ETV Bharat / bharat

'ಪಿಎಂ ವಿಶ್ವಕರ್ಮ ಯೋಜನೆ'ಗೆ ಇಂದು ಚಾಲನೆ ನೀಡಲಿದ್ದಾರೆ ಮೋದಿ: ₹13,000 ಕೋಟಿ ಅನುದಾನ

ವಿಶ್ವಕರ್ಮ ಜಯಂತಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ ನೀಡಲಿದ್ದಾರೆ.

author img

By ETV Bharat Karnataka Team

Published : Sep 17, 2023, 11:19 AM IST

pm-modi-to-launch-pm-vishwakarma-scheme-for-traditional-artisans-craftspeople-today
ವಿಶ್ವಕರ್ಮ ಜಯಂತಿ : ಪಿಎಂ ವಿಶ್ವಕರ್ಮ ಯೋಜನೆಗೆ ಪ್ರಧಾನಿ ಮೋದಿ ಚಾಲನೆ : 13000 ಕೋಟಿ ಅನುದಾನ

ನವದೆಹಲಿ : ವಿಶ್ವಕರ್ಮ ಜಯಂತಿ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಕುಶಲಕರ್ಮಿಗಳಿಗಾಗಿ 'ಪಿಎಂ ವಿಶ್ವಕರ್ಮ' ಯೋಜನೆಗೆ ಚಾಲನೆ ನೀಡುವರು. ಈ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಕುಶಲಕರ್ಮಿಗಳಿಗೆ 13,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಿದೆ. ನವದೆಹಲಿಯ ದ್ವಾರಕಾದಲ್ಲಿರುವ ಇಂಡಿಯಾ ಇಂಟರ್​ನ್ಯಾಷನಲ್​ ಕನ್ವೆನ್ಶನ್​ ಮತ್ತು ಎಕ್ಸ್‌ಪೋ ಸೆಂಟರ್​ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ಪ್ರಧಾನಿ ಕಚೇರಿ ಮಾಹಿತಿ ನೀಡಿದೆ.

ಪಿಎಂ ವಿಶ್ವಕರ್ಮ ಯೋಜನೆಯು ಸಾಂಪ್ರದಾಯಿಕ ಕರಕುಶಲತೆಯಲ್ಲಿ ತೊಡಗಿರುವ ವ್ಯಕ್ತಿಗಳನ್ನು ಬೆಂಬಲಿಸಲು ಮತ್ತು ಪ್ರೋತ್ಸಾಹಿಸಲು ಮಾಡಿರುವ ಯೋಜನೆ. 77ನೇ ಸ್ವಾತಂತ್ರ್ಯೋತ್ಸವದಂದು ಕೆಂಪು ಕೋಟೆಯಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ್ದ ಮೋದಿ, ಸಾಂಪ್ರದಾಯಿಕ ಕರಕುಶಲತೆಯಲ್ಲಿ ತೊಡಗಿರುವ ನುರಿತ ಕುಶಲಕರ್ಮಿಗಳಿಗೆ ವಿಶೇಷ ಯೋಜನೆ ಘೋಷಿಸುವುದಾಗಿ ಹೇಳಿದ್ದರು. ಇದು ಕುಶಲಕರ್ಮಿಗಳಿಗೆ ನೀಡುವ ಹಣಕಾಸು ನೆರವನ್ನು ಮೀರಿ, ಪ್ರಾಚೀನ ಕರಕುಶಲತೆಗಳು, ಸಂಸ್ಕೃತಿ, ಸ್ಥಳೀಯ ಉತ್ಪನ್ನಗಳಿಂದ ಶ್ರೀಮಂತವಾಗಿರುವ ನಮ್ಮ ಪರಂಪರೆಯನ್ನು ಸಂರಕ್ಷಿಸುವ ಪ್ರಮುಖ ಉದ್ದೇಶ ಹೊಂದಿದೆ ಎಂದು ಕಚೇರಿ ಹೇಳಿದೆ.

ಯೋಜನೆಗೆ ನೋಂದಣಿ ಹೇಗೆ?: ಯೋಜನೆ ಅಡಿಯಲ್ಲಿ ಕರಕುಶಲತೆಯಲ್ಲಿ ತೊಡಗಿರುವ ವ್ಯಕ್ತಿಗಳು ಪಿಎಂ ವಿಶ್ವಕರ್ಮ ಎಂಬ ಪೋರ್ಟಲ್​ನಲ್ಲಿ ಬಯೋಮೆಟ್ರಿಕ್ ನೋಂದಣಿ ಮಾಡಿಕೊಳ್ಳಬಹುದು. ನೋಂದಣಿ ಮಾಡಿಕೊಂಡ ನುರಿತ ವ್ಯಕ್ತಿಗಳಿಗೆ (ವಿಶ್ವಕರ್ಮರಿಗೆ) ಪಿಎಂ ವಿಶ್ವಕರ್ಮ ಪ್ರಮಾಣ ಪತ್ರ ಮತ್ತು ಗುರುತಿನ ಚೀಟಿ ನೀಡಲಾಗುತ್ತದೆ. ಈ ಮೂಲಕ ಕೌಶಲ್ಯವರ್ಧನೆಗೆ ಸಾಧಾರಣ ಮತ್ತು ಉನ್ನತ ಮಟ್ಟದ ತರಬೇತಿ ನೀಡಲಾಗುತ್ತದೆ. ತರಬೇತಿ ಸಂದರ್ಭದಲ್ಲಿ 15 ಸಾವಿರ ರೂ ಗೌರವಧನ ನೀಡಲಾಗುತ್ತದೆ. ತರಬೇತಿ ಬಳಿಕ ಸ್ವಉದ್ಯೋಗದಲ್ಲಿ ತೊಡಗಿಕೊಳ್ಳಲು ಮೊದಲ ಕಂತಿನಲ್ಲಿ 1 ಲಕ್ಷ ರೂ ಮತ್ತು ಎರಡನೇ ಕಂತಿನಲ್ಲಿ 2 ಲಕ್ಷ ರೂಪಾಯಿ ಸಾಲವನ್ನು ಶೇ.5ರಷ್ಟು ರಿಯಾಯಿತಿ ಬಡ್ಡಿದರದಲ್ಲಿ ನೀಡಲಾಗುತ್ತದೆ.

ಈ ಯೋಜನೆಯು ಭಾರತೀಯ ಗುರು-ಶಿಷ್ಯ ಪರಂಪರೆಯನ್ನು ಪ್ರತಿನಿಧಿಸುತ್ತದೆ. ವಿಶ್ವಕರ್ಮರಲ್ಲಿ ಪರಂಪರಾಗತವಾಗಿ ಬಂದಿರುವ ಕೌಶಲ್ಯವನ್ನು ಈ ಯೋಜನೆ ಉತ್ತೇಜಿಸುತ್ತದೆ. ಯೋಜನೆಯ ಮುಖ್ಯ ಉದ್ದೇಶವೇನೆಂದರೆ, ಕುಶಲಕರ್ಮಿಗಳ ಉತ್ಪನ್ನ ಮತ್ತು ಸೇವೆಯನ್ನು ದೇಶೀಯ ಮತ್ತು ಜಾಗತಿಕ ಮಟ್ಟದಲ್ಲಿ ಮನ್ನಣೆ ಪಡೆಯುವಂತೆ ಮಾಡುವುದು. ಯೋಜನೆಯಿಂದ ಗ್ರಾಮೀಣ ಮತ್ತು ನಗರ ಭಾಗದ ಕುಶಲಕರ್ಮಿಗಳಿಗೆ ಉಪಯೋಗವಾಗಲಿದೆ.

ಯಾರೆಲ್ಲ ಅರ್ಹರು?: ಈ ಯೋಜನೆಯು ಬಡಗಿ, ದೋಣಿ ತಯಾರಕ, ಕಮ್ಮಾರ, ಅಕ್ಕಸಾಲಿಗ, ಕುಂಬಾರ, ಶಿಲ್ಪಿ, ಚಮ್ಮಾರ, ಬುಟ್ಟಿ ಚಾಪೆ ತಯಾರಿಕರು, ನೇಕಾರರು, ಕ್ಷೌರಿಕರು, ದರ್ಜಿ ಸೇರಿದಂತೆ ಹದಿನೆಂಟು ಸಾಂಪ್ರದಾಯಿಕ ಕರಕುಶಲಗಳನ್ನು ಒಳಗೊಂಡಿದೆ. "ಪಿಎಂ ವಿಶ್ವಕರ್ಮ ಯೋಜನೆಯು ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವ, ನುರಿತ ಕುಶಲಕರ್ಮಿಗಳನ್ನು ಸಬಲೀಕರಣಗೊಳಿಸುವ ಮತ್ತು ತಲೆಮಾರುಗಳಿಂದಲೂ ಉಳಿದುಕೊಂಡು ಬಂದಿರುವ ಕುಶಲಕರ್ಮಿಗಳ ಶ್ರೀಮಂತ ಸಂಪ್ರದಾಯವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.

ಇದನ್ನೂ ಓದಿ : ವಿಶ್ವದ ಅತಿದೊಡ್ಡ ಪ್ರದರ್ಶನ ಸಭಾಂಗಣ 'ಯಶೋಭೂಮಿ' ಉದ್ಘಾಟನೆಗೆ ಕ್ಷಣಗಣನೆ: ಏನಿದರ ವಿಶೇಷತೆ?

ನವದೆಹಲಿ : ವಿಶ್ವಕರ್ಮ ಜಯಂತಿ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಕುಶಲಕರ್ಮಿಗಳಿಗಾಗಿ 'ಪಿಎಂ ವಿಶ್ವಕರ್ಮ' ಯೋಜನೆಗೆ ಚಾಲನೆ ನೀಡುವರು. ಈ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಕುಶಲಕರ್ಮಿಗಳಿಗೆ 13,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಿದೆ. ನವದೆಹಲಿಯ ದ್ವಾರಕಾದಲ್ಲಿರುವ ಇಂಡಿಯಾ ಇಂಟರ್​ನ್ಯಾಷನಲ್​ ಕನ್ವೆನ್ಶನ್​ ಮತ್ತು ಎಕ್ಸ್‌ಪೋ ಸೆಂಟರ್​ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ಪ್ರಧಾನಿ ಕಚೇರಿ ಮಾಹಿತಿ ನೀಡಿದೆ.

ಪಿಎಂ ವಿಶ್ವಕರ್ಮ ಯೋಜನೆಯು ಸಾಂಪ್ರದಾಯಿಕ ಕರಕುಶಲತೆಯಲ್ಲಿ ತೊಡಗಿರುವ ವ್ಯಕ್ತಿಗಳನ್ನು ಬೆಂಬಲಿಸಲು ಮತ್ತು ಪ್ರೋತ್ಸಾಹಿಸಲು ಮಾಡಿರುವ ಯೋಜನೆ. 77ನೇ ಸ್ವಾತಂತ್ರ್ಯೋತ್ಸವದಂದು ಕೆಂಪು ಕೋಟೆಯಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ್ದ ಮೋದಿ, ಸಾಂಪ್ರದಾಯಿಕ ಕರಕುಶಲತೆಯಲ್ಲಿ ತೊಡಗಿರುವ ನುರಿತ ಕುಶಲಕರ್ಮಿಗಳಿಗೆ ವಿಶೇಷ ಯೋಜನೆ ಘೋಷಿಸುವುದಾಗಿ ಹೇಳಿದ್ದರು. ಇದು ಕುಶಲಕರ್ಮಿಗಳಿಗೆ ನೀಡುವ ಹಣಕಾಸು ನೆರವನ್ನು ಮೀರಿ, ಪ್ರಾಚೀನ ಕರಕುಶಲತೆಗಳು, ಸಂಸ್ಕೃತಿ, ಸ್ಥಳೀಯ ಉತ್ಪನ್ನಗಳಿಂದ ಶ್ರೀಮಂತವಾಗಿರುವ ನಮ್ಮ ಪರಂಪರೆಯನ್ನು ಸಂರಕ್ಷಿಸುವ ಪ್ರಮುಖ ಉದ್ದೇಶ ಹೊಂದಿದೆ ಎಂದು ಕಚೇರಿ ಹೇಳಿದೆ.

ಯೋಜನೆಗೆ ನೋಂದಣಿ ಹೇಗೆ?: ಯೋಜನೆ ಅಡಿಯಲ್ಲಿ ಕರಕುಶಲತೆಯಲ್ಲಿ ತೊಡಗಿರುವ ವ್ಯಕ್ತಿಗಳು ಪಿಎಂ ವಿಶ್ವಕರ್ಮ ಎಂಬ ಪೋರ್ಟಲ್​ನಲ್ಲಿ ಬಯೋಮೆಟ್ರಿಕ್ ನೋಂದಣಿ ಮಾಡಿಕೊಳ್ಳಬಹುದು. ನೋಂದಣಿ ಮಾಡಿಕೊಂಡ ನುರಿತ ವ್ಯಕ್ತಿಗಳಿಗೆ (ವಿಶ್ವಕರ್ಮರಿಗೆ) ಪಿಎಂ ವಿಶ್ವಕರ್ಮ ಪ್ರಮಾಣ ಪತ್ರ ಮತ್ತು ಗುರುತಿನ ಚೀಟಿ ನೀಡಲಾಗುತ್ತದೆ. ಈ ಮೂಲಕ ಕೌಶಲ್ಯವರ್ಧನೆಗೆ ಸಾಧಾರಣ ಮತ್ತು ಉನ್ನತ ಮಟ್ಟದ ತರಬೇತಿ ನೀಡಲಾಗುತ್ತದೆ. ತರಬೇತಿ ಸಂದರ್ಭದಲ್ಲಿ 15 ಸಾವಿರ ರೂ ಗೌರವಧನ ನೀಡಲಾಗುತ್ತದೆ. ತರಬೇತಿ ಬಳಿಕ ಸ್ವಉದ್ಯೋಗದಲ್ಲಿ ತೊಡಗಿಕೊಳ್ಳಲು ಮೊದಲ ಕಂತಿನಲ್ಲಿ 1 ಲಕ್ಷ ರೂ ಮತ್ತು ಎರಡನೇ ಕಂತಿನಲ್ಲಿ 2 ಲಕ್ಷ ರೂಪಾಯಿ ಸಾಲವನ್ನು ಶೇ.5ರಷ್ಟು ರಿಯಾಯಿತಿ ಬಡ್ಡಿದರದಲ್ಲಿ ನೀಡಲಾಗುತ್ತದೆ.

ಈ ಯೋಜನೆಯು ಭಾರತೀಯ ಗುರು-ಶಿಷ್ಯ ಪರಂಪರೆಯನ್ನು ಪ್ರತಿನಿಧಿಸುತ್ತದೆ. ವಿಶ್ವಕರ್ಮರಲ್ಲಿ ಪರಂಪರಾಗತವಾಗಿ ಬಂದಿರುವ ಕೌಶಲ್ಯವನ್ನು ಈ ಯೋಜನೆ ಉತ್ತೇಜಿಸುತ್ತದೆ. ಯೋಜನೆಯ ಮುಖ್ಯ ಉದ್ದೇಶವೇನೆಂದರೆ, ಕುಶಲಕರ್ಮಿಗಳ ಉತ್ಪನ್ನ ಮತ್ತು ಸೇವೆಯನ್ನು ದೇಶೀಯ ಮತ್ತು ಜಾಗತಿಕ ಮಟ್ಟದಲ್ಲಿ ಮನ್ನಣೆ ಪಡೆಯುವಂತೆ ಮಾಡುವುದು. ಯೋಜನೆಯಿಂದ ಗ್ರಾಮೀಣ ಮತ್ತು ನಗರ ಭಾಗದ ಕುಶಲಕರ್ಮಿಗಳಿಗೆ ಉಪಯೋಗವಾಗಲಿದೆ.

ಯಾರೆಲ್ಲ ಅರ್ಹರು?: ಈ ಯೋಜನೆಯು ಬಡಗಿ, ದೋಣಿ ತಯಾರಕ, ಕಮ್ಮಾರ, ಅಕ್ಕಸಾಲಿಗ, ಕುಂಬಾರ, ಶಿಲ್ಪಿ, ಚಮ್ಮಾರ, ಬುಟ್ಟಿ ಚಾಪೆ ತಯಾರಿಕರು, ನೇಕಾರರು, ಕ್ಷೌರಿಕರು, ದರ್ಜಿ ಸೇರಿದಂತೆ ಹದಿನೆಂಟು ಸಾಂಪ್ರದಾಯಿಕ ಕರಕುಶಲಗಳನ್ನು ಒಳಗೊಂಡಿದೆ. "ಪಿಎಂ ವಿಶ್ವಕರ್ಮ ಯೋಜನೆಯು ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವ, ನುರಿತ ಕುಶಲಕರ್ಮಿಗಳನ್ನು ಸಬಲೀಕರಣಗೊಳಿಸುವ ಮತ್ತು ತಲೆಮಾರುಗಳಿಂದಲೂ ಉಳಿದುಕೊಂಡು ಬಂದಿರುವ ಕುಶಲಕರ್ಮಿಗಳ ಶ್ರೀಮಂತ ಸಂಪ್ರದಾಯವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.

ಇದನ್ನೂ ಓದಿ : ವಿಶ್ವದ ಅತಿದೊಡ್ಡ ಪ್ರದರ್ಶನ ಸಭಾಂಗಣ 'ಯಶೋಭೂಮಿ' ಉದ್ಘಾಟನೆಗೆ ಕ್ಷಣಗಣನೆ: ಏನಿದರ ವಿಶೇಷತೆ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.