ETV Bharat / bharat

ಉಗ್ರರ ಅಡಗುದಾಣದ ಮೇಲೆ ದಾಳಿ ವೇಳೆ ಎನ್​ಕೌಂಟರ್​ : ಓರ್ವ ಪೊಲೀಸ್​ಗೆ ಗಾಯ

author img

By

Published : Nov 14, 2021, 10:02 PM IST

ಈ ಕುರಿತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮುಖ್ಯಸ್ಥ ದಿಲ್ಬಾಗ್ ಸಿಂಗ್ (Dilbagh Singh) ಮಾಹಿತಿ ನೀಡಿದ್ದು, ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಭಯೋತ್ಪಾದಕರಿಗಾಗಿ ಶೋಧ ಕಾರ್ಯ ಮುಂದುವರೆದಿದೆ ಎಂದಿದ್ದಾರೆ..

Policeman injured in militants attack in Srinagar
ಉಗ್ರರ ಅಡಗುದಾಣದ ಮೇಲೆ ದಾಳಿ ವೇಳೆ ಎನ್​ಕೌಂಟರ್​: ಓರ್ವ ಪೊಲೀಸ್​ಗೆ ಗಾಯ

ಶ್ರೀನಗರ, ಜಮ್ಮು-ಕಾಶ್ಮೀರ: ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ (Security Forces) ನಡುವಿನ ಎನ್​ಕೌಂಟರ್​ ಜಮ್ಮು ಕಾಶ್ಮೀರದಲ್ಲಿ (Jammu Encounter) ಮುಂದುವರೆಯುತ್ತಲೇ ಇದೆ.

ಭಯೋತ್ಪಾದಕರ ಅಡಗುದಾಣದ ಮೇಲೆ ದಾಳಿ ನಡೆಸಿದ್ದ ಪೊಲೀಸರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ಕಾರಣ ಓರ್ವ ಪೊಲೀಸ್​ಗೆ ಗಾಯವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಭಾನುವಾರ ಸಂಜೆ ಭದ್ರತಾ ಪಡೆಗಳ ಮತ್ತು ಭಯೋತ್ಪಾದಕರ ನಡುವೆ ಎನ್​ಕೌಂಟರ್ ನಡೆದಿತ್ತು. ಇದಾದ ನಂತರ ಭಯೋತ್ಪಾದಕರ ಪತ್ತೆಗಾಗಿ ಶೋಧ ಕಾರ್ಯವನ್ನು ಶ್ರೀನಗರದ ಜಮ್ಲತಾ ಪ್ರದೇಶದಲ್ಲಿ ಭದ್ರತಾ ಪಡೆ ಕೈಗೊಂಡಿತ್ತು. ಈ ವೇಳೆ ಹಲವು ಸುತ್ತಿನ ಗುಂಡಿನ ಚಕಮಕಿಯಲ್ಲಿ ಓರ್ವ ಪೊಲೀಸ್​ಗೆ ಗಾಯವಾಗಿದೆ.

ಈ ಕುರಿತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮುಖ್ಯಸ್ಥ ದಿಲ್ಬಾಗ್ ಸಿಂಗ್ (Dilbagh Singh) ಮಾಹಿತಿ ನೀಡಿದ್ದು, ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಭಯೋತ್ಪಾದಕರಿಗಾಗಿ ಶೋಧ ಕಾರ್ಯ ಮುಂದುವರೆದಿದೆ ಎಂದಿದ್ದಾರೆ.

ಇದನ್ನೂ ಓದಿ: ಸರ್ವಾಧಿಕಾರಿ ಗಡಾಫಿ ಪುತ್ರನಿಂದ ಲಿಬಿಯಾ ಅಧ್ಯಕ್ಷೀಯ ಚುನಾವಣೆಗೆ ನಾಮಿನೇಷನ್​

ಶ್ರೀನಗರ, ಜಮ್ಮು-ಕಾಶ್ಮೀರ: ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ (Security Forces) ನಡುವಿನ ಎನ್​ಕೌಂಟರ್​ ಜಮ್ಮು ಕಾಶ್ಮೀರದಲ್ಲಿ (Jammu Encounter) ಮುಂದುವರೆಯುತ್ತಲೇ ಇದೆ.

ಭಯೋತ್ಪಾದಕರ ಅಡಗುದಾಣದ ಮೇಲೆ ದಾಳಿ ನಡೆಸಿದ್ದ ಪೊಲೀಸರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ಕಾರಣ ಓರ್ವ ಪೊಲೀಸ್​ಗೆ ಗಾಯವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಭಾನುವಾರ ಸಂಜೆ ಭದ್ರತಾ ಪಡೆಗಳ ಮತ್ತು ಭಯೋತ್ಪಾದಕರ ನಡುವೆ ಎನ್​ಕೌಂಟರ್ ನಡೆದಿತ್ತು. ಇದಾದ ನಂತರ ಭಯೋತ್ಪಾದಕರ ಪತ್ತೆಗಾಗಿ ಶೋಧ ಕಾರ್ಯವನ್ನು ಶ್ರೀನಗರದ ಜಮ್ಲತಾ ಪ್ರದೇಶದಲ್ಲಿ ಭದ್ರತಾ ಪಡೆ ಕೈಗೊಂಡಿತ್ತು. ಈ ವೇಳೆ ಹಲವು ಸುತ್ತಿನ ಗುಂಡಿನ ಚಕಮಕಿಯಲ್ಲಿ ಓರ್ವ ಪೊಲೀಸ್​ಗೆ ಗಾಯವಾಗಿದೆ.

ಈ ಕುರಿತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮುಖ್ಯಸ್ಥ ದಿಲ್ಬಾಗ್ ಸಿಂಗ್ (Dilbagh Singh) ಮಾಹಿತಿ ನೀಡಿದ್ದು, ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಭಯೋತ್ಪಾದಕರಿಗಾಗಿ ಶೋಧ ಕಾರ್ಯ ಮುಂದುವರೆದಿದೆ ಎಂದಿದ್ದಾರೆ.

ಇದನ್ನೂ ಓದಿ: ಸರ್ವಾಧಿಕಾರಿ ಗಡಾಫಿ ಪುತ್ರನಿಂದ ಲಿಬಿಯಾ ಅಧ್ಯಕ್ಷೀಯ ಚುನಾವಣೆಗೆ ನಾಮಿನೇಷನ್​

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.