ETV Bharat / bharat

ಇಂದು ಪ್ರಧಾನಿ ಮೋದಿಯೊಂದಿಗೆ ಜಮ್ಮು ಕಾಶ್ಮೀರದ ಸರ್ವಪಕ್ಷ ನಾಯಕರ ಸಭೆ

author img

By

Published : Jun 24, 2021, 9:01 AM IST

ಪ್ರಧಾನಿ ಮೋದಿಯೊಂದಿಗೆ ನಡೆಯಲಿರುವ ಸಭೆಯಲ್ಲಿ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮತ್ತೆ ನೀಡಬೇಕೆಂದು ಅಲ್ಲಿನ ನಾಯಕರು ಮನವಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

pm narendra modi
pm narendra modi

ನವದೆಹಲಿ: ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಕಾಶ್ಮೀರದ ಮುಂದಿನ ಯೋಜನೆಗಳು ಮತ್ತು ರೂಪುರೇಷೆಗಳ ಕುರಿತಾಗಿ ಚರ್ಚಿಸಲು, ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಕಾಶ್ಮೀರದ ನಾಲ್ವರು ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ವಿವಿಧ ಪಕ್ಷಗಳ 14 ರಾಜಕೀಯ ಮುಖಂಡರೊಂದಿಗೆ ನವದೆಹಲಿಯಲ್ಲಿ ಇಂದು ಸಭೆ ನಡೆಸಲಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ, ರಾಜ್ಯದ ಸ್ಥಾನಮಾನದಿಂದ ಕೇಂದ್ರಾಡಳಿತ ಪ್ರದೇಶವನ್ನಾಗಿ ರೂಪಿಸಿದ ಬಳಿ ಕೇಂದ್ರ ಸರ್ಕಾರದೊಂದಿಗೆ ಇದೇ ಮೊದಲ ಸರ್ವಪಕ್ಷ ಸಭೆಯಾಗಿದೆ.

ಮಧ್ಯಾಹ್ನ 3ಗಂಟೆಗೆ ನಡೆಯಲಿರುವ ಈ ಸಭೆಯಲ್ಲಿ ಜಮ್ಮುಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಗಳನ್ನು ನಡೆಸುವುದು ಮತ್ತು ರಾಜಕೀಯ ಪ್ರಕ್ರಿಯೆಗಳನ್ನು ಬಲಪಡಿಸುವ ಕುರಿತಾಗಿ ನಡೆಯಲಿದ್ದು, ಕೇಂದ್ರ ಸರ್ಕಾರ ಮುಂದಿನ ದಿನಗಳಲ್ಲಿ ತೆಗೆದುಕೊಳ್ಳುವ ಕ್ರಮಗಳಿಗೆ ದಿಕ್ಸೂಚಿಯಾಗಿ ಕಾರ್ಯನಿರ್ವಹಿಸಲಿದೆ.

ಆದರೂ ಕೇಂದ್ರಸರ್ಕಾರ ಈ ಸರ್ವ ಪಕ್ಷ ಸಭೆಯಲ್ಲಿ ಯಾವ ವಿಚಾರದ ಬಗ್ಗೆ ಚರ್ಚೆಯಾಗಬೇಕೆಂದು ಬಹಿರಂಗಪಡಿಸಿಲ್ಲ. ಜಮ್ಮು ಕಾಶ್ಮೀರದ ಎಲ್ಲಾ ನಾಯಕರು ಮುಕ್ತ ಮನಸ್ಸಿನಿಂದ ಸಭೆಯಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ. ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮತ್ತೆ ನೀಡಬೇಕೆಂದು ಮನವಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಯಾರೆಲ್ಲಾ ಭಾಗಿ?

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿಯಾದ ಫಾರೂಕ್ ಅಬ್ದುಲ್ಲಾ ಈ ಸಭೆಯ ನೇತೃತ್ವ ವಹಿಸಲಿದ್ದು, ಇನ್ನುಳಿದ ಮಾಜಿ ಮುಖ್ಯಮಂತ್ರಿಗಳಾದ ಒಮರ್ ಅಬ್ದುಲ್ಲಾ, ಗುಲಾಮ್ ನಬಿ ಆಜಾದ್ ಮತ್ತು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಅತಿ ಹೆಚ್ಚು ಗೋಲ್​ ಗಳಿಸಿದವರಲ್ಲಿ ಮೊದಲ ಸ್ಥಾನ ಹಂಚಿಕೊಂಡ ರೊನಾಲ್ಡೋ

ಕಾಂಗ್ರೆಸ್ ಮುಖಂಡ ತಾರಾ ಚಂದ್, ಪೀಪಲ್ಸ್ ಕಾನ್ಫರೆನ್ಸ್ ಮುಖಂಡ ಮುಜಾಫರ್ ಹುಸೇನ್ ಬೇಗ್, ಮತ್ತು ಬಿಜೆಪಿ ನಾಯಕರಾದ ನಿರ್ಮಲ್ ಸಿಂಗ್ ಮತ್ತು ಕವಿಂದರ್ ಗುಪ್ತಾ, ಸಿಪಿಐ (ಎಂ) ಮುಖಂಡ ಮೊಹಮ್ಮದ್ ಯೂಸುಫ್ ತರಿಗಾಮಿ, ಜಮ್ಮು ಮತ್ತು ಕಾಶ್ಮೀರ ಅಪ್ನಿ ಪಕ್ಷದ (ಜೆಕೆಎಪಿ) ಮುಖ್ಯಸ್ಥ ಅಲ್ತಾಫ್ ಬುಖಾರಿ, ಪೀಪಲ್ಸ್ ಕಾನ್ಫರೆನ್ಸ್‌ನ ಸಜ್ಜಾದ್ ಲೋನ್, ಕಾಂಗ್ರೆಸ್ ಮುಖ್ಯಸ್ಥ ಜಿ.ಎ.ಮಿರ್, ಬಿಜೆಪಿಯ ರವೀಂದರ್​​​ ರೈನಾ, ಮತ್ತು ಪ್ಯಾಂಥರ್ಸ್ ಪಕ್ಷದ ನಾಯಕ ಭೀಮ್ ಸಿಂಗ್ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ನವದೆಹಲಿ: ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಕಾಶ್ಮೀರದ ಮುಂದಿನ ಯೋಜನೆಗಳು ಮತ್ತು ರೂಪುರೇಷೆಗಳ ಕುರಿತಾಗಿ ಚರ್ಚಿಸಲು, ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಕಾಶ್ಮೀರದ ನಾಲ್ವರು ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ವಿವಿಧ ಪಕ್ಷಗಳ 14 ರಾಜಕೀಯ ಮುಖಂಡರೊಂದಿಗೆ ನವದೆಹಲಿಯಲ್ಲಿ ಇಂದು ಸಭೆ ನಡೆಸಲಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ, ರಾಜ್ಯದ ಸ್ಥಾನಮಾನದಿಂದ ಕೇಂದ್ರಾಡಳಿತ ಪ್ರದೇಶವನ್ನಾಗಿ ರೂಪಿಸಿದ ಬಳಿ ಕೇಂದ್ರ ಸರ್ಕಾರದೊಂದಿಗೆ ಇದೇ ಮೊದಲ ಸರ್ವಪಕ್ಷ ಸಭೆಯಾಗಿದೆ.

ಮಧ್ಯಾಹ್ನ 3ಗಂಟೆಗೆ ನಡೆಯಲಿರುವ ಈ ಸಭೆಯಲ್ಲಿ ಜಮ್ಮುಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಗಳನ್ನು ನಡೆಸುವುದು ಮತ್ತು ರಾಜಕೀಯ ಪ್ರಕ್ರಿಯೆಗಳನ್ನು ಬಲಪಡಿಸುವ ಕುರಿತಾಗಿ ನಡೆಯಲಿದ್ದು, ಕೇಂದ್ರ ಸರ್ಕಾರ ಮುಂದಿನ ದಿನಗಳಲ್ಲಿ ತೆಗೆದುಕೊಳ್ಳುವ ಕ್ರಮಗಳಿಗೆ ದಿಕ್ಸೂಚಿಯಾಗಿ ಕಾರ್ಯನಿರ್ವಹಿಸಲಿದೆ.

ಆದರೂ ಕೇಂದ್ರಸರ್ಕಾರ ಈ ಸರ್ವ ಪಕ್ಷ ಸಭೆಯಲ್ಲಿ ಯಾವ ವಿಚಾರದ ಬಗ್ಗೆ ಚರ್ಚೆಯಾಗಬೇಕೆಂದು ಬಹಿರಂಗಪಡಿಸಿಲ್ಲ. ಜಮ್ಮು ಕಾಶ್ಮೀರದ ಎಲ್ಲಾ ನಾಯಕರು ಮುಕ್ತ ಮನಸ್ಸಿನಿಂದ ಸಭೆಯಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ. ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮತ್ತೆ ನೀಡಬೇಕೆಂದು ಮನವಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಯಾರೆಲ್ಲಾ ಭಾಗಿ?

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿಯಾದ ಫಾರೂಕ್ ಅಬ್ದುಲ್ಲಾ ಈ ಸಭೆಯ ನೇತೃತ್ವ ವಹಿಸಲಿದ್ದು, ಇನ್ನುಳಿದ ಮಾಜಿ ಮುಖ್ಯಮಂತ್ರಿಗಳಾದ ಒಮರ್ ಅಬ್ದುಲ್ಲಾ, ಗುಲಾಮ್ ನಬಿ ಆಜಾದ್ ಮತ್ತು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಅತಿ ಹೆಚ್ಚು ಗೋಲ್​ ಗಳಿಸಿದವರಲ್ಲಿ ಮೊದಲ ಸ್ಥಾನ ಹಂಚಿಕೊಂಡ ರೊನಾಲ್ಡೋ

ಕಾಂಗ್ರೆಸ್ ಮುಖಂಡ ತಾರಾ ಚಂದ್, ಪೀಪಲ್ಸ್ ಕಾನ್ಫರೆನ್ಸ್ ಮುಖಂಡ ಮುಜಾಫರ್ ಹುಸೇನ್ ಬೇಗ್, ಮತ್ತು ಬಿಜೆಪಿ ನಾಯಕರಾದ ನಿರ್ಮಲ್ ಸಿಂಗ್ ಮತ್ತು ಕವಿಂದರ್ ಗುಪ್ತಾ, ಸಿಪಿಐ (ಎಂ) ಮುಖಂಡ ಮೊಹಮ್ಮದ್ ಯೂಸುಫ್ ತರಿಗಾಮಿ, ಜಮ್ಮು ಮತ್ತು ಕಾಶ್ಮೀರ ಅಪ್ನಿ ಪಕ್ಷದ (ಜೆಕೆಎಪಿ) ಮುಖ್ಯಸ್ಥ ಅಲ್ತಾಫ್ ಬುಖಾರಿ, ಪೀಪಲ್ಸ್ ಕಾನ್ಫರೆನ್ಸ್‌ನ ಸಜ್ಜಾದ್ ಲೋನ್, ಕಾಂಗ್ರೆಸ್ ಮುಖ್ಯಸ್ಥ ಜಿ.ಎ.ಮಿರ್, ಬಿಜೆಪಿಯ ರವೀಂದರ್​​​ ರೈನಾ, ಮತ್ತು ಪ್ಯಾಂಥರ್ಸ್ ಪಕ್ಷದ ನಾಯಕ ಭೀಮ್ ಸಿಂಗ್ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.