ETV Bharat / bharat

MS Swaminathan Funeral: ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಾಮಿನಾಥನ್ ಅಂತ್ಯಕ್ರಿಯೆ

author img

By ETV Bharat Karnataka Team

Published : Sep 30, 2023, 6:51 PM IST

ಹಸಿರು ಕ್ರಾಂತಿಯ ಹರಿಕಾರ ಎಂ ಎಸ್ ಸ್ವಾಮಿನಾಥನ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಚೆನ್ನೈನ ಬೀಸಂಟ್ ನಗರದಲ್ಲಿ ನೆರವೇರಿತು.

ms-swaminathan-funeral-held-at-chennai-tamilnadu
MS Swaminathan Funeral: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಸ್ವಾಮಿನಾಥನ್ ಅವರ ಅಂತ್ಯಕ್ರಿಯೆ

ಚೆನ್ನೈ (ತಮಿಳುನಾಡು): ಹಸಿರು ಕ್ರಾಂತಿಯ ಪಿತಾಮಹ ಹಾಗೂ ಕೃಷಿ ವಿಜ್ಞಾನಿ ಎಂ.ಎಸ್.ಸ್ವಾಮಿನಾಥನ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಚೆನ್ನೈನ ಬೀಸಂಟ್ ನಗರದ ಚಿತಾಗಾರದಲ್ಲಿ ನೆರವೇರಿತು. ಇದಕ್ಕೂ ಮೊದಲು ಪೊಲೀಸರು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಗೌರವ ವಂದನೆ ಸಲ್ಲಿಸಿದರು. ಈ ವೇಳೆ, ಎಂ.ಎಸ್.ಸ್ವಾಮಿನಾಥನ್ ಅವರ ಪುತ್ರಿಯರಾದ ಸೌಮ್ಯಾ, ಮಥುರಾ, ನಿತ್ಯ ರಾವ್ ಮತ್ತು ಇತರ ಕುಟುಂಬ ಸದಸ್ಯರು, ಕೇರಳದ ಸಚಿವರಾದ ಕೃಷ್ಣನ್ ಕುಟ್ಟಿ, ಪಿ.ಪ್ರಸಾದ್, ತೆಲಂಗಾಣ ಸಚಿವ ನಿರಂಜನ್ ರೆಡ್ಡಿ, ಮಾರ್ಕ್ಸ್ ವಾದಿ ಪಕ್ಷದ ರಾಜ್ಯ (ಟಿಎನ್) ಕಾರ್ಯದರ್ಶಿ ಕೆ.ಬಾಲಕೃಷ್ಣನ್ ಈ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.

ಇದಕ್ಕೂ ಮುನ್ನ ಕೇರಳದ ಕೃಷಿ ಸಚಿವ ಪಿ.ಪ್ರಸಾದ್ ಮತ್ತು ಇಂಧನ ಸಚಿವ ಕೃಷ್ಣನ್ ಕುಟ್ಟಿ ಅವರು ಸ್ವಾಮಿನಾಥನ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ನಂತರ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಿ.ರಾಜಾ ಅವರು ಗೌರವ ನಮನ ಸಲ್ಲಿಸಿದರು. ಆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಎಂ ಎಸ್ ಸ್ವಾಮಿನಾಥನ್ ಅವರು ಶ್ರೇಷ್ಠ ಕೃಷಿ ವಿಜ್ಞಾನಿಯಾಗಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅವರು ಭಾರತೀಯ ಕೃಷಿ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದರು. ನಾನು ವೈಯಕ್ತಿಕವಾಗಿ ಅವರೊಂದಿಗೆ ಪರಿಚಿತನಾಗಿದ್ದೆ ಎಂದು ನೆನೆದರು.

ಭಾರತದ ಅಗ್ರಗಣ್ಯ ಕೃಷಿ ವಿಜ್ಞಾನಿಗಳಲ್ಲಿ ಒಬ್ಬರಾದ ಮತ್ತು ಹಸಿರು ಕ್ರಾಂತಿಯ ಹರಿಕಾರರಾದ ಎಂ.ಎಸ್.ಸ್ವಾಮಿನಾಥನ್ ಅವರು ವಯೋಸಹಜ ಕಾರಣದಿಂದ ಚೆನ್ನೈನ ತೆನಾಂಪೇಟೆಯಲ್ಲಿರುವ ತಮ್ಮ ಮನೆಯಲ್ಲಿ (ಸೆಪ್ಟೆಂಬರ್ 28)ರಂದು ನಿಧನರಾಗಿದ್ದರು. ಇದಾದ ನಂತರ ಅವರ ಪಾರ್ಥಿವ ಶರೀರವನ್ನು ಚೆನ್ನೈನ ತಾರಾಮಣಿಯಲ್ಲಿರುವ ಎಂ ಎಸ್ ಸ್ವಾಮಿನಾಥನ್ ರಿಸರ್ಚ್ ಫೌಂಡೇಶನ್ ಆವರಣದಲ್ಲಿ ಸಾರ್ವಜನಿಕರು ಮತ್ತು ರಾಜಕೀಯ ಮುಖಂಡರ ದರ್ಶನಕ್ಕಿಡಲಾಗಿತ್ತು.

ಕಳೆದ 2 ದಿನಗಳಿಂದ ಸಾರ್ವಜನಿಕರು ಮತ್ತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಎಂ ಎಸ್ ಸ್ವಾಮಿನಾಥನ್ ಅವರ ಪಾರ್ಥಿವ ಶರೀರಕ್ಕೆ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದರು. ಇಂದು ಮಧ್ಯಾಹ್ನ ಅವರ ಪಾರ್ಥಿವ ಶರೀರವನ್ನು ತಾರಾಮಣಿಯಿಂದ ವಾಹನದ ಮೂಲಕ ಚೆನ್ನೈನ ಬೆಸೆಂಟ್ ನಗರಕ್ಕೆ ತಂದು ಅಂತ್ಯಕ್ರಿಯೆ ನೆರವೇರಿಸಲಾಯಿತು.

ಹಸಿವಿನಿಂದ ಜನರ ಸಾವು ಕಂಡು ಕೃಷಿ ಸಂಶೋಧನೆ ಹೆಜ್ಜೆ: ಆಗಸ್ಟ್ 7, 1925 ರಂದು ಕುಂಭಕೋಣಂ ಜಿಲ್ಲೆಯಲ್ಲಿ ಜನಿಸಿದ ಸ್ವಾಮಿನಾಥನ್ ಅವರು ತಮ್ಮ ಸ್ವಂತ ಊರಿನಲ್ಲಿ ಶಿಕ್ಷಣವನ್ನು ಪೂರ್ಣಗೊಳಿಸಿದ್ದರು. ಅವರು ಆರಂಭದಲ್ಲಿ ವೈದ್ಯರಾಗಲು ಬಯಸಿದ್ದರು. ಆದರೆ, 1943 ರಲ್ಲಿ ಬಂಗಾಳದಲ್ಲಿ ಕ್ಷಾಮವು ಅವರ ಜೀವನದ ಗುರಿಯನ್ನೇ ಬದಲಿಸಿತು. ಸುಮಾರು 30 ಲಕ್ಷ ಜನ ಹಸಿವಿನಿಂದ ಸಾವನ್ನಪ್ಪಿದ್ದನ್ನು ಕಂಡು ಕೃಷಿ ಸಂಶೋಧನೆಯಲ್ಲಿ ತೊಡಗಲು ತಮ್ಮ ಹಾದಿಯನ್ನೇ ಬದಲಾಯಿಸಿದರು.

IPS ಅವಕಾಶ ತಿರಸ್ಕಾರ : ಅವರು ಕೇರಳದ ತಿರುವನಂತಪುರಂನ ಮಹಾರಾಜ ಕಾಲೇಜಿನಲ್ಲಿ ಪ್ರಾಣಿಶಾಸ್ತ್ರ ವಿಷಯದಲ್ಲಿ ಪದವಿ ಪಡೆದುಕೊಂಡರೆ, ಮದ್ರಾಸ್ ಕೃಷಿ ಕಾಲೇಜಿನಲ್ಲಿ ಕೃಷಿ ವಿಜ್ಞಾನವನ್ನು ಪೂರ್ಣಗೊಳಿಸಿದರು. UPSC ಪರೀಕ್ಷೆಯಲ್ಲಿ ಯಶಸ್ವಿಯಾದ ನಂತರ ಸಿಕ್ಕಿದ್ದ IPS ಅವಕಾಶವನ್ನು ತಿರಸ್ಕರಿಸಿ UNESCO ದಿಂದ ಸ್ಕಾಲರ್ ಶಿಪ್ ಪಡೆದು ಕೃಷಿ ಸಂಶೋಧನೆಯಲ್ಲಿ ತೊಡಗಿಸಿಕೊಂಡರು. ಭತ್ತ, ಗೋಧಿ ಮತ್ತು ಗೆಣಸಿನ ಮೇಲೆ ಪ್ರಮುಖ ಸಂಶೋಧನೆಗಳನ್ನು ನಡೆಸಿ, ಹಸಿರು ಕ್ರಾಂತಿಯ ಹರಿಕಾರರಾದರು.

ಇದನ್ನೂ ಓದಿ: ತೆಲಂಗಾಣದಲ್ಲಿ ಮಳೆಯ ಅಬ್ಬರ.. ಆರು ಜನ ಸಾವು, ಅನೇಕರಿಗೆ ಗಾಯ

ಚೆನ್ನೈ (ತಮಿಳುನಾಡು): ಹಸಿರು ಕ್ರಾಂತಿಯ ಪಿತಾಮಹ ಹಾಗೂ ಕೃಷಿ ವಿಜ್ಞಾನಿ ಎಂ.ಎಸ್.ಸ್ವಾಮಿನಾಥನ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಚೆನ್ನೈನ ಬೀಸಂಟ್ ನಗರದ ಚಿತಾಗಾರದಲ್ಲಿ ನೆರವೇರಿತು. ಇದಕ್ಕೂ ಮೊದಲು ಪೊಲೀಸರು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಗೌರವ ವಂದನೆ ಸಲ್ಲಿಸಿದರು. ಈ ವೇಳೆ, ಎಂ.ಎಸ್.ಸ್ವಾಮಿನಾಥನ್ ಅವರ ಪುತ್ರಿಯರಾದ ಸೌಮ್ಯಾ, ಮಥುರಾ, ನಿತ್ಯ ರಾವ್ ಮತ್ತು ಇತರ ಕುಟುಂಬ ಸದಸ್ಯರು, ಕೇರಳದ ಸಚಿವರಾದ ಕೃಷ್ಣನ್ ಕುಟ್ಟಿ, ಪಿ.ಪ್ರಸಾದ್, ತೆಲಂಗಾಣ ಸಚಿವ ನಿರಂಜನ್ ರೆಡ್ಡಿ, ಮಾರ್ಕ್ಸ್ ವಾದಿ ಪಕ್ಷದ ರಾಜ್ಯ (ಟಿಎನ್) ಕಾರ್ಯದರ್ಶಿ ಕೆ.ಬಾಲಕೃಷ್ಣನ್ ಈ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.

ಇದಕ್ಕೂ ಮುನ್ನ ಕೇರಳದ ಕೃಷಿ ಸಚಿವ ಪಿ.ಪ್ರಸಾದ್ ಮತ್ತು ಇಂಧನ ಸಚಿವ ಕೃಷ್ಣನ್ ಕುಟ್ಟಿ ಅವರು ಸ್ವಾಮಿನಾಥನ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ನಂತರ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಿ.ರಾಜಾ ಅವರು ಗೌರವ ನಮನ ಸಲ್ಲಿಸಿದರು. ಆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಎಂ ಎಸ್ ಸ್ವಾಮಿನಾಥನ್ ಅವರು ಶ್ರೇಷ್ಠ ಕೃಷಿ ವಿಜ್ಞಾನಿಯಾಗಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅವರು ಭಾರತೀಯ ಕೃಷಿ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದರು. ನಾನು ವೈಯಕ್ತಿಕವಾಗಿ ಅವರೊಂದಿಗೆ ಪರಿಚಿತನಾಗಿದ್ದೆ ಎಂದು ನೆನೆದರು.

ಭಾರತದ ಅಗ್ರಗಣ್ಯ ಕೃಷಿ ವಿಜ್ಞಾನಿಗಳಲ್ಲಿ ಒಬ್ಬರಾದ ಮತ್ತು ಹಸಿರು ಕ್ರಾಂತಿಯ ಹರಿಕಾರರಾದ ಎಂ.ಎಸ್.ಸ್ವಾಮಿನಾಥನ್ ಅವರು ವಯೋಸಹಜ ಕಾರಣದಿಂದ ಚೆನ್ನೈನ ತೆನಾಂಪೇಟೆಯಲ್ಲಿರುವ ತಮ್ಮ ಮನೆಯಲ್ಲಿ (ಸೆಪ್ಟೆಂಬರ್ 28)ರಂದು ನಿಧನರಾಗಿದ್ದರು. ಇದಾದ ನಂತರ ಅವರ ಪಾರ್ಥಿವ ಶರೀರವನ್ನು ಚೆನ್ನೈನ ತಾರಾಮಣಿಯಲ್ಲಿರುವ ಎಂ ಎಸ್ ಸ್ವಾಮಿನಾಥನ್ ರಿಸರ್ಚ್ ಫೌಂಡೇಶನ್ ಆವರಣದಲ್ಲಿ ಸಾರ್ವಜನಿಕರು ಮತ್ತು ರಾಜಕೀಯ ಮುಖಂಡರ ದರ್ಶನಕ್ಕಿಡಲಾಗಿತ್ತು.

ಕಳೆದ 2 ದಿನಗಳಿಂದ ಸಾರ್ವಜನಿಕರು ಮತ್ತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಎಂ ಎಸ್ ಸ್ವಾಮಿನಾಥನ್ ಅವರ ಪಾರ್ಥಿವ ಶರೀರಕ್ಕೆ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದರು. ಇಂದು ಮಧ್ಯಾಹ್ನ ಅವರ ಪಾರ್ಥಿವ ಶರೀರವನ್ನು ತಾರಾಮಣಿಯಿಂದ ವಾಹನದ ಮೂಲಕ ಚೆನ್ನೈನ ಬೆಸೆಂಟ್ ನಗರಕ್ಕೆ ತಂದು ಅಂತ್ಯಕ್ರಿಯೆ ನೆರವೇರಿಸಲಾಯಿತು.

ಹಸಿವಿನಿಂದ ಜನರ ಸಾವು ಕಂಡು ಕೃಷಿ ಸಂಶೋಧನೆ ಹೆಜ್ಜೆ: ಆಗಸ್ಟ್ 7, 1925 ರಂದು ಕುಂಭಕೋಣಂ ಜಿಲ್ಲೆಯಲ್ಲಿ ಜನಿಸಿದ ಸ್ವಾಮಿನಾಥನ್ ಅವರು ತಮ್ಮ ಸ್ವಂತ ಊರಿನಲ್ಲಿ ಶಿಕ್ಷಣವನ್ನು ಪೂರ್ಣಗೊಳಿಸಿದ್ದರು. ಅವರು ಆರಂಭದಲ್ಲಿ ವೈದ್ಯರಾಗಲು ಬಯಸಿದ್ದರು. ಆದರೆ, 1943 ರಲ್ಲಿ ಬಂಗಾಳದಲ್ಲಿ ಕ್ಷಾಮವು ಅವರ ಜೀವನದ ಗುರಿಯನ್ನೇ ಬದಲಿಸಿತು. ಸುಮಾರು 30 ಲಕ್ಷ ಜನ ಹಸಿವಿನಿಂದ ಸಾವನ್ನಪ್ಪಿದ್ದನ್ನು ಕಂಡು ಕೃಷಿ ಸಂಶೋಧನೆಯಲ್ಲಿ ತೊಡಗಲು ತಮ್ಮ ಹಾದಿಯನ್ನೇ ಬದಲಾಯಿಸಿದರು.

IPS ಅವಕಾಶ ತಿರಸ್ಕಾರ : ಅವರು ಕೇರಳದ ತಿರುವನಂತಪುರಂನ ಮಹಾರಾಜ ಕಾಲೇಜಿನಲ್ಲಿ ಪ್ರಾಣಿಶಾಸ್ತ್ರ ವಿಷಯದಲ್ಲಿ ಪದವಿ ಪಡೆದುಕೊಂಡರೆ, ಮದ್ರಾಸ್ ಕೃಷಿ ಕಾಲೇಜಿನಲ್ಲಿ ಕೃಷಿ ವಿಜ್ಞಾನವನ್ನು ಪೂರ್ಣಗೊಳಿಸಿದರು. UPSC ಪರೀಕ್ಷೆಯಲ್ಲಿ ಯಶಸ್ವಿಯಾದ ನಂತರ ಸಿಕ್ಕಿದ್ದ IPS ಅವಕಾಶವನ್ನು ತಿರಸ್ಕರಿಸಿ UNESCO ದಿಂದ ಸ್ಕಾಲರ್ ಶಿಪ್ ಪಡೆದು ಕೃಷಿ ಸಂಶೋಧನೆಯಲ್ಲಿ ತೊಡಗಿಸಿಕೊಂಡರು. ಭತ್ತ, ಗೋಧಿ ಮತ್ತು ಗೆಣಸಿನ ಮೇಲೆ ಪ್ರಮುಖ ಸಂಶೋಧನೆಗಳನ್ನು ನಡೆಸಿ, ಹಸಿರು ಕ್ರಾಂತಿಯ ಹರಿಕಾರರಾದರು.

ಇದನ್ನೂ ಓದಿ: ತೆಲಂಗಾಣದಲ್ಲಿ ಮಳೆಯ ಅಬ್ಬರ.. ಆರು ಜನ ಸಾವು, ಅನೇಕರಿಗೆ ಗಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.