ETV Bharat / bharat

45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೂ ಲಸಿಕೆ: ಸುಪ್ರೀಂನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ!

author img

By

Published : Apr 12, 2021, 8:20 PM IST

ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್​ ಹಾವಳಿ ಹೆಚ್ಚಾಗಿರುವ ಕಾರಣ ಎಲ್ಲ ವಯಸ್ಸಿನವರಿಗೂ ಕೋವಿಡ್​ ಲಸಿಕೆ ನೀಡುವ ಅಗತ್ಯವಿದೆ ಎಂದು ಸುಪ್ರೀಂಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

Covid vaccine
Covid vaccine

ನವದೆಹಲಿ: ದೇಶದಲ್ಲಿ ಎರಡನೇ ಹಂತದ ಕೋವಿಡ್​ ಅಲೆ ಜೋರಾಗಿರುವ ಕಾರಣ 45 ವರ್ಷದೊಳಗಿನ ಎಲ್ಲರಿಗೂ ಕೋವಿಡ್​ ಲಸಿಕೆ ನೀಡುವಂತೆ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಕೇಂದ್ರ ಸರ್ಕಾರಕ್ಕೆ ಈ ವಿಚಾರದಲ್ಲಿ ಸರ್ವೋಚ್ಛ ನ್ಯಾಯಾಲಯ ನಿರ್ದೇಶನ ನೀಡಬೇಕು ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಯಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಕ್ಕೆ ನಿರ್ದೇಶನ ಕೋರುವಂತೆ ತೆಹ್ಸಿನ್​ ಪೂನಾವಾಲಾ ಎಂಬುವವರು ಈ ಪಿಐಎಲ್​ ಸಲ್ಲಿಕೆ ಮಾಡಿದ್ದಾರೆ. ಕಳೆದ ಕೆಲ ದಿನಗಳಿಂದ ದೇಶದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ಉಲ್ಭಣಗೊಂಡಿದ್ದು, ಇದನ್ನ ಪರಿಗಣಿಸಿ ಎಲ್ಲ ವಯಸ್ಸಿನವರಿಗೂ ವಿಶೇಷವಾಗಿ ಉಸಿರಾಟದ ತೊಂದರೆ ಹಾಗೂ ಅಸ್ವಸ್ಥತೆ ಹೊಂದಿರುವ ಎಲ್ಲರಿಗೂ ಲಸಿಕೆ ನೀಡುವಂತೆ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ದೀದಿಗೆ ಶಾಕ್​ ನೀಡಿದ ಆಯೋಗ.. 24 ಗಂಟೆಗಳ ಕಾಲ ಚುನಾವಣಾ ರ‍್ಯಾಲಿ ನಡೆಸದಂತೆ ನಿರ್ಬಂಧ!

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಲಸಿಕೆ ತಯಾರಿಕಾ ದೇಶವಾಗಿದ್ದರೂ, ಕೇಂದ್ರ ಸರ್ಕಾರ ಹೆಚ್ಚಿನ ಜನರಿಗೆ ಕೋವಿಡ್​ ಲಸಿಕೆ ನೀಡುತ್ತಿಲ್ಲ ಏಕೆ ಎಂಬುದು ಆಶ್ಚರ್ಯಕರವಾಗಿದೆ ಎಂದಿರುವ ಅವರು, ದೇಶದಲ್ಲಿ ಈಗಾಗಲೇ ನೀಡಲಾಗುತ್ತಿರುವ 45 ವರ್ಷ ಮೇಲ್ಪಟ್ಟವರ ನಿರ್ಬಂಧ ತೆಗೆದು ಹಾಕಿ ಎಲ್ಲರಿಗೂ ವ್ಯಾಕ್ಸಿನ್​ ನೀಡುವ ಕ್ರಮ ಕೈಗೊಳ್ಳಿ ಎಂದಿದ್ದಾರೆ.

45 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ನಿತ್ಯ ಹೊರಗಡೆ ಹೋಗಿ ಕೆಲಸ ಮಾಡುತ್ತಿರುವ ಕಾರಣ ಅವರಿಗೆ ಈ ಲಸಿಕೆ ಅವಶ್ಯಕತೆ ಇದೆ ಎಂದು ಅವರು ತಿಳಿಸಿದ್ದಾರೆ. ಸಾರ್ವಜನಿಕ ಹಿತದೃಷ್ಟಿಯಿಂದ ಈ ಅರ್ಜಿಗೆ ಆದ್ಯತೆ ನೀಡಲಾಗಿದೆ ಎಂಬ ಮಾಹಿತಿ ಸಹ ಲಭ್ಯವಾಗಿದೆ. ದೇಶದಲ್ಲಿ ಲಕ್ಷಕ್ಕೂ ಅಧಿಕ ಸೋಂಕಿತ ಪ್ರಕರಣ ದಾಖಲಾಗುತ್ತಿದ್ದು, ಇದೀಗ ಇದರ ವಿಚಾರಣೆ ನಡೆಸಲಾಗುವುದು ಎಂದು ತಿಳಿದು ಬಂದಿದೆ.

ನವದೆಹಲಿ: ದೇಶದಲ್ಲಿ ಎರಡನೇ ಹಂತದ ಕೋವಿಡ್​ ಅಲೆ ಜೋರಾಗಿರುವ ಕಾರಣ 45 ವರ್ಷದೊಳಗಿನ ಎಲ್ಲರಿಗೂ ಕೋವಿಡ್​ ಲಸಿಕೆ ನೀಡುವಂತೆ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಕೇಂದ್ರ ಸರ್ಕಾರಕ್ಕೆ ಈ ವಿಚಾರದಲ್ಲಿ ಸರ್ವೋಚ್ಛ ನ್ಯಾಯಾಲಯ ನಿರ್ದೇಶನ ನೀಡಬೇಕು ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಯಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಕ್ಕೆ ನಿರ್ದೇಶನ ಕೋರುವಂತೆ ತೆಹ್ಸಿನ್​ ಪೂನಾವಾಲಾ ಎಂಬುವವರು ಈ ಪಿಐಎಲ್​ ಸಲ್ಲಿಕೆ ಮಾಡಿದ್ದಾರೆ. ಕಳೆದ ಕೆಲ ದಿನಗಳಿಂದ ದೇಶದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ಉಲ್ಭಣಗೊಂಡಿದ್ದು, ಇದನ್ನ ಪರಿಗಣಿಸಿ ಎಲ್ಲ ವಯಸ್ಸಿನವರಿಗೂ ವಿಶೇಷವಾಗಿ ಉಸಿರಾಟದ ತೊಂದರೆ ಹಾಗೂ ಅಸ್ವಸ್ಥತೆ ಹೊಂದಿರುವ ಎಲ್ಲರಿಗೂ ಲಸಿಕೆ ನೀಡುವಂತೆ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ದೀದಿಗೆ ಶಾಕ್​ ನೀಡಿದ ಆಯೋಗ.. 24 ಗಂಟೆಗಳ ಕಾಲ ಚುನಾವಣಾ ರ‍್ಯಾಲಿ ನಡೆಸದಂತೆ ನಿರ್ಬಂಧ!

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಲಸಿಕೆ ತಯಾರಿಕಾ ದೇಶವಾಗಿದ್ದರೂ, ಕೇಂದ್ರ ಸರ್ಕಾರ ಹೆಚ್ಚಿನ ಜನರಿಗೆ ಕೋವಿಡ್​ ಲಸಿಕೆ ನೀಡುತ್ತಿಲ್ಲ ಏಕೆ ಎಂಬುದು ಆಶ್ಚರ್ಯಕರವಾಗಿದೆ ಎಂದಿರುವ ಅವರು, ದೇಶದಲ್ಲಿ ಈಗಾಗಲೇ ನೀಡಲಾಗುತ್ತಿರುವ 45 ವರ್ಷ ಮೇಲ್ಪಟ್ಟವರ ನಿರ್ಬಂಧ ತೆಗೆದು ಹಾಕಿ ಎಲ್ಲರಿಗೂ ವ್ಯಾಕ್ಸಿನ್​ ನೀಡುವ ಕ್ರಮ ಕೈಗೊಳ್ಳಿ ಎಂದಿದ್ದಾರೆ.

45 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ನಿತ್ಯ ಹೊರಗಡೆ ಹೋಗಿ ಕೆಲಸ ಮಾಡುತ್ತಿರುವ ಕಾರಣ ಅವರಿಗೆ ಈ ಲಸಿಕೆ ಅವಶ್ಯಕತೆ ಇದೆ ಎಂದು ಅವರು ತಿಳಿಸಿದ್ದಾರೆ. ಸಾರ್ವಜನಿಕ ಹಿತದೃಷ್ಟಿಯಿಂದ ಈ ಅರ್ಜಿಗೆ ಆದ್ಯತೆ ನೀಡಲಾಗಿದೆ ಎಂಬ ಮಾಹಿತಿ ಸಹ ಲಭ್ಯವಾಗಿದೆ. ದೇಶದಲ್ಲಿ ಲಕ್ಷಕ್ಕೂ ಅಧಿಕ ಸೋಂಕಿತ ಪ್ರಕರಣ ದಾಖಲಾಗುತ್ತಿದ್ದು, ಇದೀಗ ಇದರ ವಿಚಾರಣೆ ನಡೆಸಲಾಗುವುದು ಎಂದು ತಿಳಿದು ಬಂದಿದೆ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.