ಹೈದರಾಬಾದ್, ತೆಲಂಗಾಣ: ಯಾವುದೇ ಪರಿಸ್ಥಿತಿ ಎದುರಾದರೂ ತೆಲಂಗಾಣ ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಜಾರಿ ಮಾಡುವುದಿಲ್ಲ ಎಂದು ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್ ಸ್ಪಷ್ಟನೆ ನೀಡಿದ್ದಾರೆ.
ಶುಕ್ರವಾರ ವಿಧಾನಸಭೆಯಲ್ಲಿ ಮಾತನಾಡಿದ ಅವರು, ತೆಲಂಗಾಣ ಕೊರೊನಾ ನಿಯಂತ್ರಣದಲ್ಲಿ ಪ್ರಥಮ ಸ್ಥಾನದಲ್ಲಿದೆ. ಕೊರೊನಾ ನಿಯಂತ್ರಣಕ್ಕೆ ಶಾಲೆಗಳನ್ನು ಮುಚ್ಚಲಾಗಿದೆ. ಇನ್ನೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತೇವೆಯೇ ಹೊರತು, ಲಾಕ್ಡೌನ್ ಯಾವುದೇ ಕಾರಣಕ್ಕೂ ಜಾರಿ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ: ಡ್ರೈವಿಂಗ್ ಲೈಸೆನ್ಸ್, ವಾಹನ ದಾಖಲೆ ಸಿಂಧುತ್ವ ಮತ್ತೆ ಮುಂದೂಡಿಕೆ
ವ್ಯಾಕ್ಸಿನೇಷನ್ ವಿಚಾರವಾಗಿ ಮಾತನಾಡಿದ ಕೆಸಿಆರ್, ಇದು ಕೇಂದ್ರ ಸರ್ಕಾರದ ಕೈಯಲ್ಲಿದೆ. ಕೇಂದ್ರ ಸರ್ಕಾರ ಲಸಿಕೆಯನ್ನು ಎಲ್ಲಾ ರಾಜ್ಯಗಳಿಗೂ ಸಮಾನವಾಗಿ ಹಂಚುತ್ತದೆ ಎಂದಿದ್ದಾರೆ.