ETV Bharat / bharat

ಭಾರತ್ ಜೋಡೋ ಯಾತ್ರೆಗೆ ಉಮಾಭಾರತಿಗೆ ಆಹ್ವಾನ.. ಜೋಕ್​ ಎಂದು ಕಾಂಗ್ರೆಸ್​ ಜರಿದ ಬಿಜೆಪಿ ನಾಯಕಿ

ಕಾಂಗ್ರೆಸ್​ ನಾಯಕ ಕಮಲ್​ನಾಥ್ ಅವರನ್ನು ತಮ್ಮ ಹಿರಿಯ ಸಹೋದರ ಎಂದೇ ಉಲ್ಲೇಖಿಸುತ್ತಲೇ ಬಿಜೆಪಿ ನಾಯಕಿ ಉಮಾಭಾರತಿ ತಿರುಗೇಟು ನೀಡಿದ್ದಾರೆ.

author img

By

Published : Sep 11, 2022, 10:19 PM IST

mp-bharti-terms-kamal-naths-invite-to-join-bharat-jodo-yatra-as-a-joke
ಭಾರತ್ ಜೋಡೋ ಯಾತ್ರೆ...ಉಮಾಭಾರತಿಗೆ ಕಮಲ್​ನಾಥ್ ಆಹ್ವಾನ: ಬಿಜೆಪಿ ನಾಯಕಿಯ ಪ್ರತಿಕ್ರಿಯೆ ಹೀಗಿದೆ

ಭೋಪಾಲ್ (ಮಧ್ಯಪ್ರದೇಶ): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ಕೈ ಜೋಡಿಸುವಂತೆ ಮಧ್ಯಪ್ರದೇಶದ ಕಾಂಗ್ರೆಸ್ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಬಿಜೆಪಿಯ ಹಿರಿಯ ನಾಯಕಿ ಉಮಾಭಾರತಿ ಅವರಿಗೆ ಆಹ್ವಾನ ನೀಡಿದ್ದು, ಇದಕ್ಕೆ ಉಮಾಭಾರತಿ ತೀಕ್ಷ್ಣವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ.

ಭಾರತ್ ಜೋಡೋ ಯಾತ್ರೆಗೆ ಸೇರುವಂತೆ ಕಮಲ್ ನಾಥ್ ಅವರು ನನ್ನನ್ನು ಆಹ್ವಾನಿಸಿದ್ದಾರೆ ಎಂದು ನಾನು ಪತ್ರಿಕೆಯಲ್ಲಿ ಓದಿದ್ದೇನೆ. ನನಗೆ ಇದು ತಮಾಷೆ ಎನಿಸಿದೆ. ನನಗೆ ಅಂತಹ ಜೋಕ್‌ಗಳ ಅಭ್ಯಾಸವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಉಮಾಭಾರತಿ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. ಅಲ್ಲದೇ, ಕಮಲ್​ನಾಥ್ ಅವರನ್ನು ಹಿರಿಯ ಸಹೋದರ ಎಂದೂ ಟ್ವೀಟ್​ನಲ್ಲಿ ಬಿಜೆಪಿಯ ನಾಯಕಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿಗೆ ಬಂದ 1200 ಗಿಫ್ಟ್​ಗಳ ಹರಾಜು: ನಮಾಮಿ ಗಂಗಾ ಯೋಜನೆಗೆ ಹೋಗಲಿದೆ ಹಣ

ಅಲ್ಲದೇ, ದೇಶ ವಿಭಜನೆಗೆ ಕಾರಣವಾದ ಮತ್ತು 1984ರ ಸಿಖ್ ವಿರೋಧಿ ಗಲಭೆಯಲ್ಲಿ ಭಾಗಿಯಾಗಿದ್ದರಿಂದ ಇಂತಹ ಯಾತ್ರೆ ಕೈಗೊಳ್ಳಲು ಕಾಂಗ್ರೆಸ್‌ಗೆ ಯಾವುದೇ ಹಕ್ಕಿಲ್ಲ ಎಂದು ಟೀಕಿಸಿದ್ದಾರೆ. ಜೊತೆಗೆ ಆಗಿನ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಯ ನಂತರದ ನಡೆದ ಸಿಖ್ ವಿರೋಧಿ ದಂಗೆಯನ್ನು ಭಾರತದ ಇತಿಹಾಸದಲ್ಲಿ ಅತಿದೊಡ್ಡ ಗುಂಪು ಹತ್ಯೆ ಎಂದು ಉಮಾ ಭಾರತಿ ಕರೆದಿದ್ದಾರೆ.

ಇದನ್ನೂ ಓದಿ: ಈಟಿವಿ ಭಾರತ Exclusive: ವಿವಾದಗಳು ಅಂತ್ಯ.. ಕಾಂಗ್ರೆಸ್​ ಅಧ್ಯಕ್ಷರ ಚುನಾವಣೆಗೆ ಸೆ.22ರಂದು ಅಧಿಸೂಚನೆ ಪಕ್ಕಾ

ಭೋಪಾಲ್ (ಮಧ್ಯಪ್ರದೇಶ): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ಕೈ ಜೋಡಿಸುವಂತೆ ಮಧ್ಯಪ್ರದೇಶದ ಕಾಂಗ್ರೆಸ್ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಬಿಜೆಪಿಯ ಹಿರಿಯ ನಾಯಕಿ ಉಮಾಭಾರತಿ ಅವರಿಗೆ ಆಹ್ವಾನ ನೀಡಿದ್ದು, ಇದಕ್ಕೆ ಉಮಾಭಾರತಿ ತೀಕ್ಷ್ಣವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ.

ಭಾರತ್ ಜೋಡೋ ಯಾತ್ರೆಗೆ ಸೇರುವಂತೆ ಕಮಲ್ ನಾಥ್ ಅವರು ನನ್ನನ್ನು ಆಹ್ವಾನಿಸಿದ್ದಾರೆ ಎಂದು ನಾನು ಪತ್ರಿಕೆಯಲ್ಲಿ ಓದಿದ್ದೇನೆ. ನನಗೆ ಇದು ತಮಾಷೆ ಎನಿಸಿದೆ. ನನಗೆ ಅಂತಹ ಜೋಕ್‌ಗಳ ಅಭ್ಯಾಸವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಉಮಾಭಾರತಿ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. ಅಲ್ಲದೇ, ಕಮಲ್​ನಾಥ್ ಅವರನ್ನು ಹಿರಿಯ ಸಹೋದರ ಎಂದೂ ಟ್ವೀಟ್​ನಲ್ಲಿ ಬಿಜೆಪಿಯ ನಾಯಕಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿಗೆ ಬಂದ 1200 ಗಿಫ್ಟ್​ಗಳ ಹರಾಜು: ನಮಾಮಿ ಗಂಗಾ ಯೋಜನೆಗೆ ಹೋಗಲಿದೆ ಹಣ

ಅಲ್ಲದೇ, ದೇಶ ವಿಭಜನೆಗೆ ಕಾರಣವಾದ ಮತ್ತು 1984ರ ಸಿಖ್ ವಿರೋಧಿ ಗಲಭೆಯಲ್ಲಿ ಭಾಗಿಯಾಗಿದ್ದರಿಂದ ಇಂತಹ ಯಾತ್ರೆ ಕೈಗೊಳ್ಳಲು ಕಾಂಗ್ರೆಸ್‌ಗೆ ಯಾವುದೇ ಹಕ್ಕಿಲ್ಲ ಎಂದು ಟೀಕಿಸಿದ್ದಾರೆ. ಜೊತೆಗೆ ಆಗಿನ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಯ ನಂತರದ ನಡೆದ ಸಿಖ್ ವಿರೋಧಿ ದಂಗೆಯನ್ನು ಭಾರತದ ಇತಿಹಾಸದಲ್ಲಿ ಅತಿದೊಡ್ಡ ಗುಂಪು ಹತ್ಯೆ ಎಂದು ಉಮಾ ಭಾರತಿ ಕರೆದಿದ್ದಾರೆ.

ಇದನ್ನೂ ಓದಿ: ಈಟಿವಿ ಭಾರತ Exclusive: ವಿವಾದಗಳು ಅಂತ್ಯ.. ಕಾಂಗ್ರೆಸ್​ ಅಧ್ಯಕ್ಷರ ಚುನಾವಣೆಗೆ ಸೆ.22ರಂದು ಅಧಿಸೂಚನೆ ಪಕ್ಕಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.