ETV Bharat / bharat

Shocking Video: ಪಾದಚಾರಿಗೆ ಡಿಕ್ಕಿ ಹೊಡೆದ ಕಾರು.. ವ್ಯಕ್ತಿ ಸ್ಥಳದಲ್ಲೇ ಸಾವು - cctv footage

ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ತೆರಳುತ್ತಿದ್ದ ಪಾದಚಾರಿಗೆ ಅತಿ ವೇಗವಾಗಿ ಬರುತ್ತಿದ್ದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ತೂರಿಬಿದ್ದಿದ್ದಾನೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

pedestrian-killed-by-speeding-car-shocking-cctv-footage
ಪಾದಚಾರಿಗೆ ಡಿಕ್ಕಿ ಹೊಡೆದ ಕಾರು..ವ್ಯಕ್ತಿ ಸ್ಥಳದಲ್ಲೇ ಸಾವು
author img

By

Published : Sep 22, 2021, 5:17 PM IST

Updated : Sep 22, 2021, 5:37 PM IST

ಚೆನ್ನೈ (ತಮಿಳುನಾಡು): ಬೆಳ್ಳಂಬೆಳಗ್ಗೆ ಆಫೀಸ್​ಗೆ ಹೊರಟಿದ್ದ ವ್ಯಕ್ತಿಯೋರ್ವನಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಲ್ಲಿನ ಜಿಎಸ್​​​ಟಿ ರಸ್ತೆಯ ತಂಬರಂ ಬಸ್ ನಿಲ್ದಾಣದ ಬಳಿ ಸಂಭವಿಸಿದೆ.

ಮೃತನನ್ನು ಕಡಪೇರಿ ನಿವಾಸಿ ಅರ್ಜುನ್ (30) ಎಂದು ಗುರುತಿಸಲಾಗಿದ್ದು, ಈತ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ರಸ್ತೆ ಪಕ್ಕದಲ್ಲಿ ನಡೆದು ಹೋಗುವಾಗ ಹಿಂದಿನಿಂದ ಬಂದ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಅರ್ಜುನ್ ಸ್ವಲ್ಪ ದೂರ ತೂರಿ ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಪಾದಚಾರಿಗೆ ಡಿಕ್ಕಿ ಹೊಡೆದ ಕಾರು.. ಪಾದಚಾರಿ ಸ್ಥಳದಲ್ಲೇ ಸಾವು

ಕಾರು ಚಾಲಕ ಜಯಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಕ್ರೋಮ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರಾಯಚೂರು: ಅನುಮಾನಾಸ್ಪದವಾಗಿ‌ ಯುವಕನ ಶವ ಪತ್ತೆ

ಚೆನ್ನೈ (ತಮಿಳುನಾಡು): ಬೆಳ್ಳಂಬೆಳಗ್ಗೆ ಆಫೀಸ್​ಗೆ ಹೊರಟಿದ್ದ ವ್ಯಕ್ತಿಯೋರ್ವನಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಲ್ಲಿನ ಜಿಎಸ್​​​ಟಿ ರಸ್ತೆಯ ತಂಬರಂ ಬಸ್ ನಿಲ್ದಾಣದ ಬಳಿ ಸಂಭವಿಸಿದೆ.

ಮೃತನನ್ನು ಕಡಪೇರಿ ನಿವಾಸಿ ಅರ್ಜುನ್ (30) ಎಂದು ಗುರುತಿಸಲಾಗಿದ್ದು, ಈತ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ರಸ್ತೆ ಪಕ್ಕದಲ್ಲಿ ನಡೆದು ಹೋಗುವಾಗ ಹಿಂದಿನಿಂದ ಬಂದ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಅರ್ಜುನ್ ಸ್ವಲ್ಪ ದೂರ ತೂರಿ ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಪಾದಚಾರಿಗೆ ಡಿಕ್ಕಿ ಹೊಡೆದ ಕಾರು.. ಪಾದಚಾರಿ ಸ್ಥಳದಲ್ಲೇ ಸಾವು

ಕಾರು ಚಾಲಕ ಜಯಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಕ್ರೋಮ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರಾಯಚೂರು: ಅನುಮಾನಾಸ್ಪದವಾಗಿ‌ ಯುವಕನ ಶವ ಪತ್ತೆ

Last Updated : Sep 22, 2021, 5:37 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.