ETV Bharat / bharat

ಅಕ್ರಮ ಗಣಿಗಾರಿಕೆ ವಿರುದ್ಧ ಸಂಸತ್​ನಲ್ಲಿ ಧ್ವನಿಯೆತ್ತಿದ ಸಂಸದೆ ಸುಮಲತಾ: VIDEO

author img

By

Published : Feb 12, 2021, 6:44 PM IST

ಹುಣಸೋಡು ಗ್ರಾಮದಲ್ಲಿ ನಡೆದ ದುರಂತದ ನಂತರ ಎಲ್ಲರೂ ಎಚ್ಚೆತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಸಂಸದೆ ಸುಮಲತಾ ಅಂಬರೀಶ್ ಧ್ವನಿಯೆತ್ತಿದ್ದಾರೆ.

MP Sumalatha in Lok Sabha session
ಅಕ್ರಮ ಗಣಿಗಾರಿಕೆ ವಿರುದ್ಧ ಸಂಸತ್​ನಲ್ಲಿ ಧ್ವನಿಯೆತ್ತಿದ ಸಂಸದೆ ಸುಮಲತಾ

ನವದೆಹಲಿ: ಮಂಡ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಮತ್ತು ಕ್ವಾರಿ ಚಟುವಟಿಕೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಂಸದೆ ಸುಮಲತಾ ಅಂಬರೀಷ್ ಆಗ್ರಹಿಸಿದರು.

ಅಕ್ರಮ ಗಣಿಗಾರಿಕೆ ವಿರುದ್ಧ ಸಂಸತ್​ನಲ್ಲಿ ಧ್ವನಿಯೆತ್ತಿದ ಸಂಸದೆ ಸುಮಲತಾ

ಲೋಕಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಮಾತನಾಡಿದ ಅವರು ನನ್ನ ಕ್ಷೇತ್ರದಲ್ಲಿಯೇ ಸುಮಾರು 15 ಗ್ರಾಮಗಳಲ್ಲಿ 2500 ಎಕರೆಗಳಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಪ್ರಧಾನಿಗಳಿಗೆ ಸುಮಲತಾ ಅಂಬರೀಷ್ ಮನವಿ ಮಾಡಿದರು.

ಇದನ್ನೂ ಓದಿ: ರಿಷಿಗಂಗಾದಲ್ಲಿ ಮತ್ತೊಂದು ಸರೋವರ: ಮತ್ತೊಂದು ಅಪಾಯದ ತಡೆಯಲು ಸಿದ್ಧತೆಗಳೇನು..?

ಅಭಿವೃದ್ಧಿ ಚಟುವಟಿಕೆಗೆ ಅವಕಾಶ ನೀಡುವ ವೇಳೆ, ಅಕ್ರಮ ಗಣಿಗಾರಿಕೆ ಅಥವಾ ಅಕ್ರಮ ಕ್ವಾರಿಗಳನ್ನು ಪರಿಶೀಲನೆ ನಡೆಸಬೇಕಾಗಿರುವುದು ಅನಿವಾರ್ಯ ಎಂದು ಈ ವೇಳೆ ಅಭಿಪ್ರಾಯಪಟ್ಟವರು.

ಈ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವ್ಡೇಕರ್, ಅಕ್ರಮ ಗಣಿಗಾರಿಕೆ ಬಗೆಗಿನ ಪ್ರತಿಯೊಂದು ದೂರನ್ನೂ ಕೂಡಾ ನಾವು ಪರಿಶೀಲನೆ ನಡೆಸುತ್ತಿದ್ದೇವೆ. ಅಕ್ರಮ ಗಣಿಗಾರಿಕೆ ನಡೆಯದಂತೆ ನೋಡಿಕೊಳ್ಳುವುದು ರಾಜ್ಯ ಸರ್ಕಾರಗಳ ಜವಾಬ್ದಾರಿಯಾಗಿದೆ. ಇದರೊಂದಿಗೆ ಅಕ್ರಮ ಗಣಿಗಾರಿಕೆಯಿಂದ ಪರಿಸರ ನಾಶವಾದರೆ ಹೆಚ್ಚಿನ ದಂಡವನ್ನೂ ವಿಧಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ನವದೆಹಲಿ: ಮಂಡ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಮತ್ತು ಕ್ವಾರಿ ಚಟುವಟಿಕೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಂಸದೆ ಸುಮಲತಾ ಅಂಬರೀಷ್ ಆಗ್ರಹಿಸಿದರು.

ಅಕ್ರಮ ಗಣಿಗಾರಿಕೆ ವಿರುದ್ಧ ಸಂಸತ್​ನಲ್ಲಿ ಧ್ವನಿಯೆತ್ತಿದ ಸಂಸದೆ ಸುಮಲತಾ

ಲೋಕಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಮಾತನಾಡಿದ ಅವರು ನನ್ನ ಕ್ಷೇತ್ರದಲ್ಲಿಯೇ ಸುಮಾರು 15 ಗ್ರಾಮಗಳಲ್ಲಿ 2500 ಎಕರೆಗಳಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಪ್ರಧಾನಿಗಳಿಗೆ ಸುಮಲತಾ ಅಂಬರೀಷ್ ಮನವಿ ಮಾಡಿದರು.

ಇದನ್ನೂ ಓದಿ: ರಿಷಿಗಂಗಾದಲ್ಲಿ ಮತ್ತೊಂದು ಸರೋವರ: ಮತ್ತೊಂದು ಅಪಾಯದ ತಡೆಯಲು ಸಿದ್ಧತೆಗಳೇನು..?

ಅಭಿವೃದ್ಧಿ ಚಟುವಟಿಕೆಗೆ ಅವಕಾಶ ನೀಡುವ ವೇಳೆ, ಅಕ್ರಮ ಗಣಿಗಾರಿಕೆ ಅಥವಾ ಅಕ್ರಮ ಕ್ವಾರಿಗಳನ್ನು ಪರಿಶೀಲನೆ ನಡೆಸಬೇಕಾಗಿರುವುದು ಅನಿವಾರ್ಯ ಎಂದು ಈ ವೇಳೆ ಅಭಿಪ್ರಾಯಪಟ್ಟವರು.

ಈ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವ್ಡೇಕರ್, ಅಕ್ರಮ ಗಣಿಗಾರಿಕೆ ಬಗೆಗಿನ ಪ್ರತಿಯೊಂದು ದೂರನ್ನೂ ಕೂಡಾ ನಾವು ಪರಿಶೀಲನೆ ನಡೆಸುತ್ತಿದ್ದೇವೆ. ಅಕ್ರಮ ಗಣಿಗಾರಿಕೆ ನಡೆಯದಂತೆ ನೋಡಿಕೊಳ್ಳುವುದು ರಾಜ್ಯ ಸರ್ಕಾರಗಳ ಜವಾಬ್ದಾರಿಯಾಗಿದೆ. ಇದರೊಂದಿಗೆ ಅಕ್ರಮ ಗಣಿಗಾರಿಕೆಯಿಂದ ಪರಿಸರ ನಾಶವಾದರೆ ಹೆಚ್ಚಿನ ದಂಡವನ್ನೂ ವಿಧಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.