ETV Bharat / bharat

ಕಮಿಷನರ್​​ ಕಚೇರಿ ಎದುರೇ ಹೈಡ್ರಾಮಾ.. ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

author img

By

Published : Aug 9, 2021, 7:00 PM IST

ಮಹಾರಾಷ್ಟ್ರದಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಕಮೀಷನರ್​ ಕಚೇರಿ ಎದುರು ಮಹಿಳೆಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ್ದರೆ, ಪುಣೆಯಲ್ಲಿ 14 ವರ್ಷದ ಬಾಲಕಿಯೊಬ್ಬಳ ಪ್ರಾಣ ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

Women Suicide
Women Suicide

ನಾಶಿಕ್​(ಮಹಾರಾಷ್ಟ್ರ): ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿಕೊಳ್ಳುತ್ತಿಲ್ಲ ಎಂಬ ಆರೋಪದ ಮೇಲೆ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಹಾರಾಷ್ಟ್ರದ ನಾಶಿಕ್​ನಲ್ಲಿ ನಡೆದಿದೆ. ಯುವ ಸ್ವಾಭಿಮಾನ ಪಕ್ಷದ ಜಿಲ್ಲಾಧ್ಯಕ್ಷೆ ಆಗಿರುವ ರಾಜಲಕ್ಷ್ಮಿ ಈ ನಿರ್ಧಾರ ಕೈಗೊಳ್ಳಲು ಮುಂದಾಗಿದ್ದು, ಆಕೆಯ ರಕ್ಷಣೆ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಪೊಲೀಸರು ಪ್ರಕರಣ ದಾಖಲು ಮಾಡಿಕೊಳ್ಳುತ್ತಿಲ್ಲ ಎಂದು ಕಮಿಷನರ್​​ ಕಚೇರಿ ಎದುರೇ ಈ ದುಷ್ಕೃತ್ಯಕ್ಕೆ ಮುಂದಾಗಿದ್ದಾಳೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹಾಗೂ ಗೃಹ ಸಚಿವರು ಇಂದು ನಾಶಿಕ್​ ಪ್ರವಾಸದಲ್ಲಿದ್ದು, ಇದರ ಬೆನ್ನಲ್ಲೇ ಮಹಿಳೆ ಈ ರೀತಿಯಾಗಿ ನಡೆದುಕೊಂಡಿದ್ದಾಳೆ. ಶ್ರಮಿಕ್​ ಸೇನೆಯ ಅಜಯ್​ ಬಾಗುಲ್​ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದು, ಆತನ ವಿರುದ್ಧ ಪೊಲೀಸರು ಯಾವುದೇ ರೀತಿಯ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪ ಮಾಡಿರುವ ಯುವತಿ ಈ ರೀತಿಯಾಗಿ ನಡೆದುಕೊಂಡಿದ್ದಾಗಿ ತಿಳಿದು ಬಂದಿದೆ.

ಕಮೀಷನರ್​​ ಕಚೇರಿ ಎದುರೇ ಮಹಿಳೆ ಆತ್ಮಹತ್ಯೆಗೆ ಯತ್ನ

ವಿವಿಧ ಅಪರಾಧ ಕೃತ್ಯಗಳಲ್ಲಿ ಅಜಯ್​ ಬಾಗುಲ್​ ಭಾಗಿಯಾಗಿದ್ದರೂ ಕೂಡ ಆತನ ವಿರುದ್ಧ ನಾಶಿಕ್​ ಪೊಲೀಸ್ ಕಮೀಷನರ್ ಯಾವುದೇ ಕ್ರಮ ಕೈಗೊಂಡಿಲ್ಲ. ಜೊತೆಗೆ ಅವರ ಹೆಸರನ್ನ ಕ್ರಿಮಿನಲ್ ಪಟ್ಟಿಯಿಂದ ತೆಗೆದು ಹಾಕಲಾಗಿದೆ ಎಂದು ಮಹಿಳೆ ಆರೋಪ ಮಾಡಿದ್ದಾಳೆ. ಮಹಿಳೆಯನ್ನ ರಕ್ಷಣೆ ಮಾಡಿರುವ ಪೊಲೀಸರು ತದನಂತರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾಗಿ ತಿಳಿದು ಬಂದಿದೆ. ಈ ವೇಳೆ, ಆಕೆಯ ಗಂಡ ಸಹ ಉಪಸ್ಥಿತ ಇದ್ದ ಎನ್ನಲಾಗಿದೆ.

14 ವರ್ಷದ ಬಾಲಕಿಯ ಜೀವ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ಬಿಲ್ಡಿಂಗ್​ವೊಂದರ ಕಿಟಕಿಯಲ್ಲಿ ಸಿಲುಕಿ ಹಾಕಿಕೊಂಡಿದ್ದ 14 ವರ್ಷದ ಬಾಲಕಿ ಜೀವ ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರದ ಪುಣೆಯಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಗಣೇಶ್​ ಅಪಾರ್ಟ್​ಮೆಂಟ್​ನಲ್ಲಿ ಇಂದು ಬೆಳಗ್ಗೆ ಬಾಲಕಿಯೊಬ್ಬಳ ಕಿಟಕಿಗೆ ಜೋತು ಬಿದ್ದ ಸೀರೆ ಹಿಡಿದುಕೊಂಡಿದ್ದಳು. ಇದರ ಬಗ್ಗೆ ಮಾಹಿತಿ ಗೊತ್ತಾಗುತ್ತಿದ್ದಂತೆ ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿ ಆಕೆಯ ರಕ್ಷಣೆ ಮಾಡಿದ್ದಾರೆ.

ನಾಶಿಕ್​(ಮಹಾರಾಷ್ಟ್ರ): ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿಕೊಳ್ಳುತ್ತಿಲ್ಲ ಎಂಬ ಆರೋಪದ ಮೇಲೆ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಹಾರಾಷ್ಟ್ರದ ನಾಶಿಕ್​ನಲ್ಲಿ ನಡೆದಿದೆ. ಯುವ ಸ್ವಾಭಿಮಾನ ಪಕ್ಷದ ಜಿಲ್ಲಾಧ್ಯಕ್ಷೆ ಆಗಿರುವ ರಾಜಲಕ್ಷ್ಮಿ ಈ ನಿರ್ಧಾರ ಕೈಗೊಳ್ಳಲು ಮುಂದಾಗಿದ್ದು, ಆಕೆಯ ರಕ್ಷಣೆ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಪೊಲೀಸರು ಪ್ರಕರಣ ದಾಖಲು ಮಾಡಿಕೊಳ್ಳುತ್ತಿಲ್ಲ ಎಂದು ಕಮಿಷನರ್​​ ಕಚೇರಿ ಎದುರೇ ಈ ದುಷ್ಕೃತ್ಯಕ್ಕೆ ಮುಂದಾಗಿದ್ದಾಳೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹಾಗೂ ಗೃಹ ಸಚಿವರು ಇಂದು ನಾಶಿಕ್​ ಪ್ರವಾಸದಲ್ಲಿದ್ದು, ಇದರ ಬೆನ್ನಲ್ಲೇ ಮಹಿಳೆ ಈ ರೀತಿಯಾಗಿ ನಡೆದುಕೊಂಡಿದ್ದಾಳೆ. ಶ್ರಮಿಕ್​ ಸೇನೆಯ ಅಜಯ್​ ಬಾಗುಲ್​ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದು, ಆತನ ವಿರುದ್ಧ ಪೊಲೀಸರು ಯಾವುದೇ ರೀತಿಯ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪ ಮಾಡಿರುವ ಯುವತಿ ಈ ರೀತಿಯಾಗಿ ನಡೆದುಕೊಂಡಿದ್ದಾಗಿ ತಿಳಿದು ಬಂದಿದೆ.

ಕಮೀಷನರ್​​ ಕಚೇರಿ ಎದುರೇ ಮಹಿಳೆ ಆತ್ಮಹತ್ಯೆಗೆ ಯತ್ನ

ವಿವಿಧ ಅಪರಾಧ ಕೃತ್ಯಗಳಲ್ಲಿ ಅಜಯ್​ ಬಾಗುಲ್​ ಭಾಗಿಯಾಗಿದ್ದರೂ ಕೂಡ ಆತನ ವಿರುದ್ಧ ನಾಶಿಕ್​ ಪೊಲೀಸ್ ಕಮೀಷನರ್ ಯಾವುದೇ ಕ್ರಮ ಕೈಗೊಂಡಿಲ್ಲ. ಜೊತೆಗೆ ಅವರ ಹೆಸರನ್ನ ಕ್ರಿಮಿನಲ್ ಪಟ್ಟಿಯಿಂದ ತೆಗೆದು ಹಾಕಲಾಗಿದೆ ಎಂದು ಮಹಿಳೆ ಆರೋಪ ಮಾಡಿದ್ದಾಳೆ. ಮಹಿಳೆಯನ್ನ ರಕ್ಷಣೆ ಮಾಡಿರುವ ಪೊಲೀಸರು ತದನಂತರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾಗಿ ತಿಳಿದು ಬಂದಿದೆ. ಈ ವೇಳೆ, ಆಕೆಯ ಗಂಡ ಸಹ ಉಪಸ್ಥಿತ ಇದ್ದ ಎನ್ನಲಾಗಿದೆ.

14 ವರ್ಷದ ಬಾಲಕಿಯ ಜೀವ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ಬಿಲ್ಡಿಂಗ್​ವೊಂದರ ಕಿಟಕಿಯಲ್ಲಿ ಸಿಲುಕಿ ಹಾಕಿಕೊಂಡಿದ್ದ 14 ವರ್ಷದ ಬಾಲಕಿ ಜೀವ ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರದ ಪುಣೆಯಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಗಣೇಶ್​ ಅಪಾರ್ಟ್​ಮೆಂಟ್​ನಲ್ಲಿ ಇಂದು ಬೆಳಗ್ಗೆ ಬಾಲಕಿಯೊಬ್ಬಳ ಕಿಟಕಿಗೆ ಜೋತು ಬಿದ್ದ ಸೀರೆ ಹಿಡಿದುಕೊಂಡಿದ್ದಳು. ಇದರ ಬಗ್ಗೆ ಮಾಹಿತಿ ಗೊತ್ತಾಗುತ್ತಿದ್ದಂತೆ ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿ ಆಕೆಯ ರಕ್ಷಣೆ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.