ETV Bharat / bharat

ಕಾಶ್ಮೀರ ಸಮಸ್ಯೆ ಇತ್ಯರ್ಥಕ್ಕೆ ಮೋದಿ ಜೊತೆ 'ಟಿವಿ ಸಂವಾದ' ಬಯಸಿದ ಪಾಕ್​ ಪ್ರಧಾನಿ

author img

By

Published : Feb 23, 2022, 10:23 AM IST

ಉಭಯ ನೆರೆ ರಾಷ್ಟ್ರಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಲು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ 'ಟಿವಿ ಚರ್ಚೆ' ನಡೆಸಲು ಬಯಸುವುದಾಗಿ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.

imran-khan
ಇಮ್ರಾನ್​ಖಾನ್​

ಇಸ್ಲಾಮಾಬಾದ್: ಉಭಯ ನೆರೆ ರಾಷ್ಟ್ರಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಲು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ 'ಟಿವಿ ಚರ್ಚೆ' ನಡೆಸಲು ಬಯಸುವುದಾಗಿ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.

ರಷ್ಯಾಗೆ ಭೇಟಿ ನೀಡಿರುವ ಇಮ್ರಾನ್​ಖಾನ್​ ಸರ್ಕಾರಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಈ ಹೇಳಿಕೆ ನೀಡಿದ್ದಾರೆ. ಪಾಕಿಸ್ತಾನ ಮತ್ತು ಭಾರತದ ಮಧ್ಯೆ ಇರುವ ಭಿನ್ನಾಭಿಪ್ರಾಯಗಳನ್ನು ಚರ್ಚೆಯ ಮೂಲಕ ಬಗೆಹರಿಸಿಕೊಂಡರೆ ಅದು ನಮಗೇ ಒಳ್ಳೆಯದು. ಹೀಗಾಗಿ ನಾನು ಮೋದಿ ಅವರ ಜೊತೆ ದೂರದರ್ಶನದಲ್ಲಿ ಸಂವಾದ ನಡೆಸಲು ಇಚ್ಚಿಸುತ್ತೇನೆ ಎಂದರು.

ತಾವು ಅಧಿಕಾರಕ್ಕೆ ಬಂದ ಬಳಿಕ ಭಾರತದ ಜೊತೆ ಕಾಶ್ಮೀರ ಸಮಸ್ಯೆ ಬಗೆಹರಿಸಿಕೊಳ್ಳಲು ಮನವಿ ಮಾಡಿದ್ದೆ. ಆದರೆ, ಭಾರತ ಸರ್ಕಾರ ಈ ಬಗ್ಗೆ ಸಕಾರಾತ್ಮವಾಗಿ ಸ್ಪಂದಿಸಲಿಲ್ಲ ಎಂದು ದೂರಿದರು.

ರಷ್ಯಾ- ಉಕ್ರೇನ್​ ಬಗ್ಗೆ ಹೇಳಿಕೆ: ರಷ್ಯಾ- ಉಕ್ರೇನ್​ ಮಧ್ಯೆ ನಡೆಯುತ್ತಿರುವ ಸಂಘರ್ಷಕ್ಕೆ ಮಾತುಕತೆಯೊಂದೇ ದಾರಿ. ಸೇನಾ ಸಂಘರ್ಷದ ಮೂಲಕ ಎಂದಿಗೂ ಸಮಸ್ಯೆ ಪರಿಹರಿಸಿಕೊಳ್ಳಲು ಸಾಧ್ಯವಿಲ್ಲ. ನನಗೆ ಮಿಲಿಟರಿ ಸಂಘರ್ಷಗಳಲ್ಲಿ ನಂಬಿಕೆಯಿಲ್ಲ. ರಾಜತಾಂತ್ರಿಕ ಮಾತುಕತೆ ಮೂಲಕ ರಾಷ್ಟ್ರಗಳ ಮಧ್ಯೆ ಇರುವ ಸಮಸ್ಯೆಗಳನ್ನು ಪರಿಹಾರ ಮಾಡಿಕೊಳ್ಳಬಹುದು. ಸಂಘರ್ಷಗಳನ್ನು ನಂಬಿದ ರಾಷ್ಟ್ರಗಳು ಇತಿಹಾಸವನ್ನು ಅರಿತಿಲ್ಲ ಎಂಬುದನ್ನು ತೋರಿಸುತ್ತದೆ ಎಂದಿದ್ದಾರೆ.

ಇದಲ್ಲದೇ, ಉಕ್ರೇನ್ ಮತ್ತು ರಷ್ಯಾದ ಮಧ್ಯೆ ಯುದ್ಧ ಸಂಭವಿಸಿದ್ದೇ ಆದಲ್ಲಿ ಜನರು ಅದರ ಪರಿಣಾಮಗಳನ್ನು ಮುಂದಿನ ದಿನಗಳಲ್ಲಿ ಅನುಭವಿಸಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉಕ್ರೇನ್​ನಿಂದ ಭಾರತಕ್ಕೆ ಬಂದಿಳಿದ 241 ಭಾರತೀಯರು: ಹೇಳಿದ್ದೇನು?

ಇಸ್ಲಾಮಾಬಾದ್: ಉಭಯ ನೆರೆ ರಾಷ್ಟ್ರಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಲು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ 'ಟಿವಿ ಚರ್ಚೆ' ನಡೆಸಲು ಬಯಸುವುದಾಗಿ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.

ರಷ್ಯಾಗೆ ಭೇಟಿ ನೀಡಿರುವ ಇಮ್ರಾನ್​ಖಾನ್​ ಸರ್ಕಾರಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಈ ಹೇಳಿಕೆ ನೀಡಿದ್ದಾರೆ. ಪಾಕಿಸ್ತಾನ ಮತ್ತು ಭಾರತದ ಮಧ್ಯೆ ಇರುವ ಭಿನ್ನಾಭಿಪ್ರಾಯಗಳನ್ನು ಚರ್ಚೆಯ ಮೂಲಕ ಬಗೆಹರಿಸಿಕೊಂಡರೆ ಅದು ನಮಗೇ ಒಳ್ಳೆಯದು. ಹೀಗಾಗಿ ನಾನು ಮೋದಿ ಅವರ ಜೊತೆ ದೂರದರ್ಶನದಲ್ಲಿ ಸಂವಾದ ನಡೆಸಲು ಇಚ್ಚಿಸುತ್ತೇನೆ ಎಂದರು.

ತಾವು ಅಧಿಕಾರಕ್ಕೆ ಬಂದ ಬಳಿಕ ಭಾರತದ ಜೊತೆ ಕಾಶ್ಮೀರ ಸಮಸ್ಯೆ ಬಗೆಹರಿಸಿಕೊಳ್ಳಲು ಮನವಿ ಮಾಡಿದ್ದೆ. ಆದರೆ, ಭಾರತ ಸರ್ಕಾರ ಈ ಬಗ್ಗೆ ಸಕಾರಾತ್ಮವಾಗಿ ಸ್ಪಂದಿಸಲಿಲ್ಲ ಎಂದು ದೂರಿದರು.

ರಷ್ಯಾ- ಉಕ್ರೇನ್​ ಬಗ್ಗೆ ಹೇಳಿಕೆ: ರಷ್ಯಾ- ಉಕ್ರೇನ್​ ಮಧ್ಯೆ ನಡೆಯುತ್ತಿರುವ ಸಂಘರ್ಷಕ್ಕೆ ಮಾತುಕತೆಯೊಂದೇ ದಾರಿ. ಸೇನಾ ಸಂಘರ್ಷದ ಮೂಲಕ ಎಂದಿಗೂ ಸಮಸ್ಯೆ ಪರಿಹರಿಸಿಕೊಳ್ಳಲು ಸಾಧ್ಯವಿಲ್ಲ. ನನಗೆ ಮಿಲಿಟರಿ ಸಂಘರ್ಷಗಳಲ್ಲಿ ನಂಬಿಕೆಯಿಲ್ಲ. ರಾಜತಾಂತ್ರಿಕ ಮಾತುಕತೆ ಮೂಲಕ ರಾಷ್ಟ್ರಗಳ ಮಧ್ಯೆ ಇರುವ ಸಮಸ್ಯೆಗಳನ್ನು ಪರಿಹಾರ ಮಾಡಿಕೊಳ್ಳಬಹುದು. ಸಂಘರ್ಷಗಳನ್ನು ನಂಬಿದ ರಾಷ್ಟ್ರಗಳು ಇತಿಹಾಸವನ್ನು ಅರಿತಿಲ್ಲ ಎಂಬುದನ್ನು ತೋರಿಸುತ್ತದೆ ಎಂದಿದ್ದಾರೆ.

ಇದಲ್ಲದೇ, ಉಕ್ರೇನ್ ಮತ್ತು ರಷ್ಯಾದ ಮಧ್ಯೆ ಯುದ್ಧ ಸಂಭವಿಸಿದ್ದೇ ಆದಲ್ಲಿ ಜನರು ಅದರ ಪರಿಣಾಮಗಳನ್ನು ಮುಂದಿನ ದಿನಗಳಲ್ಲಿ ಅನುಭವಿಸಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉಕ್ರೇನ್​ನಿಂದ ಭಾರತಕ್ಕೆ ಬಂದಿಳಿದ 241 ಭಾರತೀಯರು: ಹೇಳಿದ್ದೇನು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.