ನವದೆಹಲಿ: ಈ ಬಾರಿಯ ಸಂಸತ್ ಅಧಿವೇಶನದಲ್ಲಿ ಬಿಕ್ಕಟ್ಟು ಸೃಷ್ಟಿಯಾಗಲು ಪ್ರತಿಪಕ್ಷಗಳೇ ಕಾರಣ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಆರೋಪಿಸಿದ್ದಾರೆ.
'ಈಟಿವಿ ಭಾರತ' ಪ್ರತಿನಿಧಿಯೊಂದಿಗೆ ಮಸೂದೆಗಳ ಅಂಗೀಕಾರದ ಬಗ್ಗೆ ಮಾತನಾಡಿದ ಅವರು, ಅಂಗೀಕಾರಗೊಳ್ಳುತ್ತಿರುವ ಬಿಲ್ಗಳ ಬಗ್ಗೆ ಪ್ರತಿಪಕ್ಷಗಳಿಗೆ ಆತಂಕವಿದ್ದರೆ ಅವರು, ಸದನದಲ್ಲಿ ಕುಳಿತು ಅವುಗಳ ಬಗ್ಗೆ ಚರ್ಚೆ ಮಾಡಲಿ ಎಂದು ಒತ್ತಾಯಿಸಿದ್ದಾರೆ.
ಪ್ರತಿಪಕ್ಷಗಳಿಂದಾಗಿ ಸಂಸತ್ ಕಾರ್ಯಕಲಾಪ ಸರಿಯಾಗಿ ನಡೆಯುತ್ತಿಲ್ಲ. ಇದರಿಂದಾಗಿ ಹಣ ವ್ಯರ್ಥವಾಗುತ್ತಿದೆ. ಇದಕ್ಕೆಲ್ಲಾ ಪ್ರತಿಪಕ್ಷಗಳೇ ಕಾರಣ ಎಂದು ಮುಖ್ತಾರ್ ಅಬ್ಬಾಸ್ ನಖ್ವಿ ಕಿಡಿಕಾರಿದ್ದಾರೆ.
ಇದನ್ನೂ ಓದಿ: ಆ.15ರಂದು ಧ್ವಜಾರೋಹಣ ಮಾಡಲು ಬಿಡುವುದಿಲ್ಲ: ಯುಪಿ ಸಿಎಂ ಯೋಗಿಗೆ ಬೆದರಿಕೆ