ETV Bharat / bharat

ಪರಿಸರ ಸಂರಕ್ಷಣೆಗಾಗಿ ಭಾರತದಿಂದ ವಿವಿಧ ಪ್ರಯತ್ನ: ಪ್ರಧಾನಿ ಮೋದಿ

author img

By

Published : Jun 5, 2022, 1:36 PM IST

ಮಣ್ಣಿನ ಸಂರಕ್ಷಣೆಗೆ ಸದ್ಗುರು 100 ದಿನಗಳ 'ಮಣ್ಣು ಉಳಿಸಿ' ಬೈಕ್​ ರ್ಯಾಲಿ 75 ದಿನ ಪೂರೈಸಿದೆ. ಈ ಹಿನ್ನೆಲೆಯಲ್ಲಿ ದೆಹಲಿ ಆಯೋಜಿಸಿರುವ ಮಣ್ಣು ಉಳಿಸಿ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮತ್ತು ಸದ್ಗುರು ಪಾಲ್ಗೊಂಡಿದ್ದರು.

PM Modi talked in Save Soil Programm
ಪ್ರಧಾನಿ ಮೋದಿ 'ಮಣ್ಣು ಉಳಿಸಿ' ಕಾರ್ಯಕ್ರಮದಲ್ಲಿ ಮಾತನಾಡಿದರು.

ನವದೆಹಲಿ: ಪ್ರಪಂಚದ ಆಧುನಿಕ, ದೊಡ್ಡ ದೇಶಗಳು ನಾಶ ಮಾಡುವುದು ಮಾತ್ರವಲ್ಲ, ಅತೀ ಹೆಚ್ಚು ಇಂಗಾಲದ ಹೊರಸೂಸುವಿಕೆಗೆ ಕಾರಣವಾಗುತ್ತಿವೆ ಎಂದು ಪ್ರಧಾನಿ ಮೋದಿ ಭಾನುವಾರ ಹೇಳಿದ್ದಾರೆ. ದೆಹಲಿಯ ವಿಜ್ಞಾನ ಭವನದಲ್ಲಿ 'ಮಣ್ಣು ಉಳಿಸಿ' ಕಾರ್ಯಕ್ರಮದಲ್ಲಿ ಮಾತನಾಡಿದರು.

ಇಂಗಾಲದ ಹೊರಸೂಸುವಿಕೆಯಲ್ಲಿ, ಹವಾಮಾನ ಬದಲಾವಣೆಯಲ್ಲಿ ಭಾರತದ ಪಾತ್ರ ಅತ್ಯಲ್ಪವಾದರೂ ಸಹ ಭಾರತ ಪರಿಸರ ಸಂರಕ್ಷಣೆಗಾಗಿ ವಿವಿಧ ಪ್ರಯತ್ನಗಳನ್ನು ಮಾಡುತ್ತಿದೆ. ಸರ್ಕಾರದ ಹಲವಾರು ಯೋಜನೆಗಳು ಪರಿಸರ ಸಂರಕ್ಷಣೆಯ ಸಂದೇಶವನ್ನು ಹೊಂದಿವೆ. ಸ್ವಚ್ಛ ಭಾರತ್ ಮಿಷನ್, ನಯಾಮಿ ಗಂಗೆ, ಅಥವಾ ಒಂದು ಸೂರ್ಯ, ಒಂದು ಗ್ರಿಡ್ ಮೂಲಕ ಅನೇಕ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದರು.

ರೈತರ ಮನಸ್ಥಿತಿಯನ್ನು ಬದಲಾಯಿಸುವಲ್ಲಿ "ಮಣ್ಣಿನ ಆರೋಗ್ಯ ಕಾರ್ಡ್‌ಗಳ" ಪ್ರಾಮುಖ್ಯತೆಯ ಬಗ್ಗೆ ಹೆಚ್ಚಿನ ಒತ್ತು ನೀಡಿ ಮಾತನಾಡಿದ ಅವರು, ಹಿಂದೆ ನಮ್ಮ ರೈತರಿಗೆ ಮಣ್ಣಿನ ಪೋಷಕಾಂಶ ಮತ್ತು ಆರೋಗ್ಯದ ಬಗ್ಗೆ ಅಷ್ಟೊಂದು ಮಾಹಿತಿಯಿರಲಿಲ್ಲ. ಉತ್ತಮ ಮಣ್ಣಿನ ಆರೋಗ್ಯಕ್ಕೆ ಏನು ಬೇಕು ಎಂಬುದನ್ನು ನಿರ್ಧರಿಸುವ ಸಾಮರ್ಥ್ಯವನ್ನು ಮಣ್ಣಿನ ಆರೋಗ್ಯ ಕಾರ್ಡ್​ ರೈತರಿಗೆ ನೀಡಿದೆ. ಅದಕ್ಕಾಗಿ ಮಣ್ಣಿನ ಆರೋಗ್ಯ ಕಾರ್ಡ್‌ ನೀಡುವ ಅಭಿಯಾನವನ್ನು ದೇಶಾದ್ಯಂತ ಸಂಯೋಜಿಸಲಾಯಿತು. ಈ ವರ್ಷದ ಬಜೆಟ್‌ನಲ್ಲಿ ಗಂಗಾ ನದಿ ಕಾರಿಡಾರ್‌ ಉದ್ದಕ್ಕೂ ನೈಸರ್ಗಿಕ ಕೃಷಿಗೆ ಉತ್ತೇಜನ ನೀಡುವುದಾಗಿ ಘೋಷಿಸಿದ್ದೇವೆ ಎಂದು ತಿಳಿಸಿದರು.

ಭಾರತ ಇಂದು ಅನುಸರಿಸುತ್ತಿರುವ ಜೀವವೈವಿಧ್ಯ ಮತ್ತು ವನ್ಯಜೀವಿಗಳಿಗೆ ಸಂಬಂಧಿಸಿದ ನೀತಿಗಳು ವನ್ಯಜೀವಿಗಳ ಸಂಖ್ಯೆಯಲ್ಲಿ ದಾಖಲೆಯ ಹೆಚ್ಚಳಕ್ಕೆ ಕಾರಣವಾಗಿವೆ. ಮಾರ್ಚ್‌ನಲ್ಲಿ, 13 ನದಿಗಳ ಪುನರುಜ್ಜೀವನ ಯೋಜನೆಯನ್ನು ಪ್ರಾರಂಭಿಸಿದ್ದು, ಇದರಿಂದ 7,400 ಚದರ ಕಿ.ಮೀಗಳಷ್ಟು ಅರಣ್ಯಪ್ರದೇಶ ಹೆಚ್ಚಾಗಿದೆ. ಇಂದು, ಭಾರತವು ತನ್ನ ಗುರಿಗಿಂತ ಐದು ತಿಂಗಳ ಮುಂಚಿತವಾಗಿ ಪೆಟ್ರೋಲ್‌ನಲ್ಲಿ ಶೇಕಡಾ 10 ರಷ್ಟು ಎಥೆನಾಲ್ ಮಿಶ್ರಣವನ್ನು ಸಾಧಿಸಿದೆ ಎಂದು ಹೇಳಿದರು.

ಮಣ್ಣಿನ ಸಂರಕ್ಷಣೆಗೆ ಸದ್ಗುರು 100 ದಿನಗಳ 'ಮಣ್ಣು ಉಳಿಸಿ' ಬೈಕ್​ ರ್ಯಾಲಿ ಅಭಿಯಾನವನ್ನು ಕಳೆದ ಮಾರ್ಚ್​ನಲ್ಲಿ ಪ್ರಾರಂಭಿಸಿದ್ದಾರೆ. ಲಂಡನ್​ನ ಸಂಸತ್​ ಚೌಕದಲ್ಲಿ ಆರಂಭಿಸಿರುವ ಅವರು 27 ದೇಶಗಳನ್ನು ಸುತ್ತಿ, ಅಲ್ಲೆಲ್ಲ ಮಣ್ಣಿನ ಫಲವತ್ತತೆಯ ಬಗ್ಗೆ ಅರಿವು ಮೂಡಿಸಿ, ಈಗ ಭಾರತಕ್ಕೆ ಪ್ರವೇಶಿಸಿದ್ದಾರೆ. ಅವರ 100 ದಿನಗಳ ರ್ಯಾಲಿ ಜೂನ್​ 5ಕ್ಕೆ 75 ದಿನಗಳನ್ನು ಪೂರೈಸಿದೆ.

ಇದನ್ನೂ ಓದಿ: ದೇಶದ ಬೆಳವಣಿಗೆ ಬಗ್ಗೆ ಪ್ರತಿಯೊಬ್ಬ ಭಾರತೀಯ ಹೆಮ್ಮೆ ಪಡುತ್ತಿದ್ದಾನೆ: ಯುಪಿಯಲ್ಲಿ ಪ್ರಧಾನಿ ಮೋದಿ ಹೇಳಿಕೆ

ನವದೆಹಲಿ: ಪ್ರಪಂಚದ ಆಧುನಿಕ, ದೊಡ್ಡ ದೇಶಗಳು ನಾಶ ಮಾಡುವುದು ಮಾತ್ರವಲ್ಲ, ಅತೀ ಹೆಚ್ಚು ಇಂಗಾಲದ ಹೊರಸೂಸುವಿಕೆಗೆ ಕಾರಣವಾಗುತ್ತಿವೆ ಎಂದು ಪ್ರಧಾನಿ ಮೋದಿ ಭಾನುವಾರ ಹೇಳಿದ್ದಾರೆ. ದೆಹಲಿಯ ವಿಜ್ಞಾನ ಭವನದಲ್ಲಿ 'ಮಣ್ಣು ಉಳಿಸಿ' ಕಾರ್ಯಕ್ರಮದಲ್ಲಿ ಮಾತನಾಡಿದರು.

ಇಂಗಾಲದ ಹೊರಸೂಸುವಿಕೆಯಲ್ಲಿ, ಹವಾಮಾನ ಬದಲಾವಣೆಯಲ್ಲಿ ಭಾರತದ ಪಾತ್ರ ಅತ್ಯಲ್ಪವಾದರೂ ಸಹ ಭಾರತ ಪರಿಸರ ಸಂರಕ್ಷಣೆಗಾಗಿ ವಿವಿಧ ಪ್ರಯತ್ನಗಳನ್ನು ಮಾಡುತ್ತಿದೆ. ಸರ್ಕಾರದ ಹಲವಾರು ಯೋಜನೆಗಳು ಪರಿಸರ ಸಂರಕ್ಷಣೆಯ ಸಂದೇಶವನ್ನು ಹೊಂದಿವೆ. ಸ್ವಚ್ಛ ಭಾರತ್ ಮಿಷನ್, ನಯಾಮಿ ಗಂಗೆ, ಅಥವಾ ಒಂದು ಸೂರ್ಯ, ಒಂದು ಗ್ರಿಡ್ ಮೂಲಕ ಅನೇಕ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದರು.

ರೈತರ ಮನಸ್ಥಿತಿಯನ್ನು ಬದಲಾಯಿಸುವಲ್ಲಿ "ಮಣ್ಣಿನ ಆರೋಗ್ಯ ಕಾರ್ಡ್‌ಗಳ" ಪ್ರಾಮುಖ್ಯತೆಯ ಬಗ್ಗೆ ಹೆಚ್ಚಿನ ಒತ್ತು ನೀಡಿ ಮಾತನಾಡಿದ ಅವರು, ಹಿಂದೆ ನಮ್ಮ ರೈತರಿಗೆ ಮಣ್ಣಿನ ಪೋಷಕಾಂಶ ಮತ್ತು ಆರೋಗ್ಯದ ಬಗ್ಗೆ ಅಷ್ಟೊಂದು ಮಾಹಿತಿಯಿರಲಿಲ್ಲ. ಉತ್ತಮ ಮಣ್ಣಿನ ಆರೋಗ್ಯಕ್ಕೆ ಏನು ಬೇಕು ಎಂಬುದನ್ನು ನಿರ್ಧರಿಸುವ ಸಾಮರ್ಥ್ಯವನ್ನು ಮಣ್ಣಿನ ಆರೋಗ್ಯ ಕಾರ್ಡ್​ ರೈತರಿಗೆ ನೀಡಿದೆ. ಅದಕ್ಕಾಗಿ ಮಣ್ಣಿನ ಆರೋಗ್ಯ ಕಾರ್ಡ್‌ ನೀಡುವ ಅಭಿಯಾನವನ್ನು ದೇಶಾದ್ಯಂತ ಸಂಯೋಜಿಸಲಾಯಿತು. ಈ ವರ್ಷದ ಬಜೆಟ್‌ನಲ್ಲಿ ಗಂಗಾ ನದಿ ಕಾರಿಡಾರ್‌ ಉದ್ದಕ್ಕೂ ನೈಸರ್ಗಿಕ ಕೃಷಿಗೆ ಉತ್ತೇಜನ ನೀಡುವುದಾಗಿ ಘೋಷಿಸಿದ್ದೇವೆ ಎಂದು ತಿಳಿಸಿದರು.

ಭಾರತ ಇಂದು ಅನುಸರಿಸುತ್ತಿರುವ ಜೀವವೈವಿಧ್ಯ ಮತ್ತು ವನ್ಯಜೀವಿಗಳಿಗೆ ಸಂಬಂಧಿಸಿದ ನೀತಿಗಳು ವನ್ಯಜೀವಿಗಳ ಸಂಖ್ಯೆಯಲ್ಲಿ ದಾಖಲೆಯ ಹೆಚ್ಚಳಕ್ಕೆ ಕಾರಣವಾಗಿವೆ. ಮಾರ್ಚ್‌ನಲ್ಲಿ, 13 ನದಿಗಳ ಪುನರುಜ್ಜೀವನ ಯೋಜನೆಯನ್ನು ಪ್ರಾರಂಭಿಸಿದ್ದು, ಇದರಿಂದ 7,400 ಚದರ ಕಿ.ಮೀಗಳಷ್ಟು ಅರಣ್ಯಪ್ರದೇಶ ಹೆಚ್ಚಾಗಿದೆ. ಇಂದು, ಭಾರತವು ತನ್ನ ಗುರಿಗಿಂತ ಐದು ತಿಂಗಳ ಮುಂಚಿತವಾಗಿ ಪೆಟ್ರೋಲ್‌ನಲ್ಲಿ ಶೇಕಡಾ 10 ರಷ್ಟು ಎಥೆನಾಲ್ ಮಿಶ್ರಣವನ್ನು ಸಾಧಿಸಿದೆ ಎಂದು ಹೇಳಿದರು.

ಮಣ್ಣಿನ ಸಂರಕ್ಷಣೆಗೆ ಸದ್ಗುರು 100 ದಿನಗಳ 'ಮಣ್ಣು ಉಳಿಸಿ' ಬೈಕ್​ ರ್ಯಾಲಿ ಅಭಿಯಾನವನ್ನು ಕಳೆದ ಮಾರ್ಚ್​ನಲ್ಲಿ ಪ್ರಾರಂಭಿಸಿದ್ದಾರೆ. ಲಂಡನ್​ನ ಸಂಸತ್​ ಚೌಕದಲ್ಲಿ ಆರಂಭಿಸಿರುವ ಅವರು 27 ದೇಶಗಳನ್ನು ಸುತ್ತಿ, ಅಲ್ಲೆಲ್ಲ ಮಣ್ಣಿನ ಫಲವತ್ತತೆಯ ಬಗ್ಗೆ ಅರಿವು ಮೂಡಿಸಿ, ಈಗ ಭಾರತಕ್ಕೆ ಪ್ರವೇಶಿಸಿದ್ದಾರೆ. ಅವರ 100 ದಿನಗಳ ರ್ಯಾಲಿ ಜೂನ್​ 5ಕ್ಕೆ 75 ದಿನಗಳನ್ನು ಪೂರೈಸಿದೆ.

ಇದನ್ನೂ ಓದಿ: ದೇಶದ ಬೆಳವಣಿಗೆ ಬಗ್ಗೆ ಪ್ರತಿಯೊಬ್ಬ ಭಾರತೀಯ ಹೆಮ್ಮೆ ಪಡುತ್ತಿದ್ದಾನೆ: ಯುಪಿಯಲ್ಲಿ ಪ್ರಧಾನಿ ಮೋದಿ ಹೇಳಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.