ನವದೆಹಲಿ: ಗುಜರಾತ್ ಹೈಕೋರ್ಟ್ನ ವಜ್ರ ಮಹೋತ್ಸವದ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅಂಚೆ ಚೀಟಿ ಬಿಡುಗಡೆ ಮಾಡಿದರು.
ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ನಮ್ಮ ನ್ಯಾಯಾಂಗವು ಸಂವಿಧಾನವನ್ನು ಮತ್ತಷ್ಟು ಬಲಪಡಿಸಲು ಸೃಜಜನಾತ್ಮಕವಾಗಿ ಕಾರ್ಯ ನಿರ್ವಹಿಸುತ್ತಿದೆ. ದೇಶದ ಜನರ ಹಕ್ಕುಗಳನ್ನು ಕಾಪಾಡಲು, ರಾಷ್ಟ್ರೀಯ ಹಿತಾಸಕ್ತಿಗನುಗುಣವಾಗಿ ನ್ಯಾಯಾಂಗ ತನ್ನ ಕರ್ತವ್ಯ ನಿರ್ವಹಿಸುತ್ತಿದೆ ಎಂದರು.
ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲೂ ನಮ್ಮ ಸುಪ್ರೀಂಕೋರ್ಟ್, ಹೈಕೋರ್ಟ್, ಜಿಲ್ಲಾ ನ್ಯಾಯಾಲಯಗಳು ಸಹ ವಿಡಿಯೋ ಕಾನ್ಫರೆನ್ಸ್ ಮೂಲಕ ಅನೇಕ ಪ್ರಕರಣಗಳನ್ನು ಆಲಿಸಿವೆ. ಅದು ನಮ್ಮ ಹೆಮ್ಮೆ ಎಂದು ನ್ಯಾಯಾಂಗ ವ್ಯವಸ್ಥೆಯನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.