ETV Bharat / bharat

ನಾಗಾಲ್ಯಾಂಡ್, ತ್ರಿಪುರ, ಮೇಘಾಲಯ ಚುನಾವಣಾ ವೇಳಾಪಟ್ಟಿ ಇಂದು ಪ್ರಕಟ

author img

By

Published : Jan 18, 2023, 2:16 PM IST

ದೇಶದ ಮೂರು ಈಶಾನ್ಯ ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಚುನಾವಣಾ ಆಯೋಗವು ಇಂದು ಪ್ರಕಟಿಸಲಿದೆ. ಇಂದು ಮಧ್ಯಾಹ್ನ ಪತ್ರಿಕಾಗೋಷ್ಠಿಯಲ್ಲಿ ಚುನಾವಣಾ ಆಯೋಗ ದಿನಾಂಕಗಳನ್ನು ಪ್ರಕಟಿಸಲಿದೆ.

ನಾಗಾಲ್ಯಾಂಡ್, ತ್ರಿಪುರ, ಮೇಘಾಲಯ ಚುನಾವಣಾ ವೇಳಾಪಟ್ಟಿ ಇಂದು ಪ್ರಕಟ
nagaland-tripura-meghalaya-election-schedule-announced-today

ನವದೆಹಲಿ: ನಾಗಾಲ್ಯಾಂಡ್, ತ್ರಿಪುರಾ ಮತ್ತು ಮೇಘಾಲಯ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗವು (ಇಸಿ) ಇಂದು (ಬುಧವಾರ) ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ಮಧ್ಯಾಹ್ನ ಚುನಾವಣಾ ದಿನಾಂಕವನ್ನು ಪ್ರಕಟಿಸಲು ಚುನಾವಣಾ ಆಯೋಗವು ಪತ್ರಿಕಾಗೋಷ್ಠಿ ಕರೆದಿದೆ. ಮೂರು ವಿಧಾನಸಭೆಗಳ ಅವಧಿಯು ಮಾರ್ಚ್‌ನಲ್ಲಿ ಬೇರೆ ಬೇರೆ ದಿನಾಂಕಗಳಂದು ಕೊನೆಗೊಳ್ಳುತ್ತಿದೆ. ನಾಗಾಲ್ಯಾಂಡ್ ವಿಧಾನಸಭೆಯ ಅವಧಿ ಮಾರ್ಚ್ 12 ರಂದು ಕೊನೆಗೊಂಡರೆ, ಮೇಘಾಲಯ ಮತ್ತು ತ್ರಿಪುರಾ ವಿಧಾನಸಭೆಗಳ ಅವಧಿ ಕ್ರಮವಾಗಿ ಮಾರ್ಚ್ 15 ಮತ್ತು ಮಾರ್ಚ್ 22 ರಂದು ಕೊನೆಗೊಳ್ಳುತ್ತದೆ. ಮೂರು ರಾಜ್ಯಗಳ ವಿಧಾನಸಭೆಗಳು ತಲಾ 60 ಸದಸ್ಯರ ಬಲವನ್ನು ಹೊಂದಿವೆ.

ಬೋರ್ಡ್ ಪರೀಕ್ಷೆಗಳು ಮತ್ತು ಭದ್ರತಾ ಪಡೆಗಳ ಚಲನವಲನವನ್ನು ಗಮನದಲ್ಲಿಟ್ಟುಕೊಂಡು ಮೂರು ರಾಜ್ಯಗಳ ಚುನಾವಣಾ ವೇಳಾಪಟ್ಟಿಯನ್ನು ನಿರ್ಧರಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಮೂರು ಈಶಾನ್ಯ ರಾಜ್ಯಗಳು ಈ ವರ್ಷ ವಿಧಾನಸಭಾ ಚುನಾವಣೆಗಳನ್ನು ಎದುರಿಸುತ್ತಿರುವ ಮೊದಲ ರಾಜ್ಯಗಳಾಗಿವೆ. ತ್ರಿಪುರಾದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ನಾಗಾಲ್ಯಾಂಡ್‌ನಲ್ಲಿ ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ ಅಧಿಕಾರದಲ್ಲಿದೆ. ಮೇಘಾಲಯದಲ್ಲಿ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಅಧಿಕಾರದಲ್ಲಿದೆ. ಎನ್‌ಪಿಪಿ ಈಶಾನ್ಯದಿಂದ ರಾಷ್ಟ್ರೀಯ ಪಕ್ಷದ ಮಾನ್ಯತೆಯನ್ನು ಹೊಂದಿರುವ ಏಕೈಕ ಪಕ್ಷವಾಗಿದೆ.

ಮೇಘಾಲಯ ಚುನಾವಣೆಗೂ ಮುನ್ನ ಚುನಾವಣಾ ಆಯೋಗದಿಂದ ಸಿದ್ಧತೆ ಪರಿಶೀಲನೆ: ಮುಂದಿನ ತಿಂಗಳು ನಡೆಯಲಿರುವ ಮೇಘಾಲಯ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ ಆಕಾಂಕ್ಷಿ ಅಭ್ಯರ್ಥಿಗಳು ತಮ್ಮ ಮೇಲಿರುವ ಎಲ್ಲ ಅಪರಾಧ ಪ್ರಕರಣಗಳ ಪೂರ್ವಾಪರಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಶುಕ್ರವಾರ ಶಿಲ್ಲಾಂಗ್‌ನಲ್ಲಿ ಹೇಳಿದರು. ಒಂದು ನಿರ್ದಿಷ್ಟ ಕ್ಷೇತ್ರದಲ್ಲಿ ಅಪರಾಧ ಹಿನ್ನೆಲೆಯುಳ್ಳ ಅಭ್ಯರ್ಥಿಗಳನ್ನು ಏಕೆ ಆಯ್ಕೆ ಮಾಡಲಾಗಿದೆ ಎಂಬುದನ್ನು ಸಹ ರಾಜಕೀಯ ಪಕ್ಷಗಳು ಮತದಾರರಿಗೆ ತಿಳುವಳಿಕೆ ನೀಡಬೇಕು. ಮತದಾರರು ತಮ್ಮ ಆಯ್ಕೆ ಮಾಡುವ ಮೊದಲು ಅಭ್ಯರ್ಥಿಗಳ ಬಗ್ಗೆ ಉತ್ತಮ ಮಾಹಿತಿ ಹೊಂದಿದ್ದಾರೆ ಎಂದು ಖಚಿತಪಡಿಸಿಕೊಳ್ಳಲು ಇದೊಂದು ಪ್ರಯತ್ನವಾಗಿದೆ ಎಂದು ಅವರು ಹೇಳಿದರು.

ಚುನಾವಣಾ ಆಯುಕ್ತರಾದ ಅರುಣ್ ಗೋಯೆಲ್ ಮತ್ತು ಅನುಪ್ ಚಂದ್ರ ಪಾಂಡೆ ಮತ್ತು ಭಾರತೀಯ ಚುನಾವಣಾ ಆಯೋಗದ (ಇಸಿಐ) ತಂಡವು ಶುಕ್ರವಾರ ಮೇಘಾಲಯದಲ್ಲಿ ಚುನಾವಣಾ ಸಿದ್ಧತೆಯ ಎರಡು ದಿನಗಳ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ರಾಜೀವ್ ಕುಮಾರ್ ಮಾತನಾಡಿದರು. ಸಾಧ್ಯವಾದಷ್ಟು ಪಾರದರ್ಶಕ ರೀತಿಯಲ್ಲಿ ಮುಕ್ತ ಮತ್ತು ನ್ಯಾಯಸಮ್ಮತವಾದ ಚುನಾವಣೆಯನ್ನು ಖಚಿತಪಡಿಸಿಕೊಳ್ಳಲು ಯಾವುದೇ ಸಂಭಾವ್ಯ ಲೋಪದೋಷಗಳಾಗದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಆಯೋಗ ತೆಗೆದುಕೊಂಡಿದೆ ಎಂದು ಕುಮಾರ್ ಹೇಳಿದರು.

ರಾಜ್ಯಕ್ಕೆ ವಿಮಾನಗಳ ಪ್ರವೇಶ ಮತ್ತು ನಿರ್ಗಮನವನ್ನು ಮೇಲ್ವಿಚಾರಣೆ ಮಾಡಲು ಕಟ್ಟುನಿಟ್ಟಾದ ವೈಮಾನಿಕ ಕಣ್ಗಾವಲು ವ್ಯವಸ್ಥೆ ಸೇರಿದಂತೆ ರಾಜ್ಯ ಮತ್ತು ಕೇಂದ್ರ ಸಶಸ್ತ್ರ ಪಡೆಗಳೆರಡನ್ನೂ ಒಳಗೊಂಡಂತೆ ಸಾಕಷ್ಟು ಪಡೆಗಳನ್ನು ನಿಯೋಜಿಸಲಾಗುತ್ತಿದೆ. ಯಾವುದೇ ರಾಜಕೀಯ ಪಕ್ಷ ಅಥವಾ ಅಭ್ಯರ್ಥಿಗಳು ಮತದಾರರ ಮೇಲೆ ತಪ್ಪಾಗಿ ಪ್ರಭಾವ ಬೀರುವುದನ್ನು ಅಥವಾ ಪ್ರೇರೇಪಿಸುವುದನ್ನು ತಪ್ಪಿಸಲು ರಾಜ್ಯಕ್ಕೆ ಬರುವ ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳ ಸರಿಯಾದ ತಪಾಸಣೆ ಮಾಡುವಲ್ಲಿ ಪ್ರಮಾಣಿತ ಪ್ರೋಟೋಕಾಲ್‌ಗಳನ್ನು ಅನುಸರಿಸಲು ಏಜೆನ್ಸಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕುಮಾರ್ ಹೇಳಿದರು.

ನಕಲಿ ಅಫಿಡವಿಟ್: ಚುನಾವಣಾ ಆಯೋಗಕ್ಕೆ ದೂರು: ಈ ತಿಂಗಳ ಆರಂಭದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯು ಚುನಾವಣಾ ಆಯೋಗಕ್ಕೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ವಿರುದ್ಧ ದೂರು ಸಲ್ಲಿಸಿದೆ. ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬಣವು ಬಹುಮತದ ಬೆಂಬಲವನ್ನು ಸಾಬೀತುಪಡಿಸುವ ಪ್ರಯತ್ನದಲ್ಲಿ ಹಲವಾರು ಸಂಖ್ಯೆಯ ನಕಲಿ ಅಫಿಡವಿಟ್‌ಗಳನ್ನು ಸಲ್ಲಿಸಿದೆ ಎಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಆರೋಪಿಸಿದೆ.

ಇದನ್ನೂ ಓದಿ: ಪಂಜಾಬ್: ಪಾಕ್‌ ಡ್ರೋನ್​​​ ಹೊಡೆದುರುಳಿಸಿದ ಬಿಎಸ್​ಎಫ್​, ಶಸ್ತ್ರಾಸ್ತ್ರ ವಶಕ್ಕೆ

ನವದೆಹಲಿ: ನಾಗಾಲ್ಯಾಂಡ್, ತ್ರಿಪುರಾ ಮತ್ತು ಮೇಘಾಲಯ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗವು (ಇಸಿ) ಇಂದು (ಬುಧವಾರ) ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ಮಧ್ಯಾಹ್ನ ಚುನಾವಣಾ ದಿನಾಂಕವನ್ನು ಪ್ರಕಟಿಸಲು ಚುನಾವಣಾ ಆಯೋಗವು ಪತ್ರಿಕಾಗೋಷ್ಠಿ ಕರೆದಿದೆ. ಮೂರು ವಿಧಾನಸಭೆಗಳ ಅವಧಿಯು ಮಾರ್ಚ್‌ನಲ್ಲಿ ಬೇರೆ ಬೇರೆ ದಿನಾಂಕಗಳಂದು ಕೊನೆಗೊಳ್ಳುತ್ತಿದೆ. ನಾಗಾಲ್ಯಾಂಡ್ ವಿಧಾನಸಭೆಯ ಅವಧಿ ಮಾರ್ಚ್ 12 ರಂದು ಕೊನೆಗೊಂಡರೆ, ಮೇಘಾಲಯ ಮತ್ತು ತ್ರಿಪುರಾ ವಿಧಾನಸಭೆಗಳ ಅವಧಿ ಕ್ರಮವಾಗಿ ಮಾರ್ಚ್ 15 ಮತ್ತು ಮಾರ್ಚ್ 22 ರಂದು ಕೊನೆಗೊಳ್ಳುತ್ತದೆ. ಮೂರು ರಾಜ್ಯಗಳ ವಿಧಾನಸಭೆಗಳು ತಲಾ 60 ಸದಸ್ಯರ ಬಲವನ್ನು ಹೊಂದಿವೆ.

ಬೋರ್ಡ್ ಪರೀಕ್ಷೆಗಳು ಮತ್ತು ಭದ್ರತಾ ಪಡೆಗಳ ಚಲನವಲನವನ್ನು ಗಮನದಲ್ಲಿಟ್ಟುಕೊಂಡು ಮೂರು ರಾಜ್ಯಗಳ ಚುನಾವಣಾ ವೇಳಾಪಟ್ಟಿಯನ್ನು ನಿರ್ಧರಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಮೂರು ಈಶಾನ್ಯ ರಾಜ್ಯಗಳು ಈ ವರ್ಷ ವಿಧಾನಸಭಾ ಚುನಾವಣೆಗಳನ್ನು ಎದುರಿಸುತ್ತಿರುವ ಮೊದಲ ರಾಜ್ಯಗಳಾಗಿವೆ. ತ್ರಿಪುರಾದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ನಾಗಾಲ್ಯಾಂಡ್‌ನಲ್ಲಿ ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ ಅಧಿಕಾರದಲ್ಲಿದೆ. ಮೇಘಾಲಯದಲ್ಲಿ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಅಧಿಕಾರದಲ್ಲಿದೆ. ಎನ್‌ಪಿಪಿ ಈಶಾನ್ಯದಿಂದ ರಾಷ್ಟ್ರೀಯ ಪಕ್ಷದ ಮಾನ್ಯತೆಯನ್ನು ಹೊಂದಿರುವ ಏಕೈಕ ಪಕ್ಷವಾಗಿದೆ.

ಮೇಘಾಲಯ ಚುನಾವಣೆಗೂ ಮುನ್ನ ಚುನಾವಣಾ ಆಯೋಗದಿಂದ ಸಿದ್ಧತೆ ಪರಿಶೀಲನೆ: ಮುಂದಿನ ತಿಂಗಳು ನಡೆಯಲಿರುವ ಮೇಘಾಲಯ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ ಆಕಾಂಕ್ಷಿ ಅಭ್ಯರ್ಥಿಗಳು ತಮ್ಮ ಮೇಲಿರುವ ಎಲ್ಲ ಅಪರಾಧ ಪ್ರಕರಣಗಳ ಪೂರ್ವಾಪರಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಶುಕ್ರವಾರ ಶಿಲ್ಲಾಂಗ್‌ನಲ್ಲಿ ಹೇಳಿದರು. ಒಂದು ನಿರ್ದಿಷ್ಟ ಕ್ಷೇತ್ರದಲ್ಲಿ ಅಪರಾಧ ಹಿನ್ನೆಲೆಯುಳ್ಳ ಅಭ್ಯರ್ಥಿಗಳನ್ನು ಏಕೆ ಆಯ್ಕೆ ಮಾಡಲಾಗಿದೆ ಎಂಬುದನ್ನು ಸಹ ರಾಜಕೀಯ ಪಕ್ಷಗಳು ಮತದಾರರಿಗೆ ತಿಳುವಳಿಕೆ ನೀಡಬೇಕು. ಮತದಾರರು ತಮ್ಮ ಆಯ್ಕೆ ಮಾಡುವ ಮೊದಲು ಅಭ್ಯರ್ಥಿಗಳ ಬಗ್ಗೆ ಉತ್ತಮ ಮಾಹಿತಿ ಹೊಂದಿದ್ದಾರೆ ಎಂದು ಖಚಿತಪಡಿಸಿಕೊಳ್ಳಲು ಇದೊಂದು ಪ್ರಯತ್ನವಾಗಿದೆ ಎಂದು ಅವರು ಹೇಳಿದರು.

ಚುನಾವಣಾ ಆಯುಕ್ತರಾದ ಅರುಣ್ ಗೋಯೆಲ್ ಮತ್ತು ಅನುಪ್ ಚಂದ್ರ ಪಾಂಡೆ ಮತ್ತು ಭಾರತೀಯ ಚುನಾವಣಾ ಆಯೋಗದ (ಇಸಿಐ) ತಂಡವು ಶುಕ್ರವಾರ ಮೇಘಾಲಯದಲ್ಲಿ ಚುನಾವಣಾ ಸಿದ್ಧತೆಯ ಎರಡು ದಿನಗಳ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ರಾಜೀವ್ ಕುಮಾರ್ ಮಾತನಾಡಿದರು. ಸಾಧ್ಯವಾದಷ್ಟು ಪಾರದರ್ಶಕ ರೀತಿಯಲ್ಲಿ ಮುಕ್ತ ಮತ್ತು ನ್ಯಾಯಸಮ್ಮತವಾದ ಚುನಾವಣೆಯನ್ನು ಖಚಿತಪಡಿಸಿಕೊಳ್ಳಲು ಯಾವುದೇ ಸಂಭಾವ್ಯ ಲೋಪದೋಷಗಳಾಗದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಆಯೋಗ ತೆಗೆದುಕೊಂಡಿದೆ ಎಂದು ಕುಮಾರ್ ಹೇಳಿದರು.

ರಾಜ್ಯಕ್ಕೆ ವಿಮಾನಗಳ ಪ್ರವೇಶ ಮತ್ತು ನಿರ್ಗಮನವನ್ನು ಮೇಲ್ವಿಚಾರಣೆ ಮಾಡಲು ಕಟ್ಟುನಿಟ್ಟಾದ ವೈಮಾನಿಕ ಕಣ್ಗಾವಲು ವ್ಯವಸ್ಥೆ ಸೇರಿದಂತೆ ರಾಜ್ಯ ಮತ್ತು ಕೇಂದ್ರ ಸಶಸ್ತ್ರ ಪಡೆಗಳೆರಡನ್ನೂ ಒಳಗೊಂಡಂತೆ ಸಾಕಷ್ಟು ಪಡೆಗಳನ್ನು ನಿಯೋಜಿಸಲಾಗುತ್ತಿದೆ. ಯಾವುದೇ ರಾಜಕೀಯ ಪಕ್ಷ ಅಥವಾ ಅಭ್ಯರ್ಥಿಗಳು ಮತದಾರರ ಮೇಲೆ ತಪ್ಪಾಗಿ ಪ್ರಭಾವ ಬೀರುವುದನ್ನು ಅಥವಾ ಪ್ರೇರೇಪಿಸುವುದನ್ನು ತಪ್ಪಿಸಲು ರಾಜ್ಯಕ್ಕೆ ಬರುವ ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳ ಸರಿಯಾದ ತಪಾಸಣೆ ಮಾಡುವಲ್ಲಿ ಪ್ರಮಾಣಿತ ಪ್ರೋಟೋಕಾಲ್‌ಗಳನ್ನು ಅನುಸರಿಸಲು ಏಜೆನ್ಸಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕುಮಾರ್ ಹೇಳಿದರು.

ನಕಲಿ ಅಫಿಡವಿಟ್: ಚುನಾವಣಾ ಆಯೋಗಕ್ಕೆ ದೂರು: ಈ ತಿಂಗಳ ಆರಂಭದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯು ಚುನಾವಣಾ ಆಯೋಗಕ್ಕೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ವಿರುದ್ಧ ದೂರು ಸಲ್ಲಿಸಿದೆ. ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬಣವು ಬಹುಮತದ ಬೆಂಬಲವನ್ನು ಸಾಬೀತುಪಡಿಸುವ ಪ್ರಯತ್ನದಲ್ಲಿ ಹಲವಾರು ಸಂಖ್ಯೆಯ ನಕಲಿ ಅಫಿಡವಿಟ್‌ಗಳನ್ನು ಸಲ್ಲಿಸಿದೆ ಎಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಆರೋಪಿಸಿದೆ.

ಇದನ್ನೂ ಓದಿ: ಪಂಜಾಬ್: ಪಾಕ್‌ ಡ್ರೋನ್​​​ ಹೊಡೆದುರುಳಿಸಿದ ಬಿಎಸ್​ಎಫ್​, ಶಸ್ತ್ರಾಸ್ತ್ರ ವಶಕ್ಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.