ETV Bharat / bharat

ದಿಗ್ವಿಜಯ ಸಾಧಿಸಿದ  ಆಮ್​ ಆದ್ಮಿ ಪಕ್ಷ ಅಭಿನಂದಿಸಿದ ಪ್ರಧಾನಿ..ಕೇಂದ್ರದಿಂದ ಸಹಕಾರದ ಭರವಸೆ - ಆಮ್​ ಆದ್ಮಿ ಪಕ್ಷಕ್ಕೆ ಅಭಿನಂದನೆ

ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಕಂಡ ಆಮ್ ಆದ್ಮಿ ಪಕ್ಷವನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರದಂದು ಅಭಿನಂದಿಸಿದ್ದಾರೆ.

Modi congratulates AAP
ಆಮ್​ ಆದ್ಮಿ ಪಕ್ಷವನ್ನು ಅಭಿನಂದಿಸಿದ ಪ್ರಧಾನಿ
author img

By

Published : Mar 11, 2022, 8:16 AM IST

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಬಳಿಕ ಪಂಜಾಬ್​​​​​ನಲ್ಲೂ ಅರವಿಂದ್​ ಕೇಜ್ರಿವಾಲ್​ ನೇತೃತ್ವದ ಆಮ್​ ಆದ್ಮಿ ಪಕ್ಷ(ಎಎಪಿ) ಗೆಲುವಿನ ನಗೆ ಬೀರಿದೆ. ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಕಂಡ ಆಮ್ ಆದ್ಮಿ ಪಕ್ಷವನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಅಭಿನಂದಿಸಿದ್ದಾರೆ. ಜೊತೆಗೆ ಕೇಂದ್ರದಿಂದ ಸಾಧ್ಯವಿರುವ ಎಲ್ಲ ಸಹಾಯವನ್ನು ಪಕ್ಷಕ್ಕೆ ಕೊಡುವ ಭರವಸೆ ನೀಡಿದ್ದಾರೆ.

ಆಮ್​ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ, ಧುರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಭಗವಂತ್ ಮಾನ್ ಗೆಲುವು ಸಾಧಿಸಿದ್ದು, ಪಕ್ಷಕ್ಕೆ ಮತ್ತಷ್ಟು ಬಲ ಬಂದಂತಾಗಿದೆ. ಈ ಮೂಲಕ ಕೇವಲ ಹತ್ತು ವರ್ಷಗಳಲ್ಲೇ ಉತ್ತರ ಭಾರತದಲ್ಲಿ ಪ್ರಾಬಲ್ಯ ಸಾಧಿಸುವಲ್ಲಿ ಎಎಪಿ ದಿಟ್ಟ ಹೆಜ್ಜೆಯನ್ನಿಡುತ್ತಿದೆ.

ಇದನ್ನೂ ಓದಿ: ಹತ್ತು ವರ್ಷದಲ್ಲೇ ಬದಲಾದ ಮನ್ ಹಣೆಬರಹ: ಪಂಜಾಬ್​ ಸಿಎಂ ಗದ್ದುಗೆ ಏರಲಿದ್ದಾರೆ ಕಾಮಿಡಿಯನ್!

ಸರಣಿ ಟ್ವೀಟ್‌ಗಳ ಮೂಲಕ ಪಿಎಂ ಮೋದಿ ಮತದಾರರಿಗೆ ಮತ್ತು ಪಕ್ಷದ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು. ಪಂಜಾನ್​​ನಲ್ಲಿ ಗೆದ್ದಿದ್ದಕ್ಕಾಗಿ ಆಪ್ ಅನ್ನು ಅಭಿನಂದಿಸಿದರು. ಪಂಜಾಬ್‌ನ ಕಲ್ಯಾಣಕ್ಕಾಗಿ ಕೇಂದ್ರದಿಂದ ಸಾಧ್ಯವಿರುವ ಎಲ್ಲ ಬೆಂಬಲವನ್ನು ಎಎಪಿಗೆ ಕೊಡುವುದಾಗಿ ಪ್ರಧಾನಿ ಭರವಸೆ ನೀಡಿದರು.

ಮತ್ತೊಂದು ಟ್ವೀಟ್‌ನಲ್ಲಿ, "ಯುಪಿ, ಉತ್ತರಾಖಂಡ, ಗೋವಾ ಮತ್ತು ಮಣಿಪುರದ ಜನರು ಭಾರತೀಯ ಜನತಾ ಪಾರ್ಟಿ ಮೇಲೆ ಹೆಚ್ಚಿನ ಪ್ರೀತಿಯನ್ನಿರಿಸಿದ್ದಾರೆ. ಈ ರಾಜ್ಯಗಳ ಜನರಿಗೆ ನನ್ನ ಕೃತಜ್ಞತೆಗಳು. ನಮ್ಮ ಪಕ್ಷವು ನಿಮ್ಮ ಈ ಆಶೀರ್ವಾದಗಳನ್ನು ಗೌರವಿಸುತ್ತದೆ ಮತ್ತು ಈ ರಾಜ್ಯಗಳ ಅಭಿವೃದ್ಧಿಗೆ ಶ್ರಮಿಸುತ್ತದೆ" ಎಂದು ಅಭಯ ನೀಡಿದ್ದಾರೆ.

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಬಳಿಕ ಪಂಜಾಬ್​​​​​ನಲ್ಲೂ ಅರವಿಂದ್​ ಕೇಜ್ರಿವಾಲ್​ ನೇತೃತ್ವದ ಆಮ್​ ಆದ್ಮಿ ಪಕ್ಷ(ಎಎಪಿ) ಗೆಲುವಿನ ನಗೆ ಬೀರಿದೆ. ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಕಂಡ ಆಮ್ ಆದ್ಮಿ ಪಕ್ಷವನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಅಭಿನಂದಿಸಿದ್ದಾರೆ. ಜೊತೆಗೆ ಕೇಂದ್ರದಿಂದ ಸಾಧ್ಯವಿರುವ ಎಲ್ಲ ಸಹಾಯವನ್ನು ಪಕ್ಷಕ್ಕೆ ಕೊಡುವ ಭರವಸೆ ನೀಡಿದ್ದಾರೆ.

ಆಮ್​ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ, ಧುರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಭಗವಂತ್ ಮಾನ್ ಗೆಲುವು ಸಾಧಿಸಿದ್ದು, ಪಕ್ಷಕ್ಕೆ ಮತ್ತಷ್ಟು ಬಲ ಬಂದಂತಾಗಿದೆ. ಈ ಮೂಲಕ ಕೇವಲ ಹತ್ತು ವರ್ಷಗಳಲ್ಲೇ ಉತ್ತರ ಭಾರತದಲ್ಲಿ ಪ್ರಾಬಲ್ಯ ಸಾಧಿಸುವಲ್ಲಿ ಎಎಪಿ ದಿಟ್ಟ ಹೆಜ್ಜೆಯನ್ನಿಡುತ್ತಿದೆ.

ಇದನ್ನೂ ಓದಿ: ಹತ್ತು ವರ್ಷದಲ್ಲೇ ಬದಲಾದ ಮನ್ ಹಣೆಬರಹ: ಪಂಜಾಬ್​ ಸಿಎಂ ಗದ್ದುಗೆ ಏರಲಿದ್ದಾರೆ ಕಾಮಿಡಿಯನ್!

ಸರಣಿ ಟ್ವೀಟ್‌ಗಳ ಮೂಲಕ ಪಿಎಂ ಮೋದಿ ಮತದಾರರಿಗೆ ಮತ್ತು ಪಕ್ಷದ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು. ಪಂಜಾನ್​​ನಲ್ಲಿ ಗೆದ್ದಿದ್ದಕ್ಕಾಗಿ ಆಪ್ ಅನ್ನು ಅಭಿನಂದಿಸಿದರು. ಪಂಜಾಬ್‌ನ ಕಲ್ಯಾಣಕ್ಕಾಗಿ ಕೇಂದ್ರದಿಂದ ಸಾಧ್ಯವಿರುವ ಎಲ್ಲ ಬೆಂಬಲವನ್ನು ಎಎಪಿಗೆ ಕೊಡುವುದಾಗಿ ಪ್ರಧಾನಿ ಭರವಸೆ ನೀಡಿದರು.

ಮತ್ತೊಂದು ಟ್ವೀಟ್‌ನಲ್ಲಿ, "ಯುಪಿ, ಉತ್ತರಾಖಂಡ, ಗೋವಾ ಮತ್ತು ಮಣಿಪುರದ ಜನರು ಭಾರತೀಯ ಜನತಾ ಪಾರ್ಟಿ ಮೇಲೆ ಹೆಚ್ಚಿನ ಪ್ರೀತಿಯನ್ನಿರಿಸಿದ್ದಾರೆ. ಈ ರಾಜ್ಯಗಳ ಜನರಿಗೆ ನನ್ನ ಕೃತಜ್ಞತೆಗಳು. ನಮ್ಮ ಪಕ್ಷವು ನಿಮ್ಮ ಈ ಆಶೀರ್ವಾದಗಳನ್ನು ಗೌರವಿಸುತ್ತದೆ ಮತ್ತು ಈ ರಾಜ್ಯಗಳ ಅಭಿವೃದ್ಧಿಗೆ ಶ್ರಮಿಸುತ್ತದೆ" ಎಂದು ಅಭಯ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.