ETV Bharat / bharat

ಬಿಲ್​ ಪಾಸ್​ ಮಾಡಲು 15 ಲಕ್ಷ ರೂ. ಲಂಚ: ಹೆದ್ದಾರಿ ಪ್ರಾಧಿಕಾರದ ಸಲಹೆಗಾರ ಸೇರಿ ಮೂವರ ಸೆರೆ - ಲಂಚ ಪ್ರಕರಣ

ಲಂಚ ಪ್ರಕರಣದಲ್ಲಿ ಎನ್‌ಎಚ್‌ಎಐ ಸಲಹೆಗಾರ ಸೇರಿ ಮೂವರನ್ನು ಬಂಧಿಸಿ, 1.56 ಕೋಟಿ ರೂಪಾಯಿ ಮೊತ್ತದ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ತಿಳಿಸಿದೆ.

nhai-consultant-arrested-by-cbi-in-bribery-case
ಬಿಲ್​ ಪಾಸ್​ ಮಾಡಲು 15 ಲಕ್ಷ ರೂ. ಲಂಚ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಲಹೆಗಾರ ಸೇರಿ ಮೂವರ ಸೆರೆ
author img

By

Published : Sep 11, 2022, 8:40 PM IST

ನವದೆಹಲಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿದ ಬಿಲ್​ ಪಾಸ್​ ಮಾಡಲು 15 ಲಕ್ಷ ರೂ. ಲಂಚ ಸ್ವೀಕರಿಸಿದ ಆರೋಪದ ಮೇಲೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ)ದ ಸಲಹೆಗಾರ ಸೇರಿ ಮೂವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

ಗುರುಗ್ರಾಮ್ ಮೂಲದ ಸಂಸ್ಥೆಯಾದ ವಾಯಂಟ್ಸ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್‌ನ ಎಂಜಿನಿಯರ್ ಅನಿಲ್ ಕುಮಾರ್ ಸಿಂಗ್ ಎಂಬುವವರೇ ಬಂಧಿತರು. ಮಥುರಾ ಮೂಲದ ಎಸ್‌ಆರ್‌ಎಸ್‌ಸಿ ಇನ್ಫ್ರಾ ಪ್ರೈವೇಟ್ ಲಿಮಿಟೆಡ್‌ನ ಉದ್ಯೋಗಿ ಆನಂದ್ ಮೋಹನ್ ಶರ್ಮಾ ಜೊತೆಗೆ 15 ಲಕ್ಷ ರೂ. ಲಂಚದ ಹಣವನ್ನು ವಿನಿಮಯ ಮಾಡಿಕೊಳ್ಳುತ್ತಿದ್ದಾಗ ಸಿಂಗ್ ಅವರನ್ನು ಬಂಧಿಸಲಾಗಿದೆ. ಅಲ್ಲದೇ, ಎಸ್‌ಆರ್‌ಎಸ್‌ಸಿ ಇನ್‌ಫ್ರಾ ಸಂಸ್ಥೆಯ ಇಬ್ಬರು ನಿರ್ದೇಶಕರಾದ ಬೆದ್ರಂ ಶರ್ಮಾ ಮತ್ತು ಪರಶುರಾಮ್ ಶರ್ಮಾ ಎಂಬುವರನ್ನೂ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಪಿಲಿಭಿತ್, ಮಥುರಾ ಮತ್ತು ಗುರುಗ್ರಾಮ್, ನೋಯ್ಡಾ ಸೇರಿದಂತೆ ಆರೋಪಿಗಳಿಗೆ ಸೇರಿದ ಎಂಟು ಸ್ಥಳಗಳಲ್ಲಿ ಶೋಧ ನಡೆಸಲಾಗಿದ್ದು, ಅಂದಾಜು 1.56 ಕೋಟಿ ರೂಪಾಯಿ ಮೊತ್ತದ ನಗದು ವಶಪಡಿಸಿಕೊಳ್ಳಲಾಗಿದೆ. ಯೋಜನೆ ಮತ್ತು ವಹಿವಾಟಿಗೆ ಸಂಬಂಧಿಸಿದ ದಾಖಲೆಗಳು ಮತ್ತು ಮೊಬೈಲ್‌ಗಳು ಸೇರಿದಂತೆ ಡಿಜಿಟಲ್ ಸಾಧನಗಳನ್ನೂ ಜಪ್ತಿ ಮಾಡಲಾಗಿದೆ ಎಂದು ಸಿಬಿಐ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 74ರ ಸಿತಾರ್‌ಗಂಜ್-ಬರೇಲಿ ವಿಭಾಗದಲ್ಲಿ ಎಸ್‌ಆರ್‌ಎಸ್‌ಸಿ ಇನ್ಫ್ರಾಗೆ ಯೋಜನೆಯೊಂದು ನೀಡಲಾಗಿತ್ತು. ಇದರ ಪ್ರಗತಿ ಮೇಲ್ವಿಚಾರಣೆ ಮಾಡಲು ಅನಿಲ್ ಕುಮಾರ್ ಸಿಂಗ್ ಅವರನ್ನು ಎನ್‌ಎಚ್‌ಎಐ ಸಲಹೆಗಾರರನ್ನಾಗಿ ನೇಮಿಸಿತ್ತು. ಆದರೆ, ಯೋಜನೆಯಡಿಯಲ್ಲಿ ಸಂಸ್ಥೆಯ ಬಿಲ್‌ಗಳನ್ನು ಪಾಸ್ ಮಾಡಲು ಸಿಂಗ್ ಎಸ್‌ಆರ್‌ಎಸ್‌ಸಿ ಇನ್ಫ್ರಾದಿಂದ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ಯುವಕನ ವಿರುದ್ಧ ಲವ್​ ಜಿಹಾದ್​ ಆರೋಪ: ಪೊಲೀಸರೊಂದಿಗೆ ವಾಗ್ವಾದ ಮಾಡಿದ್ದ ಸಂಸದೆ ರಾಣಾ ವಿರುದ್ಧ ಕೇಸ್

ನವದೆಹಲಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿದ ಬಿಲ್​ ಪಾಸ್​ ಮಾಡಲು 15 ಲಕ್ಷ ರೂ. ಲಂಚ ಸ್ವೀಕರಿಸಿದ ಆರೋಪದ ಮೇಲೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ)ದ ಸಲಹೆಗಾರ ಸೇರಿ ಮೂವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

ಗುರುಗ್ರಾಮ್ ಮೂಲದ ಸಂಸ್ಥೆಯಾದ ವಾಯಂಟ್ಸ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್‌ನ ಎಂಜಿನಿಯರ್ ಅನಿಲ್ ಕುಮಾರ್ ಸಿಂಗ್ ಎಂಬುವವರೇ ಬಂಧಿತರು. ಮಥುರಾ ಮೂಲದ ಎಸ್‌ಆರ್‌ಎಸ್‌ಸಿ ಇನ್ಫ್ರಾ ಪ್ರೈವೇಟ್ ಲಿಮಿಟೆಡ್‌ನ ಉದ್ಯೋಗಿ ಆನಂದ್ ಮೋಹನ್ ಶರ್ಮಾ ಜೊತೆಗೆ 15 ಲಕ್ಷ ರೂ. ಲಂಚದ ಹಣವನ್ನು ವಿನಿಮಯ ಮಾಡಿಕೊಳ್ಳುತ್ತಿದ್ದಾಗ ಸಿಂಗ್ ಅವರನ್ನು ಬಂಧಿಸಲಾಗಿದೆ. ಅಲ್ಲದೇ, ಎಸ್‌ಆರ್‌ಎಸ್‌ಸಿ ಇನ್‌ಫ್ರಾ ಸಂಸ್ಥೆಯ ಇಬ್ಬರು ನಿರ್ದೇಶಕರಾದ ಬೆದ್ರಂ ಶರ್ಮಾ ಮತ್ತು ಪರಶುರಾಮ್ ಶರ್ಮಾ ಎಂಬುವರನ್ನೂ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಪಿಲಿಭಿತ್, ಮಥುರಾ ಮತ್ತು ಗುರುಗ್ರಾಮ್, ನೋಯ್ಡಾ ಸೇರಿದಂತೆ ಆರೋಪಿಗಳಿಗೆ ಸೇರಿದ ಎಂಟು ಸ್ಥಳಗಳಲ್ಲಿ ಶೋಧ ನಡೆಸಲಾಗಿದ್ದು, ಅಂದಾಜು 1.56 ಕೋಟಿ ರೂಪಾಯಿ ಮೊತ್ತದ ನಗದು ವಶಪಡಿಸಿಕೊಳ್ಳಲಾಗಿದೆ. ಯೋಜನೆ ಮತ್ತು ವಹಿವಾಟಿಗೆ ಸಂಬಂಧಿಸಿದ ದಾಖಲೆಗಳು ಮತ್ತು ಮೊಬೈಲ್‌ಗಳು ಸೇರಿದಂತೆ ಡಿಜಿಟಲ್ ಸಾಧನಗಳನ್ನೂ ಜಪ್ತಿ ಮಾಡಲಾಗಿದೆ ಎಂದು ಸಿಬಿಐ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 74ರ ಸಿತಾರ್‌ಗಂಜ್-ಬರೇಲಿ ವಿಭಾಗದಲ್ಲಿ ಎಸ್‌ಆರ್‌ಎಸ್‌ಸಿ ಇನ್ಫ್ರಾಗೆ ಯೋಜನೆಯೊಂದು ನೀಡಲಾಗಿತ್ತು. ಇದರ ಪ್ರಗತಿ ಮೇಲ್ವಿಚಾರಣೆ ಮಾಡಲು ಅನಿಲ್ ಕುಮಾರ್ ಸಿಂಗ್ ಅವರನ್ನು ಎನ್‌ಎಚ್‌ಎಐ ಸಲಹೆಗಾರರನ್ನಾಗಿ ನೇಮಿಸಿತ್ತು. ಆದರೆ, ಯೋಜನೆಯಡಿಯಲ್ಲಿ ಸಂಸ್ಥೆಯ ಬಿಲ್‌ಗಳನ್ನು ಪಾಸ್ ಮಾಡಲು ಸಿಂಗ್ ಎಸ್‌ಆರ್‌ಎಸ್‌ಸಿ ಇನ್ಫ್ರಾದಿಂದ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ಯುವಕನ ವಿರುದ್ಧ ಲವ್​ ಜಿಹಾದ್​ ಆರೋಪ: ಪೊಲೀಸರೊಂದಿಗೆ ವಾಗ್ವಾದ ಮಾಡಿದ್ದ ಸಂಸದೆ ರಾಣಾ ವಿರುದ್ಧ ಕೇಸ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.