ETV Bharat / bharat

ಜಾರ್ಖಂಡ್​ನಲ್ಲಿ ಐಇಡಿ ಸ್ಫೋಟ: ಕೋಬ್ರಾ ಪಡೆ ಯೋಧರಿಬ್ಬರಿಗೆ ಗಾಯ

author img

By

Published : Feb 11, 2022, 5:36 PM IST

Updated : Feb 11, 2022, 7:59 PM IST

ಐಇಡಿ ಸ್ಫೋಟ ಸಂಭವಿಸಿ, ಕೋಬ್ರಾ ಪಡೆಯ ಇಬ್ಬರು ಯೋಧರು ಗಾಯಗೊಂಡಿರುವ ಘಟನೆ ಜಾರ್ಖಂಡ್​ ರಾಜ್ಯದ ಲೋಹರ್ದಗಾ ಎಂಬಲ್ಲಿ ನಡೆದಿದೆ.

one-soldier-injured-in-ied-blast-in-lohardaga
ಜಾರ್ಖಂಡ್​ನಲ್ಲಿ ಐಇಡಿ ಸ್ಫೋಟ: ಕೋಬ್ರಾ ಪಡೆಯ ಯೋಧರಿಬ್ಬರಿಗೆ ಗಾಯ

ಲೋಹರ್ದಗಾ( ಜಾರ್ಖಂಡ್‌): ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಐಇಡಿ ಸ್ಫೋಟ ಸಂಭವಿಸಿ, ಕೋಬ್ರಾ ಪಡೆಯ ಇಬ್ಬರು ಯೋಧರು ಗಾಯಗೊಂಡಿರುವ ಘಟನೆ ಜಾರ್ಖಂಡ್​ ರಾಜ್ಯದ ಲೋಹರ್ದಗಾ ಎಂಬಲ್ಲಿ ನಡೆದಿದೆ.

ಕೋಬ್ರಾ ವಿಶೇಷ ಕಾರ್ಯಾಚರಣೆ ಘಟಕ ಮತ್ತು ಜಾರ್ಖಂಡ್ ಪೊಲೀಸರು ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಬುಲ್‌ಬುಲ್ - ಪೆಶ್ರಾರ್ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ವಿಮಾನದಲ್ಲಿ ರಾಂಚಿಗೆ ರವಾನಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ಮಾಹಿತಿ ನೀಡಿದ್ದಾರೆ.

ಐಇಡಿ ಸ್ಫೋಟದಲ್ಲಿ ಗಾಯಗೊಂಡ ಯೋಧ

ಕೋಬ್ರಾ ಪಡೆಯು ಸಿಆರ್​​ಪಿಎಪ್​ನ ವಿಶೇಷ ಕಾರ್ಯಾಚರಣೆಯ ಘಟಕವಾಗಿದ್ದು, ಇದಕ್ಕೆ ಸೇರಿದ ದಿಲೀಪ್ ಕುಮಾರ್​ ಮತ್ತು ನಾರಾಯಣ ದಾಸ್ ಗಾಯಗೊಂಡಿದ್ದಾರೆ. ಅವರನ್ನು ರಾಂಚಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೆಶ್ರಾರ್ ಪೊಲೀಸ್ ಠಾಣೆಯ ಅಧಿಕಾರಿ ರಿಷಿ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇಬ್ಬರೂ ಓದಿ: ಮಗನಿಗಾಗಿ ಪ್ರಾಣತ್ಯಾಗ ಮಾಡಿದ ತಂದೆ.. ವಿಹಾರ ತಂದ ವಿಷಾದದ ಘಟನೆ

ಕಳೆದ ಕೆಲವು ತಿಂಗಳುಗಳಿಂದ ಈ ಪ್ರದೇಶದಲ್ಲಿ ನಕ್ಸಲರ ಚಟುವಟಿಕೆಗಳು ಹೆಚ್ಚಿವೆ ಎಂದು ಸ್ಥಳೀಯರು ಹೇಳಿದ್ದಾರೆ. ಅವರಲ್ಲಿ ಕೆಲವರು ಪೊಲೀಸರ ಬಳಿ ಬಂದು ಭಯ ತೋಡಿಕೊಂಡಿದ್ದಾರೆ. ನಕ್ಸಲರನ್ನು ಹಿಡಿಯಲು ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ರಿಷಿ ಕುಮಾರ್ ಹೇಳಿದ್ದಾರೆ.

ಲೋಹರ್ದಗಾ( ಜಾರ್ಖಂಡ್‌): ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಐಇಡಿ ಸ್ಫೋಟ ಸಂಭವಿಸಿ, ಕೋಬ್ರಾ ಪಡೆಯ ಇಬ್ಬರು ಯೋಧರು ಗಾಯಗೊಂಡಿರುವ ಘಟನೆ ಜಾರ್ಖಂಡ್​ ರಾಜ್ಯದ ಲೋಹರ್ದಗಾ ಎಂಬಲ್ಲಿ ನಡೆದಿದೆ.

ಕೋಬ್ರಾ ವಿಶೇಷ ಕಾರ್ಯಾಚರಣೆ ಘಟಕ ಮತ್ತು ಜಾರ್ಖಂಡ್ ಪೊಲೀಸರು ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಬುಲ್‌ಬುಲ್ - ಪೆಶ್ರಾರ್ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ವಿಮಾನದಲ್ಲಿ ರಾಂಚಿಗೆ ರವಾನಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ಮಾಹಿತಿ ನೀಡಿದ್ದಾರೆ.

ಐಇಡಿ ಸ್ಫೋಟದಲ್ಲಿ ಗಾಯಗೊಂಡ ಯೋಧ

ಕೋಬ್ರಾ ಪಡೆಯು ಸಿಆರ್​​ಪಿಎಪ್​ನ ವಿಶೇಷ ಕಾರ್ಯಾಚರಣೆಯ ಘಟಕವಾಗಿದ್ದು, ಇದಕ್ಕೆ ಸೇರಿದ ದಿಲೀಪ್ ಕುಮಾರ್​ ಮತ್ತು ನಾರಾಯಣ ದಾಸ್ ಗಾಯಗೊಂಡಿದ್ದಾರೆ. ಅವರನ್ನು ರಾಂಚಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೆಶ್ರಾರ್ ಪೊಲೀಸ್ ಠಾಣೆಯ ಅಧಿಕಾರಿ ರಿಷಿ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇಬ್ಬರೂ ಓದಿ: ಮಗನಿಗಾಗಿ ಪ್ರಾಣತ್ಯಾಗ ಮಾಡಿದ ತಂದೆ.. ವಿಹಾರ ತಂದ ವಿಷಾದದ ಘಟನೆ

ಕಳೆದ ಕೆಲವು ತಿಂಗಳುಗಳಿಂದ ಈ ಪ್ರದೇಶದಲ್ಲಿ ನಕ್ಸಲರ ಚಟುವಟಿಕೆಗಳು ಹೆಚ್ಚಿವೆ ಎಂದು ಸ್ಥಳೀಯರು ಹೇಳಿದ್ದಾರೆ. ಅವರಲ್ಲಿ ಕೆಲವರು ಪೊಲೀಸರ ಬಳಿ ಬಂದು ಭಯ ತೋಡಿಕೊಂಡಿದ್ದಾರೆ. ನಕ್ಸಲರನ್ನು ಹಿಡಿಯಲು ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ರಿಷಿ ಕುಮಾರ್ ಹೇಳಿದ್ದಾರೆ.

Last Updated : Feb 11, 2022, 7:59 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.