ETV Bharat / bharat

ಶಬರಿಮಲೆಗೆ ತೆರಳುತ್ತಿದ್ದ ಕೋಲಾರದ ಯಾತ್ರಿಗಳಿದ್ದ ಬಸ್ ಅಪಘಾತ: 13ಕ್ಕೂ ಹೆಚ್ಚು ಮಂದಿಗೆ ಗಾಯ

author img

By PTI

Published : Oct 18, 2023, 12:46 PM IST

Updated : Oct 18, 2023, 1:32 PM IST

ಶಬರಿಮಲೆಗೆ ತೆರಳುತ್ತಿದ್ದ ಕರ್ನಾಟಕದ ಯಾತ್ರಿಗಳ ಬಸ್​ ಅಪಘಾತವಾಗಿ 13ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕೇರಳದ ಕೊಟ್ಟಾಯಂನಲ್ಲಿ ನಡೆದಿದೆ.

over-13-sabarimala-pilgrims-injured-as-bus-overturns-in-kerala
ಶಬರಿಮಲೆಗೆ ತೆರಳುತ್ತಿದ್ದ ಕರ್ನಾಟಕ ಯಾತ್ರಿಗಳ ಬಸ್ ಅಪಘಾತ : 13ಕ್ಕೂ ಅಧಿಕ ಮಂದಿಗೆ ಗಾಯ
ಶಬರಿಮಲೆಗೆ ತೆರಳುತ್ತಿದ್ದ ಕರ್ನಾಟಕ ಯಾತ್ರಿಗಳಿದ್ದ ಬಸ್ ಅಪಘಾತ: 13ಕ್ಕೂ ಹೆಚ್ಚು ಮಂದಿಗೆ ಗಾಯ

ಕೊಟ್ಟಾಯಂ (ಕೇರಳ) : ಶಬರಿಮಲೆಗೆ ತೆರಳುತ್ತಿದ್ದ ಕರ್ನಾಟಕದ ಯಾತ್ರಿಕರ ಬಸ್​ ಅಪಘಾತಕ್ಕೀಡಾಗಿ 13ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಇಂದು ಬೆಳಿಗ್ಗೆ ಕೊಟ್ಟಾಯಂನಲ್ಲಿ ನಡೆದಿದೆ. 40 ಯಾತ್ರಾರ್ಥಿಗಳನ್ನು ಹೊತ್ತು ಸಾಗುತ್ತಿದ್ದ ಬಸ್​ ಇಲ್ಲಿನ ಎರುಮೇಲಿ ಸಮೀಪದ ಕನಮಾಲ ಬಳಿ ಅಪಘಾತ ಸಂಭವಿಸಿದೆ. ಬಸ್​ನಲ್ಲಿ ಕರ್ನಾಟಕದ ಕೋಲಾರ ಜಿಲ್ಲೆಯ ಶಬರಿಮಲೆ ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಈ ಬಗ್ಗೆ ಮಾಹಿತಿ ನೀಡಿದ ಪೊಲೀಸ್​ ಅಧಿಕಾರಿಗಳು, ಕೋಲಾರದಿಂದ ಶಬರಿಮಲೆಗೆ ತೆರಳುತ್ತಿದ್ದ ಯಾತ್ರಾರ್ಥಿಗಳ ಬಸ್​ ಕೊಟ್ಟಾಯಂನ ಎರಿಮೇಲಿ ಬಳಿ ಅಪಘಾತಕ್ಕೀಡಾಗಿದೆ ಎಂದು ತಿಳಿಸಿದ್ದಾರೆ. ಈ ಯಾತ್ರಾರ್ಥಿಗಳು ಪತ್ತನಂತಿಟ್ಟ ಜಿಲ್ಲೆಯ ಶಬರಿಮಲೆಗೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್​ ಅಪಘಾತಕ್ಕೆ ಒಳಗಾಗಿದೆ. ಬಸ್​ನಲ್ಲಿ 40 ಯಾತ್ರಾರ್ಥಿಗಳು ಸೇರಿ ಒಟ್ಟು 43 ಮಂದಿ ಇದ್ದರು. 13ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.

ಗಾಯಾಳುಗಳಲ್ಲಿ ನಾಲ್ವರನ್ನು ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ. ಮತ್ತೆ ನಾಲ್ವರನ್ನು ಇಲ್ಲಿನ ಜನರಲ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನೂ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ಇಲ್ಲಿ ಸಂಭವಿಸಿದ ಅಪಘಾತದ ಹಿನ್ನೆಲೆಯಲ್ಲಿ ಎರುಮೇಲಿ-ಶಬರಿಮಲ ಮಾರ್ಗದಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು. ಸಂಚಾರವನ್ನು ಪುನಃಸ್ಥಾಪಿಸಲು ಸ್ಥಳೀಯ ಆಡಳಿತ ಹಾಗೂ ಟ್ರಾಫಿಕ್​ ಪೊಲೀಸರು ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಟ್ರಾಫಿಕ್​ ಜಾಮ್​ನಿಂದಾಗಿ ವಾಹನ ಸವಾರರು, ಭಕ್ತರು ತೊಂದರೆಗೆ ಒಳಗಾದರು.

ಪ್ರಾಥಮಿಕ ವರದಿಗಳ ಪ್ರಕಾರ ಬಸ್ ಚಾಲಕ ನಿರಂತರವಾಗಿ ಚಾಲನೆ ಮಾಡಿದ್ದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೋಟಾರು ವಾಹನ ಇಲಾಖೆ ವಾಹನವನ್ನು ಪರಿಶೀಲನೆ ನಡೆಸಿ ವರದಿ ಸಲ್ಲಿಸುವ ಸಂಭವವಿದೆ.

ಇನ್ನು ಈ ಪ್ರದೇಶದಲ್ಲಿ ಆಗಾಗಾ ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ. ಹೀಗಾಗಿ ಕೇರಳ ಲೋಕೋಪಯೋಗಿ ಇಲಾಖೆ, ಚಾಲಕರಿಗೆ ಎಚ್ಚರಿಕೆ ನೀಡಲು ಅಲ್ಲಲ್ಲಿ ಕೆಲವು ಬೋರ್ಡ್‌ಗಳನ್ನು ಅಳವಡಿಸಿದೆ. ಈ ಬಗ್ಗೆ ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನೆರೆಯ ರಾಜ್ಯಗಳಿಂದ ಶಬರಿಮಲೆಗೆ ಆಗಮಿಸುವ ಹಲವಾರು ವಾಹನಗಳು ಮೂಲ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುತ್ತಿರುವುದನ್ನೂ ಕೂಡಾ ಕಂಡು ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ : ನೇತ್ರಾವತಿ ಸೇತುವೆಯಲ್ಲಿ ಸರಣಿ ಅಪಘಾತ : ಕೆಟ್ಟು ನಿಂತಿದ್ದ ಲಾರಿಗೆ ವಾಹನಗಳು ಡಿಕ್ಕಿ.. ಎರಡು ಗಂಟೆ ಸಂಚಾರ ವ್ಯತ್ಯಯ

ಶಬರಿಮಲೆಗೆ ತೆರಳುತ್ತಿದ್ದ ಕರ್ನಾಟಕ ಯಾತ್ರಿಗಳಿದ್ದ ಬಸ್ ಅಪಘಾತ: 13ಕ್ಕೂ ಹೆಚ್ಚು ಮಂದಿಗೆ ಗಾಯ

ಕೊಟ್ಟಾಯಂ (ಕೇರಳ) : ಶಬರಿಮಲೆಗೆ ತೆರಳುತ್ತಿದ್ದ ಕರ್ನಾಟಕದ ಯಾತ್ರಿಕರ ಬಸ್​ ಅಪಘಾತಕ್ಕೀಡಾಗಿ 13ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಇಂದು ಬೆಳಿಗ್ಗೆ ಕೊಟ್ಟಾಯಂನಲ್ಲಿ ನಡೆದಿದೆ. 40 ಯಾತ್ರಾರ್ಥಿಗಳನ್ನು ಹೊತ್ತು ಸಾಗುತ್ತಿದ್ದ ಬಸ್​ ಇಲ್ಲಿನ ಎರುಮೇಲಿ ಸಮೀಪದ ಕನಮಾಲ ಬಳಿ ಅಪಘಾತ ಸಂಭವಿಸಿದೆ. ಬಸ್​ನಲ್ಲಿ ಕರ್ನಾಟಕದ ಕೋಲಾರ ಜಿಲ್ಲೆಯ ಶಬರಿಮಲೆ ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಈ ಬಗ್ಗೆ ಮಾಹಿತಿ ನೀಡಿದ ಪೊಲೀಸ್​ ಅಧಿಕಾರಿಗಳು, ಕೋಲಾರದಿಂದ ಶಬರಿಮಲೆಗೆ ತೆರಳುತ್ತಿದ್ದ ಯಾತ್ರಾರ್ಥಿಗಳ ಬಸ್​ ಕೊಟ್ಟಾಯಂನ ಎರಿಮೇಲಿ ಬಳಿ ಅಪಘಾತಕ್ಕೀಡಾಗಿದೆ ಎಂದು ತಿಳಿಸಿದ್ದಾರೆ. ಈ ಯಾತ್ರಾರ್ಥಿಗಳು ಪತ್ತನಂತಿಟ್ಟ ಜಿಲ್ಲೆಯ ಶಬರಿಮಲೆಗೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್​ ಅಪಘಾತಕ್ಕೆ ಒಳಗಾಗಿದೆ. ಬಸ್​ನಲ್ಲಿ 40 ಯಾತ್ರಾರ್ಥಿಗಳು ಸೇರಿ ಒಟ್ಟು 43 ಮಂದಿ ಇದ್ದರು. 13ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.

ಗಾಯಾಳುಗಳಲ್ಲಿ ನಾಲ್ವರನ್ನು ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ. ಮತ್ತೆ ನಾಲ್ವರನ್ನು ಇಲ್ಲಿನ ಜನರಲ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನೂ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ಇಲ್ಲಿ ಸಂಭವಿಸಿದ ಅಪಘಾತದ ಹಿನ್ನೆಲೆಯಲ್ಲಿ ಎರುಮೇಲಿ-ಶಬರಿಮಲ ಮಾರ್ಗದಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು. ಸಂಚಾರವನ್ನು ಪುನಃಸ್ಥಾಪಿಸಲು ಸ್ಥಳೀಯ ಆಡಳಿತ ಹಾಗೂ ಟ್ರಾಫಿಕ್​ ಪೊಲೀಸರು ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಟ್ರಾಫಿಕ್​ ಜಾಮ್​ನಿಂದಾಗಿ ವಾಹನ ಸವಾರರು, ಭಕ್ತರು ತೊಂದರೆಗೆ ಒಳಗಾದರು.

ಪ್ರಾಥಮಿಕ ವರದಿಗಳ ಪ್ರಕಾರ ಬಸ್ ಚಾಲಕ ನಿರಂತರವಾಗಿ ಚಾಲನೆ ಮಾಡಿದ್ದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೋಟಾರು ವಾಹನ ಇಲಾಖೆ ವಾಹನವನ್ನು ಪರಿಶೀಲನೆ ನಡೆಸಿ ವರದಿ ಸಲ್ಲಿಸುವ ಸಂಭವವಿದೆ.

ಇನ್ನು ಈ ಪ್ರದೇಶದಲ್ಲಿ ಆಗಾಗಾ ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ. ಹೀಗಾಗಿ ಕೇರಳ ಲೋಕೋಪಯೋಗಿ ಇಲಾಖೆ, ಚಾಲಕರಿಗೆ ಎಚ್ಚರಿಕೆ ನೀಡಲು ಅಲ್ಲಲ್ಲಿ ಕೆಲವು ಬೋರ್ಡ್‌ಗಳನ್ನು ಅಳವಡಿಸಿದೆ. ಈ ಬಗ್ಗೆ ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನೆರೆಯ ರಾಜ್ಯಗಳಿಂದ ಶಬರಿಮಲೆಗೆ ಆಗಮಿಸುವ ಹಲವಾರು ವಾಹನಗಳು ಮೂಲ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುತ್ತಿರುವುದನ್ನೂ ಕೂಡಾ ಕಂಡು ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ : ನೇತ್ರಾವತಿ ಸೇತುವೆಯಲ್ಲಿ ಸರಣಿ ಅಪಘಾತ : ಕೆಟ್ಟು ನಿಂತಿದ್ದ ಲಾರಿಗೆ ವಾಹನಗಳು ಡಿಕ್ಕಿ.. ಎರಡು ಗಂಟೆ ಸಂಚಾರ ವ್ಯತ್ಯಯ

Last Updated : Oct 18, 2023, 1:32 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.