ETV Bharat / bharat

ನರೇಶ್ ದಹಿಯಾ ಮಾನನಷ್ಟ ಮೊಕದ್ದಮೆ.. ಬಜರಂಗ್ ಪುನಿಯಾಗೆ ದೆಹಲಿ ಕೋರ್ಟ್​ ಸಮನ್ಸ್ ಜಾರಿ..

author img

By

Published : Aug 3, 2023, 9:12 PM IST

ಕುಸ್ತಿ ತರಬೇತುದಾರ ನರೇಶ್ ದಹಿಯಾ ಅವರು ದಾಖಲು ಮಾಡಿರುವ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಸೆಪ್ಟೆಂಬರ್ 6ರಂದು ಕುಸ್ತಿಪಟು ಬಜರಂಗ್ ಪುನಿಯಾ ಅವರನ್ನು ಆರೋಪಿಯನ್ನಾಗಿ ಸಮನ್ಸ್ ಜಾರಿಗೊಳಿಸಿದೆ.

ದೆಹಲಿ ಕೋರ್ಟ್​ ಸಮನ್ಸ್ ಜಾರಿ
Bajrang puniya daffamation case

ನವದೆಹಲಿ: ಕುಸ್ತಿ ತರಬೇತುದಾರ ನರೇಶ್ ದಹಿಯಾ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಗುರುವಾರ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಬಜರಂಗ್ ಪೂನಿಯಾಗೆ ಸಮನ್ಸ್ ಜಾರಿಗೊಳಿಸಿದೆ. ಸೆಪ್ಟೆಂಬರ್ 6 ರಂದು ಕೋರ್ಟ್​ಗೆ ಹಾಜರಾಗುವಂತೆ ತಿಳಿಸಲಾಗಿದೆ. ಮೇ 10 ರಂದು ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆ ವೇಳೆ ಬಜರಂಗ್ ಪೂನಿಯಾ ಪತ್ರಿಕಾಗೋಷ್ಟಿಯಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದು, ಇದರಿಂದ ನಮಗೆ ಮಾನಹಾನಿ ಮಾಡಲಾಗಿದೆ ಎಂದು ದೂರುದಾರ ನರೇಶ್ ದಹಿಯಾ ನ್ಯಾಯಾಲಯಕ್ಕೆ ನೀಡಿರುವ ದೂರಿನಲ್ಲಿ ತಿಳಿಸಿದ್ದರು.

ಪ್ರಕರಣದ ಹಿನ್ನೆಲೆ ಏನು?: ಭಾರತೀಯ ಕುಸ್ತಿ ಫೆಡರೇಶನ್‌ನ ಪ್ರಸ್ತುತ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿರುವ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಜೊತೆಗೆ ಬಜರಂಗ್ ಪುನಿಯಾ ಅವರು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಧರಣಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಇದಕ್ಕೂ ಮೊದಲು ಜನವರಿಯಲ್ಲಿ ಪೂನಿಯಾ ಮೊದಲ ಹಂತದ ಧರಣಿಯಲ್ಲಿ ಪಾಲ್ಗೊಂಡಿದ್ದರು. ಇದರ ನಂತರ, ಏಪ್ರಿಲ್ 23 ರಂದು ಜಂತರ್ ಮಂತರ್‌ನಲ್ಲಿ ಮತ್ತೆ ಪ್ರಾರಂಭವಾದ ಧರಣಿ ಪ್ರತಿಭಟನೆಯಲ್ಲಿ ಪೂನಿಯಾ ಸಕ್ರಿಯವಾಗಿ ಭಾಗವಹಿಸಿದ್ದರು. ಪೂನಿಯಾ ಅವರು ಬ್ರಿಜ್‌ಭೂಷಣ್ ಶರಣ್ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಸೇರಿದಂತೆ ಇತರ ಕುಸ್ತಿಪಟುಗಳೊಂದಿಗೆ ಅವರ ಬಂಧನಕ್ಕೆ ಒತ್ತಾಯಿಸುತ್ತಿದ್ದರು.

ಏಷ್ಯನ್ ಗೇಮ್ಸ್‌ನಲ್ಲಿ ವಿನಾಯಿತಿ ಪಡೆದ ನಂತರವೂ ಭಾರಿ ಚರ್ಚೆಯಲ್ಲಿರುವ ಪೂನಿಯಾ: ಏಷ್ಯನ್ ಗೇಮ್ಸ್‌ನಲ್ಲಿ ಆಡಲು ಭಾರತದ ಕುಸ್ತಿ ಫೆಡರೇಶನ್‌ನ ಆಯ್ಕೆ ಸಮಿತಿಯು ಜುಲೈ 20 ರಂದು ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ಅವರನ್ನು ಟ್ರಯಲ್ಸ್‌ನಿಂದ ವಿನಾಯಿತಿ ನೀಡಿತು. ಅಂದಿನಿಂದ, ಈ ಇಬ್ಬರಿಗೆ ಆಯ್ಕೆ ಪ್ರಕ್ರಿಯೆಯಲ್ಲಿ ವಿನಾಯಿತಿ ನೀಡುವುದರ ವಿರುದ್ಧ ಇತರ ಕುಸ್ತಿಪಟುಗಳು ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಕಾರಣದಿಂದಾಗಿ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಹೆಸರು ಮತ್ತೊಮ್ಮೆ ಮುನ್ನೆಲೆಗೆ ಬಂದಿತ್ತು. ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್ ಅದನ್ನು ವಜಾಗೊಳಿಸಿದೆ. ಕುಸ್ತಿಪಟು ಸುಜಿತ್ ಕಲ್ಕಲ್ ಮತ್ತು ಪಂಗಲ್ ಅವರು ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: 2023ರ ಐಬಿಎಸ್ಎ ವಿಶ್ವ ಗೇಮ್ಸ್​: ಭಾರತದ ಅಂಧರ ಕ್ರಿಕೆಟ್ ತಂಡಗಳ ನಾಯಕರು, ಉಪನಾಯಕರ ಹೆಸರು ಪ್ರಕಟ

ನವದೆಹಲಿ: ಕುಸ್ತಿ ತರಬೇತುದಾರ ನರೇಶ್ ದಹಿಯಾ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಗುರುವಾರ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಬಜರಂಗ್ ಪೂನಿಯಾಗೆ ಸಮನ್ಸ್ ಜಾರಿಗೊಳಿಸಿದೆ. ಸೆಪ್ಟೆಂಬರ್ 6 ರಂದು ಕೋರ್ಟ್​ಗೆ ಹಾಜರಾಗುವಂತೆ ತಿಳಿಸಲಾಗಿದೆ. ಮೇ 10 ರಂದು ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆ ವೇಳೆ ಬಜರಂಗ್ ಪೂನಿಯಾ ಪತ್ರಿಕಾಗೋಷ್ಟಿಯಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದು, ಇದರಿಂದ ನಮಗೆ ಮಾನಹಾನಿ ಮಾಡಲಾಗಿದೆ ಎಂದು ದೂರುದಾರ ನರೇಶ್ ದಹಿಯಾ ನ್ಯಾಯಾಲಯಕ್ಕೆ ನೀಡಿರುವ ದೂರಿನಲ್ಲಿ ತಿಳಿಸಿದ್ದರು.

ಪ್ರಕರಣದ ಹಿನ್ನೆಲೆ ಏನು?: ಭಾರತೀಯ ಕುಸ್ತಿ ಫೆಡರೇಶನ್‌ನ ಪ್ರಸ್ತುತ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿರುವ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಜೊತೆಗೆ ಬಜರಂಗ್ ಪುನಿಯಾ ಅವರು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಧರಣಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಇದಕ್ಕೂ ಮೊದಲು ಜನವರಿಯಲ್ಲಿ ಪೂನಿಯಾ ಮೊದಲ ಹಂತದ ಧರಣಿಯಲ್ಲಿ ಪಾಲ್ಗೊಂಡಿದ್ದರು. ಇದರ ನಂತರ, ಏಪ್ರಿಲ್ 23 ರಂದು ಜಂತರ್ ಮಂತರ್‌ನಲ್ಲಿ ಮತ್ತೆ ಪ್ರಾರಂಭವಾದ ಧರಣಿ ಪ್ರತಿಭಟನೆಯಲ್ಲಿ ಪೂನಿಯಾ ಸಕ್ರಿಯವಾಗಿ ಭಾಗವಹಿಸಿದ್ದರು. ಪೂನಿಯಾ ಅವರು ಬ್ರಿಜ್‌ಭೂಷಣ್ ಶರಣ್ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಸೇರಿದಂತೆ ಇತರ ಕುಸ್ತಿಪಟುಗಳೊಂದಿಗೆ ಅವರ ಬಂಧನಕ್ಕೆ ಒತ್ತಾಯಿಸುತ್ತಿದ್ದರು.

ಏಷ್ಯನ್ ಗೇಮ್ಸ್‌ನಲ್ಲಿ ವಿನಾಯಿತಿ ಪಡೆದ ನಂತರವೂ ಭಾರಿ ಚರ್ಚೆಯಲ್ಲಿರುವ ಪೂನಿಯಾ: ಏಷ್ಯನ್ ಗೇಮ್ಸ್‌ನಲ್ಲಿ ಆಡಲು ಭಾರತದ ಕುಸ್ತಿ ಫೆಡರೇಶನ್‌ನ ಆಯ್ಕೆ ಸಮಿತಿಯು ಜುಲೈ 20 ರಂದು ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ಅವರನ್ನು ಟ್ರಯಲ್ಸ್‌ನಿಂದ ವಿನಾಯಿತಿ ನೀಡಿತು. ಅಂದಿನಿಂದ, ಈ ಇಬ್ಬರಿಗೆ ಆಯ್ಕೆ ಪ್ರಕ್ರಿಯೆಯಲ್ಲಿ ವಿನಾಯಿತಿ ನೀಡುವುದರ ವಿರುದ್ಧ ಇತರ ಕುಸ್ತಿಪಟುಗಳು ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಕಾರಣದಿಂದಾಗಿ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಹೆಸರು ಮತ್ತೊಮ್ಮೆ ಮುನ್ನೆಲೆಗೆ ಬಂದಿತ್ತು. ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್ ಅದನ್ನು ವಜಾಗೊಳಿಸಿದೆ. ಕುಸ್ತಿಪಟು ಸುಜಿತ್ ಕಲ್ಕಲ್ ಮತ್ತು ಪಂಗಲ್ ಅವರು ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: 2023ರ ಐಬಿಎಸ್ಎ ವಿಶ್ವ ಗೇಮ್ಸ್​: ಭಾರತದ ಅಂಧರ ಕ್ರಿಕೆಟ್ ತಂಡಗಳ ನಾಯಕರು, ಉಪನಾಯಕರ ಹೆಸರು ಪ್ರಕಟ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.