ETV Bharat / bharat

ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿ ಗರ್ಭಿಣಿ.. ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನ

author img

By

Published : Oct 9, 2022, 1:14 PM IST

Updated : Oct 9, 2022, 3:24 PM IST

ಮೂರು ತಿಂಗಳ ಹಿಂದೆ ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿ ಈಗ ಗರ್ಭಿಣಿಯಾಗಿದ್ದು, ಆರೋಪಿಗೇ ವಿವಾಹ ಮಾಡಿಸಲಾಗಿದೆ. ಆರೋಪಿ ಕುಟುಂಬ ಬಾಲಕಿ ಮೇಲೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದೆ.

pregnant-rape-victim-burnt-alive-in-uttara-pradesh
ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿ ಗರ್ಭಿಣಿ

ಮಣಿಪುರ(ಉತ್ತರಪ್ರದೇಶ): ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿದ್ದ ಬಾಲಕಿಯ ಮೇಲೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಅಮಾನವೀಯ ಘಟನೆ ಉತ್ತರಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಈ ಬಗ್ಗೆ ಆರೋಪಿ ಪತಿ ಮತ್ತು ಕುಟುಂಬದ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ.

ಮೂರು ತಿಂಗಳ ಹಿಂದೆ ಬಾಲಕಿಯನ್ನು ಯುವಕನೋರ್ವ ಅತ್ಯಾಚಾರ ಮಾಡಿದ್ದ. ಈಗ ಬಾಲಕಿ ಗರ್ಭಿಣಿಯಾಗಿದ್ದು, ಪಂಚಾಯಿತಿಯಲ್ಲಿ ವಾದ ನಡೆದು ಆರೋಪಿಗೇ ಆಕೆಯನ್ನು ವಿವಾಹ ಮಾಡಿಕೊಡಲಾಗಿತ್ತು. ಮನೆಗೆ ಕರೆದೊಯ್ದ ಪತಿಯ ಕಡೆಯವರು ಬಳಿಕ ಗರ್ಭಿಣಿ ಬಾಲಕಿಯ ಮೇಲೆ ಹಲ್ಲೆ ಮಾಡಿ, ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದಾರೆ. ಬಾಲಕಿ ಸುಟ್ಟ ಗಾಯಗಳಿಂದ ಗಾಯಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದರ ವಿರುದ್ಧ ಬಾಲಕಿಯ ತಾಯಿ ದೂರು ನೀಡಿದ್ದು, ಪೊಲೀಸರು ಅಪ್ರಾಪ್ತೆಯ ಮೇಲೆ ನಡೆದ ದೌರ್ಜನ್ಯದ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿಕೊಂಡಿದ್ದಾರೆ. ಇದೇ ವೇಳೆ ಆರೋಪಿಗಳು ನಾಪತ್ತೆಯಾಗಿದ್ದು, ಪೊಲೀಸರು ಬಂಧನಕ್ಕೆ ಬಲೆ ಬೀಸಿದ್ದಾರೆ.

ಓದಿ: ಅಂಗಾಂಗ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಮೈಸೂರಿನ ಯುವಕ.. 9 ಮಂದಿಗೆ ಜೀವದಾನ

ಮಣಿಪುರ(ಉತ್ತರಪ್ರದೇಶ): ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿದ್ದ ಬಾಲಕಿಯ ಮೇಲೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಅಮಾನವೀಯ ಘಟನೆ ಉತ್ತರಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಈ ಬಗ್ಗೆ ಆರೋಪಿ ಪತಿ ಮತ್ತು ಕುಟುಂಬದ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ.

ಮೂರು ತಿಂಗಳ ಹಿಂದೆ ಬಾಲಕಿಯನ್ನು ಯುವಕನೋರ್ವ ಅತ್ಯಾಚಾರ ಮಾಡಿದ್ದ. ಈಗ ಬಾಲಕಿ ಗರ್ಭಿಣಿಯಾಗಿದ್ದು, ಪಂಚಾಯಿತಿಯಲ್ಲಿ ವಾದ ನಡೆದು ಆರೋಪಿಗೇ ಆಕೆಯನ್ನು ವಿವಾಹ ಮಾಡಿಕೊಡಲಾಗಿತ್ತು. ಮನೆಗೆ ಕರೆದೊಯ್ದ ಪತಿಯ ಕಡೆಯವರು ಬಳಿಕ ಗರ್ಭಿಣಿ ಬಾಲಕಿಯ ಮೇಲೆ ಹಲ್ಲೆ ಮಾಡಿ, ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದಾರೆ. ಬಾಲಕಿ ಸುಟ್ಟ ಗಾಯಗಳಿಂದ ಗಾಯಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದರ ವಿರುದ್ಧ ಬಾಲಕಿಯ ತಾಯಿ ದೂರು ನೀಡಿದ್ದು, ಪೊಲೀಸರು ಅಪ್ರಾಪ್ತೆಯ ಮೇಲೆ ನಡೆದ ದೌರ್ಜನ್ಯದ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿಕೊಂಡಿದ್ದಾರೆ. ಇದೇ ವೇಳೆ ಆರೋಪಿಗಳು ನಾಪತ್ತೆಯಾಗಿದ್ದು, ಪೊಲೀಸರು ಬಂಧನಕ್ಕೆ ಬಲೆ ಬೀಸಿದ್ದಾರೆ.

ಓದಿ: ಅಂಗಾಂಗ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಮೈಸೂರಿನ ಯುವಕ.. 9 ಮಂದಿಗೆ ಜೀವದಾನ

Last Updated : Oct 9, 2022, 3:24 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.