ETV Bharat / bharat

ಸಿಕಂದರಾಬಾದ್​ - ತಿರುಪತಿ ವಂದೇ ಭಾರತ್​ ಎಕ್ಸ್​ಪ್ರೆಸ್​ಗೆ ಪ್ರಧಾನಿ ಮೋದಿ ಹಸಿರು ನಿಶಾನೆ

author img

By

Published : Apr 8, 2023, 1:34 PM IST

Updated : Apr 8, 2023, 5:44 PM IST

ಹೈದರಾಬಾದ್​ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಇದೇ ವೇಳೆ ದೇಶದ 13ನೇ ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲಿಗೂ ಹಸಿರು ನಿಶಾನೆ ತೋರಿಸಿದರು.

ಪ್ರಧಾನಿ ಮೋದಿ
ಪ್ರಧಾನಿ ಮೋದಿ
ಸಿಕಂದರಾಬಾದ್​ - ತಿರುಪತಿ ವಂದೇ ಭಾರತ್​ ಎಕ್ಸ್​ಪ್ರೆಸ್​ಗೆ ಪ್ರಧಾನಿ ಮೋದಿ ಹಸಿರು ನಿಶಾನೆ

ಹೈದರಾಬಾದ್ (ತೆಲಂಗಾಣ): ಹೈದರಾಬಾದ್​ಗೆ ಶನಿವಾರ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸಿಕಂದರಾಬಾದ್ - ತಿರುಪತಿಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿಸಿದರು. ಆಂಧ್ರಪ್ರದೇಶ ಮತ್ತು ತೆಲಂಗಾಣದ ನಡುವಿನ ಎರಡನೇ ವಂದೇ ಭಾರತ್​ ರೈಲು ಇದಾಗಿದೆ. ಮೂರು ತಿಂಗಳ ಅಂತರದಲ್ಲಿ ಎರಡನೇ ಸೆಮಿ ಹೈಸ್ಪೀಡ್ ಎಕ್ಸ್‌ಪ್ರೆಸ್ ರೈಲು ಕಾರ್ಯಾರಂಭಗೊಂಡಿದೆ.

ಇದರ ಜೊತೆಗೆ ಇಂದು ಪ್ರಧಾನಿ ಮೋದಿ ಅವರು ಎರಡೂ ತೆಲುಗು ರಾಜ್ಯಗಳ ಜನರಿಗೆ ಅನುಕೂಲವಾಗುವಂತೆ 11,300 ಕೋಟಿ ರೂ.ಗಳ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ನೆರವೇರಿಸಲಿದ್ದಾರೆ. 1,350 ಕೋಟಿ ವೆಚ್ಚದ ರೂ. ವೆಚ್ಚದ ಎಐಐಎಂಎಸ್ ಬೀಬಿನಗರ ಮತ್ತು 7850 ಕೋಟಿ ರೂ. ಅಂದಾಜಿನ 5 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಇವು ಎರಡು ರಾಜ್ಯಗಳ ನಡುವೆ ಉತ್ತಮ ರಸ್ತೆ ಸಂಪರ್ಕ ಕಲ್ಪಿಸುವ ಗುರಿ ಹೊಂದಿದೆ. ಇದರ ಜೊತೆಗೆ 720 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಸಿಕಂದರಾಬಾದ್ ರೈಲು ನಿಲ್ದಾಣದ ಅಭಿವೃದ್ಧಿ ಯೋಜನೆಗೂ ಇದೇ ವೇಳೆ ಚಾಲನೆ ನೀಡಲಿದ್ದಾರೆ.

  • Prime Minister Narendra Modi landed in Hyderabad a short while ago. He was received by Governor Dr Tamilisai Soundararajan and other dignitaries: PMO pic.twitter.com/HjIwdOjixm

    — ANI (@ANI) April 8, 2023 " class="align-text-top noRightClick twitterSection" data=" ">

ಇದನ್ನು ಓದಿ:ಹಿಂಡನ್​ಬರ್ಗ್​ ವರದಿ "ಉದ್ದೇಶಪೂರ್ವಕ": ಕಾಂಗ್ರೆಸ್​ ಮಿತ್ರಪಕ್ಷ ನಾಯಕನ ಅಚ್ಚರಿಯ ಹೇಳಿಕೆ

ಪ್ರಯಾಣದ ಅವಧಿ ಕಡಿತ: ಸಿಕಂದರಾಬಾದ್ - ತಿರುಪತಿ ನಡುವೆ ಆರಂಭವಾಗಿರುವ ದೇಶದ 13 ನೇ ವಂದೇ ಭಾರತ್ ರೈಲು ಇದಾಗಿದ್ದು, ನಲ್ಗೊಂಡ, ಗುಂಟೂರು, ಒಂಗೋಲ್​ ಮತ್ತು ನೆಲ್ಲೂರಿನಲ್ಲಿ ನಿಲುಗಡೆ ಹೊಂದಿದೆ. ಎರಡು ನಗರಗಳ ನಡುವೆ 660 ಕಿಮೀ ಅಂತರವನ್ನು ಇದು ಹೊಂದಿದೆ. ಎಕ್ಸ್​ಪ್ರೆಸ್​ ರೈಲಿನಿಂದ ಪ್ರಯಾಣದ ಸಮಯ ಸುಮಾರು ಮೂರೂವರೆ ಗಂಟೆಗಳಷ್ಟು ಕಡಿತವಾಗಲಿದೆ. ಒಂದು ನಿಮಿಷ ಅಥವಾ 52 ಸೆಕೆಂಡುಗಳಲ್ಲಿ 100 ಕಿಮೀ ವೇಗದಲ್ಲಿ ರೈಲು ಸಂಚಾರ ನಡೆಸಲಿದೆ.

ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಸಿಸಿಟಿವಿ ಕ್ಯಾಮೆರಾಗಳು, ಪವರ್ ಬ್ಯಾಕಪ್, ಜಿಪಿಎಸ್ ಆಧಾರಿತ ಮಾಹಿತಿ ವ್ಯವಸ್ಥೆಗಳು ಮತ್ತು ವ್ಯಾಕ್ಯೂಮ್ ಟಾಯ್ಲೆಟ್‌ಗಳನ್ನು ಅಳವಡಿಸಲಾಗಿದೆ. ವಂದೇ ಭಾರತ್ ರೈಲು ಸಿಕಂದರಾಬಾದ್‌ನಿಂದ ತಿರುಪತಿಗೆ ಬೆಳಿಗ್ಗೆ 6 ಗಂಟೆಗೆ ಹೊರಟರೆ ಮಧ್ಯಾಹ್ನ 2:30 ಕ್ಕೆ ಗಮ್ಯಸ್ಥಾನ(ತಿರುಪತಿ) ತಲುಪುತ್ತದೆ. 8 ಗಂಟೆ 30 ನಿಮಿಷಗಳ ಪ್ರಯಾಣ ಅವಧಿ ಹೊಂದಿದೆ. ಇದರಿಂದ ತೆಲಂಗಾಣದಿಂದ ಹೊರಡುವ ಭಕ್ತರಿಗೆ ಭಾರಿ ಅನುಕೂಲ ಆಗಲಿದೆ.

ಇದನ್ನು ಓದಿ:ಇಂದು ಹೈದರಾಬಾದ್​​ಗೆ ಪ್ರಧಾನಿ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಆಹ್ವಾನಕ್ಕೆ ಮತ್ತೆ ಬಾರದ ಸಿಎಂ ಕೆಸಿಆರ್​: ಪ್ರಧಾನಿ ನರೇಂದ್ರ ಮೋದಿ ಅವರ ಟೀಕಾಕಾರರಾದ ಮುಖ್ಯಮಂತ್ರಿ ಕೆ ಚಂದ್ರಶೇಖರ್​ರಾವ್​ ಅವರುಈ ಬಾರಿಯೂ ಪ್ರಧಾನಿಗಳನ್ನು ಆಹ್ವಾನಿಸಲು ಆಗಮಿಸಿರಲಿಲ್ಲ. ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿ ಅವರನ್ನು ರಾಜ್ಯಪಾಲೆ ಡಾ.ತಮಿಳಿಸೈ ಸುಂದರರಾಜನ್ ಮತ್ತು ಇತರ ಗಣ್ಯರು ಬರಮಾಡಿಕೊಂಡರು.

ಪ್ರತಿಪಕ್ಷಗಳ ವಿರುದ್ಧ ಟೀಕಾಪ್ರಹಾರ: ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಕೆಲವು ದಿನಗಳ ಹಿಂದೆ ಪ್ರತಿಪಕ್ಷಗಳು ಭ್ರಷ್ಟಾಚಾರವನ್ನು ಬೆಂಬಲಿಸುವ ರೀತಿಯಲ್ಲಿ ತನಿಖಾ ಸಂಸ್ಥೆಗಳ ವಿರುದ್ಧ ಸುಪ್ರೀಂಕೋರ್ಟ್​ ಮೊರೆ ಹೋಗಿದ್ದವು. ಆದರೆ, ಕೋರ್ಟ್​ ಆರೋಪಗಳನ್ನು ವಜಾಗೊಳಿಸಿದೆ. ಇದು ಪ್ರತಿಪಕ್ಷಗಳಿಗೆ ಮಾಡಿದ ಕಪಾಳಮೋಕ್ಷವಾಗಿದೆ. ಭ್ರಷ್ಟಾಚಾರವನ್ನು ಬಯಲಿಗೆಳೆಯದಂತೆ ಪ್ರತಿಪಕ್ಷಗಳು ರಕ್ಷಣೆ ಕೋರಿದ್ದವು ಎಂದು ಟೀಕಾಪ್ರಹಾರ ನಡೆಸಿದರು.

ಇಂದಿನ ಭಾರತ ನವ ಭಾರತವಾಗಿದೆ. 21 ನೇ ಶತಮಾನದ ಭಾರತ. ದೇಶದ ಮೂಲೆ ಮೂಲೆಗಳಲ್ಲಿ ಆಧುನಿಕ ಮೂಲಸೌಕರ್ಯಗಳು ವೇಗವಾಗಿ ವ್ಯಾಪಿಸುತ್ತಿವೆ. ಕೇಂದ್ರ ಸರ್ಕಾರ ತೆಲಂಗಾಣದಲ್ಲಿ ಹೆದ್ದಾರಿ ಜಾಲವನ್ನು ವೇಗವಾಗಿ ಅಭಿವೃದ್ಧಿಪಡಿಸುತ್ತಿದೆ. ಸಿಕಂದರಾಬಾದ್- ತಿರುಪತಿ ಮಧ್ಯೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಲಾಗಿದೆ. ಇದು ನಂಬಿಕೆ, ಆಧುನಿಕತೆ, ತಂತ್ರಜ್ಞಾನ ಮತ್ತು ಪ್ರವಾಸೋದ್ಯಮವನ್ನು ಹೆಚ್ಚಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಸಿಕಂದರಾಬಾದ್ ನಿಲ್ದಾಣವನ್ನು ವಿಶ್ವದರ್ಜೆಗೇರಿಸಲು ಶಂಕುಸ್ಥಾಪನೆ ಮಾಡಲಿದ್ದಾರೆ. ಸಿಕಂದರಾಬಾದ್ ಮತ್ತು ಮೆಹಬೂಬ್ ನಗರಗಳ ನಡುವೆ 13 ಹೊಸ ಎಂಎಂಟಿಎಸ್ ಸೇವೆಗಳಿಗೆ ಸಹ ಚಾಲನೆ ನೀಡಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದರು.

ಇದನ್ನೂ ಓದಿ: ಚುನಾವಣೆ ವೇಳೆ ಅಮುಲ್​​ ವಿವಾದ.. ಕಾಂಗ್ರೆಸ್- ಜೆಡಿಎಸ್​​​ ಆಕ್ಷೇಪ ಏಕೆ?.. ಈ ಬಗ್ಗೆ ಬಿಜೆಪಿ ನಿಲುವೇನು?

ಸಿಕಂದರಾಬಾದ್​ - ತಿರುಪತಿ ವಂದೇ ಭಾರತ್​ ಎಕ್ಸ್​ಪ್ರೆಸ್​ಗೆ ಪ್ರಧಾನಿ ಮೋದಿ ಹಸಿರು ನಿಶಾನೆ

ಹೈದರಾಬಾದ್ (ತೆಲಂಗಾಣ): ಹೈದರಾಬಾದ್​ಗೆ ಶನಿವಾರ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸಿಕಂದರಾಬಾದ್ - ತಿರುಪತಿಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿಸಿದರು. ಆಂಧ್ರಪ್ರದೇಶ ಮತ್ತು ತೆಲಂಗಾಣದ ನಡುವಿನ ಎರಡನೇ ವಂದೇ ಭಾರತ್​ ರೈಲು ಇದಾಗಿದೆ. ಮೂರು ತಿಂಗಳ ಅಂತರದಲ್ಲಿ ಎರಡನೇ ಸೆಮಿ ಹೈಸ್ಪೀಡ್ ಎಕ್ಸ್‌ಪ್ರೆಸ್ ರೈಲು ಕಾರ್ಯಾರಂಭಗೊಂಡಿದೆ.

ಇದರ ಜೊತೆಗೆ ಇಂದು ಪ್ರಧಾನಿ ಮೋದಿ ಅವರು ಎರಡೂ ತೆಲುಗು ರಾಜ್ಯಗಳ ಜನರಿಗೆ ಅನುಕೂಲವಾಗುವಂತೆ 11,300 ಕೋಟಿ ರೂ.ಗಳ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ನೆರವೇರಿಸಲಿದ್ದಾರೆ. 1,350 ಕೋಟಿ ವೆಚ್ಚದ ರೂ. ವೆಚ್ಚದ ಎಐಐಎಂಎಸ್ ಬೀಬಿನಗರ ಮತ್ತು 7850 ಕೋಟಿ ರೂ. ಅಂದಾಜಿನ 5 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಇವು ಎರಡು ರಾಜ್ಯಗಳ ನಡುವೆ ಉತ್ತಮ ರಸ್ತೆ ಸಂಪರ್ಕ ಕಲ್ಪಿಸುವ ಗುರಿ ಹೊಂದಿದೆ. ಇದರ ಜೊತೆಗೆ 720 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಸಿಕಂದರಾಬಾದ್ ರೈಲು ನಿಲ್ದಾಣದ ಅಭಿವೃದ್ಧಿ ಯೋಜನೆಗೂ ಇದೇ ವೇಳೆ ಚಾಲನೆ ನೀಡಲಿದ್ದಾರೆ.

  • Prime Minister Narendra Modi landed in Hyderabad a short while ago. He was received by Governor Dr Tamilisai Soundararajan and other dignitaries: PMO pic.twitter.com/HjIwdOjixm

    — ANI (@ANI) April 8, 2023 " class="align-text-top noRightClick twitterSection" data=" ">

ಇದನ್ನು ಓದಿ:ಹಿಂಡನ್​ಬರ್ಗ್​ ವರದಿ "ಉದ್ದೇಶಪೂರ್ವಕ": ಕಾಂಗ್ರೆಸ್​ ಮಿತ್ರಪಕ್ಷ ನಾಯಕನ ಅಚ್ಚರಿಯ ಹೇಳಿಕೆ

ಪ್ರಯಾಣದ ಅವಧಿ ಕಡಿತ: ಸಿಕಂದರಾಬಾದ್ - ತಿರುಪತಿ ನಡುವೆ ಆರಂಭವಾಗಿರುವ ದೇಶದ 13 ನೇ ವಂದೇ ಭಾರತ್ ರೈಲು ಇದಾಗಿದ್ದು, ನಲ್ಗೊಂಡ, ಗುಂಟೂರು, ಒಂಗೋಲ್​ ಮತ್ತು ನೆಲ್ಲೂರಿನಲ್ಲಿ ನಿಲುಗಡೆ ಹೊಂದಿದೆ. ಎರಡು ನಗರಗಳ ನಡುವೆ 660 ಕಿಮೀ ಅಂತರವನ್ನು ಇದು ಹೊಂದಿದೆ. ಎಕ್ಸ್​ಪ್ರೆಸ್​ ರೈಲಿನಿಂದ ಪ್ರಯಾಣದ ಸಮಯ ಸುಮಾರು ಮೂರೂವರೆ ಗಂಟೆಗಳಷ್ಟು ಕಡಿತವಾಗಲಿದೆ. ಒಂದು ನಿಮಿಷ ಅಥವಾ 52 ಸೆಕೆಂಡುಗಳಲ್ಲಿ 100 ಕಿಮೀ ವೇಗದಲ್ಲಿ ರೈಲು ಸಂಚಾರ ನಡೆಸಲಿದೆ.

ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಸಿಸಿಟಿವಿ ಕ್ಯಾಮೆರಾಗಳು, ಪವರ್ ಬ್ಯಾಕಪ್, ಜಿಪಿಎಸ್ ಆಧಾರಿತ ಮಾಹಿತಿ ವ್ಯವಸ್ಥೆಗಳು ಮತ್ತು ವ್ಯಾಕ್ಯೂಮ್ ಟಾಯ್ಲೆಟ್‌ಗಳನ್ನು ಅಳವಡಿಸಲಾಗಿದೆ. ವಂದೇ ಭಾರತ್ ರೈಲು ಸಿಕಂದರಾಬಾದ್‌ನಿಂದ ತಿರುಪತಿಗೆ ಬೆಳಿಗ್ಗೆ 6 ಗಂಟೆಗೆ ಹೊರಟರೆ ಮಧ್ಯಾಹ್ನ 2:30 ಕ್ಕೆ ಗಮ್ಯಸ್ಥಾನ(ತಿರುಪತಿ) ತಲುಪುತ್ತದೆ. 8 ಗಂಟೆ 30 ನಿಮಿಷಗಳ ಪ್ರಯಾಣ ಅವಧಿ ಹೊಂದಿದೆ. ಇದರಿಂದ ತೆಲಂಗಾಣದಿಂದ ಹೊರಡುವ ಭಕ್ತರಿಗೆ ಭಾರಿ ಅನುಕೂಲ ಆಗಲಿದೆ.

ಇದನ್ನು ಓದಿ:ಇಂದು ಹೈದರಾಬಾದ್​​ಗೆ ಪ್ರಧಾನಿ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಆಹ್ವಾನಕ್ಕೆ ಮತ್ತೆ ಬಾರದ ಸಿಎಂ ಕೆಸಿಆರ್​: ಪ್ರಧಾನಿ ನರೇಂದ್ರ ಮೋದಿ ಅವರ ಟೀಕಾಕಾರರಾದ ಮುಖ್ಯಮಂತ್ರಿ ಕೆ ಚಂದ್ರಶೇಖರ್​ರಾವ್​ ಅವರುಈ ಬಾರಿಯೂ ಪ್ರಧಾನಿಗಳನ್ನು ಆಹ್ವಾನಿಸಲು ಆಗಮಿಸಿರಲಿಲ್ಲ. ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿ ಅವರನ್ನು ರಾಜ್ಯಪಾಲೆ ಡಾ.ತಮಿಳಿಸೈ ಸುಂದರರಾಜನ್ ಮತ್ತು ಇತರ ಗಣ್ಯರು ಬರಮಾಡಿಕೊಂಡರು.

ಪ್ರತಿಪಕ್ಷಗಳ ವಿರುದ್ಧ ಟೀಕಾಪ್ರಹಾರ: ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಕೆಲವು ದಿನಗಳ ಹಿಂದೆ ಪ್ರತಿಪಕ್ಷಗಳು ಭ್ರಷ್ಟಾಚಾರವನ್ನು ಬೆಂಬಲಿಸುವ ರೀತಿಯಲ್ಲಿ ತನಿಖಾ ಸಂಸ್ಥೆಗಳ ವಿರುದ್ಧ ಸುಪ್ರೀಂಕೋರ್ಟ್​ ಮೊರೆ ಹೋಗಿದ್ದವು. ಆದರೆ, ಕೋರ್ಟ್​ ಆರೋಪಗಳನ್ನು ವಜಾಗೊಳಿಸಿದೆ. ಇದು ಪ್ರತಿಪಕ್ಷಗಳಿಗೆ ಮಾಡಿದ ಕಪಾಳಮೋಕ್ಷವಾಗಿದೆ. ಭ್ರಷ್ಟಾಚಾರವನ್ನು ಬಯಲಿಗೆಳೆಯದಂತೆ ಪ್ರತಿಪಕ್ಷಗಳು ರಕ್ಷಣೆ ಕೋರಿದ್ದವು ಎಂದು ಟೀಕಾಪ್ರಹಾರ ನಡೆಸಿದರು.

ಇಂದಿನ ಭಾರತ ನವ ಭಾರತವಾಗಿದೆ. 21 ನೇ ಶತಮಾನದ ಭಾರತ. ದೇಶದ ಮೂಲೆ ಮೂಲೆಗಳಲ್ಲಿ ಆಧುನಿಕ ಮೂಲಸೌಕರ್ಯಗಳು ವೇಗವಾಗಿ ವ್ಯಾಪಿಸುತ್ತಿವೆ. ಕೇಂದ್ರ ಸರ್ಕಾರ ತೆಲಂಗಾಣದಲ್ಲಿ ಹೆದ್ದಾರಿ ಜಾಲವನ್ನು ವೇಗವಾಗಿ ಅಭಿವೃದ್ಧಿಪಡಿಸುತ್ತಿದೆ. ಸಿಕಂದರಾಬಾದ್- ತಿರುಪತಿ ಮಧ್ಯೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಲಾಗಿದೆ. ಇದು ನಂಬಿಕೆ, ಆಧುನಿಕತೆ, ತಂತ್ರಜ್ಞಾನ ಮತ್ತು ಪ್ರವಾಸೋದ್ಯಮವನ್ನು ಹೆಚ್ಚಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಸಿಕಂದರಾಬಾದ್ ನಿಲ್ದಾಣವನ್ನು ವಿಶ್ವದರ್ಜೆಗೇರಿಸಲು ಶಂಕುಸ್ಥಾಪನೆ ಮಾಡಲಿದ್ದಾರೆ. ಸಿಕಂದರಾಬಾದ್ ಮತ್ತು ಮೆಹಬೂಬ್ ನಗರಗಳ ನಡುವೆ 13 ಹೊಸ ಎಂಎಂಟಿಎಸ್ ಸೇವೆಗಳಿಗೆ ಸಹ ಚಾಲನೆ ನೀಡಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದರು.

ಇದನ್ನೂ ಓದಿ: ಚುನಾವಣೆ ವೇಳೆ ಅಮುಲ್​​ ವಿವಾದ.. ಕಾಂಗ್ರೆಸ್- ಜೆಡಿಎಸ್​​​ ಆಕ್ಷೇಪ ಏಕೆ?.. ಈ ಬಗ್ಗೆ ಬಿಜೆಪಿ ನಿಲುವೇನು?

Last Updated : Apr 8, 2023, 5:44 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.