ETV Bharat / bharat

No-Confidence Motion: ಸರ್ಕಾರದ ವಿರುದ್ಧ ಲೋಕಸಭೆಯಲ್ಲಿಂದು ಅವಿಶ್ವಾಸ ನಿರ್ಣಯ ಮಂಡನೆ: ಅಧೀರ್ ರಂಜನ್ ಚೌಧರಿ

Opposition to bring No-Confidence Motion: ಮಣಿಪುರ ಹಿಂಸಾಚಾರ ವಿಷಯಕ್ಕೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ನಡೆಯುತ್ತಿರುವ ಗೊಂದಲದ ಮಧ್ಯೆ ವಿರೋಧ ಪಕ್ಷದ ಒಕ್ಕೂಟ 'ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಮೈತ್ರಿ ಘಟಕಗಳು' ಬುಧವಾರ ಲೋಕಸಭೆಯಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ನಿರ್ಧರಿಸಿವೆ.

author img

By

Published : Jul 26, 2023, 10:09 AM IST

Adhir Ranjan Chowdhary
ಅಧೀರ್ ರಂಜನ್ ಚೌಧರಿ

ನವದೆಹಲಿ : ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ಲೋಕಸಭೆಯಲ್ಲಿ ಇಂದು ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡಿಸಲು ಪ್ರತಿಪಕ್ಷಗಳು ನಿರ್ಧರಿಸಿವೆ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ. ಜುಲೈ 20ರಂದು ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭವಾದಾಗಿನಿಂದ ಪ್ರತಿಪಕ್ಷ ಸದಸ್ಯರು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಣಿಪುರ ಹಿಂಸಾಚಾರ ವಿಚಾರವಾಗಿ ಪ್ರಧಾನಿ ಮೋದಿ ಹೇಳಿಕೆಗೆ ಪಟ್ಟು ಹಿಡಿದು ಪ್ರತಿಭಟನೆ ನಡೆಸುತ್ತಿವೆ. ಇದರಿಂದಾಗಿ ಉಭಯ ಸದನಗಳ ಕಲಾಪಗಳನ್ನೂ ಪದೇ ಪದೇ ಮುಂದೂಡಲಾಗುತ್ತಿದೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅಧೀರ್ ರಂಜನ್ ಚೌಧರಿ, "ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಲಿವೆ. ಮಂಗಳವಾರ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಅವಿಶ್ವಾಸ ಗೊತ್ತುವಳಿ ಮಂಡನೆಗೆ ಮುಂದಾಗದೆ ನಮಗೆ ಬೇರೆ ದಾರಿ ಇಲ್ಲ. ಏಕೆಂದರೆ, ಮಣಿಪುರ ಕುರಿತು ಪ್ರಧಾನಿ ಜೊತೆ ವಿಸ್ತೃತ ಚರ್ಚೆ ನಡೆಸಬೇಕೆಂಬ ಪ್ರತಿಪಕ್ಷಗಳ ಬೇಡಿಕೆಯನ್ನು ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ. ಅವರು ಸಂಸತ್ತಿನಲ್ಲಿ ನಮ್ಮ ನಾಯಕರಾಗಿರುವುದರಿಂದ ಮಣಿಪುರ ಹಿಂಸಾಚಾರದ ಬಗ್ಗೆ ಹೇಳಿಕೆ ನೀಡಬೇಕು. ಆದರೆ, ಪ್ರತಿಪಕ್ಷಗಳ ಬೇಡಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ತಿರಸ್ಕರಿಸುತ್ತಿದ್ದಾರೆ" ಎಂದು ಹೇಳಿದರು.

ಇದನ್ನೂ ಓದಿ : Parliament session : ಅಧಿವೇಶನದಲ್ಲಿ ಮಣಿಪುರ ವಿಡಿಯೋ ಗದ್ದಲ.. ಮಧ್ಯಾಹ್ನ 2 ಗಂಟೆಗೆ ಕಲಾಪ ಮುಂಡೂಡಿಕೆ

ಮಣಿಪುರದ ಪರಿಸ್ಥಿತಿಯ ಕುರಿತು ವಿಸ್ತೃತ ಚರ್ಚೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರು ಹೇಳಿಕೆ ನೀಡುವಂತೆ ಪ್ರತಿಪಕ್ಷಗಳು ಒತ್ತಾಯಿಸುತ್ತಿರುವುದರಿಂದ ಲೋಕಸಭೆ ಮತ್ತು ರಾಜ್ಯಸಭೆಗಳು ಮುಂದೂಡಲ್ಪಡುತ್ತಿವೆ. ಮಣಿಪುರ ಹಿಂಸಾಚಾರದ ಬಗ್ಗೆ ಚರ್ಚೆಗೆ ಸಿದ್ಧ ಎಂದು ಸರ್ಕಾರ ಹೇಳಿದೆ. ಆದರೂ ವಿರೋಧ ಪಕ್ಷಗಳು ಮತದಾನದ ನಿಯಮದ ಅಡಿ ಚರ್ಚೆಗೆ ಒತ್ತಾಯಿಸುತ್ತಿವೆ. ಈ ಕುರಿತಾದ ಚರ್ಚೆಗೆ ಕೇಂದ್ರ ಗೃಹ ಸಚಿವರೇ ಉತ್ತರ ನೀಡಲಿದ್ದಾರೆ ಎಂದು ಸರ್ಕಾರ ತಿಳಿಸಿದೆ.

ಇದನ್ನೂ ಓದಿ : Modi on opposition alliance : ಈಸ್ಟ್‌ ಇಂಡಿಯಾ ಕಂಪನಿ, ಇಂಡಿಯನ್ ಮುಜಾಹಿದ್ದೀನ್‌ ಪ್ರಸ್ತಾಪಿಸಿ ಪ್ರತಿಪಕ್ಷಗಳ ' ಇಂಡಿಯಾ 'ಗೆ ಮೋದಿ ಚಾಟಿ

ವಿರೋಧ ಪಕ್ಷಗಳ ಉದ್ದೇಶಿತ ಅವಿಶ್ವಾಸ ನಿರ್ಣಯವು ಸಂಖ್ಯಾಬಲದಲ್ಲಿ ವಿಫಲವಾಗುತ್ತದೆ. ಏಕೆಂದರೆ, ಕೇಂದ್ರದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಪರವಾಗಿ ಸ್ಪಷ್ಟ ಬಹುಮತವಿದ್ದು, ಸದಸ್ಯರ ಸಂಖ್ಯೆ ಅಧಿಕವಿದೆ. ವಿರೋಧ ಪಕ್ಷವು ಕೆಳಮನೆಯಲ್ಲಿ 150ಕ್ಕಿಂತ ಕಡಿಮೆ ಸದಸ್ಯರನ್ನು ಹೊಂದಿದೆ. ಆದರೂ, ಚರ್ಚೆಯ ಸಮಯದಲ್ಲಿ ಮಣಿಪುರ ವಿಷಯದ ಬಗ್ಗೆ ಸರ್ಕಾರವನ್ನು ಮೂಲೆಗುಂಪು ಮಾಡುವಲ್ಲಿ ನಾವು ಗೆಲ್ಲುತ್ತೇವೆ ಎಂದು ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಮೈತ್ರಿ ಘಟಕ ವಾದಿಸಿದೆ.

ಇದನ್ನೂ ಓದಿ : ಮಣಿಪುರ ಸಂಘರ್ಷಕ್ಕೆ ಅಧಿವೇಶನ ಬಲಿ : ಸುಗಮ ಕಲಾಪಕ್ಕಾಗಿ ವಿಪಕ್ಷ ನಾಯಕರಿಗೆ ಪತ್ರ ಬರೆದ ಅಮಿತ್​ ಶಾ

ಆಗಸ್ಟ್ 11 ರವರೆಗೆ ಮುಂಗಾರು ಅಧಿವೇಶನ ನಡೆಯಲಿದೆ. 23 ದಿನಗಳ ಕಾಲ ನಡೆಯುವ ಈ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ಒಟ್ಟು 17 ಕಲಾಪಗಳು ಇರಲಿವೆ. ದೆಹಲಿ ಸುಗ್ರೀವಾಜ್ಞೆ ಸೇರಿದಂತೆ 31 ಮಸೂದೆಗಳನ್ನು ಮಂಡಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ನವದೆಹಲಿ : ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ಲೋಕಸಭೆಯಲ್ಲಿ ಇಂದು ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡಿಸಲು ಪ್ರತಿಪಕ್ಷಗಳು ನಿರ್ಧರಿಸಿವೆ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ. ಜುಲೈ 20ರಂದು ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭವಾದಾಗಿನಿಂದ ಪ್ರತಿಪಕ್ಷ ಸದಸ್ಯರು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಣಿಪುರ ಹಿಂಸಾಚಾರ ವಿಚಾರವಾಗಿ ಪ್ರಧಾನಿ ಮೋದಿ ಹೇಳಿಕೆಗೆ ಪಟ್ಟು ಹಿಡಿದು ಪ್ರತಿಭಟನೆ ನಡೆಸುತ್ತಿವೆ. ಇದರಿಂದಾಗಿ ಉಭಯ ಸದನಗಳ ಕಲಾಪಗಳನ್ನೂ ಪದೇ ಪದೇ ಮುಂದೂಡಲಾಗುತ್ತಿದೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅಧೀರ್ ರಂಜನ್ ಚೌಧರಿ, "ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಲಿವೆ. ಮಂಗಳವಾರ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಅವಿಶ್ವಾಸ ಗೊತ್ತುವಳಿ ಮಂಡನೆಗೆ ಮುಂದಾಗದೆ ನಮಗೆ ಬೇರೆ ದಾರಿ ಇಲ್ಲ. ಏಕೆಂದರೆ, ಮಣಿಪುರ ಕುರಿತು ಪ್ರಧಾನಿ ಜೊತೆ ವಿಸ್ತೃತ ಚರ್ಚೆ ನಡೆಸಬೇಕೆಂಬ ಪ್ರತಿಪಕ್ಷಗಳ ಬೇಡಿಕೆಯನ್ನು ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ. ಅವರು ಸಂಸತ್ತಿನಲ್ಲಿ ನಮ್ಮ ನಾಯಕರಾಗಿರುವುದರಿಂದ ಮಣಿಪುರ ಹಿಂಸಾಚಾರದ ಬಗ್ಗೆ ಹೇಳಿಕೆ ನೀಡಬೇಕು. ಆದರೆ, ಪ್ರತಿಪಕ್ಷಗಳ ಬೇಡಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ತಿರಸ್ಕರಿಸುತ್ತಿದ್ದಾರೆ" ಎಂದು ಹೇಳಿದರು.

ಇದನ್ನೂ ಓದಿ : Parliament session : ಅಧಿವೇಶನದಲ್ಲಿ ಮಣಿಪುರ ವಿಡಿಯೋ ಗದ್ದಲ.. ಮಧ್ಯಾಹ್ನ 2 ಗಂಟೆಗೆ ಕಲಾಪ ಮುಂಡೂಡಿಕೆ

ಮಣಿಪುರದ ಪರಿಸ್ಥಿತಿಯ ಕುರಿತು ವಿಸ್ತೃತ ಚರ್ಚೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರು ಹೇಳಿಕೆ ನೀಡುವಂತೆ ಪ್ರತಿಪಕ್ಷಗಳು ಒತ್ತಾಯಿಸುತ್ತಿರುವುದರಿಂದ ಲೋಕಸಭೆ ಮತ್ತು ರಾಜ್ಯಸಭೆಗಳು ಮುಂದೂಡಲ್ಪಡುತ್ತಿವೆ. ಮಣಿಪುರ ಹಿಂಸಾಚಾರದ ಬಗ್ಗೆ ಚರ್ಚೆಗೆ ಸಿದ್ಧ ಎಂದು ಸರ್ಕಾರ ಹೇಳಿದೆ. ಆದರೂ ವಿರೋಧ ಪಕ್ಷಗಳು ಮತದಾನದ ನಿಯಮದ ಅಡಿ ಚರ್ಚೆಗೆ ಒತ್ತಾಯಿಸುತ್ತಿವೆ. ಈ ಕುರಿತಾದ ಚರ್ಚೆಗೆ ಕೇಂದ್ರ ಗೃಹ ಸಚಿವರೇ ಉತ್ತರ ನೀಡಲಿದ್ದಾರೆ ಎಂದು ಸರ್ಕಾರ ತಿಳಿಸಿದೆ.

ಇದನ್ನೂ ಓದಿ : Modi on opposition alliance : ಈಸ್ಟ್‌ ಇಂಡಿಯಾ ಕಂಪನಿ, ಇಂಡಿಯನ್ ಮುಜಾಹಿದ್ದೀನ್‌ ಪ್ರಸ್ತಾಪಿಸಿ ಪ್ರತಿಪಕ್ಷಗಳ ' ಇಂಡಿಯಾ 'ಗೆ ಮೋದಿ ಚಾಟಿ

ವಿರೋಧ ಪಕ್ಷಗಳ ಉದ್ದೇಶಿತ ಅವಿಶ್ವಾಸ ನಿರ್ಣಯವು ಸಂಖ್ಯಾಬಲದಲ್ಲಿ ವಿಫಲವಾಗುತ್ತದೆ. ಏಕೆಂದರೆ, ಕೇಂದ್ರದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಪರವಾಗಿ ಸ್ಪಷ್ಟ ಬಹುಮತವಿದ್ದು, ಸದಸ್ಯರ ಸಂಖ್ಯೆ ಅಧಿಕವಿದೆ. ವಿರೋಧ ಪಕ್ಷವು ಕೆಳಮನೆಯಲ್ಲಿ 150ಕ್ಕಿಂತ ಕಡಿಮೆ ಸದಸ್ಯರನ್ನು ಹೊಂದಿದೆ. ಆದರೂ, ಚರ್ಚೆಯ ಸಮಯದಲ್ಲಿ ಮಣಿಪುರ ವಿಷಯದ ಬಗ್ಗೆ ಸರ್ಕಾರವನ್ನು ಮೂಲೆಗುಂಪು ಮಾಡುವಲ್ಲಿ ನಾವು ಗೆಲ್ಲುತ್ತೇವೆ ಎಂದು ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಮೈತ್ರಿ ಘಟಕ ವಾದಿಸಿದೆ.

ಇದನ್ನೂ ಓದಿ : ಮಣಿಪುರ ಸಂಘರ್ಷಕ್ಕೆ ಅಧಿವೇಶನ ಬಲಿ : ಸುಗಮ ಕಲಾಪಕ್ಕಾಗಿ ವಿಪಕ್ಷ ನಾಯಕರಿಗೆ ಪತ್ರ ಬರೆದ ಅಮಿತ್​ ಶಾ

ಆಗಸ್ಟ್ 11 ರವರೆಗೆ ಮುಂಗಾರು ಅಧಿವೇಶನ ನಡೆಯಲಿದೆ. 23 ದಿನಗಳ ಕಾಲ ನಡೆಯುವ ಈ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ಒಟ್ಟು 17 ಕಲಾಪಗಳು ಇರಲಿವೆ. ದೆಹಲಿ ಸುಗ್ರೀವಾಜ್ಞೆ ಸೇರಿದಂತೆ 31 ಮಸೂದೆಗಳನ್ನು ಮಂಡಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.