ETV Bharat / bharat

ಮರಳುಗಾರಿಕೆ ವಿರೋಧಿಸಿ ಪ್ರತಿಭಟನೆ: ಗ್ರಾಮದ ಜನರ ಕೈಕಟ್ಟಿ ಕೂರಿಸಿದ ಪೊಲೀಸರು, ಜನಾಕ್ರೋಶ - A viral video from Bihar's Gaya district showing men and women in handcuffs

ಬಿಹಾರದ ಗಯಾ ಜಿಲ್ಲೆಯಲ್ಲಿ ಪುರುಷರು ಮತ್ತು ಮಹಿಳೆಯರಿಗೆ ಕೈಕಟ್ಟಿ ಹಾಕಿರುವ ವಿಡಿಯೋ ವೈರಲ್ ಆಗಿದ್ದು, ಜನಾಕ್ರೋಶಕ್ಕೆ ಕಾರಣವಾಗಿದೆ.

ಮರಳುಗಾರಿಕೆ ವಿರೋಧಿಸಿ ಪ್ರತಿಭಟನೆ : ಗ್ರಾಮದ ಜನರಿಗೆ ಕೈ ಕೋಳ ಹಾಕಿದ ಪೊಲೀಸರು, ಜನಾಕ್ರೋಶ
ಮರಳುಗಾರಿಕೆ ವಿರೋಧಿಸಿ ಪ್ರತಿಭಟನೆ : ಗ್ರಾಮದ ಜನರಿಗೆ ಕೈ ಕೋಳ ಹಾಕಿದ ಪೊಲೀಸರು, ಜನಾಕ್ರೋಶ
author img

By

Published : Feb 17, 2022, 7:59 PM IST

Updated : Feb 17, 2022, 8:34 PM IST

ಗಯಾ (ಬಿಹಾರ): ಬಿಹಾರದ ಗಯಾ ಜಿಲ್ಲೆಯಲ್ಲಿ ನಡೆದಿರುವ ಈ ಘಟನೆ ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದರಲ್ಲಿ ಕೆಲವು ಪುರುಷ ಹಾಗೂ ಮಹಿಳೆಯರ ಕೈಗಳನ್ನು ಹಿಂದೆ ಹಾಕಿ ಕಟ್ಟಿ ಕೂರಿಸಿದ್ದಾರೆ.

ಗಯಾ ಜಿಲ್ಲೆಯ ಬೆಳಗಂಜ್ ಪೊಲೀಸ್ ಠಾಣೆಯ ಅಹತ್‌ಪುರ ಗ್ರಾಮದಲ್ಲಿ ಮರಳು ಗಣಿಗಾರಿಕೆಗೆ ನದಿಯೊಂದರ ಗಡಿ ಗುರುತಿಸಲು ಬಂದಾಗ ಗ್ರಾಮಸ್ಥರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದೆ. ಮರಳುಗಾರಿಕೆ ವಿರೋಧಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದು, ಮಳೆಗಾಲದಲ್ಲಿ ಗ್ರಾಮಕ್ಕೆ ನೀರು ನುಗ್ಗುವ ಸಂಭವವಿದೆ ಎಂದು ಹೇಳಿದ್ದಾರೆ.

ಇದರಿಂದ ಕುಪಿತರಾದ ಗುತ್ತಿಗೆದಾರರು ಮತ್ತು ಪೊಲೀಸ್ ಸಿಬ್ಬಂದಿ ಬಲಪ್ರಯೋಗ ಮಾಡಿ ಅವರನ್ನು ಓಡಿಸಲು ಮುಂದಾಗಿದ್ದಾರೆ. ಈ ವೇಳೆ ಘರ್ಷಣೆ ನಡೆದು ಈ ಘಟನೆ ಜರುಗಿದೆ ಎಂದು ಹೇಳಲಾಗಿದೆ.

ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಸಹ ಹಾರಿಸಿದ್ದಾರೆ ಎಂದು ಗ್ರಾಮಸ್ಥರು ಹೇಳಿದ್ದಾರೆ. ಅವರು ನಮ್ಮ ಮೇಲೆ ಅಶ್ರುವಾಯು ಶೆಲ್‌ಗಳನ್ನು ಹಾರಿಸಿದರು. ಇದಿರಿಂದ ಹೆದರಿ ನಾವು ನಮ್ಮ ಮನೆಗಳಿಗೆ ಓಡಿಹೋದೆವು. ಆದರೆ, ಅವರು ನಮ್ಮನ್ನು ನಮ್ಮ ಮನೆಗೆ ಹಿಂಬಾಲಿಸಿಕೊಂಡು ಬಂದು ಕ್ರೂರವಾಗಿ ಥಳಿಸಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ವೇದಿಕೆ ಮೇಲೆಯೇ ಬಿದ್ದ ರಕ್ಷಣಾ ಸಚಿವ ರಾಜನಾಥ್ ಸಿಂಗ್: ಕೋಪಗೊಂಡು ಹಾರ ತುರಾಯಿ ನಿರಾಕರಿಸಿದ ಸಚಿವರು

ಮಹಿಳೆಯರು, ಮಕ್ಕಳು ಮತ್ತು ವೃದ್ಧರನ್ನು ಸಹ ಅವರು ಬಿಡಲಿಲ್ಲ. ಥಳಿಸಿದ ನಂತರ ಮಹಿಳೆಯರು ಸೇರಿದಂತೆ ಅನೇಕ ಗ್ರಾಮಸ್ಥರ ಕೈಗಳನ್ನು ಕಟ್ಟಿ ನಂತರ ಬಂಧಿಸಿದರು ಎಂದು ಗ್ರಾಮಸ್ಥರೊಬ್ಬರು ಮಾಹಿತಿ ನೀಡಿದ್ದಾರೆ. ಕೆಲವು ಗ್ರಾಮಸ್ಥರು ಪೊಲೀಸ್ ಪಡೆ ಮೇಲೆ ದಾಳಿ ಮಾಡಿದರು ಪರಿಣಾಮ ಒಂಬತ್ತು ಪೊಲೀಸರು ಗಾಯಗೊಂಡಿದ್ದಾರೆ ಎಂದು ಎಸ್ಪಿ ರಾಕೇಶ್ ಕುಮಾರ್ ಹೇಳಿದ್ದಾರೆ.

ಗಯಾ (ಬಿಹಾರ): ಬಿಹಾರದ ಗಯಾ ಜಿಲ್ಲೆಯಲ್ಲಿ ನಡೆದಿರುವ ಈ ಘಟನೆ ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದರಲ್ಲಿ ಕೆಲವು ಪುರುಷ ಹಾಗೂ ಮಹಿಳೆಯರ ಕೈಗಳನ್ನು ಹಿಂದೆ ಹಾಕಿ ಕಟ್ಟಿ ಕೂರಿಸಿದ್ದಾರೆ.

ಗಯಾ ಜಿಲ್ಲೆಯ ಬೆಳಗಂಜ್ ಪೊಲೀಸ್ ಠಾಣೆಯ ಅಹತ್‌ಪುರ ಗ್ರಾಮದಲ್ಲಿ ಮರಳು ಗಣಿಗಾರಿಕೆಗೆ ನದಿಯೊಂದರ ಗಡಿ ಗುರುತಿಸಲು ಬಂದಾಗ ಗ್ರಾಮಸ್ಥರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದೆ. ಮರಳುಗಾರಿಕೆ ವಿರೋಧಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದು, ಮಳೆಗಾಲದಲ್ಲಿ ಗ್ರಾಮಕ್ಕೆ ನೀರು ನುಗ್ಗುವ ಸಂಭವವಿದೆ ಎಂದು ಹೇಳಿದ್ದಾರೆ.

ಇದರಿಂದ ಕುಪಿತರಾದ ಗುತ್ತಿಗೆದಾರರು ಮತ್ತು ಪೊಲೀಸ್ ಸಿಬ್ಬಂದಿ ಬಲಪ್ರಯೋಗ ಮಾಡಿ ಅವರನ್ನು ಓಡಿಸಲು ಮುಂದಾಗಿದ್ದಾರೆ. ಈ ವೇಳೆ ಘರ್ಷಣೆ ನಡೆದು ಈ ಘಟನೆ ಜರುಗಿದೆ ಎಂದು ಹೇಳಲಾಗಿದೆ.

ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಸಹ ಹಾರಿಸಿದ್ದಾರೆ ಎಂದು ಗ್ರಾಮಸ್ಥರು ಹೇಳಿದ್ದಾರೆ. ಅವರು ನಮ್ಮ ಮೇಲೆ ಅಶ್ರುವಾಯು ಶೆಲ್‌ಗಳನ್ನು ಹಾರಿಸಿದರು. ಇದಿರಿಂದ ಹೆದರಿ ನಾವು ನಮ್ಮ ಮನೆಗಳಿಗೆ ಓಡಿಹೋದೆವು. ಆದರೆ, ಅವರು ನಮ್ಮನ್ನು ನಮ್ಮ ಮನೆಗೆ ಹಿಂಬಾಲಿಸಿಕೊಂಡು ಬಂದು ಕ್ರೂರವಾಗಿ ಥಳಿಸಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ವೇದಿಕೆ ಮೇಲೆಯೇ ಬಿದ್ದ ರಕ್ಷಣಾ ಸಚಿವ ರಾಜನಾಥ್ ಸಿಂಗ್: ಕೋಪಗೊಂಡು ಹಾರ ತುರಾಯಿ ನಿರಾಕರಿಸಿದ ಸಚಿವರು

ಮಹಿಳೆಯರು, ಮಕ್ಕಳು ಮತ್ತು ವೃದ್ಧರನ್ನು ಸಹ ಅವರು ಬಿಡಲಿಲ್ಲ. ಥಳಿಸಿದ ನಂತರ ಮಹಿಳೆಯರು ಸೇರಿದಂತೆ ಅನೇಕ ಗ್ರಾಮಸ್ಥರ ಕೈಗಳನ್ನು ಕಟ್ಟಿ ನಂತರ ಬಂಧಿಸಿದರು ಎಂದು ಗ್ರಾಮಸ್ಥರೊಬ್ಬರು ಮಾಹಿತಿ ನೀಡಿದ್ದಾರೆ. ಕೆಲವು ಗ್ರಾಮಸ್ಥರು ಪೊಲೀಸ್ ಪಡೆ ಮೇಲೆ ದಾಳಿ ಮಾಡಿದರು ಪರಿಣಾಮ ಒಂಬತ್ತು ಪೊಲೀಸರು ಗಾಯಗೊಂಡಿದ್ದಾರೆ ಎಂದು ಎಸ್ಪಿ ರಾಕೇಶ್ ಕುಮಾರ್ ಹೇಳಿದ್ದಾರೆ.

Last Updated : Feb 17, 2022, 8:34 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.