ETV Bharat / bharat

ರಾಷ್ಟ್ರಪತಿ ಚುನಾವಣೆ ಕಣದಿಂದ ಹಿಂದೆ ಸರಿದ ಶರದ್​ ಪವಾರ್

author img

By

Published : Jun 14, 2022, 5:25 PM IST

ರಾಷ್ಟ್ರಪತಿ ಚುನಾವಣೆಗೆ ಕೇವಲ ನಾಲ್ಕು ದಿನಗಳು ಬಾಕಿ ಉಳಿದಿದ್ದು, ಪ್ರತಿಪಕ್ಷಗಳ ಅಭ್ಯರ್ಥಿ ಎಂದೇ ಬಿಂಬಿತವಾಗಿದ್ದ ಎನ್​ಸಿಪಿ ಮುಖ್ಯಸ್ಥ ಶರದ್​ ಪವಾರ್​ ತಾವು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳುವ ಮೂಲಕ ಕಣದಿಂದ ಹಿಂದೆ ಸರಿದಿದ್ದಾರೆ.

ರಾಷ್ಟ್ರಪತಿ ಕಣದಿಂದ ಹಿಂದೆ ಸರಿದ ಶರದ್​ ಪವಾರ್
ರಾಷ್ಟ್ರಪತಿ ಕಣದಿಂದ ಹಿಂದೆ ಸರಿದ ಶರದ್​ ಪವಾರ್

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷಗಳ ಅಭ್ಯರ್ಥಿಯಾಗಲು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ನಿರಾಕರಿಸಿದ್ದಾರೆ. ಹೀಗಾಗಿ ಇತರರನ್ನು ಕಣಕ್ಕಿಳಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ತಿಳಿಸಿದರು.

ರಾಷ್ಟ್ರಪತಿ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಬಿಜೆಪಿ ಮತ್ತು ಪ್ರತಿಪಕ್ಷಗಳು ಅಭ್ಯರ್ಥಿಯ ಆಯ್ಕೆಗೆ ರಣತಂತ್ರ ರೂಪಿಸುತ್ತಿವೆ. ಪ್ರತಿಪಕ್ಷಗಳ ಪರವಾಗಿ ಎನ್​ಸಿಪಿ ಮುಖ್ಯಸ್ಥ ಶರದ್​ ಪವಾರ್​ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಮಾತುಗಳು ಕೇಳಿ ಬಂದಿದ್ದವು. ಇದೀಗ ಅವರು ಈ ಅವಕಾಶವನ್ನು ತಿರಸ್ಕರಿಸಿದ್ದಾರೆ.

ದೆಹಲಿಯಲ್ಲಿ ಸಿಪಿಎಂ ನಾಯಕರಾದ ಸೀತಾರಾಂ ಯೆಚೂರಿ, ಡಿ.ರಾಜಾ, ಪ್ರಫುಲ್ ಪಟೇಲ್ ಮತ್ತು ಪಿ.ಸಿ. ಚಾಕೊ ಅವರನ್ನು ಭೇಟಿ ಮಾಡಿದ ಶರದ್​ ಪವಾರ್ ಚುನಾವಣೆಗೆ ತಾವು ಸ್ಪರ್ಧಿಸಲು ಸಿದ್ಧರಿಲ್ಲ. ಇತರರನ್ನು ಪರಿಗಣಿಸುವಂತೆ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಸೀತಾರಾಂ ಯೆಚೂರಿ, ಶರದ್​ ಪವಾರ್​ ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ಇತರರ ಹೆಸರುಗಳನ್ನು ಪರಿಗಣಿಸಲಾಗುವುದು ಎಂದಿದ್ದಾರೆ.

ಮಾಹಿತಿಯ ಪ್ರಕಾರ, ರಾಷ್ಟ್ರಪತಿ ಚುನಾವಣಾ ಕಣದಲ್ಲಿ ಪ್ರತಿಪಕ್ಷ ಬೆಂಬಲಿತ ಅಭ್ಯರ್ಥಿ ಸೋಲುವ ಸಾಧ್ಯತೆ ಇರುವ ಕಾರಣ ಶರದ್​ ಪವಾರ್​ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಅಲ್ಲದೇ, ತಮ್ಮ ರಾಜಕೀಯ ಜೀವನ ಕೊನೆಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲುವುದನ್ನು ಅವರು ಬಯಸುವುದಿಲ್ಲ ಎಂದು ಹೇಳಲಾಗಿದೆ.

ರಾಷ್ಟ್ರಪತಿ ಚುನಾವಣೆಗೆ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಬಿಜೆಪಿ ಇಚ್ಚಿಸಿದ್ದು, ಇದಕ್ಕಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ರಕ್ಷಣಾ ಸಚಿವ ರಾಜನಾಥ್​ ಸಿಂಗ್​ರಿಗೆ ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಜವಾಬ್ದಾರಿಯನ್ನು ವಹಿಸಿದೆ.

ಇದನ್ನೂ ಓದಿ: ಏನಿದು ನ್ಯಾಷನಲ್ ಹೆರಾಲ್ಡ್​ ಪ್ರಕರಣ? ಗಾಂಧಿ ಫ್ಯಾಮಿಲಿಗೂ ಇದಕ್ಕೂ ಇರುವ ಸಂಬಂಧವೇನು?

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷಗಳ ಅಭ್ಯರ್ಥಿಯಾಗಲು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ನಿರಾಕರಿಸಿದ್ದಾರೆ. ಹೀಗಾಗಿ ಇತರರನ್ನು ಕಣಕ್ಕಿಳಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ತಿಳಿಸಿದರು.

ರಾಷ್ಟ್ರಪತಿ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಬಿಜೆಪಿ ಮತ್ತು ಪ್ರತಿಪಕ್ಷಗಳು ಅಭ್ಯರ್ಥಿಯ ಆಯ್ಕೆಗೆ ರಣತಂತ್ರ ರೂಪಿಸುತ್ತಿವೆ. ಪ್ರತಿಪಕ್ಷಗಳ ಪರವಾಗಿ ಎನ್​ಸಿಪಿ ಮುಖ್ಯಸ್ಥ ಶರದ್​ ಪವಾರ್​ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಮಾತುಗಳು ಕೇಳಿ ಬಂದಿದ್ದವು. ಇದೀಗ ಅವರು ಈ ಅವಕಾಶವನ್ನು ತಿರಸ್ಕರಿಸಿದ್ದಾರೆ.

ದೆಹಲಿಯಲ್ಲಿ ಸಿಪಿಎಂ ನಾಯಕರಾದ ಸೀತಾರಾಂ ಯೆಚೂರಿ, ಡಿ.ರಾಜಾ, ಪ್ರಫುಲ್ ಪಟೇಲ್ ಮತ್ತು ಪಿ.ಸಿ. ಚಾಕೊ ಅವರನ್ನು ಭೇಟಿ ಮಾಡಿದ ಶರದ್​ ಪವಾರ್ ಚುನಾವಣೆಗೆ ತಾವು ಸ್ಪರ್ಧಿಸಲು ಸಿದ್ಧರಿಲ್ಲ. ಇತರರನ್ನು ಪರಿಗಣಿಸುವಂತೆ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಸೀತಾರಾಂ ಯೆಚೂರಿ, ಶರದ್​ ಪವಾರ್​ ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ಇತರರ ಹೆಸರುಗಳನ್ನು ಪರಿಗಣಿಸಲಾಗುವುದು ಎಂದಿದ್ದಾರೆ.

ಮಾಹಿತಿಯ ಪ್ರಕಾರ, ರಾಷ್ಟ್ರಪತಿ ಚುನಾವಣಾ ಕಣದಲ್ಲಿ ಪ್ರತಿಪಕ್ಷ ಬೆಂಬಲಿತ ಅಭ್ಯರ್ಥಿ ಸೋಲುವ ಸಾಧ್ಯತೆ ಇರುವ ಕಾರಣ ಶರದ್​ ಪವಾರ್​ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಅಲ್ಲದೇ, ತಮ್ಮ ರಾಜಕೀಯ ಜೀವನ ಕೊನೆಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲುವುದನ್ನು ಅವರು ಬಯಸುವುದಿಲ್ಲ ಎಂದು ಹೇಳಲಾಗಿದೆ.

ರಾಷ್ಟ್ರಪತಿ ಚುನಾವಣೆಗೆ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಬಿಜೆಪಿ ಇಚ್ಚಿಸಿದ್ದು, ಇದಕ್ಕಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ರಕ್ಷಣಾ ಸಚಿವ ರಾಜನಾಥ್​ ಸಿಂಗ್​ರಿಗೆ ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಜವಾಬ್ದಾರಿಯನ್ನು ವಹಿಸಿದೆ.

ಇದನ್ನೂ ಓದಿ: ಏನಿದು ನ್ಯಾಷನಲ್ ಹೆರಾಲ್ಡ್​ ಪ್ರಕರಣ? ಗಾಂಧಿ ಫ್ಯಾಮಿಲಿಗೂ ಇದಕ್ಕೂ ಇರುವ ಸಂಬಂಧವೇನು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.