ETV Bharat / bharat

ದೇಶಮುಖ್ ರಾಜೀನಾಮೆ: ಮಹಾರಾಷ್ಟ್ರಕ್ಕೆ ದಿಲೀಪ್ ವಾಲ್ಸೆ ಪಾಟೀಲ್ ನೂತನ ಗೃಹ ಸಚಿವ - ದೇಶಮುಖ್ ರಾಜೀನಾಮೆ

ಮಹಾರಾಷ್ಟ್ರ ಗೃಹ ಸಚಿವ ಸ್ಥಾನಕ್ಕೆ ಅನಿಲ್​ ದೇಶಮುಖ್​ ರಾಜೀನಾಮೆ ನೀಡುತ್ತಿದ್ದಂತೆ ಅವರ ಸ್ಥಾನಕ್ಕೆ ಇದೀಗ ಎನ್​ಸಿಪಿಯ ದಿಲೀಪ್​ ವಾಲ್ಸೆ ಪಾಟೀಲ್​ ಆಯ್ಕೆಯಾಗಿದ್ದಾರೆ.

NCP Dilip Walse Patil
NCP Dilip Walse Patil
author img

By

Published : Apr 5, 2021, 4:23 PM IST

ಮುಂಬೈ: ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್​ ದೇಶಮುಖ್ ರಾಜೀನಾಮೆ ನೀಡುತ್ತಿದ್ದಂತೆ ಅವರ ಜಾಗಕ್ಕೆ ಎನ್​ಸಿಪಿಯ ದಿಲೀಪ್​ ವಾಲ್ಸೆ ಪಾಟೀಲ್​ ಆಯ್ಕೆಯಾಗಿದ್ದಾರೆ.

ಎನ್​ಸಿಪಿಯಿಂದ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ದಿಲೀಪ್​ ವಾಲ್ಸೆ, ಸದ್ಯ ಉದ್ಧವ್ ಠಾಕ್ರೆ ಸಂಪುಟದಲ್ಲಿ ಅಬಕಾರಿ ಮತ್ತು ಕಾರ್ಮಿಕ ಇಲಾಖೆಯ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದೆ 1999ರಿಂದ 2009ರವರೆಗೆ ಕ್ಯಾಬಿನೆಟ್​ ಸಚಿವರಾಗಿದ್ದ ಇವರು, ಹಣಕಾಸು ಮತ್ತು ಯೋಜನಾ ಸಚಿವಾಲಯ, ಇಂಧನ ಸಚಿವಾಲಯ, ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಸಚಿವಾಲಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವಾಲಯದಲ್ಲೂ ಸೇವೆ ಸಲ್ಲಿಸಿದ್ದಾರೆ.

ಎನ್​ಸಿಪಿ ಅಧ್ಯಕ್ಷ ಶರದ್​ ಪವಾರ್​ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಪಾಟೀಲ್​​, ಈ ಹಿಂದೆ ಶರದ್​​ ಪವಾರ್​ ಅವರ ಪಿಎ ಆಗಿಯೂ ರಾಜಕೀಯ ಜೀವನ ಪ್ರಾರಂಭಿಸಿದ್ದರು.

ಇದನ್ನೂ ಓದಿ: ಭ್ರಷ್ಟಾಚಾರ ಆರೋಪ: ರಾಜೀನಾಮೆ ನೀಡಿದ ಮಹಾರಾಷ್ಟ್ರ ಗೃಹ ಸಚಿವ ದೇಶಮುಖ್​

ಪ್ರತಿ ತಿಂಗಳು 100 ಕೋಟಿ ರೂ. ಹಫ್ತಾ ವಸೂಲಿ ಮಾಡುವಂತೆ ಅನಿಖ್ ದೇಶಮುಖ್​, ಪೊಲೀಸ್ ಅಧಿಕಾರಿ ಸಚಿನ್​ ವಾಜೆಗೆ ಸೂಚನೆ ನೀಡಿದ್ದರು ಎಂದು ಐಪಿಎಸ್ ಅಧಿಕಾರಿ ಪರಮ್​ ಬೀರ್​ ಸಿಂಗ್​​ ಗಂಭೀರ ಆರೋಪ ಮಾಡಿದ್ದರು. ಇದರ ವಿಚಾರಣೆ ಕೈಗೆತ್ತಿಕೊಂಡಿರುವ ಬಾಂಬೆ ಹೈಕೋರ್ಟ್​​, ಮುಂದಿನ 15 ದಿನಗಳಲ್ಲಿ ಪ್ರಾಥಮಿಕ ವರದಿ ನೀಡುವಂತೆ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ದೇಶಮುಖ್ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮುಂಬೈ: ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್​ ದೇಶಮುಖ್ ರಾಜೀನಾಮೆ ನೀಡುತ್ತಿದ್ದಂತೆ ಅವರ ಜಾಗಕ್ಕೆ ಎನ್​ಸಿಪಿಯ ದಿಲೀಪ್​ ವಾಲ್ಸೆ ಪಾಟೀಲ್​ ಆಯ್ಕೆಯಾಗಿದ್ದಾರೆ.

ಎನ್​ಸಿಪಿಯಿಂದ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ದಿಲೀಪ್​ ವಾಲ್ಸೆ, ಸದ್ಯ ಉದ್ಧವ್ ಠಾಕ್ರೆ ಸಂಪುಟದಲ್ಲಿ ಅಬಕಾರಿ ಮತ್ತು ಕಾರ್ಮಿಕ ಇಲಾಖೆಯ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದೆ 1999ರಿಂದ 2009ರವರೆಗೆ ಕ್ಯಾಬಿನೆಟ್​ ಸಚಿವರಾಗಿದ್ದ ಇವರು, ಹಣಕಾಸು ಮತ್ತು ಯೋಜನಾ ಸಚಿವಾಲಯ, ಇಂಧನ ಸಚಿವಾಲಯ, ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಸಚಿವಾಲಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವಾಲಯದಲ್ಲೂ ಸೇವೆ ಸಲ್ಲಿಸಿದ್ದಾರೆ.

ಎನ್​ಸಿಪಿ ಅಧ್ಯಕ್ಷ ಶರದ್​ ಪವಾರ್​ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಪಾಟೀಲ್​​, ಈ ಹಿಂದೆ ಶರದ್​​ ಪವಾರ್​ ಅವರ ಪಿಎ ಆಗಿಯೂ ರಾಜಕೀಯ ಜೀವನ ಪ್ರಾರಂಭಿಸಿದ್ದರು.

ಇದನ್ನೂ ಓದಿ: ಭ್ರಷ್ಟಾಚಾರ ಆರೋಪ: ರಾಜೀನಾಮೆ ನೀಡಿದ ಮಹಾರಾಷ್ಟ್ರ ಗೃಹ ಸಚಿವ ದೇಶಮುಖ್​

ಪ್ರತಿ ತಿಂಗಳು 100 ಕೋಟಿ ರೂ. ಹಫ್ತಾ ವಸೂಲಿ ಮಾಡುವಂತೆ ಅನಿಖ್ ದೇಶಮುಖ್​, ಪೊಲೀಸ್ ಅಧಿಕಾರಿ ಸಚಿನ್​ ವಾಜೆಗೆ ಸೂಚನೆ ನೀಡಿದ್ದರು ಎಂದು ಐಪಿಎಸ್ ಅಧಿಕಾರಿ ಪರಮ್​ ಬೀರ್​ ಸಿಂಗ್​​ ಗಂಭೀರ ಆರೋಪ ಮಾಡಿದ್ದರು. ಇದರ ವಿಚಾರಣೆ ಕೈಗೆತ್ತಿಕೊಂಡಿರುವ ಬಾಂಬೆ ಹೈಕೋರ್ಟ್​​, ಮುಂದಿನ 15 ದಿನಗಳಲ್ಲಿ ಪ್ರಾಥಮಿಕ ವರದಿ ನೀಡುವಂತೆ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ದೇಶಮುಖ್ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.