ETV Bharat / bharat

ಪುದುಚೇರಿಯಲ್ಲಿ ಎನ್​ಡಿಎ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದ ಅಮಿತ್​ ಶಾ - ವಿಧಾನಸಭಾ ಚುನಾವಣೆಗೆ ಮುನ್ನ ನಡೆದ ಸಾರ್ವಜನಿಕ ರ‍್ಯಾಲಿ

ಪುದುಚೇರಿಯ ಕಾರೈಕಲ್ ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ನಡೆದ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪುದುಚೇರಿಯಲ್ಲಿ ಮುಂದಿನ ಸರ್ಕಾರವನ್ನು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ರಚಿಸಲಿದೆ ಎಂದು ಹೇಳಿದರು.

Amit Shah
ಕೇಂದ್ರ ಗೃಹ ಸಚಿವ ಅಮಿತ್ ಶಾ
author img

By

Published : Feb 28, 2021, 4:14 PM IST

ಪುದುಚೇರಿ: ಬಿಜೆಪಿ ನೇತೃತ್ವದಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಮುಂಬರುವ ಚುನಾವಣೆಯಲ್ಲಿ ಪುದುಚೇರಿಯಲ್ಲಿ ಗೆದ್ದು, ಸರ್ಕಾರ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ.

ವಂಶಪರಂಪರೆ ರಾಜಕೀಯದಿಂದ ಕಾಂಗ್ರೆಸ್ ಪಕ್ಷ ಪುದುಚೇರಿ ಮಾತ್ರವಲ್ಲದೆ ದೇಶಾದ್ಯಂತ ಅವನತಿಯಾಗುತ್ತಿದೆ. ನನ್ನ ರಾಜಕೀಯ ಅನುಭವದಿಂದ ಹೇಳುತ್ತಿದ್ದೇನೆ, ಬಿಜೆಪಿ ನೇತೃತ್ವದಲ್ಲಿ ಎನ್​ಡಿಎ ಸರ್ಕಾರ ರಚಿಸಲಿದೆ ಎಂದು ಅಮಿತ್​ ಶಾ ಹೇಳಿದ್ದಾರೆ.

ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ ಕಾರೈಕಲ್ ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ ನಡೆದ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡುವಾಗ ಈ ರೀತಿ ಹೇಳಿದ್ದಾರೆ.

ಓದಿ:ಕೇಂದ್ರ ಸರ್ಕಾರ ಶಿಕ್ಷಣ ನೀತಿಯನ್ನು ಕೋಮುವಾದ ಹರಡುವ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದೆ; ರಾಹುಲ್ ಗಾಂಧಿ

ಪುದುಚೇರಿಯ ಈ ಭೂಮಿ ಬಹಳ ಪವಿತ್ರ ಭೂಮಿಯಾಗಿದೆ. ಮಹಾಕವಿ ಸುಬ್ರಮಣ್ಯ ಭಾರತಿ ಇಲ್ಲಿ ಬಹಳ ಕಾಲ ನೆಲೆಸಿದ್ದಾರೆ ಮತ್ತು ಶ್ರೀ ಅರಬಿಂದೋ ತಮ್ಮ ಆಧ್ಯಾತ್ಮಿಕ ಪ್ರಯಾಣವನ್ನು ಇಲ್ಲಿಂದಲೇ ಪ್ರಾರಂಭಿಸಿದ್ದಾರೆ. ಮೋದಿ ಪ್ರಧಾನಿಯಾದ ನಂತರ, ಪುದುಚೇರಿ ಇಡೀ ದೇಶದಲ್ಲಿ ಮಾದರಿ ರಾಜ್ಯವಾಗಬೇಕೆಂದು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಅವರು ಹೇಳಿದರು.

"115 ಯೋಜನೆಗಳನ್ನು ಇಲ್ಲಿ ಜಾರಿಗೊಳಿಸಿ, ರಾಜ್ಯದ ಸರ್ವತೋಮುಖ ಅಭಿವೃದ್ಧಿ ಮಾಡಲು ಪ್ರಧಾನಿ ಹಲವಾರು ಕ್ರಮಗಳನ್ನು ಕೈಗೊಂಡರು. ಆದರೆ ಇಲ್ಲಿನ ಸರ್ಕಾರ ಈ ಯೋಜನೆಗಳಿಗೆ ಅನುಮತಿಸಿಲ್ಲ" ಎಂದು ಅವರು ಹೇಳಿದರು.

ಪುದುಚೇರಿಯಲ್ಲಿ 30 ವಿಧಾನಸಭಾ ಸ್ಥಾನಗಳಿಗೆ ಏಪ್ರಿಲ್ 6 ರಂದು ಮತದಾನ ನಡೆಯಲಿದೆ. 30 ವಿಧಾನಸಭಾ ಸ್ಥಾನಗಳಲ್ಲಿ ಐದು ಸ್ಥಾನಗಳನ್ನು ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಪುದುಚೇರಿಯ 15 ಶಾಸಕಾಂಗ ಸಭೆಗೆ 10,02,589 ಮತದಾರರು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆ.

ಪುದುಚೇರಿ: ಬಿಜೆಪಿ ನೇತೃತ್ವದಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಮುಂಬರುವ ಚುನಾವಣೆಯಲ್ಲಿ ಪುದುಚೇರಿಯಲ್ಲಿ ಗೆದ್ದು, ಸರ್ಕಾರ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ.

ವಂಶಪರಂಪರೆ ರಾಜಕೀಯದಿಂದ ಕಾಂಗ್ರೆಸ್ ಪಕ್ಷ ಪುದುಚೇರಿ ಮಾತ್ರವಲ್ಲದೆ ದೇಶಾದ್ಯಂತ ಅವನತಿಯಾಗುತ್ತಿದೆ. ನನ್ನ ರಾಜಕೀಯ ಅನುಭವದಿಂದ ಹೇಳುತ್ತಿದ್ದೇನೆ, ಬಿಜೆಪಿ ನೇತೃತ್ವದಲ್ಲಿ ಎನ್​ಡಿಎ ಸರ್ಕಾರ ರಚಿಸಲಿದೆ ಎಂದು ಅಮಿತ್​ ಶಾ ಹೇಳಿದ್ದಾರೆ.

ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ ಕಾರೈಕಲ್ ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ ನಡೆದ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡುವಾಗ ಈ ರೀತಿ ಹೇಳಿದ್ದಾರೆ.

ಓದಿ:ಕೇಂದ್ರ ಸರ್ಕಾರ ಶಿಕ್ಷಣ ನೀತಿಯನ್ನು ಕೋಮುವಾದ ಹರಡುವ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದೆ; ರಾಹುಲ್ ಗಾಂಧಿ

ಪುದುಚೇರಿಯ ಈ ಭೂಮಿ ಬಹಳ ಪವಿತ್ರ ಭೂಮಿಯಾಗಿದೆ. ಮಹಾಕವಿ ಸುಬ್ರಮಣ್ಯ ಭಾರತಿ ಇಲ್ಲಿ ಬಹಳ ಕಾಲ ನೆಲೆಸಿದ್ದಾರೆ ಮತ್ತು ಶ್ರೀ ಅರಬಿಂದೋ ತಮ್ಮ ಆಧ್ಯಾತ್ಮಿಕ ಪ್ರಯಾಣವನ್ನು ಇಲ್ಲಿಂದಲೇ ಪ್ರಾರಂಭಿಸಿದ್ದಾರೆ. ಮೋದಿ ಪ್ರಧಾನಿಯಾದ ನಂತರ, ಪುದುಚೇರಿ ಇಡೀ ದೇಶದಲ್ಲಿ ಮಾದರಿ ರಾಜ್ಯವಾಗಬೇಕೆಂದು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಅವರು ಹೇಳಿದರು.

"115 ಯೋಜನೆಗಳನ್ನು ಇಲ್ಲಿ ಜಾರಿಗೊಳಿಸಿ, ರಾಜ್ಯದ ಸರ್ವತೋಮುಖ ಅಭಿವೃದ್ಧಿ ಮಾಡಲು ಪ್ರಧಾನಿ ಹಲವಾರು ಕ್ರಮಗಳನ್ನು ಕೈಗೊಂಡರು. ಆದರೆ ಇಲ್ಲಿನ ಸರ್ಕಾರ ಈ ಯೋಜನೆಗಳಿಗೆ ಅನುಮತಿಸಿಲ್ಲ" ಎಂದು ಅವರು ಹೇಳಿದರು.

ಪುದುಚೇರಿಯಲ್ಲಿ 30 ವಿಧಾನಸಭಾ ಸ್ಥಾನಗಳಿಗೆ ಏಪ್ರಿಲ್ 6 ರಂದು ಮತದಾನ ನಡೆಯಲಿದೆ. 30 ವಿಧಾನಸಭಾ ಸ್ಥಾನಗಳಲ್ಲಿ ಐದು ಸ್ಥಾನಗಳನ್ನು ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಪುದುಚೇರಿಯ 15 ಶಾಸಕಾಂಗ ಸಭೆಗೆ 10,02,589 ಮತದಾರರು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.