ETV Bharat / bharat

ವಿವಿಧ ರಾಜ್ಯಗಳಲ್ಲಿ ಆಕ್ಸಿಜನ್​ ಸಮಸ್ಯೆ: ಉನ್ನತ ಮಟ್ಟದ ಸಭೆಯಲ್ಲಿ ನಮೋ ಭಾಗಿ!

author img

By

Published : Apr 22, 2021, 4:50 PM IST

ಮಹಾಮಾರಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿರುವ ಕಾರಣ ಕೆಲವೊಂದು ರಾಜ್ಯಗಳಲ್ಲಿ ಆಮ್ಲಜನಕ ಕೊರತೆ ಉಂಟಾಗಿದ್ದು, ಪ್ರಧಾನಿ ಮೋದಿ ಇದೇ ವಿಚಾರವಾಗಿ ಉನ್ನತ ಮಟ್ಟದ ಸಭೆ ನಡೆಸಿದರು.

PM Modi Holds High-Level Meeting
PM Modi Holds High-Level Meeting

ನವದೆಹಲಿ: ದೇಶದ ವಿವಿಧ ರಾಜ್ಯಗಳಲ್ಲಿ ಆಮ್ಲಜನಕದ ಕೊರತೆ ಉಂಟಾಗಿ ಅನೇಕ ರೋಗಿಗಳು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದ್ದು, ಇದರ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆಯಲ್ಲಿ ಭಾಗಿಯಾಗಿದ್ದಾರೆ.

ವಿವಿಧ ರಾಜ್ಯಗಳಲ್ಲಿನ ಅಧಿಕಾರಿಗಳು ಈ ಸಭೆಯಲ್ಲಿ ಭಾಗಿಯಾಗಿದ್ದು, ಆಯಾ ರಾಜ್ಯದ ಆಮ್ಲಜನಕದ ಪೂರೈಕೆ ಪರಿಶೀಲನೆ ನಡೆಸುವ ಉದ್ದೇಶದಿಂದ ನಮೋ ಉನ್ನತ ಮಟ್ಟದ ಸಭೆ ನಡೆಸುತ್ತಿದ್ದಾರೆ. ಈ ವೇಳೆ, ಕಳೆದ ಕೆಲ ವಾರಗಳಿಂದ ಉಂಟಾಗಿರುವ ಆಮ್ಲಜನಕದ ಕೊರತೆ ಸುಧಾರಿಸಲು ಅಧಿಕಾರಿಗಳು ಕೈಗೊಂಡಿರುವ ಎಲ್ಲ ಯೋಜನೆ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿನ ಹೊರಾವರಣದಲ್ಲೇ ರೋಗಿಗೆ ಚಿಕಿತ್ಸೆ: ಬೀದಿಪಾಲಾಗುತ್ತಿದ್ದಾರಾ ರೋಗಿಗಳು?

ಆಮ್ಲಜನಕದ ಉತ್ಪಾದನೆ ಹೆಚ್ಚಿಸುವುದು, ವಿತರಣೆ ವೇಗ, ಆರೋಗ್ಯ ಸೌಲಭ್ಯಗಳಿಗೋಸ್ಕರ ಆಕ್ಸಿಜನ್​​ ಬಿಟ್ಟು ಬೇರೆ ಮಾರ್ಗ ಬಳಕೆ ಮಾಡುವ ವಿಚಾರವಾಗಿ ಪ್ರಧಾನಿ ಮೋದಿ ಮಾತನಾಡಿದ್ದು, ಯಾವುದೇ ರೀತಿಯಲ್ಲೂ ರಾಜ್ಯಗಳಿಗೆ ಆಮ್ಲಜನಕದ ಕೊರತೆ ಆಗದಂತೆ ನೋಡಿಕೊಳ್ಳಿ ಎಂದು ನಮೋ ನಿರ್ದೇಶನ ನೀಡಿದ್ದಾರೆ.

ದೇಶದಲ್ಲಿನ 162 ಆಮ್ಲಜನಕ ಸ್ಥಾವರಗಳು ಹೆಚ್ಚಿನ ಆಕ್ಸಿಜನ್​ ಉತ್ಪಾದಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವುದಾಗಿ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದು, ಕಳೆದ ಕೆಲ ವಾರಗಳಿಂದ ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿರುವ ಕಾರಣ ಆಮ್ಲಜನಕದ ಕೊರತೆ ಉಂಟಾಗಿದೆ ಎಂದು ತಿಳಿಸಿದ್ದಾರೆ.

20 ರಾಜ್ಯಗಳಲ್ಲಿ ಆಮ್ಲಜನಕದ ಬೇಡಿಕೆ ಪ್ರತಿದಿನಕ್ಕೆ 6.785ಮೆಟ್ರಿಕ್​ ಟನ್​ ಆಗಿದ್ದು, ಆದರೆ ಇದೀಗ ಕೋವಿಡ್ ಸೋಂಕಿತ ಪ್ರಕರಣ ಹೆಚ್ಚಾಗಿರುವ ಕಾರಣ ಇದರ ಕೊರತೆ ಉಂಟಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ನವದೆಹಲಿ: ದೇಶದ ವಿವಿಧ ರಾಜ್ಯಗಳಲ್ಲಿ ಆಮ್ಲಜನಕದ ಕೊರತೆ ಉಂಟಾಗಿ ಅನೇಕ ರೋಗಿಗಳು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದ್ದು, ಇದರ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆಯಲ್ಲಿ ಭಾಗಿಯಾಗಿದ್ದಾರೆ.

ವಿವಿಧ ರಾಜ್ಯಗಳಲ್ಲಿನ ಅಧಿಕಾರಿಗಳು ಈ ಸಭೆಯಲ್ಲಿ ಭಾಗಿಯಾಗಿದ್ದು, ಆಯಾ ರಾಜ್ಯದ ಆಮ್ಲಜನಕದ ಪೂರೈಕೆ ಪರಿಶೀಲನೆ ನಡೆಸುವ ಉದ್ದೇಶದಿಂದ ನಮೋ ಉನ್ನತ ಮಟ್ಟದ ಸಭೆ ನಡೆಸುತ್ತಿದ್ದಾರೆ. ಈ ವೇಳೆ, ಕಳೆದ ಕೆಲ ವಾರಗಳಿಂದ ಉಂಟಾಗಿರುವ ಆಮ್ಲಜನಕದ ಕೊರತೆ ಸುಧಾರಿಸಲು ಅಧಿಕಾರಿಗಳು ಕೈಗೊಂಡಿರುವ ಎಲ್ಲ ಯೋಜನೆ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿನ ಹೊರಾವರಣದಲ್ಲೇ ರೋಗಿಗೆ ಚಿಕಿತ್ಸೆ: ಬೀದಿಪಾಲಾಗುತ್ತಿದ್ದಾರಾ ರೋಗಿಗಳು?

ಆಮ್ಲಜನಕದ ಉತ್ಪಾದನೆ ಹೆಚ್ಚಿಸುವುದು, ವಿತರಣೆ ವೇಗ, ಆರೋಗ್ಯ ಸೌಲಭ್ಯಗಳಿಗೋಸ್ಕರ ಆಕ್ಸಿಜನ್​​ ಬಿಟ್ಟು ಬೇರೆ ಮಾರ್ಗ ಬಳಕೆ ಮಾಡುವ ವಿಚಾರವಾಗಿ ಪ್ರಧಾನಿ ಮೋದಿ ಮಾತನಾಡಿದ್ದು, ಯಾವುದೇ ರೀತಿಯಲ್ಲೂ ರಾಜ್ಯಗಳಿಗೆ ಆಮ್ಲಜನಕದ ಕೊರತೆ ಆಗದಂತೆ ನೋಡಿಕೊಳ್ಳಿ ಎಂದು ನಮೋ ನಿರ್ದೇಶನ ನೀಡಿದ್ದಾರೆ.

ದೇಶದಲ್ಲಿನ 162 ಆಮ್ಲಜನಕ ಸ್ಥಾವರಗಳು ಹೆಚ್ಚಿನ ಆಕ್ಸಿಜನ್​ ಉತ್ಪಾದಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವುದಾಗಿ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದು, ಕಳೆದ ಕೆಲ ವಾರಗಳಿಂದ ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿರುವ ಕಾರಣ ಆಮ್ಲಜನಕದ ಕೊರತೆ ಉಂಟಾಗಿದೆ ಎಂದು ತಿಳಿಸಿದ್ದಾರೆ.

20 ರಾಜ್ಯಗಳಲ್ಲಿ ಆಮ್ಲಜನಕದ ಬೇಡಿಕೆ ಪ್ರತಿದಿನಕ್ಕೆ 6.785ಮೆಟ್ರಿಕ್​ ಟನ್​ ಆಗಿದ್ದು, ಆದರೆ ಇದೀಗ ಕೋವಿಡ್ ಸೋಂಕಿತ ಪ್ರಕರಣ ಹೆಚ್ಚಾಗಿರುವ ಕಾರಣ ಇದರ ಕೊರತೆ ಉಂಟಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.