ ಲಾಕ್​ಡೌನ್​ ವೇಳೆ ಊರು ಸೇರಿದ್ದ ವಲಸೆ ಕಾರ್ಮಿಕರು ಇದೀಗ ಮತ್ತೆ ರಾಜಧಾನಿಯತ್ತ ಪ್ರಯಾಣ ಬೆಳೆಸಿದ್ದಾರೆ.

delhi
delhi

ನವದೆಹಲಿ : ದೆಹಲಿಯಲ್ಲಿ ಕೋವಿಡ್-19 ಪ್ರಕರಣಗಳು ಇಳಿಮುಖವಾಗುತ್ತಿರುವ ಹಿನ್ನೆಲೆ ಕಂಪನಿಗಳು ಮತ್ತು ಕೈಗಾರಿಕೆಗಳಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡುವ ಮೂಲಕ ಸರ್ಕಾರವು ಲಾಕ್​ಡೌನ್​ ನಿರ್ಬಂಧಗಳನ್ನು ತೆಗೆದುಹಾಕುವ ಪ್ರಕ್ರಿಯೆ ಪ್ರಾರಂಭಿಸಿದೆ.

ಲಾಕ್‌ಡೌನ್‌ನಿಂದಾಗಿ ತಮ್ಮ ಊರುಗಳಿಗೆ ವಾಪಸ್​ ಹೋಗಿದ್ದ ಕಾರ್ಮಿಕರು ಈಗ ಕೆಲಸಕ್ಕಾಗಿ ನಗರಕ್ಕೆ ಮರಳುತ್ತಿದ್ದಾರೆ. ಉತ್ತರಪ್ರದೇಶದ ಸೀತಾಪುರದಿಂದ ವಲಸೆ ಬಂದ ಕಾರ್ಮಿಕರೊಬ್ಬರು ಈಟಿವಿ ಭಾರತ್ ಜೊತೆ ಮಾತನಾಡಿ, ಲಾಕ್​ಡೌನ್​ ಹೇರಿದ ಆರಂಭದಲ್ಲಿ ಮನೆಗೆ ಹೋಗಿದ್ದೆ ಎಂದು ಹೇಳಿದರು. ಪರಿಸ್ಥಿತಿ ತುಂಬಾ ಕೆಟ್ಟದಾಗಿದೆ, ಸುಮಾರು ಒಂದು ವರ್ಷದಿಂದ ಯಾವುದೇ ಕೆಲಸವಿಲ್ಲ ಮತ್ತು ಬದುಕುವುದು ಕಷ್ಟಕರವಾಗಿದೆ ಎಂದು ತಮ್ಮ ಅಳಲು ತೋಡಿಕೊಂಡರು.

ಕೋವಿಡ್ -19 ಎರಡನೇ ಅಲೆ ನಿಯಂತ್ರಣಕ್ಕೆ ದೆಹಲಿ ಸರ್ಕಾರ ದಿಢೀರ್​​ ಲಾಕ್‌ಡೌನ್ ಘೋಷಿಸಿದಾಗ, ವಲಸೆ ಕಾರ್ಮಿಕರು ದೆಹಲಿಯನ್ನು ತೊರೆದರು. ಕಾರ್ಮಿಕರನ್ನು ನಗರದಿಂದ ಹೊರ ಹೋಗದಂತೆ ತಡೆಯಲು ದೆಹಲಿಯ ಸರ್ಕಾರವು ಉಚಿತ ಪಡಿತರ ಘೋಷಿಸಿತ್ತು.

ನವದೆಹಲಿ : ದೆಹಲಿಯಲ್ಲಿ ಕೋವಿಡ್-19 ಪ್ರಕರಣಗಳು ಇಳಿಮುಖವಾಗುತ್ತಿರುವ ಹಿನ್ನೆಲೆ ಕಂಪನಿಗಳು ಮತ್ತು ಕೈಗಾರಿಕೆಗಳಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡುವ ಮೂಲಕ ಸರ್ಕಾರವು ಲಾಕ್​ಡೌನ್​ ನಿರ್ಬಂಧಗಳನ್ನು ತೆಗೆದುಹಾಕುವ ಪ್ರಕ್ರಿಯೆ ಪ್ರಾರಂಭಿಸಿದೆ.

ಲಾಕ್‌ಡೌನ್‌ನಿಂದಾಗಿ ತಮ್ಮ ಊರುಗಳಿಗೆ ವಾಪಸ್​ ಹೋಗಿದ್ದ ಕಾರ್ಮಿಕರು ಈಗ ಕೆಲಸಕ್ಕಾಗಿ ನಗರಕ್ಕೆ ಮರಳುತ್ತಿದ್ದಾರೆ. ಉತ್ತರಪ್ರದೇಶದ ಸೀತಾಪುರದಿಂದ ವಲಸೆ ಬಂದ ಕಾರ್ಮಿಕರೊಬ್ಬರು ಈಟಿವಿ ಭಾರತ್ ಜೊತೆ ಮಾತನಾಡಿ, ಲಾಕ್​ಡೌನ್​ ಹೇರಿದ ಆರಂಭದಲ್ಲಿ ಮನೆಗೆ ಹೋಗಿದ್ದೆ ಎಂದು ಹೇಳಿದರು. ಪರಿಸ್ಥಿತಿ ತುಂಬಾ ಕೆಟ್ಟದಾಗಿದೆ, ಸುಮಾರು ಒಂದು ವರ್ಷದಿಂದ ಯಾವುದೇ ಕೆಲಸವಿಲ್ಲ ಮತ್ತು ಬದುಕುವುದು ಕಷ್ಟಕರವಾಗಿದೆ ಎಂದು ತಮ್ಮ ಅಳಲು ತೋಡಿಕೊಂಡರು.

ಕೋವಿಡ್ -19 ಎರಡನೇ ಅಲೆ ನಿಯಂತ್ರಣಕ್ಕೆ ದೆಹಲಿ ಸರ್ಕಾರ ದಿಢೀರ್​​ ಲಾಕ್‌ಡೌನ್ ಘೋಷಿಸಿದಾಗ, ವಲಸೆ ಕಾರ್ಮಿಕರು ದೆಹಲಿಯನ್ನು ತೊರೆದರು. ಕಾರ್ಮಿಕರನ್ನು ನಗರದಿಂದ ಹೊರ ಹೋಗದಂತೆ ತಡೆಯಲು ದೆಹಲಿಯ ಸರ್ಕಾರವು ಉಚಿತ ಪಡಿತರ ಘೋಷಿಸಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.