ETV Bharat / bharat

15-20 ನಿಮಿಷ ಫ್ಲೈಓವರ್​​​​ನಲ್ಲೇ ಸಿಲುಕಿಕೊಂಡ ಮೋದಿ; ಪಂಜಾಬ್‌ನಲ್ಲಿ ಬಹುದೊಡ್ಡ ಭದ್ರತಾ ಲೋಪ

author img

By

Published : Jan 5, 2022, 3:21 PM IST

Updated : Jan 5, 2022, 9:10 PM IST

ಪಂಜಾಬ್​ನಲ್ಲಿ ಇಂದು ನಡೆಯಬೇಕಾಗಿದ್ದ ಚುನಾವಣಾ ರ್‍ಯಾಲಿಯಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದ ವೇಳೆ ಅವರು 15 ರಿಂದ 20 ನಿಮಿಷಗಳ ಕಾಲ ಫ್ಲೈಓವರ್​​​​ನಲ್ಲೇ ಸಿಲುಕಿಕೊಂಡರು. ಇದನ್ನು ಕೇಂದ್ರ ಸರ್ಕಾರ, ರಾಜ್ಯ ಕಾಂಗ್ರೆಸ್‌ ಸರ್ಕಾರದ ಬಹುದೊಡ್ಡ ಭದ್ರತಾ ಲೋಪ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

PM stuck on a flyover
PM stuck on a flyover

ಫಿರೋಜ್​ಪುರ್​(ಪಂಜಾಬ್​): ಪಂಜಾಬ್​​ನ ಫಿರೋಜ್​​​ಪುರ್​​ನಲ್ಲಿ ​​​ಚುನಾವಣಾ ಪ್ರಚಾರ ನಡೆಸಬೇಕಾಗಿದ್ದ ಪ್ರಧಾನಿ ನರೇಂದ್ರ ಮೋದಿ, ಭದ್ರತಾ ಲೋಪದಿಂದಾಗಿ ದಿಢೀರ್​ ಆಗಿ ರ್‍ಯಾಲಿ ರದ್ದುಗೊಳಿಸಿದ್ದಾರೆ.

PM stuck on a flyover
15-20 ನಿಮಿಷಗಳ ಕಾಲ ಫ್ಲೈಓವರ್​​​​ನಲ್ಲಿ ಸಿಲುಕೊಂಡ ನಮೋ

ಹುಸೇನಿವಾಲಾದಲ್ಲಿನ ರಾಷ್ಟ್ರೀಯ ಹುತಾತ್ಮರ ಸ್ಮಾರಕದಿಂದ ಫಿರೋಜ್‌ಪುರಕ್ಕೆ ಪ್ರಧಾನಿ ರಸ್ತೆ ಮಾರ್ಗವಾಗಿ ಸಂಚರಿಸುತ್ತಿದ್ದರು. ಈ ವೇಳೆ ಬೆಂಗಾವಲು ಪಡೆ ಫ್ಲೈಓವರ್‌ವೊಂದರಲ್ಲೇ ಸುಮಾರು 20 ನಿಮಿಷಗಳ ಕಾಲ ಕಳೆಯಬೇಕಾಯಿತು. ಪ್ರತಿಭಟನಾಕಾರರು ರಸ್ತೆಯಲ್ಲಿ ಅಡಚಣೆ ಉಂಟು ಮಾಡಿದ್ದೇ ಇದಕ್ಕೆ ಕಾರಣವಾಗಿದೆ.

  • #WATCH | PM Narendra Modi cancels his scheduled visit to Punjab's Ferozepur to address a rally "due to some reasons", Union Minister Mansukh Mandaviya announces from the stage pic.twitter.com/j9Ykcmv9KA

    — ANI (@ANI) January 5, 2022 " class="align-text-top noRightClick twitterSection" data=" ">

ಪ್ರಧಾನಿ ಮೋದಿಯವರ ಭದ್ರತೆಯಲ್ಲಿ ದೊಡ್ಡ ಮಟ್ಟದ ಲೋಪ ಕಂಡು ಬಂದಿರುವ ಕಾರಣ ದಿಢೀರ್​ ಆಗಿ ರ್‍ಯಾಲಿ ರದ್ಧುಗೊಳಿಸಲಾಗಿದೆ ಎಂದು ಕೇಂದ್ರ ಗೃಹ ಇಲಾಖೆ ಸ್ಪಷ್ಟಪಡಿಸಿದೆ.

PM stuck on a flyover
ಫ್ಲೈಓವರ್​​​​ನಲ್ಲಿ ಸಿಲುಕಿಕೊಂಡ ನಮೋ

ಸಂಪೂರ್ಣ ವಿವರ:

ಪಂಜಾಬ್​ನ ಹುಸೇನಿವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಲು ಪ್ರಧಾನಿ ಮೋದಿ ಬಟಿಂಡಾಗೆ ಬಂದಿಳಿದಿದ್ದರು. ಈ ವೇಳೆ ಹೆಲಿಕಾಪ್ಟರ್ ಮೂಲಕ ಅವರು ಸ್ಥಳಕ್ಕೆ ತೆರಳಬೇಕಿತ್ತು. ಆದರೆ ಹವಾಮಾನ ವೈಪರೀತ್ಯದಿಂದಾಗಿ ಅದು ಸಾಧ್ಯವಾಗಿಲ್ಲ. ಹೀಗಾಗಿ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಪ್ರತಿಭಟನಾಕಾರರು ರಸ್ತೆಯಲ್ಲಿ ಅಡಚಣೆ ಉಂಟು ಮಾಡಿದ್ದು ಫ್ಲೈಓವರ್​ನಲ್ಲಿ ಪ್ರಧಾನಿ ಸಿಲುಕಿಕೊಂಡರು.

ಫ್ಲೈಓವರ್​ ಮೇಲೆ ಪ್ರತಿಭಟನೆ ನಡೆಸಿದ ರೈತರು

ಪಂಜಾಬ್​ ಕಾಂಗ್ರೆಸ್​ ವಿರುದ್ಧ ಕೇಂದ್ರ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗದೇ ವಾಪಸ್​ ಆಗಿದ್ದು, ಕೇಂದ್ರ ಗೃಹ ಸಚಿವಾಲಯ ಪಂಜಾಬ್​ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದೆ. ಭದ್ರತೆ ಲೋಪವನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರದಿಂದ ವಿವರವಾದ ವರದಿ ಕೇಳಲಾಗಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.

  • Ministry of Home Affairs (MHA) says it is taking cognisance of this serious security lapse has sought a detailed report from the state government. State Government has also been asked to fix responsibility for this lapse and take strict action.

    — ANI (@ANI) January 5, 2022 " class="align-text-top noRightClick twitterSection" data=" ">

ಸಿಎಂ ಚನ್ನಿ ವಿರುದ್ಧ ನಡ್ಡಾ ವಾಗ್ದಾಳಿ

  • It is sad that the PM’s visit to launch development projects worth thousands of crores for Punjab was disrupted. But we will not let such cheap mentality hinder progress of Punjab and will continue the effort for the development of Punjab.

    — Jagat Prakash Nadda (@JPNadda) January 5, 2022 " class="align-text-top noRightClick twitterSection" data=" ">

ಸಾವಿರಾರು ಕೋಟಿ ರೂ ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ತೆರಳುತ್ತಿದ್ದ ಪ್ರಧಾನಿ ರ್‍ಯಾಲಿಗೆ ಅಡ್ಡಿಪಡಿಸಲಾಗಿದ್ದು, ಅಲ್ಲಿನ ಜನರು ಸಭೆಯಲ್ಲಿ ಭಾಗಿಯಾಗದಂತೆ ತಡೆಯಲು ಪೊಲೀಸರಿಗೆ ಸೂಚನೆ ನೀಡಲಾಗಿತ್ತು. ಮುಖ್ಯಮಂತ್ರಿ ಸಮಸ್ಯೆ ಬಗೆಹರಿಸಲು ನಿರಾಕರಿಸಿದ್ದಾರೆಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಆರೋಪಿಸಿದ್ದಾರೆ.

ಫಿರೋಜ್​ಪುರ್​(ಪಂಜಾಬ್​): ಪಂಜಾಬ್​​ನ ಫಿರೋಜ್​​​ಪುರ್​​ನಲ್ಲಿ ​​​ಚುನಾವಣಾ ಪ್ರಚಾರ ನಡೆಸಬೇಕಾಗಿದ್ದ ಪ್ರಧಾನಿ ನರೇಂದ್ರ ಮೋದಿ, ಭದ್ರತಾ ಲೋಪದಿಂದಾಗಿ ದಿಢೀರ್​ ಆಗಿ ರ್‍ಯಾಲಿ ರದ್ದುಗೊಳಿಸಿದ್ದಾರೆ.

PM stuck on a flyover
15-20 ನಿಮಿಷಗಳ ಕಾಲ ಫ್ಲೈಓವರ್​​​​ನಲ್ಲಿ ಸಿಲುಕೊಂಡ ನಮೋ

ಹುಸೇನಿವಾಲಾದಲ್ಲಿನ ರಾಷ್ಟ್ರೀಯ ಹುತಾತ್ಮರ ಸ್ಮಾರಕದಿಂದ ಫಿರೋಜ್‌ಪುರಕ್ಕೆ ಪ್ರಧಾನಿ ರಸ್ತೆ ಮಾರ್ಗವಾಗಿ ಸಂಚರಿಸುತ್ತಿದ್ದರು. ಈ ವೇಳೆ ಬೆಂಗಾವಲು ಪಡೆ ಫ್ಲೈಓವರ್‌ವೊಂದರಲ್ಲೇ ಸುಮಾರು 20 ನಿಮಿಷಗಳ ಕಾಲ ಕಳೆಯಬೇಕಾಯಿತು. ಪ್ರತಿಭಟನಾಕಾರರು ರಸ್ತೆಯಲ್ಲಿ ಅಡಚಣೆ ಉಂಟು ಮಾಡಿದ್ದೇ ಇದಕ್ಕೆ ಕಾರಣವಾಗಿದೆ.

  • #WATCH | PM Narendra Modi cancels his scheduled visit to Punjab's Ferozepur to address a rally "due to some reasons", Union Minister Mansukh Mandaviya announces from the stage pic.twitter.com/j9Ykcmv9KA

    — ANI (@ANI) January 5, 2022 " class="align-text-top noRightClick twitterSection" data=" ">

ಪ್ರಧಾನಿ ಮೋದಿಯವರ ಭದ್ರತೆಯಲ್ಲಿ ದೊಡ್ಡ ಮಟ್ಟದ ಲೋಪ ಕಂಡು ಬಂದಿರುವ ಕಾರಣ ದಿಢೀರ್​ ಆಗಿ ರ್‍ಯಾಲಿ ರದ್ಧುಗೊಳಿಸಲಾಗಿದೆ ಎಂದು ಕೇಂದ್ರ ಗೃಹ ಇಲಾಖೆ ಸ್ಪಷ್ಟಪಡಿಸಿದೆ.

PM stuck on a flyover
ಫ್ಲೈಓವರ್​​​​ನಲ್ಲಿ ಸಿಲುಕಿಕೊಂಡ ನಮೋ

ಸಂಪೂರ್ಣ ವಿವರ:

ಪಂಜಾಬ್​ನ ಹುಸೇನಿವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಲು ಪ್ರಧಾನಿ ಮೋದಿ ಬಟಿಂಡಾಗೆ ಬಂದಿಳಿದಿದ್ದರು. ಈ ವೇಳೆ ಹೆಲಿಕಾಪ್ಟರ್ ಮೂಲಕ ಅವರು ಸ್ಥಳಕ್ಕೆ ತೆರಳಬೇಕಿತ್ತು. ಆದರೆ ಹವಾಮಾನ ವೈಪರೀತ್ಯದಿಂದಾಗಿ ಅದು ಸಾಧ್ಯವಾಗಿಲ್ಲ. ಹೀಗಾಗಿ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಪ್ರತಿಭಟನಾಕಾರರು ರಸ್ತೆಯಲ್ಲಿ ಅಡಚಣೆ ಉಂಟು ಮಾಡಿದ್ದು ಫ್ಲೈಓವರ್​ನಲ್ಲಿ ಪ್ರಧಾನಿ ಸಿಲುಕಿಕೊಂಡರು.

ಫ್ಲೈಓವರ್​ ಮೇಲೆ ಪ್ರತಿಭಟನೆ ನಡೆಸಿದ ರೈತರು

ಪಂಜಾಬ್​ ಕಾಂಗ್ರೆಸ್​ ವಿರುದ್ಧ ಕೇಂದ್ರ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗದೇ ವಾಪಸ್​ ಆಗಿದ್ದು, ಕೇಂದ್ರ ಗೃಹ ಸಚಿವಾಲಯ ಪಂಜಾಬ್​ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದೆ. ಭದ್ರತೆ ಲೋಪವನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರದಿಂದ ವಿವರವಾದ ವರದಿ ಕೇಳಲಾಗಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.

  • Ministry of Home Affairs (MHA) says it is taking cognisance of this serious security lapse has sought a detailed report from the state government. State Government has also been asked to fix responsibility for this lapse and take strict action.

    — ANI (@ANI) January 5, 2022 " class="align-text-top noRightClick twitterSection" data=" ">

ಸಿಎಂ ಚನ್ನಿ ವಿರುದ್ಧ ನಡ್ಡಾ ವಾಗ್ದಾಳಿ

  • It is sad that the PM’s visit to launch development projects worth thousands of crores for Punjab was disrupted. But we will not let such cheap mentality hinder progress of Punjab and will continue the effort for the development of Punjab.

    — Jagat Prakash Nadda (@JPNadda) January 5, 2022 " class="align-text-top noRightClick twitterSection" data=" ">

ಸಾವಿರಾರು ಕೋಟಿ ರೂ ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ತೆರಳುತ್ತಿದ್ದ ಪ್ರಧಾನಿ ರ್‍ಯಾಲಿಗೆ ಅಡ್ಡಿಪಡಿಸಲಾಗಿದ್ದು, ಅಲ್ಲಿನ ಜನರು ಸಭೆಯಲ್ಲಿ ಭಾಗಿಯಾಗದಂತೆ ತಡೆಯಲು ಪೊಲೀಸರಿಗೆ ಸೂಚನೆ ನೀಡಲಾಗಿತ್ತು. ಮುಖ್ಯಮಂತ್ರಿ ಸಮಸ್ಯೆ ಬಗೆಹರಿಸಲು ನಿರಾಕರಿಸಿದ್ದಾರೆಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಆರೋಪಿಸಿದ್ದಾರೆ.

Last Updated : Jan 5, 2022, 9:10 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.