ETV Bharat / bharat

ಪುದುಚೇರಿ ನೂತನ ಸಿಎಂ ಆಗಿ ಎನ್​.ರಂಗಸ್ವಾಮಿ ಅಧಿಕಾರ ಸ್ವೀಕಾರ - ಪುದುಚೇರಿ ನೂತನ ಸಿಎಂ ಆಗಿ ಎನ್​.ರಂಗಸ್ವಾಮಿ

ಕೇಂದ್ರಾಡಳಿತ ಪ್ರದೇಶ ಪುದುಚೇರಿ ನೂತನ ಮುಖ್ಯಮಂತ್ರಿಯಾಗಿ ಎಐಎನ್​ಆರ್​ಸಿ ವರಿಷ್ಠ ಎನ್​ ರಂಗಸ್ವಾಮಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ಪುದುಚೇರಿ ಮುಖ್ಯಮಂತ್ರಿ
ಪುದುಚೇರಿ ಮುಖ್ಯಮಂತ್ರಿ
author img

By

Published : May 7, 2021, 5:06 PM IST

Updated : May 7, 2021, 5:26 PM IST

ಪುದುಚೇರಿ: ನಾಲ್ಕು ರಾಜ್ಯಗಳ ಜೊತೆ ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲೂ ಚುನಾವಣೆ ನಡೆದಿತ್ತು. ಇಲ್ಲಿ ಎನ್​ಡಿಎ ಸರ್ಕಾರ ಬಹುಮತ ಪಡೆದುಕೊಂಡಿದ್ದು, ಇಂದು ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದೆ.

ಎಐಎನ್​ಆರ್​ಸಿ ಮುಖ್ಯಸ್ಥ ಎನ್​. ರಂಗಸ್ವಾಮಿ ಇಂದು ನೂತನವಾಗಿ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದಾರೆ. ರಾಜಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಡಾ. ತಮಿಳಿಸಾಯಿ ಸೌಂದರ್ಯರಾಜನ್ ಅವರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.

ಪುದುಚೇರಿ ನೂತನ ಸಿಎಂ ಆಗಿ ಎನ್​.ರಂಗಸ್ವಾಮಿ ಅಧಿಕಾರ ಸ್ವೀಕಾರ

ಪುದುಚೇರಿಯಲ್ಲಿ ಎನ್​ಡಿಎ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿರುವ 71 ವರ್ಷದ ರಂಗಸ್ವಾಮಿ ಈಗಾಗಲೇ ಮೂರು ಸಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದು, ಇದೀಗ ಮತ್ತೊಂದು ಅವರಿಗೆ ಸಿಎಂ ಆಗಿದ್ದಾರೆ.

ಇದನ್ನೂ ಓದಿ: 10 ರೂ. ತೆಗೆದುಕೊಂಡಿದ್ದಕ್ಕೆ ಹೆಂಡ್ತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಗಂಡ.. ವಿಡಿಯೋ ವೈರಲ್​

ಕೋವಿಡ್​ ಕಾರಣ ಚುನಾಯಿತ ಶಾಸಕರು, ಪಕ್ಷದ ಹಿರಿಯ ನಾಯಕರು, ಸರ್ಕಾರ ಮುಖ್ಯ ಕಾರ್ಯದರ್ಶಿ ಅಶ್ವನಿ ಕುಮಾರ್ ಮತ್ತು ಇತರ ಸರ್ಕಾರಿ ಅಧಿಕಾರಿಗಳು ಮಾತ್ರ ಈ ಸಮಾರಂಭದಲ್ಲಿ ಭಾಗವಹಿಸಿದ್ದರು. ಮುಂದಿನ ಕೆಲ ದಿನಗಳ ನಂತರ ಬಿಜೆಪಿ ಹಾಗೂ ಎಐಎನ್​ಆರ್​ಸಿ ಪಕ್ಷ ಸೇರಿ ನಿರ್ಧಾರ ಕೈಗೊಂಡ ಬಳಿಕ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ಪುದುಚೇರಿಯ 30 ಕ್ಷೇತ್ರಗಳ ಪೈಕಿ ಎನ್​ಡಿಎ 16 ಸ್ಥಾನಗಳಲ್ಲಿ ಗೆಲುವು ದಾಖಲು ಮಾಡಿದ್ದು, ಬಿಜೆಪಿ 6 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿತ್ತು.

ಪುದುಚೇರಿ: ನಾಲ್ಕು ರಾಜ್ಯಗಳ ಜೊತೆ ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲೂ ಚುನಾವಣೆ ನಡೆದಿತ್ತು. ಇಲ್ಲಿ ಎನ್​ಡಿಎ ಸರ್ಕಾರ ಬಹುಮತ ಪಡೆದುಕೊಂಡಿದ್ದು, ಇಂದು ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದೆ.

ಎಐಎನ್​ಆರ್​ಸಿ ಮುಖ್ಯಸ್ಥ ಎನ್​. ರಂಗಸ್ವಾಮಿ ಇಂದು ನೂತನವಾಗಿ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದಾರೆ. ರಾಜಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಡಾ. ತಮಿಳಿಸಾಯಿ ಸೌಂದರ್ಯರಾಜನ್ ಅವರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.

ಪುದುಚೇರಿ ನೂತನ ಸಿಎಂ ಆಗಿ ಎನ್​.ರಂಗಸ್ವಾಮಿ ಅಧಿಕಾರ ಸ್ವೀಕಾರ

ಪುದುಚೇರಿಯಲ್ಲಿ ಎನ್​ಡಿಎ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿರುವ 71 ವರ್ಷದ ರಂಗಸ್ವಾಮಿ ಈಗಾಗಲೇ ಮೂರು ಸಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದು, ಇದೀಗ ಮತ್ತೊಂದು ಅವರಿಗೆ ಸಿಎಂ ಆಗಿದ್ದಾರೆ.

ಇದನ್ನೂ ಓದಿ: 10 ರೂ. ತೆಗೆದುಕೊಂಡಿದ್ದಕ್ಕೆ ಹೆಂಡ್ತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಗಂಡ.. ವಿಡಿಯೋ ವೈರಲ್​

ಕೋವಿಡ್​ ಕಾರಣ ಚುನಾಯಿತ ಶಾಸಕರು, ಪಕ್ಷದ ಹಿರಿಯ ನಾಯಕರು, ಸರ್ಕಾರ ಮುಖ್ಯ ಕಾರ್ಯದರ್ಶಿ ಅಶ್ವನಿ ಕುಮಾರ್ ಮತ್ತು ಇತರ ಸರ್ಕಾರಿ ಅಧಿಕಾರಿಗಳು ಮಾತ್ರ ಈ ಸಮಾರಂಭದಲ್ಲಿ ಭಾಗವಹಿಸಿದ್ದರು. ಮುಂದಿನ ಕೆಲ ದಿನಗಳ ನಂತರ ಬಿಜೆಪಿ ಹಾಗೂ ಎಐಎನ್​ಆರ್​ಸಿ ಪಕ್ಷ ಸೇರಿ ನಿರ್ಧಾರ ಕೈಗೊಂಡ ಬಳಿಕ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ಪುದುಚೇರಿಯ 30 ಕ್ಷೇತ್ರಗಳ ಪೈಕಿ ಎನ್​ಡಿಎ 16 ಸ್ಥಾನಗಳಲ್ಲಿ ಗೆಲುವು ದಾಖಲು ಮಾಡಿದ್ದು, ಬಿಜೆಪಿ 6 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿತ್ತು.

Last Updated : May 7, 2021, 5:26 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.