ETV Bharat / bharat

ಹೇಯ ಕೃತ್ಯ.. ಬಾಲಕಿ ಮೇಲೆ ಅತ್ಯಾಚಾರವೆಸಗಿ ನಾಲಿಗೆ ಕತ್ತರಿಸಿದ ದುರುಳರು

ಮಾನವಕುಲವೇ ತಲೆತಗ್ಗಿಸುವ ಹೇಯ ಕೃತ್ಯ ಬಿಹಾರದಲ್ಲಿ ನಡೆದಿದೆ. 13 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿದ್ದಲ್ಲದೇ ಆಕೆಯ ಜನನಾಂಗಗಳನ್ನು ಕತ್ತರಿಸಲಾಗಿದೆ.

author img

By

Published : Nov 14, 2022, 7:00 PM IST

molestation-with-minor-girl-in-samastipur
ಬಾಲಕಿಯ ರೇಪ್​ ಮಾಡಿ ನಾಲಿಗೆ, ಜನನಾಂಗ, ಸ್ತನ ಕತ್ತರಿಸಿದ ದುರುಳರು

ಸಮಷ್ಟಿಪುರ(ಬಿಹಾರ): ಅಶಿಕ್ಷಿತರು, ಬಡತನವೇ ಹೆಚ್ಚಿರುವ ಬಿಹಾರದಲ್ಲಿ ಹೃದಯವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ. 13 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದಾರೆ. ಬಳಿಕ ಗುಪ್ತಾಂಗ, ಸ್ತನ, ನಾಲಿಗೆಯನ್ನು ಕತ್ತರಿಸಿ ಬಿಸಾಡಿದ್ದಾರೆ. ತೀವ್ರ ರಕ್ತಸ್ರಾವದಿಂದ ಬಾಲಕಿ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾಳೆ.

ಬಿಹಾರದ ಸಮಷ್ಟಿಪುರ ಜಿಲ್ಲೆಯ ಕಲ್ಯಾಣಪುರ ಎಂಬಲ್ಲಿ ಈ ಕರುಳು ಹಿಂಡುವ ಪ್ರಕರಣ ನಡೆದಿದ್ದು, ತಡವಾಗಿ ಗೊತ್ತಾಗಿದೆ. ನವೆಂಬರ್​ 11 ರಂದು ಬಾಲಕಿಯನ್ನು ಮನೆಯಿಂದ ಹೊತ್ತೊಯ್ದ ದುರುಳರು, ಆಕೆಯ ಮೇಲೆ ಪೈಶಾಚಿಕ ಕೃತ್ಯ ಎಸಗಿದ್ದಲ್ಲದೇ, ಮಾನವಕುಲವೇ ತಲೆತಗ್ಗಿಸುವಂತೆ ನಾಲಿಗೆ, ಸ್ತನ, ಗುಪ್ತಾಂಗವನ್ನು ಕತ್ತರಿಸಿದ್ದಾರೆ.

ಕುಟುಂಬಸ್ಥರು ಬಾಲಕಿಯನ್ನು ಹುಡುಕಾಡಿದಾಗ, ಮನೆಯ ಬಳಿಯ ತೋಟದಲ್ಲಿ ತೀವ್ರ ರಕ್ತಸ್ರಾವದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಾಲಕಿ ಪತ್ತೆಯಾಗಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಬಾಲಕಿಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ಬಗ್ಗೆ ಬಾಲಕಿಯ ಬಡ ಕುಟುಂಬ ಪೊಲೀಸರಿಗೆ ದೂರು ನೀಡಿದೆ. ಕರುಣಾಜನಕ ಕತೆಯೆಂದರೆ, ಸಂತ್ರಸ್ತ ಬಾಲಕಿಗೆ ಚಿಕಿತ್ಸೆ ಕೊಡಿಸಲೂ ಹಣವಿಲ್ಲದೇ, ಕುಟುಂಬಸ್ಥರು ಊರ ಜನರಲ್ಲಿ ದೇಣಿಗೆ ಸಂಗ್ರಹಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅಪರಾಧಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಅಭಯ ನೀಡಿದ್ದಾರೆ.

ಓದಿ: ಅಮೆರಿಕದಲ್ಲಿ ಮತ್ತೆ ಗುಂಡಿನ ದಾಳಿ.. ವರ್ಜೀನಿಯಾ ವಿವಿ ವಿದ್ಯಾರ್ಥಿ ಗುಂಡೇಟಿಗೆ ಮೂವರು ಬಲಿ

ಸಮಷ್ಟಿಪುರ(ಬಿಹಾರ): ಅಶಿಕ್ಷಿತರು, ಬಡತನವೇ ಹೆಚ್ಚಿರುವ ಬಿಹಾರದಲ್ಲಿ ಹೃದಯವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ. 13 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದಾರೆ. ಬಳಿಕ ಗುಪ್ತಾಂಗ, ಸ್ತನ, ನಾಲಿಗೆಯನ್ನು ಕತ್ತರಿಸಿ ಬಿಸಾಡಿದ್ದಾರೆ. ತೀವ್ರ ರಕ್ತಸ್ರಾವದಿಂದ ಬಾಲಕಿ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾಳೆ.

ಬಿಹಾರದ ಸಮಷ್ಟಿಪುರ ಜಿಲ್ಲೆಯ ಕಲ್ಯಾಣಪುರ ಎಂಬಲ್ಲಿ ಈ ಕರುಳು ಹಿಂಡುವ ಪ್ರಕರಣ ನಡೆದಿದ್ದು, ತಡವಾಗಿ ಗೊತ್ತಾಗಿದೆ. ನವೆಂಬರ್​ 11 ರಂದು ಬಾಲಕಿಯನ್ನು ಮನೆಯಿಂದ ಹೊತ್ತೊಯ್ದ ದುರುಳರು, ಆಕೆಯ ಮೇಲೆ ಪೈಶಾಚಿಕ ಕೃತ್ಯ ಎಸಗಿದ್ದಲ್ಲದೇ, ಮಾನವಕುಲವೇ ತಲೆತಗ್ಗಿಸುವಂತೆ ನಾಲಿಗೆ, ಸ್ತನ, ಗುಪ್ತಾಂಗವನ್ನು ಕತ್ತರಿಸಿದ್ದಾರೆ.

ಕುಟುಂಬಸ್ಥರು ಬಾಲಕಿಯನ್ನು ಹುಡುಕಾಡಿದಾಗ, ಮನೆಯ ಬಳಿಯ ತೋಟದಲ್ಲಿ ತೀವ್ರ ರಕ್ತಸ್ರಾವದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಾಲಕಿ ಪತ್ತೆಯಾಗಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಬಾಲಕಿಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ಬಗ್ಗೆ ಬಾಲಕಿಯ ಬಡ ಕುಟುಂಬ ಪೊಲೀಸರಿಗೆ ದೂರು ನೀಡಿದೆ. ಕರುಣಾಜನಕ ಕತೆಯೆಂದರೆ, ಸಂತ್ರಸ್ತ ಬಾಲಕಿಗೆ ಚಿಕಿತ್ಸೆ ಕೊಡಿಸಲೂ ಹಣವಿಲ್ಲದೇ, ಕುಟುಂಬಸ್ಥರು ಊರ ಜನರಲ್ಲಿ ದೇಣಿಗೆ ಸಂಗ್ರಹಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅಪರಾಧಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಅಭಯ ನೀಡಿದ್ದಾರೆ.

ಓದಿ: ಅಮೆರಿಕದಲ್ಲಿ ಮತ್ತೆ ಗುಂಡಿನ ದಾಳಿ.. ವರ್ಜೀನಿಯಾ ವಿವಿ ವಿದ್ಯಾರ್ಥಿ ಗುಂಡೇಟಿಗೆ ಮೂವರು ಬಲಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.