ETV Bharat / bharat

Parliament Session: ಸಂಸತ್ತಿನಲ್ಲಿ ಪ್ರತಿಧ್ವನಿಸಿದ ಮಣಿಪುರ ಹಿಂಸಾಚಾರ; ಉಭಯ ಸದನಗಳಲ್ಲಿ ಪ್ರಧಾನಿ ಹೇಳಿಕೆಗೆ ಪ್ರತಿಪಕ್ಷಗಳ ಪಟ್ಟು

author img

By

Published : Jul 24, 2023, 2:29 PM IST

Parliament Session: ಮಣಿಪುರ ಹಿಂಸಾಚಾರದ ಬಗ್ಗೆ ಹೇಳಿಕೆ ನೀಡುವಂತೆ ಪ್ರತಿಪಕ್ಷಗಳು ಪಟ್ಟು ಹಿಡಿದಿದ್ದು, ಉಭಯಸದನಗಳ ಕಲಾಪವನ್ನು ಮುಂದೂಡಲಾಯಿತು.

opposition-demand-for-pm-statement-on-manipur-violence-triggers-rajya-sabha-adjournment
ಮಣಿಪುರ ಹಿಂಸಾಚಾರದ ಬಗ್ಗೆ ಹೇಳಿಕೆ ನೀಡುವಂತೆ ಪ್ರತಿಪಕ್ಷಗಳ ಪಟ್ಟು : ಉಭಯ ಸದನಗಳ ಕಲಾಪ ಮುಂದೂಡಿಕೆ

ನವದೆಹಲಿ : ಉಭಯ ಸದನಗಳಲ್ಲಿ ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿಕೆ ನೀಡಬೇಕು ಮತ್ತು ಪ್ರಧಾನಿಗಳು ಸದನಕ್ಕೆ ಬರಬೇಕೆಂದು ಒತ್ತಾಯಿಸಿ ಪ್ರತಿಪಕ್ಷಗಳು ಇಂದು ಪ್ರತಿಭಟನೆ ನಡೆಸಿದವು. ರಾಜ್ಯಸಭಾಧ್ಯಕ್ಷರು ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.

ಉಭಯ ಸದನಗಳ ಕಲಾಪ ಶುರುವಾಗುತ್ತಲೇ ಪ್ರತಿಪಕ್ಷಗಳು ಮಣಿಪುರ ಹಿಂಸಾಚಾರದ ಬಗ್ಗೆ ಚರ್ಚೆ ನಡೆಸುವಂತೆ ಒತ್ತಾಯಿಸಿದವು. ರಾಜ್ಯಸಭಾಧ್ಯಕ್ಷ ಜಗದೀಪ್​ ಧನ್​ಕರ್ ಅವರು ಈ ಸಂಬಂಧ ನಿಯಮ 267ರ ಪ್ರಕಾದ 27 ನೋಟಿಸ್​ಗಳನ್ನು ಪಡೆದಿರುವುದಾಗಿ ಹೇಳಿದರು​ ಟಿಎಂಸಿ ನಾಯಕ ಡೆರೆಕ್​ ಓಬ್ರೈನ್ ಹಿಂಸಾಚಾರದ ಬಗ್ಗೆ ಪ್ರಸ್ತಾಪಿಸಿದಾಗ, ಈ ಬಗ್ಗೆ ಎಚ್ಚರಿಕೆ ನೀಡಿ ಕಲಾಪ ಮುಂದೂಡಿಕೆ ಮಾಡಿದರು.

ಲೋಕಸಭೆಯಲ್ಲೂ ಪ್ರತಿಪಕ್ಷಗಳು ಮಣಿಪುರ ಹಿಂಸಾಚಾರದ ಬಗ್ಗೆ ಚರ್ಚೆ ನಡೆಸುವಂತೆ ಪಟ್ಟು ಹಿಡಿದಿದ್ದು, ಕಲಾಪವನ್ನು 2 ಗಂಟೆವರೆಗೆ ಮುಂದೂಡಿಕೆ ಮಾಡಲಾಯಿತು.

ಆಪ್​ ಸಂಸದ ಸಂಜಯ್​ ಸಿಂಗ್​ ​ಅಮಾನತು: ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್​ ಸಿಂಗ್​ ​ ಅವರನ್ನು ಮುಂಗಾರು ಅಧಿವೇಶನ ಮುಗಿಯುವವರಿಗೆ ಅಮಾನತು ಮಾಡಲಾಗಿದೆ. ರಾಜ್ಯಸಭೆಯ ನಿಯಮಗಳನ್ನು ಉಲ್ಲಂಘಿಸಿದ್ದಕ್ಕೆ ಸಿಂಗ್​ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಸಭಾ ನಾಯಕ ಪಿಯೂಷ್​ ಗೋಯಲ್​ ಅವರು ಅಮಾನತುಗೊಳಿಸುವ ಬಗ್ಗೆ ಮಂಡಿಸಿದ ಪ್ರಸ್ತಾಪವನ್ನು ಅಂಗೀಕರಿಸಲಾಯಿತು. ಇದಕ್ಕೂ ಮೊದಲು ರಾಜ್ಯಸಭಾ ಅಧ್ಯಕ್ಷರಾದ ಜಗದೀಪ್​ ಧನ್​ಕರ್​, ಅಶಿಸ್ತಿನ ವರ್ತನೆಗೆ ಎಚ್ಚರಿಕೆ ನೀಡಿದ್ದರು.

ರಾಜ್ಯಸಭೆ ಕಲಾಪ 12 ಗಂಟೆಗೆ ಮತ್ತೆ ಪ್ರಾರಂಭವಾದಾಗ ವಿಪಕ್ಷಗಳು ಗದ್ದಲ ಮುಂದುವರೆಸಿದವು. ವಿಪಕ್ಷ್ಳ ನಾಯಕರು ಪ್ರಧಾನಿ ನರೇಂದ್ರ ಮೋದಿ ಮಣಿಪುರ ಹಿಂಸಾಚಾರದ ಬಗ್ಗೆ ಹೇಳಿಕೆ ನೀಡುವಂತೆ ಬಿಗಿ ಪಟ್ಟುಹಿಡಿದರು.

ಇದನ್ನೂ ಓದಿ : ಮಣಿಪುರ ಹಿಂಸಾಚಾರ ಕುರಿತು ಪ್ರಧಾನಿ ಮೋದಿ ಹೇಳಿಕೆಗೆ ಒತ್ತಾಯಿಸಿ ಪ್ರತಿಪಕ್ಷಗಳ ಪ್ರತಿಭಟನೆ - VIDEO

ನವದೆಹಲಿ : ಉಭಯ ಸದನಗಳಲ್ಲಿ ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿಕೆ ನೀಡಬೇಕು ಮತ್ತು ಪ್ರಧಾನಿಗಳು ಸದನಕ್ಕೆ ಬರಬೇಕೆಂದು ಒತ್ತಾಯಿಸಿ ಪ್ರತಿಪಕ್ಷಗಳು ಇಂದು ಪ್ರತಿಭಟನೆ ನಡೆಸಿದವು. ರಾಜ್ಯಸಭಾಧ್ಯಕ್ಷರು ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.

ಉಭಯ ಸದನಗಳ ಕಲಾಪ ಶುರುವಾಗುತ್ತಲೇ ಪ್ರತಿಪಕ್ಷಗಳು ಮಣಿಪುರ ಹಿಂಸಾಚಾರದ ಬಗ್ಗೆ ಚರ್ಚೆ ನಡೆಸುವಂತೆ ಒತ್ತಾಯಿಸಿದವು. ರಾಜ್ಯಸಭಾಧ್ಯಕ್ಷ ಜಗದೀಪ್​ ಧನ್​ಕರ್ ಅವರು ಈ ಸಂಬಂಧ ನಿಯಮ 267ರ ಪ್ರಕಾದ 27 ನೋಟಿಸ್​ಗಳನ್ನು ಪಡೆದಿರುವುದಾಗಿ ಹೇಳಿದರು​ ಟಿಎಂಸಿ ನಾಯಕ ಡೆರೆಕ್​ ಓಬ್ರೈನ್ ಹಿಂಸಾಚಾರದ ಬಗ್ಗೆ ಪ್ರಸ್ತಾಪಿಸಿದಾಗ, ಈ ಬಗ್ಗೆ ಎಚ್ಚರಿಕೆ ನೀಡಿ ಕಲಾಪ ಮುಂದೂಡಿಕೆ ಮಾಡಿದರು.

ಲೋಕಸಭೆಯಲ್ಲೂ ಪ್ರತಿಪಕ್ಷಗಳು ಮಣಿಪುರ ಹಿಂಸಾಚಾರದ ಬಗ್ಗೆ ಚರ್ಚೆ ನಡೆಸುವಂತೆ ಪಟ್ಟು ಹಿಡಿದಿದ್ದು, ಕಲಾಪವನ್ನು 2 ಗಂಟೆವರೆಗೆ ಮುಂದೂಡಿಕೆ ಮಾಡಲಾಯಿತು.

ಆಪ್​ ಸಂಸದ ಸಂಜಯ್​ ಸಿಂಗ್​ ​ಅಮಾನತು: ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್​ ಸಿಂಗ್​ ​ ಅವರನ್ನು ಮುಂಗಾರು ಅಧಿವೇಶನ ಮುಗಿಯುವವರಿಗೆ ಅಮಾನತು ಮಾಡಲಾಗಿದೆ. ರಾಜ್ಯಸಭೆಯ ನಿಯಮಗಳನ್ನು ಉಲ್ಲಂಘಿಸಿದ್ದಕ್ಕೆ ಸಿಂಗ್​ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಸಭಾ ನಾಯಕ ಪಿಯೂಷ್​ ಗೋಯಲ್​ ಅವರು ಅಮಾನತುಗೊಳಿಸುವ ಬಗ್ಗೆ ಮಂಡಿಸಿದ ಪ್ರಸ್ತಾಪವನ್ನು ಅಂಗೀಕರಿಸಲಾಯಿತು. ಇದಕ್ಕೂ ಮೊದಲು ರಾಜ್ಯಸಭಾ ಅಧ್ಯಕ್ಷರಾದ ಜಗದೀಪ್​ ಧನ್​ಕರ್​, ಅಶಿಸ್ತಿನ ವರ್ತನೆಗೆ ಎಚ್ಚರಿಕೆ ನೀಡಿದ್ದರು.

ರಾಜ್ಯಸಭೆ ಕಲಾಪ 12 ಗಂಟೆಗೆ ಮತ್ತೆ ಪ್ರಾರಂಭವಾದಾಗ ವಿಪಕ್ಷಗಳು ಗದ್ದಲ ಮುಂದುವರೆಸಿದವು. ವಿಪಕ್ಷ್ಳ ನಾಯಕರು ಪ್ರಧಾನಿ ನರೇಂದ್ರ ಮೋದಿ ಮಣಿಪುರ ಹಿಂಸಾಚಾರದ ಬಗ್ಗೆ ಹೇಳಿಕೆ ನೀಡುವಂತೆ ಬಿಗಿ ಪಟ್ಟುಹಿಡಿದರು.

ಇದನ್ನೂ ಓದಿ : ಮಣಿಪುರ ಹಿಂಸಾಚಾರ ಕುರಿತು ಪ್ರಧಾನಿ ಮೋದಿ ಹೇಳಿಕೆಗೆ ಒತ್ತಾಯಿಸಿ ಪ್ರತಿಪಕ್ಷಗಳ ಪ್ರತಿಭಟನೆ - VIDEO

ETV Bharat Logo

Copyright © 2024 Ushodaya Enterprises Pvt. Ltd., All Rights Reserved.