ETV Bharat / bharat

ಪ್ರಕಾಶ್​ ಸಿಂಗ್​ ಬಾದಲ್​ ಪಾದಮುಟ್ಟಿ ನಮಸ್ಕರಿಸಿದ್ದ ಮೋದಿ : ಹಳೆ ಫೋಟೋ ವೈರಲ್​​

author img

By

Published : Apr 26, 2023, 5:37 PM IST

ಪಂಜಾಬ್​ ಮಾಜಿ ಸಿಎಂ ಪ್ರಕಾಶ್ ಸಿಂಗ್​​ ಬಾದಲ್​​ ನಿಧನರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಇಂದು ಅಂತಿಮ ನಮನ ಸಲ್ಲಿಸಿದರು. ಈ ಹಿಂದೆ 2019ರಲ್ಲಿ ಪ್ರಧಾನಿ ಮೋದಿಯವರು ಬಾದಲ್​ ಅವರ ಪಾದ ಮುಟ್ಟಿ ನಮಸ್ಕರಿಸಿದ್ದ ಫೋಟೋ ಇದೀಗ ವೈರಲ್​ ಆಗಿದೆ.

pm-narendra-modi-and-former-punjab-cm-parkash-singh-badal-photo-on-social-media
ಪ್ರಕಾಶ್​ ಸಿಂಗ್​ ಬಾದಲ್​ ಪಾದಮುಟ್ಟಿ ನಮಸ್ಕರಿಸಿದ್ದ ಮೋದಿ : ಹಳೆ ಫೋಟೋ ವೈರಲ್​​

ವಾರಣಾಸಿ ( ಉತ್ತರ ಪ್ರದೇಶ) : ಪಂಜಾಬ್​ ಮಾಜಿ ಮುಖ್ಯಮಂತ್ರಿ, ಶಿರೋಮಣಿ ಅಕಾಲಿದಳ ಸಂಸ್ಥಾಪಕ ಪ್ರಕಾಶ್​ ಸಿಂಗ್​ ಬಾದಲ್​ ಮಂಗಳವಾರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಅವರು ನಿನ್ನೆ ಮೊಹಾಲಿಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರಿಗೆ 95 ವರ್ಷ ವಯಸ್ಸಾಗಿತ್ತು. ಪ್ರಕಾಶ್​ ಸಿಂಗ್​ ಬಾದಲ್​​ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್​, ಪಂಜಾಬ್​ ಸಿಎಂ ಭಗವಂತ್​ ಮಾನ್​ ಸೇರಿ ಹಲವು ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದರು.

ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಮತ್ತು ಪ್ರಕಾಶ್​ ಸಿಂಗ್​ ಬಾದಲ್​ ಅವರ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದರಲ್ಲಿ ಪ್ರಧಾನಿ ಮೋದಿಯವರು ಪ್ರಕಾಶ್​ ಸಿಂಗ್​ ಬಾದಲ್​ ಅವರ ಪಾದ ಮುಟ್ಟಿ ಆಶೀರ್ವಾದ ಪಡೆಯುತ್ತಿರುವುದನ್ನು ಕಾಣಬಹುದು.

pm-narendra-modi-and-former-punjab-cm-parkash-singh-badal-photo-on-social-media
2019ರ ಬಿಜೆಪಿ ಮೈತ್ರಿಕೂಟದ ಎಲ್ಲಾ ಮಿತ್ರಪಕ್ಷಗಳ ಪ್ರಮುಖ ನಾಯಕರ ಜೊತೆ ಬಾದಲ್​

2019ರ ಫೋಟೋ ವೈರಲ್​ : ಭಾವಚಿತ್ರದ ಹಿನ್ನೆಲೆ ನೋಡುವುದಾದರೆ, 2019ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ವಾರಣಾಶಿಯಿಂದ ಸ್ಪರ್ಧಿಸಿದ್ದರು. ಈ ವೇಳೆ ಎರಡನೇ ಬಾರಿಗೆ ನಾಮಪತ್ರ ಸಲ್ಲಿಸಲು ಕಾಶಿಗೆ ಆಗಮಿಸಿದ್ದ ಮೋದಿ ಅವರು ಪ್ರಕಾಶ್​ ಸಿಂಗ್​ ಬಾದಲ್ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಬಾದಲ್ ಅವರ ಪಾದಮುಟ್ಟಿ ನಮಸ್ಕರಿಸಿದ್ದರು. ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ ವೇಳೆ ಪ್ರಕಾಶ್​ ಸಿಂಗ್​ ಬಾದಲ್ ಜೊತೆಗೆ ಆಗಿನ ಬಿಜೆಪಿ ಮೈತ್ರಿಕೂಟದ ಎಲ್ಲಾ ಮಿತ್ರಪಕ್ಷಗಳ ಪ್ರಮುಖ ನಾಯಕರೂ ಉಪಸ್ಥಿತರಿದ್ದರು.

ಪ್ರಕಾಶ್ ಸಿಂಗ್ ಬಾದಲ್ ಅವರ ಆಶೀರ್ವಾದ ಪಡೆದ ಬಳಿಕ ಮೋದಿ ನಾಮಪತ್ರ ಸಲ್ಲಿಸಲು ತೆರಳಿದ್ದರು. ಈ ಚಿತ್ರ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಮಿತ್ರ ಪಕ್ಷಗಳೊಂದಿಗೆ ಬಿಜೆಪಿಯ ಸಂಬಂಧ ಹೇಗೆ ಗಟ್ಟಿಯಾಗಿತ್ತು ಎಂಬ ಸಂದೇಶವನ್ನೂ ಈ ಮೂಲಕ ರವಾನಿಸಲಾಗಿತ್ತು. ಪ್ರಧಾನಿ ಮೋದಿ ಮತ್ತು ಪ್ರಕಾಶ್​ ಸಿಂಗ್​ ಬಾದಲ್​ ನಿಕಟ ಸಂಬಂಧ ಹೊಂದಿದ್ದರು. ಜೊತೆಗೆ ಅವರನ್ನು ಬಹಳ ಗೌರವದಿಂದ ಕಾಣುತ್ತಿದ್ದರು.

ಇಂದು ಪ್ರಧಾನಿ ಮೋದಿಯವರು ಚಂಡೀಗಡಕ್ಕೆ ಆಗಮಿಸಿ ಪ್ರಕಾಶ್​ ಸಿಂಗ್​ ಬಾದಲ್​ ಅವರಿಗೆ ಅಂತಿಮ ನಮನ ಸಲ್ಲಿಸಿದರು. ಬಾದಲ್ ಅವರ ಪಾರ್ಥಿವ ಶರೀರವನ್ನು ಚಂಡೀಗಢ ಸೆಕ್ಟರ್ 28ರ ಶಿರೋಮಣಿ ಅಕಾಲಿದಳದ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ. ನಾಳೆ (ಗುರುವಾರ) ಮಧ್ಯಾಹ್ನ 1 ಗಂಟೆಗೆ ಹುಟ್ಟೂರಾದ ಬಾದಲ್​ನಲ್ಲಿ ಅವರ ಅಂತ್ಯಕ್ರಿಯೆ ನೆರವೇರಲಿದೆ.

ರಾಷ್ಟ್ರೀಯ ಶೋಕಾಚರಣೆ : ಕೇಂದ್ರ ಸರ್ಕಾರವು ಪ್ರಕಾಶ್ ಸಿಂಗ್ ಬಾದಲ್ ಅವರ ನಿಧನಕ್ಕೆ ಸಂತಾಪ ಸೂಚಿಸಲು 2 ದಿನಗಳ ಕಾಲ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ. ದೇಶಾದ್ಯಂತ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತಿದ್ದು, ಎಲ್ಲಾ ಸರ್ಕಾರಿ ಮನರಂಜನಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

ಪಂಜಾಬ್‌ನಲ್ಲಿ ನಾಳೆ ರಜೆ : ಬಾದಲ್ ನಿಧನದ ಶೋಕಾಚರಣೆಯ ಹಿನ್ನೆಲೆಯಲ್ಲಿ ನಾಳೆ ಪಂಜಾಬ್​ನಲ್ಲಿ ರಜೆ ಘೋಷಿಸಲಾಗಿದೆ. ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಶಿಕ್ಷಣ ಸಂಸ್ಥೆಗಳು, ಕಚೇರಿಗಳಿಗೆ ರಜೆ ನೀಡಲಾಗಿದೆ.

ಇದನ್ನೂ ಓದಿ : ಪ್ರಕಾಶ್​ ಸಿಂಗ್​ ಬಾದಲ್​ಗೆ ಪಿಎಂ ಮೋದಿ ಅಂತಿಮ ನಮನ: 2 ದಿನ ರಾಷ್ಟ್ರೀಯ ಶೋಕಾಚರಣೆ, ನಾಳೆ ಅಂತ್ಯಕ್ರಿಯೆ

ವಾರಣಾಸಿ ( ಉತ್ತರ ಪ್ರದೇಶ) : ಪಂಜಾಬ್​ ಮಾಜಿ ಮುಖ್ಯಮಂತ್ರಿ, ಶಿರೋಮಣಿ ಅಕಾಲಿದಳ ಸಂಸ್ಥಾಪಕ ಪ್ರಕಾಶ್​ ಸಿಂಗ್​ ಬಾದಲ್​ ಮಂಗಳವಾರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಅವರು ನಿನ್ನೆ ಮೊಹಾಲಿಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರಿಗೆ 95 ವರ್ಷ ವಯಸ್ಸಾಗಿತ್ತು. ಪ್ರಕಾಶ್​ ಸಿಂಗ್​ ಬಾದಲ್​​ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್​, ಪಂಜಾಬ್​ ಸಿಎಂ ಭಗವಂತ್​ ಮಾನ್​ ಸೇರಿ ಹಲವು ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದರು.

ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಮತ್ತು ಪ್ರಕಾಶ್​ ಸಿಂಗ್​ ಬಾದಲ್​ ಅವರ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದರಲ್ಲಿ ಪ್ರಧಾನಿ ಮೋದಿಯವರು ಪ್ರಕಾಶ್​ ಸಿಂಗ್​ ಬಾದಲ್​ ಅವರ ಪಾದ ಮುಟ್ಟಿ ಆಶೀರ್ವಾದ ಪಡೆಯುತ್ತಿರುವುದನ್ನು ಕಾಣಬಹುದು.

pm-narendra-modi-and-former-punjab-cm-parkash-singh-badal-photo-on-social-media
2019ರ ಬಿಜೆಪಿ ಮೈತ್ರಿಕೂಟದ ಎಲ್ಲಾ ಮಿತ್ರಪಕ್ಷಗಳ ಪ್ರಮುಖ ನಾಯಕರ ಜೊತೆ ಬಾದಲ್​

2019ರ ಫೋಟೋ ವೈರಲ್​ : ಭಾವಚಿತ್ರದ ಹಿನ್ನೆಲೆ ನೋಡುವುದಾದರೆ, 2019ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ವಾರಣಾಶಿಯಿಂದ ಸ್ಪರ್ಧಿಸಿದ್ದರು. ಈ ವೇಳೆ ಎರಡನೇ ಬಾರಿಗೆ ನಾಮಪತ್ರ ಸಲ್ಲಿಸಲು ಕಾಶಿಗೆ ಆಗಮಿಸಿದ್ದ ಮೋದಿ ಅವರು ಪ್ರಕಾಶ್​ ಸಿಂಗ್​ ಬಾದಲ್ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಬಾದಲ್ ಅವರ ಪಾದಮುಟ್ಟಿ ನಮಸ್ಕರಿಸಿದ್ದರು. ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ ವೇಳೆ ಪ್ರಕಾಶ್​ ಸಿಂಗ್​ ಬಾದಲ್ ಜೊತೆಗೆ ಆಗಿನ ಬಿಜೆಪಿ ಮೈತ್ರಿಕೂಟದ ಎಲ್ಲಾ ಮಿತ್ರಪಕ್ಷಗಳ ಪ್ರಮುಖ ನಾಯಕರೂ ಉಪಸ್ಥಿತರಿದ್ದರು.

ಪ್ರಕಾಶ್ ಸಿಂಗ್ ಬಾದಲ್ ಅವರ ಆಶೀರ್ವಾದ ಪಡೆದ ಬಳಿಕ ಮೋದಿ ನಾಮಪತ್ರ ಸಲ್ಲಿಸಲು ತೆರಳಿದ್ದರು. ಈ ಚಿತ್ರ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಮಿತ್ರ ಪಕ್ಷಗಳೊಂದಿಗೆ ಬಿಜೆಪಿಯ ಸಂಬಂಧ ಹೇಗೆ ಗಟ್ಟಿಯಾಗಿತ್ತು ಎಂಬ ಸಂದೇಶವನ್ನೂ ಈ ಮೂಲಕ ರವಾನಿಸಲಾಗಿತ್ತು. ಪ್ರಧಾನಿ ಮೋದಿ ಮತ್ತು ಪ್ರಕಾಶ್​ ಸಿಂಗ್​ ಬಾದಲ್​ ನಿಕಟ ಸಂಬಂಧ ಹೊಂದಿದ್ದರು. ಜೊತೆಗೆ ಅವರನ್ನು ಬಹಳ ಗೌರವದಿಂದ ಕಾಣುತ್ತಿದ್ದರು.

ಇಂದು ಪ್ರಧಾನಿ ಮೋದಿಯವರು ಚಂಡೀಗಡಕ್ಕೆ ಆಗಮಿಸಿ ಪ್ರಕಾಶ್​ ಸಿಂಗ್​ ಬಾದಲ್​ ಅವರಿಗೆ ಅಂತಿಮ ನಮನ ಸಲ್ಲಿಸಿದರು. ಬಾದಲ್ ಅವರ ಪಾರ್ಥಿವ ಶರೀರವನ್ನು ಚಂಡೀಗಢ ಸೆಕ್ಟರ್ 28ರ ಶಿರೋಮಣಿ ಅಕಾಲಿದಳದ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ. ನಾಳೆ (ಗುರುವಾರ) ಮಧ್ಯಾಹ್ನ 1 ಗಂಟೆಗೆ ಹುಟ್ಟೂರಾದ ಬಾದಲ್​ನಲ್ಲಿ ಅವರ ಅಂತ್ಯಕ್ರಿಯೆ ನೆರವೇರಲಿದೆ.

ರಾಷ್ಟ್ರೀಯ ಶೋಕಾಚರಣೆ : ಕೇಂದ್ರ ಸರ್ಕಾರವು ಪ್ರಕಾಶ್ ಸಿಂಗ್ ಬಾದಲ್ ಅವರ ನಿಧನಕ್ಕೆ ಸಂತಾಪ ಸೂಚಿಸಲು 2 ದಿನಗಳ ಕಾಲ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ. ದೇಶಾದ್ಯಂತ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತಿದ್ದು, ಎಲ್ಲಾ ಸರ್ಕಾರಿ ಮನರಂಜನಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

ಪಂಜಾಬ್‌ನಲ್ಲಿ ನಾಳೆ ರಜೆ : ಬಾದಲ್ ನಿಧನದ ಶೋಕಾಚರಣೆಯ ಹಿನ್ನೆಲೆಯಲ್ಲಿ ನಾಳೆ ಪಂಜಾಬ್​ನಲ್ಲಿ ರಜೆ ಘೋಷಿಸಲಾಗಿದೆ. ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಶಿಕ್ಷಣ ಸಂಸ್ಥೆಗಳು, ಕಚೇರಿಗಳಿಗೆ ರಜೆ ನೀಡಲಾಗಿದೆ.

ಇದನ್ನೂ ಓದಿ : ಪ್ರಕಾಶ್​ ಸಿಂಗ್​ ಬಾದಲ್​ಗೆ ಪಿಎಂ ಮೋದಿ ಅಂತಿಮ ನಮನ: 2 ದಿನ ರಾಷ್ಟ್ರೀಯ ಶೋಕಾಚರಣೆ, ನಾಳೆ ಅಂತ್ಯಕ್ರಿಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.