ಮುಂಬೈ: ಫೆಬ್ರವರಿ 15 ರಂದು ಮುಂಬೈನ ಪಂಚತಾರಾ ಹೋಟೆಲ್ ಒಂದರ ಹೊರಗೆ ಕ್ರಿಕೆಟಿಗ ಪೃಥ್ವಿ ಶಾ ಅವರ ಸ್ನೇಹಿತನ ಕಾರಿನ ಮೇಲೆ ದಾಳಿ ಮಾಡಿದ್ದಕ್ಕಾಗಿ ಓಶಿವಾರ ಪೊಲೀಸರು ಎಂಟು ಜನರ ವಿರುದ್ಧ ಬುಧವಾರ ಪ್ರಕರಣ ದಾಖಲಿಸಿದ್ದಾರೆ. ಶಾ ಅವರ ಸ್ನೇಹಿತ ಆಶಿಶ್ ಸುರೇಂದ್ರ ಯಾದವ್ ನೀಡಿದ ದೂರಿನ ಪ್ರಕಾರ, ಶಾ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಮೊದಲಿಗೆ ಬೇಸ್ಬಾಲ್ ಬ್ಯಾಟ್ಗಳಿಂದ ದಾಳಿ ನಡೆಸಲಾಯಿತು. ನಂತರ ಆರೋಪಿಗಳು ಕಾರನ್ನು ಹಿಂಬಾಲಿಸಿ ಹಣ ನೀಡದಿದ್ದರೆ ಸುಳ್ಳು ಕೇಸು ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ತಿಳಿಸಲಾಗಿದೆ.
ಘಟನೆಯ ನಂತರ ಒಶಿವಾರಾ ಪೊಲೀಸರು ಎಂಟು ಜನರ ವಿರುದ್ಧ ಭಾರತೀಯ ದಂಡ ಸಂಹಿತೆಯ ಹಲವಾರು ಸೆಕ್ಷನ್ಗಳ ಅಡಿಯಲ್ಲಿ ಕಾನೂನುಬಾಹಿರವಾಗಿ ಗುಂಪುಗೂಡುವಿಕೆ ಮತ್ತು ಶಸ್ತ್ರಾಸ್ತ್ರಗಳನ್ನು ಬಳಸಿದ ಅಪರಾಧಕ್ಕಾಗಿ 143, 148,149, 384, 437, 504, 506 ಸೆಕ್ಷನ್ಗಳಡಿ ಪ್ರಕರಣ ದಾಖಲಿಸಿದ್ದಾರೆ. ಶಾ ಅವರು ಸಾಂತಾಕ್ರೂಜ್ನಲ್ಲಿರುವ ಪಂಚತಾರಾ ಹೋಟೆಲ್ಗೆ ಊಟಕ್ಕೆ ಹೋದಾಗ ಈ ಘಟನೆ ನಡೆದಿದೆ.
-
Please stay miles away from such people & such scenes @PrithviShaw 🙏
— Sushant Mehta (@SushantNMehta) February 16, 2023 " class="align-text-top noRightClick twitterSection" data="
pic.twitter.com/rwRFk73F4Q
">Please stay miles away from such people & such scenes @PrithviShaw 🙏
— Sushant Mehta (@SushantNMehta) February 16, 2023
pic.twitter.com/rwRFk73F4QPlease stay miles away from such people & such scenes @PrithviShaw 🙏
— Sushant Mehta (@SushantNMehta) February 16, 2023
pic.twitter.com/rwRFk73F4Q