ETV Bharat / bharat

ರಸ್ತೆಯಲ್ಲಿ ಅಡ್ಡಬಂದ ಬೀದಿನಾಯಿ ರಕ್ಷಿಸಲು ಹೋಗಿ ಆಟೋ ಪಲ್ಟಿ: ಐವರ ದುರ್ಮರಣ, ಇಬ್ಬರಿಗೆ ಗಾಯ

author img

By

Published : Sep 16, 2021, 5:20 PM IST

ರಸ್ತೆಯಲ್ಲಿ ಅಡ್ಡ ಬಂದ ಬೀದಿ ನಾಯಿಯನ್ನು ರಕ್ಷಣೆ ಮಾಡಲು ಹೋಗಿ ಆಟೋ ರಿಕ್ಷಾ ಉರುಳಿ ಬಿದ್ದು, ಐವರು ದುರ್ಮರಣಕ್ಕೀಡಾಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

Rajgarh accident
Rajgarh accident

ರಾಜ​ಘಡ್(ಮಧ್ಯಪ್ರದೇಶ): ಪ್ರಯಾಣಿಕರನ್ನು​ ಹೊತ್ತು ಸಾಗುತ್ತಿದ್ದ ಆಟೋ ರಿಕ್ಷಾ ಉರುಳಿ ಬಿದ್ದಿದೆ. ಇದೇ ಸಂದರ್ಭದಲ್ಲಿ ಕಾರು ಡಿಕ್ಕಿ ಹೊಡೆಯಿತು. ಪರಿಣಾಮ ಐವರು ಪ್ರಯಾಣಿಕರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ರಾಜಘಡ್​ದಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 52ರ ಕೊತ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಶನ್​ಗಢ್​ದಲ್ಲಿ ಈ ಘಟನೆ ನಡೆದಿದೆ. ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದಾಗ ಏಕಾಏಕಿ ಬೀದಿನಾಯಿ ಅಡ್ಡ ಬಂದಿದೆ. ಈ ವೇಳೆ ಚಾಲಕ ನಾಯಿಯನ್ನು ರಕ್ಷಣೆ ಮಾಡಲು ಹೋಗಿದ್ದಾನೆ. ಪರಿಣಾಮ, ರಿಕ್ಷಾ ನಿಯಂತ್ರಣ ಕಳೆದುಕೊಂಡು ಉರುಳಿ ಬಿದ್ದಿದೆ. ಈ ಸಂದರ್ಭದಲ್ಲಿ ವೇಗವಾಗಿ ಬಂದ ಕಾರು ರಿಕ್ಷಾ ಮೇಲೆ ಹರಿದು ಹೋಗಿ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಭಾರತ-ನ್ಯೂಜಿಲ್ಯಾಂಡ್ ಏಕದಿನ​ ಕ್ರಿಕೆಟ್ ಸರಣಿ ಮುಂದೂಡಿಕೆ: ಕಾರಣ?

ಅಪಘಾತದಲ್ಲಿ ಸಾವನ್ನಪ್ಪಿದವರನ್ನು ಪಾರ್ವತಿಭಾಯ್ ​​(60), ಸಂತ್ರಾ ಬಾಯ್​ (45), ಮೋಹರ್​ ಸಿಂಗ್​(50), ಪ್ರಭುಲಾಲ್ ​​(45) ಹಾಗೂ ಪನ್ನಾಲಾಲ್​ ಎಂದು ಗುರುತಿಸಲಾಗಿದೆ. ಗಾಯಾಳುಗಳಲ್ಲಿ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಎಲ್ಲರೂ ರಾಜಘಡದ ನಿವಾಸಿಗಳೆಂದು ಎಂದು ವರದಿಯಾಗಿದೆ.

ರಾಜ​ಘಡ್(ಮಧ್ಯಪ್ರದೇಶ): ಪ್ರಯಾಣಿಕರನ್ನು​ ಹೊತ್ತು ಸಾಗುತ್ತಿದ್ದ ಆಟೋ ರಿಕ್ಷಾ ಉರುಳಿ ಬಿದ್ದಿದೆ. ಇದೇ ಸಂದರ್ಭದಲ್ಲಿ ಕಾರು ಡಿಕ್ಕಿ ಹೊಡೆಯಿತು. ಪರಿಣಾಮ ಐವರು ಪ್ರಯಾಣಿಕರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ರಾಜಘಡ್​ದಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 52ರ ಕೊತ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಶನ್​ಗಢ್​ದಲ್ಲಿ ಈ ಘಟನೆ ನಡೆದಿದೆ. ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದಾಗ ಏಕಾಏಕಿ ಬೀದಿನಾಯಿ ಅಡ್ಡ ಬಂದಿದೆ. ಈ ವೇಳೆ ಚಾಲಕ ನಾಯಿಯನ್ನು ರಕ್ಷಣೆ ಮಾಡಲು ಹೋಗಿದ್ದಾನೆ. ಪರಿಣಾಮ, ರಿಕ್ಷಾ ನಿಯಂತ್ರಣ ಕಳೆದುಕೊಂಡು ಉರುಳಿ ಬಿದ್ದಿದೆ. ಈ ಸಂದರ್ಭದಲ್ಲಿ ವೇಗವಾಗಿ ಬಂದ ಕಾರು ರಿಕ್ಷಾ ಮೇಲೆ ಹರಿದು ಹೋಗಿ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಭಾರತ-ನ್ಯೂಜಿಲ್ಯಾಂಡ್ ಏಕದಿನ​ ಕ್ರಿಕೆಟ್ ಸರಣಿ ಮುಂದೂಡಿಕೆ: ಕಾರಣ?

ಅಪಘಾತದಲ್ಲಿ ಸಾವನ್ನಪ್ಪಿದವರನ್ನು ಪಾರ್ವತಿಭಾಯ್ ​​(60), ಸಂತ್ರಾ ಬಾಯ್​ (45), ಮೋಹರ್​ ಸಿಂಗ್​(50), ಪ್ರಭುಲಾಲ್ ​​(45) ಹಾಗೂ ಪನ್ನಾಲಾಲ್​ ಎಂದು ಗುರುತಿಸಲಾಗಿದೆ. ಗಾಯಾಳುಗಳಲ್ಲಿ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಎಲ್ಲರೂ ರಾಜಘಡದ ನಿವಾಸಿಗಳೆಂದು ಎಂದು ವರದಿಯಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.