ETV Bharat / bharat

ತಾಂತ್ರಿಕ ಕ್ಷೇತ್ರಕ್ಕೆ ವಿಶ್ವೇಶ್ವರಯ್ಯನವರ ಕೊಡುಗೆ ಸ್ಮರಣೀಯ.. ಇಂಜಿನಿಯರ್ಸ್​​ ಡೇಗೆ ಶುಭಕೋರಿದ ಪ್ರಧಾನಿ

National Engineers Day 2023 : ಇಂಜಿನಿಯರಿಂಗ್​ ಕ್ಷೇತ್ರದಲ್ಲಿ ಸರ್​ ಎಂ ವಿಶ್ವೇಶ್ವರಯ್ಯ ಅವರು ನೀಡಿದ ಕೊಡುಗೆ ಸ್ಮರಣಾರ್ಥವಾಗಿ ಇಂದು ರಾಷ್ಟ್ರೀಯ ಇಂಜಿನಿಯರ್​ ದಿನ ಆಚರಿಸಲಾಗುತ್ತಿದೆ.

author img

By ETV Bharat Karnataka Team

Published : Sep 15, 2023, 11:30 AM IST

national-engineers-day-2023-today-know-history-of-mokshagundam-visvesvaraya-jayanti
national-engineers-day-2023-today-know-history-of-mokshagundam-visvesvaraya-jayanti

ಬೆಂಗಳೂರು: ದೇಶದ ಅಭಿವೃದ್ಧಿಯಲ್ಲಿ ಇಂಜಿನಿಯರ್​ಗಳ ಪಾತ್ರ ಪ್ರಮುಖವಾಗಿದೆ. ಇಂಜಿನಿಯರಿಂಗ್​ ಕ್ಷೇತ್ರಕ್ಕೆ ದೇಶಕ್ಕೆ ಅಪಾರ ಕೊಡುಗೆಯನ್ನು ನೀಡಿದವರಲ್ಲಿ ಪ್ರಮುಖರು ಕರ್ನಾಟಕದ ಮೋಕ್ಷಗುಂಡಂ ವಿಶ್ವೇಶ್ವರಯ್ಯ. ಇಂಜಿನಿಯರಿಂಗ್​ ಕ್ಷೇತ್ರದಲ್ಲಿ ಅವರು ನೀಡಿದ ಕೊಡುಗೆ ಸ್ಮರಣಾರ್ಥವಾಗಿ ಪ್ರತಿ ವರ್ಷ ಅವರ ಜನ್ಮ ದಿನವನ್ನು ಅಂದರೆ ಸೆಪ್ಟೆಂಬರ್​ 15ರಂದು ರಾಷ್ಟ್ರೀಯ ಇಂಜಿನಿಯರ್ಸ್​​​ ದಿನ ಎಂದು ಗುರುತಿಸಲಾಗಿ, ಆಚರಣೆ ಮಾಡಲಾಗುತ್ತಿದೆ.

ರಾಷ್ಟ್ರೀಯ ಇಂಜಿನಿಯರ್ಸ್​​​ ದಿನವನ್ನು ಮೊದಲ ಬಾರಿಗೆ 1968ರಲ್ಲಿ ಆಚರಿಸಲಾಯಿತು. ಈ ದಿನವನ್ನು ತಾಂತ್ರಿಕ ಶಿಕ್ಷಣದಲ್ಲಿ ಅತ್ಯಂತ ಪ್ರಮುಖ ದಿನವಾಗಿ ಆಚರಿಸಲಾಗುವುದು. ವಿಶ್ವೇಶ್ವರಯ್ಯನವರ ಕೊಡುಗೆಯನ್ನು ಸ್ಮರಿಸಿ ಕೇವಲ ಭಾರತದಲ್ಲಿ ಮಾತ್ರವಲ್ಲದೆ, ಶ್ರೀಲಂಕಾ ಮತ್ತು ತಾಂಜಾನಿಯದಲ್ಲಿ ಸೆಪ್ಟೆಂಬರ್​ 15 ಅನ್ನು ಇಂಜಿನಿಯರ್​​ ದಿನವಾಗಿ ಆಚರಿಸಲಾಗುವುದು

national-engineers-day-2023-today-know-history-of-mokshagundam-visvesvaraya-jayanti
ರಾಷ್ಟ್ರೀಯ ಇಂಜಿನಿಯರ್​ ದಿನ

ನಾಡು ಕಂಡ ಮೇಧಾವಿ : ಸರ್​ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರು ಕರ್ನಾಟಕದ ಮುದ್ದೇನಹಳ್ಳಿ ಗ್ರಾಮದಲ್ಲಿ 1861ರ ಸೆಪ್ಟೆಂಬರ್​ 15ರಂದು ಜನಿಸಿದರು. ವಿಶ್ವೇಶ್ವರಯ್ಯ ಅವರು 15ನೇ ವಯಸ್ಸಿಗೆ ತಮ್ಮ ತಂದೆಯನ್ನು ಕಳೆದುಕೊಂಡರು. ಚಿಕ್ಕಬಳ್ಳಾಪುರದಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ಇವರು, ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಪಡೆದರು.

ಪುಣೆಯ ಸೈನ್ಸ್​ ಕಾಲೇಜಿನಲ್ಲಿ ಇಂಜಿನಿಯರಿಂಗ್​ ಪದವಿಯನ್ನು ಮೊದಲ ರ‍್ಯಾಂಕ್​ನೊಂದಿಗೆ ಪಡೆದರು. ಬಳಿಕ ಅವರು ಬಾಂಬೆ ಸರ್ಕಾರದಿಂದ ನಾಸಿಕ್​ನಲ್ಲಿ ಸಹಾಯಕ ಇಂಜಿನಿಯರ್​ ಆಗಿ ಉದ್ಯೋಗ ಪಡೆದರು. ಈ ವೇಳೆ ಅವರು ವಿವಿಧ ಯೋಜನೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು.

ಬಳಿಕ 1912 ರಿಂದ 1918ರವರೆಗೆ ಮೈಸೂರಿನ ದಿವಾನರಾಗಿ ಸೇವೆ ಸಲ್ಲಿಸಿದರು. ಮೈಸೂರಿನ ಕೃಷ್ಣ ರಾಜ ಸಾಗರ ಅಣೆಕಟ್ಟು ಮತ್ತು ಹೈದ್ರಾಬಾದ್​ನ ಪ್ರವಾಹ ಸಂರಕ್ಷಣಾ ವ್ಯವಸ್ಥೆಯ ಹಿಂದಿನ ರೂವಾರಿ ಇವರಾಗಿದ್ದಾರೆ. ಮೈಸೂರಿನ ನಾಲ್ಕನೇ ಕೃಷ್ಣರಾಜ ಒಡೆಯರ್​​ ಅವರು ಆರ್ಥಿಕ ಬಿಕ್ಕಟ್ಟಿನ ಬರಗಾಲದ ನಡುವೆಯೂ ಅಣೆಕಟ್ಟನ್ನು ನಿರ್ಮಿಸಿದರು. ಈ ಹಿನ್ನೆಲೆ ಗೌರವಾರ್ಥವಾಗಿ ಈ ಅಣೆಕಟ್ಟಿಗೆ ಅವರ ಹೆಸರನ್ನು ಇಡಲಾಗಿದೆ. 1903ರಲ್ಲಿ ಪುಣೆಯ ಖಡಕ್ವಾಸ್ಲಾ ಜಲಾಶಯವನ್ನು ಕೂಡ ವಿನ್ಯಾಸ ಮಾಡಿದರು.

ಸಂದ ಪ್ರಶಸ್ತಿಗಳು : ಸರ್ಎಂ ವಿಶ್ವೇಶ್ವರಯ್ಯ ಅವರು ಇಂಜಿನಿಯರಿಂಗ್​ ಕ್ಷೇತ್ರದಲ್ಲಿ ನೀಡಿದ ಅಪಾರ ಕೊಡುಗೆಗಾಗಿ ಭಾರತ ಸರ್ಕಾರ 1955ರಲ್ಲಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. ಐದನೇ ಕಿಂಗ್​ ಜಾರ್ಜ್​​ ಅವರಿಂದ ಬ್ರಿಟಿಷ್​ ನೈಟ್​ ಹುಡ್​ ಅನ್ನು ನೀಡಲಾಗಿದೆ. ಬ್ರಿಟಿಷ್​ ನೈಟ್​ ಹುಡ್​ ಗೌರವದಿಂದಾಗಿ ಅವರಿಗೆ ಸರ್​ ಎಂಬ ಬಿರುದು ಬಂದಿದೆ. ಅಪಾರ ಸೇವೆ ಕಾರ್ಯಗಳ ಹೊರತಾಗಿ ಅವರು ಬೆಂಗಳೂರಿನ ಇಂಡಿಯನ್​ ಇನ್ಸ್​​ಟಿಟ್ಯೂಟ್​ ಆಫ್​ ಸೈನ್ಸ್​ ಮತ್ತು ಟಾಟಾ ಕಬ್ಬಿಣ ಮತ್ತು ಉಕ್ಕು ಆಡಳಿತ ಮಂಡಳಿ ಸದಸ್ಯರಾಗಿದ್ದರು. ತಮ್ಮ ವೃತ್ತಿ ಜೀವನದಲ್ಲಿ ಅನೇಕ ಪುಸ್ತಕಗಳನ್ನು ಕೂಡ ಅವರು ಬರೆದಿದ್ದಾರೆ. 1962ರಲ್ಲಿ ಅವರು ನಿಧನರಾದರು.

  • Greetings to all hardworking engineers on #EngineersDay! Their innovative minds and tireless dedication have been the backbone of our nation's progress. From infrastructural marvels to tech breakthroughs, their contributions touch every aspect of our lives. pic.twitter.com/lcBeL1GmZQ

    — Narendra Modi (@narendramodi) September 15, 2023 " class="align-text-top noRightClick twitterSection" data=" ">

ಪ್ರಧಾನಿ ಶುಭಾಶಯ: ಇಂಜಿನಿಯರ್ಸ್​​​ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲಾ ಪ್ರತಿಭಾನ್ವಿತ ಇಂಜಿನಿಯರ್​ಗಳಿಗೆ ಶುಭಕೋರಿ ವಿಡಿಯೋ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ವಿಶ್ವೇಶ್ವರಯ್ಯ ಅವರ ಕೊಡುಗೆ ಸ್ಮರಣೆ ಜೊತೆಗೆ ದೇಶ ನಿರ್ಮಾಣದಲ್ಲಿ ಇಂಜಿನಿಯರ್​ಗಳ ಪಾತ್ರ ಬಿಂಬಿಸುವ ತುಣುಕನ್ನು ಹಂಚಿಕೊಂಡಿದ್ದಾರೆ. ''ಇಂಜಿನಿಯರ್​​ಗಳ ಅವಿಷ್ಕಾರದ ಮಿದುಳು ಮತ್ತು ಸಮರ್ಪಣೆ ದೇಶದ ಪ್ರಗತಿಯ ಬೆನ್ನೆಲುಬು. ಮೂಲಸೌಕರ್ಯದಿಂದ ಟೆಕ್ ಪ್ರಗತಿಯವರೆಗೆ ಅವರ ಕೊಡುಗೆಗಳು ನಮ್ಮ ಜೀವನದ ಪ್ರತಿಯೊಂದು ಅಂಶವನ್ನು ಸ್ಪರ್ಶಿಸುತ್ತವೆ'' ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಆದಿತ್ಯ L1 ನೌಕೆಯ ಕಕ್ಷೆ ಬದಲಾವಣೆ ನಾಲ್ಕನೇ ಪ್ರಕ್ರಿಯೆ ಯಶಸ್ವಿ: ಇಸ್ರೋ

ಬೆಂಗಳೂರು: ದೇಶದ ಅಭಿವೃದ್ಧಿಯಲ್ಲಿ ಇಂಜಿನಿಯರ್​ಗಳ ಪಾತ್ರ ಪ್ರಮುಖವಾಗಿದೆ. ಇಂಜಿನಿಯರಿಂಗ್​ ಕ್ಷೇತ್ರಕ್ಕೆ ದೇಶಕ್ಕೆ ಅಪಾರ ಕೊಡುಗೆಯನ್ನು ನೀಡಿದವರಲ್ಲಿ ಪ್ರಮುಖರು ಕರ್ನಾಟಕದ ಮೋಕ್ಷಗುಂಡಂ ವಿಶ್ವೇಶ್ವರಯ್ಯ. ಇಂಜಿನಿಯರಿಂಗ್​ ಕ್ಷೇತ್ರದಲ್ಲಿ ಅವರು ನೀಡಿದ ಕೊಡುಗೆ ಸ್ಮರಣಾರ್ಥವಾಗಿ ಪ್ರತಿ ವರ್ಷ ಅವರ ಜನ್ಮ ದಿನವನ್ನು ಅಂದರೆ ಸೆಪ್ಟೆಂಬರ್​ 15ರಂದು ರಾಷ್ಟ್ರೀಯ ಇಂಜಿನಿಯರ್ಸ್​​​ ದಿನ ಎಂದು ಗುರುತಿಸಲಾಗಿ, ಆಚರಣೆ ಮಾಡಲಾಗುತ್ತಿದೆ.

ರಾಷ್ಟ್ರೀಯ ಇಂಜಿನಿಯರ್ಸ್​​​ ದಿನವನ್ನು ಮೊದಲ ಬಾರಿಗೆ 1968ರಲ್ಲಿ ಆಚರಿಸಲಾಯಿತು. ಈ ದಿನವನ್ನು ತಾಂತ್ರಿಕ ಶಿಕ್ಷಣದಲ್ಲಿ ಅತ್ಯಂತ ಪ್ರಮುಖ ದಿನವಾಗಿ ಆಚರಿಸಲಾಗುವುದು. ವಿಶ್ವೇಶ್ವರಯ್ಯನವರ ಕೊಡುಗೆಯನ್ನು ಸ್ಮರಿಸಿ ಕೇವಲ ಭಾರತದಲ್ಲಿ ಮಾತ್ರವಲ್ಲದೆ, ಶ್ರೀಲಂಕಾ ಮತ್ತು ತಾಂಜಾನಿಯದಲ್ಲಿ ಸೆಪ್ಟೆಂಬರ್​ 15 ಅನ್ನು ಇಂಜಿನಿಯರ್​​ ದಿನವಾಗಿ ಆಚರಿಸಲಾಗುವುದು

national-engineers-day-2023-today-know-history-of-mokshagundam-visvesvaraya-jayanti
ರಾಷ್ಟ್ರೀಯ ಇಂಜಿನಿಯರ್​ ದಿನ

ನಾಡು ಕಂಡ ಮೇಧಾವಿ : ಸರ್​ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರು ಕರ್ನಾಟಕದ ಮುದ್ದೇನಹಳ್ಳಿ ಗ್ರಾಮದಲ್ಲಿ 1861ರ ಸೆಪ್ಟೆಂಬರ್​ 15ರಂದು ಜನಿಸಿದರು. ವಿಶ್ವೇಶ್ವರಯ್ಯ ಅವರು 15ನೇ ವಯಸ್ಸಿಗೆ ತಮ್ಮ ತಂದೆಯನ್ನು ಕಳೆದುಕೊಂಡರು. ಚಿಕ್ಕಬಳ್ಳಾಪುರದಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ಇವರು, ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಪಡೆದರು.

ಪುಣೆಯ ಸೈನ್ಸ್​ ಕಾಲೇಜಿನಲ್ಲಿ ಇಂಜಿನಿಯರಿಂಗ್​ ಪದವಿಯನ್ನು ಮೊದಲ ರ‍್ಯಾಂಕ್​ನೊಂದಿಗೆ ಪಡೆದರು. ಬಳಿಕ ಅವರು ಬಾಂಬೆ ಸರ್ಕಾರದಿಂದ ನಾಸಿಕ್​ನಲ್ಲಿ ಸಹಾಯಕ ಇಂಜಿನಿಯರ್​ ಆಗಿ ಉದ್ಯೋಗ ಪಡೆದರು. ಈ ವೇಳೆ ಅವರು ವಿವಿಧ ಯೋಜನೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು.

ಬಳಿಕ 1912 ರಿಂದ 1918ರವರೆಗೆ ಮೈಸೂರಿನ ದಿವಾನರಾಗಿ ಸೇವೆ ಸಲ್ಲಿಸಿದರು. ಮೈಸೂರಿನ ಕೃಷ್ಣ ರಾಜ ಸಾಗರ ಅಣೆಕಟ್ಟು ಮತ್ತು ಹೈದ್ರಾಬಾದ್​ನ ಪ್ರವಾಹ ಸಂರಕ್ಷಣಾ ವ್ಯವಸ್ಥೆಯ ಹಿಂದಿನ ರೂವಾರಿ ಇವರಾಗಿದ್ದಾರೆ. ಮೈಸೂರಿನ ನಾಲ್ಕನೇ ಕೃಷ್ಣರಾಜ ಒಡೆಯರ್​​ ಅವರು ಆರ್ಥಿಕ ಬಿಕ್ಕಟ್ಟಿನ ಬರಗಾಲದ ನಡುವೆಯೂ ಅಣೆಕಟ್ಟನ್ನು ನಿರ್ಮಿಸಿದರು. ಈ ಹಿನ್ನೆಲೆ ಗೌರವಾರ್ಥವಾಗಿ ಈ ಅಣೆಕಟ್ಟಿಗೆ ಅವರ ಹೆಸರನ್ನು ಇಡಲಾಗಿದೆ. 1903ರಲ್ಲಿ ಪುಣೆಯ ಖಡಕ್ವಾಸ್ಲಾ ಜಲಾಶಯವನ್ನು ಕೂಡ ವಿನ್ಯಾಸ ಮಾಡಿದರು.

ಸಂದ ಪ್ರಶಸ್ತಿಗಳು : ಸರ್ಎಂ ವಿಶ್ವೇಶ್ವರಯ್ಯ ಅವರು ಇಂಜಿನಿಯರಿಂಗ್​ ಕ್ಷೇತ್ರದಲ್ಲಿ ನೀಡಿದ ಅಪಾರ ಕೊಡುಗೆಗಾಗಿ ಭಾರತ ಸರ್ಕಾರ 1955ರಲ್ಲಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. ಐದನೇ ಕಿಂಗ್​ ಜಾರ್ಜ್​​ ಅವರಿಂದ ಬ್ರಿಟಿಷ್​ ನೈಟ್​ ಹುಡ್​ ಅನ್ನು ನೀಡಲಾಗಿದೆ. ಬ್ರಿಟಿಷ್​ ನೈಟ್​ ಹುಡ್​ ಗೌರವದಿಂದಾಗಿ ಅವರಿಗೆ ಸರ್​ ಎಂಬ ಬಿರುದು ಬಂದಿದೆ. ಅಪಾರ ಸೇವೆ ಕಾರ್ಯಗಳ ಹೊರತಾಗಿ ಅವರು ಬೆಂಗಳೂರಿನ ಇಂಡಿಯನ್​ ಇನ್ಸ್​​ಟಿಟ್ಯೂಟ್​ ಆಫ್​ ಸೈನ್ಸ್​ ಮತ್ತು ಟಾಟಾ ಕಬ್ಬಿಣ ಮತ್ತು ಉಕ್ಕು ಆಡಳಿತ ಮಂಡಳಿ ಸದಸ್ಯರಾಗಿದ್ದರು. ತಮ್ಮ ವೃತ್ತಿ ಜೀವನದಲ್ಲಿ ಅನೇಕ ಪುಸ್ತಕಗಳನ್ನು ಕೂಡ ಅವರು ಬರೆದಿದ್ದಾರೆ. 1962ರಲ್ಲಿ ಅವರು ನಿಧನರಾದರು.

  • Greetings to all hardworking engineers on #EngineersDay! Their innovative minds and tireless dedication have been the backbone of our nation's progress. From infrastructural marvels to tech breakthroughs, their contributions touch every aspect of our lives. pic.twitter.com/lcBeL1GmZQ

    — Narendra Modi (@narendramodi) September 15, 2023 " class="align-text-top noRightClick twitterSection" data=" ">

ಪ್ರಧಾನಿ ಶುಭಾಶಯ: ಇಂಜಿನಿಯರ್ಸ್​​​ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲಾ ಪ್ರತಿಭಾನ್ವಿತ ಇಂಜಿನಿಯರ್​ಗಳಿಗೆ ಶುಭಕೋರಿ ವಿಡಿಯೋ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ವಿಶ್ವೇಶ್ವರಯ್ಯ ಅವರ ಕೊಡುಗೆ ಸ್ಮರಣೆ ಜೊತೆಗೆ ದೇಶ ನಿರ್ಮಾಣದಲ್ಲಿ ಇಂಜಿನಿಯರ್​ಗಳ ಪಾತ್ರ ಬಿಂಬಿಸುವ ತುಣುಕನ್ನು ಹಂಚಿಕೊಂಡಿದ್ದಾರೆ. ''ಇಂಜಿನಿಯರ್​​ಗಳ ಅವಿಷ್ಕಾರದ ಮಿದುಳು ಮತ್ತು ಸಮರ್ಪಣೆ ದೇಶದ ಪ್ರಗತಿಯ ಬೆನ್ನೆಲುಬು. ಮೂಲಸೌಕರ್ಯದಿಂದ ಟೆಕ್ ಪ್ರಗತಿಯವರೆಗೆ ಅವರ ಕೊಡುಗೆಗಳು ನಮ್ಮ ಜೀವನದ ಪ್ರತಿಯೊಂದು ಅಂಶವನ್ನು ಸ್ಪರ್ಶಿಸುತ್ತವೆ'' ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಆದಿತ್ಯ L1 ನೌಕೆಯ ಕಕ್ಷೆ ಬದಲಾವಣೆ ನಾಲ್ಕನೇ ಪ್ರಕ್ರಿಯೆ ಯಶಸ್ವಿ: ಇಸ್ರೋ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.