ETV Bharat / bharat

ಅಯೋಧ್ಯೆ ಶ್ರೀರಾಮ ಮಂದಿರ ದ್ವಾರ ಸ್ತಂಭಕ್ಕೆ ಪೂಜೆ

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಕಾಮಗಾರಿ ವೇಗದಿಂದ ಸಾಗುತ್ತಿದೆ. ಮಂದಿರ ಪ್ರವೇಶ ದ್ವಾರದ ಚೌಕಟ್ಟಿನ ಚಿತ್ರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.

author img

By

Published : Feb 9, 2023, 7:20 PM IST

Pictures of entrance door plinth of Lord Shri Ram temple at Ayodhya released
Pictures of entrance door plinth of Lord Shri Ram temple at Ayodhya released

ಅಯೋಧ್ಯೆ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ನಡೆಯುತ್ತಿದೆ. ಏತನ್ಮಧ್ಯೆ ಬುಧವಾರದಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರವೇಶ ದ್ವಾರದ ಸ್ತಂಭದ (ಚೌಕಟ್ಟು) ಚಿತ್ರಗಳನ್ನು ಬಿಡುಗಡೆ ಮಾಡಿದೆ. ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಸ್ತಂಭದ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಸ್ತಂಭದ ಮಧ್ಯದಲ್ಲಿ ಕಲಶವನ್ನು (ಕುಂಡ) ಇಟ್ಟು ಪೂಜೆ ಸಲ್ಲಿಸಲಾಯಿತು. ಭಗವಾನ್ ಶ್ರೀರಾಮ ಮಂದಿರದ ನಿರ್ಮಾಣಕ್ಕೆ ಸಂಬಂಧಿಸಿದ ಎಂಜಿನಿಯರ್‌ಗಳು ಮತ್ತು ಇತರರು ಸಹ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿಯಾಗಿರುವ ರೈ ಅವರು ಕೆಲವು ಛಾಯಾಚಿತ್ರಗಳನ್ನು ಹಂಚಿಕೊಂಡಿದ್ದು, ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಮೆಸೇಜ್ ಮಾಡಿದ್ದಾರೆ. ಗರ್ಭಗುಡಿಯ ಪ್ರವೇಶ ದ್ವಾರದ ಸ್ತಂಭ ಅಥವಾ ಎತ್ತರದ ವೇದಿಕೆಯ ನಿರ್ಮಾಣವು ಪೂಜೆಯೊಂದಿಗೆ ಮುಗಿದಿದೆ ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಿತೀಶ್ ಕುಮಾರ್, ಎಲ್ ಅಂಡ್ ಟಿಯಿಂದ ವಿನೋದ್ ಮೆಹ್ತಾ, ಟಾಟಾದಿಂದ ವಿನೋದ್ ಶುಕ್ಲಾ, ಟ್ರಸ್ಟಿ ಸದಸ್ಯ ಅನಿಲ್ ಮಿಶ್ರಾ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಶ್ರೀರಾಮ ಜನ್ಮಭೂಮಿ ಕಾಂಪ್ಲೆಕ್ಸ್‌ನ ನೆಲ ಅಂತಸ್ತಿನ ಶೇ 70ಕ್ಕೂ ಹೆಚ್ಚು ಕಾಮಗಾರಿ ಪೂರ್ಣಗೊಂಡಿದೆ. ದೇಗುಲದ ಆವರಣದಲ್ಲಿ ಆವರಣ ಗೋಡೆ ನಿರ್ಮಾಣ ಕಾಮಗಾರಿ ತ್ವರಿತ ಗತಿಯಲ್ಲಿ ನಡೆಯುತ್ತಿದೆ. ಆದರೆ ನೆಲ ಅಂತಸ್ತಿನ ಮೇಲ್ಛಾವಣಿಯನ್ನು ಹಾಕಲು ಬೇಕಾದ ಪಿಲ್ಲರ್‌ಗಳ ನಿರ್ಮಾಣ ಕಾರ್ಯ ಸುಮಾರು 80 ಪ್ರತಿಶತದಷ್ಟು ಮುಗಿದಿದೆ.

ಅಲ್ಲದೆ, ಆವರಣದಲ್ಲಿರುವ ಮುಖ್ಯ ದೇವಾಲಯದ ಪಕ್ಕದಲ್ಲಿರುವ ಪುರಾತನ ಫಕೀರೆ ರಾಮ ಮಂದಿರವನ್ನು ಕೆಡವುವ ಕಾರ್ಯ ಗುರುವಾರ ನಡೆಯಲಿದೆ ಎನ್ನಲಾಗಿದೆ. ಫಕೀರೆ ರಾಮ ಮಂದಿರದ ಕೆಲ ಭಾಗವು ಮುಖ್ಯ ದೇವಾಲಯದ ನಿರ್ಮಾಣ ಕಾರ್ಯಕ್ಕೆ ಅಡ್ಡಿಯಾಗುತ್ತಿದೆ. ಜನವರಿ 14, 2024 ರೊಳಗೆ ಗರ್ಭಗುಡಿಯಲ್ಲಿ ಭಗವಾನ್ ರಾಮ್ ಲಲ್ಲಾ ವಿಗ್ರಹವನ್ನು ಸ್ಥಾಪಿಸಲಾಗುವುದು.

ಮಥುರಾ ಬಗ್ಗೆ ಮಾತನಾಡಿದ ಸಿಎಂ ಯೋಗಿ ಆದಿತ್ಯನಾಥ್: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಶೇಕಡಾ 70 ಕ್ಕೂ ಹೆಚ್ಚು ಕಾಮಗಾರಿ ಪೂರ್ಣಗೊಂಡಿದೆ. 2024ರ ಜನವರಿಯಲ್ಲಿ ರಾಮಮಂದಿರ ಉದ್ಘಾಟನೆಯಾಗಲಿದೆ. ಈ ಕೆಲಸವನ್ನು ನಿರಂತರವಾಗಿ ಪರಿಶೀಲಿಸಲಾಗುತ್ತಿದೆ. ಸಿಎಂ ಯೋಗಿ ಆದಿತ್ಯನಾಥ್ ಅವರೇ ಪ್ರತಿ ತಿಂಗಳು ಅಯೋಧ್ಯೆಗೆ ಹೋಗುತ್ತಿದ್ದಾರೆ. ಮತ್ತೊಂದೆಡೆ, ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥ ದೇವಾಲಯದ ಕಾರಿಡಾರ್ ಅನ್ನು ಡಿಸೆಂಬರ್ 2021 ರಲ್ಲಿ ಉದ್ಘಾಟಿಸಲಾಗಿದೆ. ಇದಾದ ನಂತರ ಈಗ ಜನ ಮಥುರಾ ಬಗ್ಗೆ ಚರ್ಚಿಸುತ್ತಿದ್ದಾರೆ. ಇದಕ್ಕೆ ಸಿಎಂ ಯೋಗಿ ಉತ್ತರ ನೀಡಿದ್ದಾರೆ.

ಕಾಶಿಯಲ್ಲಿ ಕಾಶಿ ವಿಶ್ವನಾಥ ಧಾಮ ಆಗಿರುವುದನ್ನು ನೀವು ನೋಡುತ್ತಿದ್ದೀರಿ. ಇಂದು ಕಾಶಿ ಇಡೀ ವಿಶ್ವದಲ್ಲೇ ಆಕರ್ಷಣೆಯ ಕೇಂದ್ರವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರೇ ದೇಶದ ಸಂಸತ್ತಿನಲ್ಲಿ ಕಾಶಿಯನ್ನು ಪ್ರತಿನಿಧಿಸುತ್ತಿದ್ದಾರೆ. ಮಥುರಾದಲ್ಲಿ ಬ್ರಿಜ್ ತೀರ್ಥ ಅಭಿವೃದ್ಧಿ ಪರಿಷತ್ತು ಅಭಿವೃದ್ಧಿ ಕಾರ್ಯಕ್ರಮಗಳೊಂದಿಗೆ ವೇಗವಾಗಿ ಮುನ್ನಡೆಯುತ್ತಿದೆ. ಅಲ್ಲಿನ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿಕೊಂಡು, ಅದರ ಅಭಿವೃದ್ಧಿಗೆ ಸರ್ಕಾರ ಎಲ್ಲಾ ರೀತಿಯ ಕಾರ್ಯಕ್ರಮಗಳನ್ನು ನಡೆಸುತ್ತಿದೆ ಎಂದು ಸಿಎಂ ಯೋಗಿ ಹೇಳಿದರು.

ಇದನ್ನೂ ಓದಿ: ಮುಂದಿನ ಸಂಕ್ರಾಂತಿ ಒಳಗಾಗಿ ರಾಮಮಂದಿರದ ಕಾಮಗಾರಿ ಪೂರ್ಣ: ಪೇಜಾವರ ಶ್ರೀ

ಅಯೋಧ್ಯೆ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ನಡೆಯುತ್ತಿದೆ. ಏತನ್ಮಧ್ಯೆ ಬುಧವಾರದಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರವೇಶ ದ್ವಾರದ ಸ್ತಂಭದ (ಚೌಕಟ್ಟು) ಚಿತ್ರಗಳನ್ನು ಬಿಡುಗಡೆ ಮಾಡಿದೆ. ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಸ್ತಂಭದ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಸ್ತಂಭದ ಮಧ್ಯದಲ್ಲಿ ಕಲಶವನ್ನು (ಕುಂಡ) ಇಟ್ಟು ಪೂಜೆ ಸಲ್ಲಿಸಲಾಯಿತು. ಭಗವಾನ್ ಶ್ರೀರಾಮ ಮಂದಿರದ ನಿರ್ಮಾಣಕ್ಕೆ ಸಂಬಂಧಿಸಿದ ಎಂಜಿನಿಯರ್‌ಗಳು ಮತ್ತು ಇತರರು ಸಹ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿಯಾಗಿರುವ ರೈ ಅವರು ಕೆಲವು ಛಾಯಾಚಿತ್ರಗಳನ್ನು ಹಂಚಿಕೊಂಡಿದ್ದು, ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಮೆಸೇಜ್ ಮಾಡಿದ್ದಾರೆ. ಗರ್ಭಗುಡಿಯ ಪ್ರವೇಶ ದ್ವಾರದ ಸ್ತಂಭ ಅಥವಾ ಎತ್ತರದ ವೇದಿಕೆಯ ನಿರ್ಮಾಣವು ಪೂಜೆಯೊಂದಿಗೆ ಮುಗಿದಿದೆ ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಿತೀಶ್ ಕುಮಾರ್, ಎಲ್ ಅಂಡ್ ಟಿಯಿಂದ ವಿನೋದ್ ಮೆಹ್ತಾ, ಟಾಟಾದಿಂದ ವಿನೋದ್ ಶುಕ್ಲಾ, ಟ್ರಸ್ಟಿ ಸದಸ್ಯ ಅನಿಲ್ ಮಿಶ್ರಾ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಶ್ರೀರಾಮ ಜನ್ಮಭೂಮಿ ಕಾಂಪ್ಲೆಕ್ಸ್‌ನ ನೆಲ ಅಂತಸ್ತಿನ ಶೇ 70ಕ್ಕೂ ಹೆಚ್ಚು ಕಾಮಗಾರಿ ಪೂರ್ಣಗೊಂಡಿದೆ. ದೇಗುಲದ ಆವರಣದಲ್ಲಿ ಆವರಣ ಗೋಡೆ ನಿರ್ಮಾಣ ಕಾಮಗಾರಿ ತ್ವರಿತ ಗತಿಯಲ್ಲಿ ನಡೆಯುತ್ತಿದೆ. ಆದರೆ ನೆಲ ಅಂತಸ್ತಿನ ಮೇಲ್ಛಾವಣಿಯನ್ನು ಹಾಕಲು ಬೇಕಾದ ಪಿಲ್ಲರ್‌ಗಳ ನಿರ್ಮಾಣ ಕಾರ್ಯ ಸುಮಾರು 80 ಪ್ರತಿಶತದಷ್ಟು ಮುಗಿದಿದೆ.

ಅಲ್ಲದೆ, ಆವರಣದಲ್ಲಿರುವ ಮುಖ್ಯ ದೇವಾಲಯದ ಪಕ್ಕದಲ್ಲಿರುವ ಪುರಾತನ ಫಕೀರೆ ರಾಮ ಮಂದಿರವನ್ನು ಕೆಡವುವ ಕಾರ್ಯ ಗುರುವಾರ ನಡೆಯಲಿದೆ ಎನ್ನಲಾಗಿದೆ. ಫಕೀರೆ ರಾಮ ಮಂದಿರದ ಕೆಲ ಭಾಗವು ಮುಖ್ಯ ದೇವಾಲಯದ ನಿರ್ಮಾಣ ಕಾರ್ಯಕ್ಕೆ ಅಡ್ಡಿಯಾಗುತ್ತಿದೆ. ಜನವರಿ 14, 2024 ರೊಳಗೆ ಗರ್ಭಗುಡಿಯಲ್ಲಿ ಭಗವಾನ್ ರಾಮ್ ಲಲ್ಲಾ ವಿಗ್ರಹವನ್ನು ಸ್ಥಾಪಿಸಲಾಗುವುದು.

ಮಥುರಾ ಬಗ್ಗೆ ಮಾತನಾಡಿದ ಸಿಎಂ ಯೋಗಿ ಆದಿತ್ಯನಾಥ್: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಶೇಕಡಾ 70 ಕ್ಕೂ ಹೆಚ್ಚು ಕಾಮಗಾರಿ ಪೂರ್ಣಗೊಂಡಿದೆ. 2024ರ ಜನವರಿಯಲ್ಲಿ ರಾಮಮಂದಿರ ಉದ್ಘಾಟನೆಯಾಗಲಿದೆ. ಈ ಕೆಲಸವನ್ನು ನಿರಂತರವಾಗಿ ಪರಿಶೀಲಿಸಲಾಗುತ್ತಿದೆ. ಸಿಎಂ ಯೋಗಿ ಆದಿತ್ಯನಾಥ್ ಅವರೇ ಪ್ರತಿ ತಿಂಗಳು ಅಯೋಧ್ಯೆಗೆ ಹೋಗುತ್ತಿದ್ದಾರೆ. ಮತ್ತೊಂದೆಡೆ, ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥ ದೇವಾಲಯದ ಕಾರಿಡಾರ್ ಅನ್ನು ಡಿಸೆಂಬರ್ 2021 ರಲ್ಲಿ ಉದ್ಘಾಟಿಸಲಾಗಿದೆ. ಇದಾದ ನಂತರ ಈಗ ಜನ ಮಥುರಾ ಬಗ್ಗೆ ಚರ್ಚಿಸುತ್ತಿದ್ದಾರೆ. ಇದಕ್ಕೆ ಸಿಎಂ ಯೋಗಿ ಉತ್ತರ ನೀಡಿದ್ದಾರೆ.

ಕಾಶಿಯಲ್ಲಿ ಕಾಶಿ ವಿಶ್ವನಾಥ ಧಾಮ ಆಗಿರುವುದನ್ನು ನೀವು ನೋಡುತ್ತಿದ್ದೀರಿ. ಇಂದು ಕಾಶಿ ಇಡೀ ವಿಶ್ವದಲ್ಲೇ ಆಕರ್ಷಣೆಯ ಕೇಂದ್ರವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರೇ ದೇಶದ ಸಂಸತ್ತಿನಲ್ಲಿ ಕಾಶಿಯನ್ನು ಪ್ರತಿನಿಧಿಸುತ್ತಿದ್ದಾರೆ. ಮಥುರಾದಲ್ಲಿ ಬ್ರಿಜ್ ತೀರ್ಥ ಅಭಿವೃದ್ಧಿ ಪರಿಷತ್ತು ಅಭಿವೃದ್ಧಿ ಕಾರ್ಯಕ್ರಮಗಳೊಂದಿಗೆ ವೇಗವಾಗಿ ಮುನ್ನಡೆಯುತ್ತಿದೆ. ಅಲ್ಲಿನ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿಕೊಂಡು, ಅದರ ಅಭಿವೃದ್ಧಿಗೆ ಸರ್ಕಾರ ಎಲ್ಲಾ ರೀತಿಯ ಕಾರ್ಯಕ್ರಮಗಳನ್ನು ನಡೆಸುತ್ತಿದೆ ಎಂದು ಸಿಎಂ ಯೋಗಿ ಹೇಳಿದರು.

ಇದನ್ನೂ ಓದಿ: ಮುಂದಿನ ಸಂಕ್ರಾಂತಿ ಒಳಗಾಗಿ ರಾಮಮಂದಿರದ ಕಾಮಗಾರಿ ಪೂರ್ಣ: ಪೇಜಾವರ ಶ್ರೀ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.