ETV Bharat / bharat

ಮಧ್ಯಪ್ರದೇಶ: 1,200ಕ್ಕೂ ಹೆಚ್ಚು ಅಕ್ರಮ ಶಸ್ತ್ರಾಸ್ತ್ರ, ₹5 ಕೋಟಿ ಮೌಲ್ಯದ ಮದ್ಯ ವಶ

author img

By

Published : Jun 30, 2022, 7:07 PM IST

ಭಾರತದಲ್ಲಿ ಚುನಾವಣೆಗಳಂದ್ರೆ ಹಾಗೆ. ಅಕ್ರಮ ಮದ್ಯ, ಹಣ ಹೊಳೆಯೇ ಹರಿಯುತ್ತದೆ. ಮಧ್ಯಪ್ರದೇಶದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುತ್ತಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು, ಶೇಖರಿಸಿಟ್ಟಿದ್ದ ಮದ್ಯವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

MP local body polls
MP local body polls

ಭೋಪಾಲ್​(ಮಧ್ಯಪ್ರದೇಶ): ಮಧ್ಯಪ್ರದೇಶದಲ್ಲಿ ಪಂಚಾಯತ್​ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸರು 1,230 ಪರವಾನಿಗೆ ಇಲ್ಲದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜೊತೆಗೆ, 19,283 ಜನರ ವಿರುದ್ಧ ಜಾಮೀನುರಹಿತ ಅರೆಸ್ಟ್ ವಾರೆಂಟ್ ಜಾರಿಗೊಳಿಸಲಾಗಿದೆ ಎಂದು ಚುನಾವಣಾಧಿಕಾರಿ ತಿಳಿಸಿದರು.

ವಿವಿಧ ನಗರಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುತ್ತಿದ್ದು ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಮತದಾರರಿಗೆ ಹಂಚಲು ಶೇಖರಿಸಿಟ್ಟಿದ್ದ ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಧಾರ್ ಜಿಲ್ಲೆಯಲ್ಲಿ ಗರಿಷ್ಠ 12,802 ಲೀಟರ್ ಮದ್ಯ ಜಪ್ತಿ ಮಾಡಲಾಗಿದೆ. ಮತ ಪ್ರಚಾರ ಹಾಗೂ ಮತದಾನದ ಸಂದರ್ಭಗಳಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯುವುದನ್ನು ತಡೆಯಲು 2,57,945 ಪರವಾನಿಗೆ ಹೊಂದಿರುವ ಆಯುಧಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ರಾಜ್ಯದಲ್ಲಿ 3 ಹಂತದಲ್ಲಿ ಪಂಚಾಯತ್ ಚುನಾವಣೆ ಆರಂಭಗೊಂಡಿದೆ. ಮೊದಲನೇ ಹಂತ ಜೂನ್ 25ರಂದು ನಡೆದಿದ್ದು, ಎರಡನೇ ಹಂತ ಜುಲೈ 1 ರಂದು ಮತ್ತು ಮೂರನೇ ಹಂತ ಜುಲೈ 8 ರಂದು ನಡೆಯಲಿದೆ. ಉಳಿದಂತೆ ಜುಲೈ 6 ಮತ್ತು ಜುಲೈ 13ರಂದು 16 ನಗರ ಪಾಲಿಕೆ ನಿಗಮ 298 ನಗರ ಪರಿಷತ್, 413 ಪುರಸಭೆಗಳಿಗೆ ಚುನಾವಣೆ ನಡೆಯಲಿದೆ. ಮತ ಎಣಿಕೆ ಕಾರ್ಯ ಜುಲೈ 17ರಂದು ನಡೆಯಲಿದೆ.

ಇದನ್ನೂ ಓದಿ: 'ಫಡ್ನವೀಸ್​ ಸಿಎಂ ಆಗಬಹುದಿತ್ತು, ಆದರೆ ಅವರು ವಿಶಾಲ ಹೃದಯ ತೋರಿಸಿದರು': ಏಕನಾಥ್​ ಶಿಂಧೆ

ಭೋಪಾಲ್​(ಮಧ್ಯಪ್ರದೇಶ): ಮಧ್ಯಪ್ರದೇಶದಲ್ಲಿ ಪಂಚಾಯತ್​ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸರು 1,230 ಪರವಾನಿಗೆ ಇಲ್ಲದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜೊತೆಗೆ, 19,283 ಜನರ ವಿರುದ್ಧ ಜಾಮೀನುರಹಿತ ಅರೆಸ್ಟ್ ವಾರೆಂಟ್ ಜಾರಿಗೊಳಿಸಲಾಗಿದೆ ಎಂದು ಚುನಾವಣಾಧಿಕಾರಿ ತಿಳಿಸಿದರು.

ವಿವಿಧ ನಗರಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುತ್ತಿದ್ದು ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಮತದಾರರಿಗೆ ಹಂಚಲು ಶೇಖರಿಸಿಟ್ಟಿದ್ದ ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಧಾರ್ ಜಿಲ್ಲೆಯಲ್ಲಿ ಗರಿಷ್ಠ 12,802 ಲೀಟರ್ ಮದ್ಯ ಜಪ್ತಿ ಮಾಡಲಾಗಿದೆ. ಮತ ಪ್ರಚಾರ ಹಾಗೂ ಮತದಾನದ ಸಂದರ್ಭಗಳಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯುವುದನ್ನು ತಡೆಯಲು 2,57,945 ಪರವಾನಿಗೆ ಹೊಂದಿರುವ ಆಯುಧಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ರಾಜ್ಯದಲ್ಲಿ 3 ಹಂತದಲ್ಲಿ ಪಂಚಾಯತ್ ಚುನಾವಣೆ ಆರಂಭಗೊಂಡಿದೆ. ಮೊದಲನೇ ಹಂತ ಜೂನ್ 25ರಂದು ನಡೆದಿದ್ದು, ಎರಡನೇ ಹಂತ ಜುಲೈ 1 ರಂದು ಮತ್ತು ಮೂರನೇ ಹಂತ ಜುಲೈ 8 ರಂದು ನಡೆಯಲಿದೆ. ಉಳಿದಂತೆ ಜುಲೈ 6 ಮತ್ತು ಜುಲೈ 13ರಂದು 16 ನಗರ ಪಾಲಿಕೆ ನಿಗಮ 298 ನಗರ ಪರಿಷತ್, 413 ಪುರಸಭೆಗಳಿಗೆ ಚುನಾವಣೆ ನಡೆಯಲಿದೆ. ಮತ ಎಣಿಕೆ ಕಾರ್ಯ ಜುಲೈ 17ರಂದು ನಡೆಯಲಿದೆ.

ಇದನ್ನೂ ಓದಿ: 'ಫಡ್ನವೀಸ್​ ಸಿಎಂ ಆಗಬಹುದಿತ್ತು, ಆದರೆ ಅವರು ವಿಶಾಲ ಹೃದಯ ತೋರಿಸಿದರು': ಏಕನಾಥ್​ ಶಿಂಧೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.