ETV Bharat / bharat

ಸಾಮೂಹಿಕ ವಿವಾಹದಲ್ಲಿ ಸರಳವಾಗಿ ಮದುವೆಯಾದ ಬಿಜೆಪಿ ಶಾಸಕರ ಪುತ್ರ

author img

By

Published : May 11, 2023, 10:06 AM IST

ಮಹಾರಾಷ್ಟ್ರದ ಲಾತೂರ್​ನಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಶಾಸಕರ ಪುತ್ರ ಸೇರಿದಂತೆ 25 ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

marriage
ವಿವಾಹ

ಮಹಾರಾಷ್ಟ್ರ: ಲಾತೂರ್ ಜಿಲ್ಲೆಯಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಔಸಾದ ಬಿಜೆಪಿ ಶಾಸಕ ಅಭಿಮನ್ಯು ಪವಾರ್ ಅವರ ಪುತ್ರ ಸೇರಿದಂತೆ 25 ಜೋಡಿ ಬುಧವಾರ (ನಿನ್ನೆ) ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಿಎಂ ಏಕನಾಥ್ ಶಿಂಧೆ, ಬಡವರ ಅನುಕೂಲಕ್ಕಾಗಿ ಸಾಮೂಹಿಕ ವಿವಾಹ ಸಮಾರಂಭವನ್ನು ಆಯೋಜಿಸುತ್ತಿರುವ ಬಿಜೆಪಿ ಶಾಸಕರ ಪ್ರಯತ್ನವನ್ನು ಶ್ಲಾಘಿಸಿದರು. ಇದರ ಜೊತೆಗೆ, ಇನ್ನುಳಿದ ನಾಯಕರು ಸಹ ಇದೇ ರೀತಿ ಮಾದರಿಯಾಗುಬೇಕು ಎಂದು ಕಿವಿಮಾತು ಹೇಳಿದರು.

ಅಭಿಮನ್ಯು ಪವಾರ್ ಅವರು ಉಟಗೆ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಿದ್ದರು. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಅಜಿತ್ ಪವಾರ್, ಕೇಂದ್ರ ಸಚಿವ ರಾವ್​ ಸಾಹೇಬ್ ದಾನ್ವೆ ಸೇರಿದಂತೆ ಹಲವು ರಾಜಕೀಯ ಮುಖಂಡರು ಆಗಮಿಸಿದ್ದು, ದಂಪತಿಗಳನ್ನು ಆಶೀರ್ವದಿಸಿದರು.

ಇದನ್ನೂ ಓದಿ : ಘಾಜಿಯಾಬಾದ್​ನಲ್ಲಿ ಬೃಹತ್​ ಸಾಮೂಹಿಕ ವಿವಾಹ : ದಾಂಪತ್ಯ ಜೀವನಕ್ಕೆ ಕಾಲಿಟ್ಟ 3003 ಜೋಡಿಗಳು

ಕಳೆದ ಫೆಬ್ರವರಿ ತಿಂಗಳ 3ನೇ ತಾರೀಖಿನಂದು ಘಾಜಿಯಾಬಾದ್​​ನ ನೆಹರು ಪಾರ್ಕ್​ನಲ್ಲಿ ಉತ್ತರ ಪ್ರದೇಶ ರಾಜ್ಯ ಸರ್ಕಾರವು ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ಸುಮಾರು 3003 ಜೋಡಿಗಳು ಭಾಗವಹಿಸಿದ್ದು, ಹಿಂದೂ ಸಮುದಾಯದ 1,850 ಮತ್ತು ಮುಸ್ಲಿಂ ಸಮುದಾಯದ 1,147, ಬೌದ್ಧ ಸಮುದಾಯದ 3 ಮತ್ತು ಸಿಖ್ ಸಮುದಾಯದ 3 ಜೋಡಿ ಭಾಗಿಯಾಗುವ ಮೂಲಕ ಗಮನ ಸೆಳೆದಿದ್ದರು. ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ವಿ.ಕೆ.ಸಿಂಗ್, ರಾಜ್ಯ ಸಚಿವರು ಸೇರಿದಂತೆ ಹಲವು ಜನಪ್ರತಿನಿಧಿಗಳು ಭಾಗಿಯಾಗಿದ್ದು, ನವ ಜೋಡಿಗಳಿಗೆ ಶುಭ ಹಾರೈಸಿದರು.

ಇದನ್ನೂ ಓದಿ : ಸರ್ವ ಧರ್ಮಗಳ ಸಾಮೂಹಿಕ ವಿವಾಹ ಕಾಂಗ್ರೆಸ್ ಮುಖಂಡನಿಂದ ನವ ಜೋಡಿಗಳಿಗೆ ಭರ್ಜರಿ ಉಡುಗೊರೆ

ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹೋತ್ಸವ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ 2022ರ ಏಪ್ರಿಲ್​ 28 ರಂದು ನಡೆದ ಐವತ್ತನೇ ವರ್ಷದ ಉಚಿತ ಸಾಮೂಹಿಕವು ಅದ್ಧೂರಿಯಿಂದ ನಡೆದಿತ್ತು. 183 ಜೋಡಿಗಳು ಭಾಗಿಯಾಗಿದ್ದರು. ನವ ದಾಂಪತ್ಯಕ್ಕೆ ಕಾಲಿಟ್ಟ ದಂಪತಿಗಳಿಗೆ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು, ಆರ್.ಅಶೋಕ್, ನಟ ಗಣೇಶ್ ಶುಭ ಹಾರೈಸಿದ್ದರು. ಹಾಗೆಯೇ, ಹೆಗ್ಗಡೆಯವರ ನಿವಾಸದಲ್ಲಿ ವಧುವಿಗೆ ಸೀರೆ ಮತ್ತು ರವಿಕೆ ಹಾಗೂ ವರನಿಗೆ ಧೋತಿ, ಶಾಲು ವಿತರಿಸಲಾಗಿತ್ತು.

ಇದನ್ನೂ ಓದಿ : ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ : 183 ಜೋಡಿಗಳು ಭಾಗಿ

ಇನ್ನು ಮಾಜಿ ಸಚಿವ ದಿವಂಗತ ಸಿ.ಎಸ್ ಶಿವಳ್ಳಿ ಅವರ ಸ್ಮರಣಾರ್ಥವಾಗಿ ಕಳೆದ ವರ್ಷ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಸಹ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಸಲಾಗಿತ್ತು. ದಿ. ಶಿವಳ್ಳಿ ಅವರ ಸಹೋದರ ಷಣ್ಮುಖ ಶಿವಳ್ಳಿ ನೇತೃತ್ವದಲ್ಲಿ ಪಟ್ಟಣದ ತೋಪಿನ ದುರ್ಗಾದೇವಿ ದೇವಸ್ಥಾನದ ಆವರಣದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 64 ಜೋಡಿಗಳು ದಾಂಪತ್ಯಕ್ಕೆ ಕಾಲಿಟ್ಟಿದ್ದರು.

ಮಹಾರಾಷ್ಟ್ರ: ಲಾತೂರ್ ಜಿಲ್ಲೆಯಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಔಸಾದ ಬಿಜೆಪಿ ಶಾಸಕ ಅಭಿಮನ್ಯು ಪವಾರ್ ಅವರ ಪುತ್ರ ಸೇರಿದಂತೆ 25 ಜೋಡಿ ಬುಧವಾರ (ನಿನ್ನೆ) ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಿಎಂ ಏಕನಾಥ್ ಶಿಂಧೆ, ಬಡವರ ಅನುಕೂಲಕ್ಕಾಗಿ ಸಾಮೂಹಿಕ ವಿವಾಹ ಸಮಾರಂಭವನ್ನು ಆಯೋಜಿಸುತ್ತಿರುವ ಬಿಜೆಪಿ ಶಾಸಕರ ಪ್ರಯತ್ನವನ್ನು ಶ್ಲಾಘಿಸಿದರು. ಇದರ ಜೊತೆಗೆ, ಇನ್ನುಳಿದ ನಾಯಕರು ಸಹ ಇದೇ ರೀತಿ ಮಾದರಿಯಾಗುಬೇಕು ಎಂದು ಕಿವಿಮಾತು ಹೇಳಿದರು.

ಅಭಿಮನ್ಯು ಪವಾರ್ ಅವರು ಉಟಗೆ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಿದ್ದರು. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಅಜಿತ್ ಪವಾರ್, ಕೇಂದ್ರ ಸಚಿವ ರಾವ್​ ಸಾಹೇಬ್ ದಾನ್ವೆ ಸೇರಿದಂತೆ ಹಲವು ರಾಜಕೀಯ ಮುಖಂಡರು ಆಗಮಿಸಿದ್ದು, ದಂಪತಿಗಳನ್ನು ಆಶೀರ್ವದಿಸಿದರು.

ಇದನ್ನೂ ಓದಿ : ಘಾಜಿಯಾಬಾದ್​ನಲ್ಲಿ ಬೃಹತ್​ ಸಾಮೂಹಿಕ ವಿವಾಹ : ದಾಂಪತ್ಯ ಜೀವನಕ್ಕೆ ಕಾಲಿಟ್ಟ 3003 ಜೋಡಿಗಳು

ಕಳೆದ ಫೆಬ್ರವರಿ ತಿಂಗಳ 3ನೇ ತಾರೀಖಿನಂದು ಘಾಜಿಯಾಬಾದ್​​ನ ನೆಹರು ಪಾರ್ಕ್​ನಲ್ಲಿ ಉತ್ತರ ಪ್ರದೇಶ ರಾಜ್ಯ ಸರ್ಕಾರವು ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ಸುಮಾರು 3003 ಜೋಡಿಗಳು ಭಾಗವಹಿಸಿದ್ದು, ಹಿಂದೂ ಸಮುದಾಯದ 1,850 ಮತ್ತು ಮುಸ್ಲಿಂ ಸಮುದಾಯದ 1,147, ಬೌದ್ಧ ಸಮುದಾಯದ 3 ಮತ್ತು ಸಿಖ್ ಸಮುದಾಯದ 3 ಜೋಡಿ ಭಾಗಿಯಾಗುವ ಮೂಲಕ ಗಮನ ಸೆಳೆದಿದ್ದರು. ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ವಿ.ಕೆ.ಸಿಂಗ್, ರಾಜ್ಯ ಸಚಿವರು ಸೇರಿದಂತೆ ಹಲವು ಜನಪ್ರತಿನಿಧಿಗಳು ಭಾಗಿಯಾಗಿದ್ದು, ನವ ಜೋಡಿಗಳಿಗೆ ಶುಭ ಹಾರೈಸಿದರು.

ಇದನ್ನೂ ಓದಿ : ಸರ್ವ ಧರ್ಮಗಳ ಸಾಮೂಹಿಕ ವಿವಾಹ ಕಾಂಗ್ರೆಸ್ ಮುಖಂಡನಿಂದ ನವ ಜೋಡಿಗಳಿಗೆ ಭರ್ಜರಿ ಉಡುಗೊರೆ

ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹೋತ್ಸವ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ 2022ರ ಏಪ್ರಿಲ್​ 28 ರಂದು ನಡೆದ ಐವತ್ತನೇ ವರ್ಷದ ಉಚಿತ ಸಾಮೂಹಿಕವು ಅದ್ಧೂರಿಯಿಂದ ನಡೆದಿತ್ತು. 183 ಜೋಡಿಗಳು ಭಾಗಿಯಾಗಿದ್ದರು. ನವ ದಾಂಪತ್ಯಕ್ಕೆ ಕಾಲಿಟ್ಟ ದಂಪತಿಗಳಿಗೆ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು, ಆರ್.ಅಶೋಕ್, ನಟ ಗಣೇಶ್ ಶುಭ ಹಾರೈಸಿದ್ದರು. ಹಾಗೆಯೇ, ಹೆಗ್ಗಡೆಯವರ ನಿವಾಸದಲ್ಲಿ ವಧುವಿಗೆ ಸೀರೆ ಮತ್ತು ರವಿಕೆ ಹಾಗೂ ವರನಿಗೆ ಧೋತಿ, ಶಾಲು ವಿತರಿಸಲಾಗಿತ್ತು.

ಇದನ್ನೂ ಓದಿ : ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ : 183 ಜೋಡಿಗಳು ಭಾಗಿ

ಇನ್ನು ಮಾಜಿ ಸಚಿವ ದಿವಂಗತ ಸಿ.ಎಸ್ ಶಿವಳ್ಳಿ ಅವರ ಸ್ಮರಣಾರ್ಥವಾಗಿ ಕಳೆದ ವರ್ಷ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಸಹ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಸಲಾಗಿತ್ತು. ದಿ. ಶಿವಳ್ಳಿ ಅವರ ಸಹೋದರ ಷಣ್ಮುಖ ಶಿವಳ್ಳಿ ನೇತೃತ್ವದಲ್ಲಿ ಪಟ್ಟಣದ ತೋಪಿನ ದುರ್ಗಾದೇವಿ ದೇವಸ್ಥಾನದ ಆವರಣದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 64 ಜೋಡಿಗಳು ದಾಂಪತ್ಯಕ್ಕೆ ಕಾಲಿಟ್ಟಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.