ETV Bharat / bharat

ಪತ್ರಕರ್ತನ ನಿಗೂಢ ಸಾವು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ: ಯೋಗಿಗೆ ಪ್ರಿಯಾಂಕಾ ಪತ್ರ

author img

By

Published : Jun 15, 2021, 3:21 PM IST

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಅಲಿಗಢದಿಂದ ಪ್ರತಾಪ್​ಗಢದವರೆಗೆ ಮದ್ಯ ಕೆಲವರು ಮಾಫಿಯಾದಲ್ಲಿ ತೊಡಗಿದ್ದು, ನೂರಾರು ಮಂದಿ ಮೃತಪಟ್ಟಿದ್ದಾರೆ. ಅವುಗಳನ್ನು ಬಯಲಿಗೆಳೆಯುತ್ತಿದ್ದ ಪತ್ರಕರ್ತರ ಮೇಲೆ ಹಲ್ಲೆ ನಡೆಸಿ, ಹತ್ಯೆಗೈಯ್ಯಲಾಗಿದೆ ಎಂದು ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.

Priyanka Gandh
ಪ್ರಿಯಾಂಕಾ ಗಾಂಧಿ

ನವದೆಹಲಿ: ಉತ್ತರಪ್ರದೇಶದ ಪ್ರತಾಪಗಢ ಜಿಲ್ಲೆಯಲ್ಲಿ ನಿಗೂಢವಾಗಿ ಮೃತಪಟ್ಟಿದ್ದ ಪತ್ರಕರ್ತನ ಸಾವಿನ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ಗೆ ಕಾಂಗ್ರೆಸ್​​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಅಲಿಗಢದಿಂದ ಪ್ರತಾಪ್​ಗಢದವರೆಗೆ ಕೆಲವರು ಮದ್ಯ ಮಾಫಿಯಾದಲ್ಲಿ ತೊಡಗಿದ್ದು, ಇದರಿಂದ ನೂರಾರು ಮಂದಿ ಬಲಿಯಾಗಿದ್ದಾರೆ. ಈ ಪ್ರಕರಣಗಳನ್ನು ಬಯಲಿಗೆಳೆಯುತ್ತಿದ್ದ ಪತ್ರಕರ್ತರ ಮೇಲೆ ಹಲ್ಲೆ ನಡೆಸಿ, ಹತ್ಯೆಗೈಯಲಾಗಿದೆ ಎಂದು ಪ್ರಿಯಾಂಕಾ ಗಾಂಧಿ ಪತ್ರದಲ್ಲಿ ಆರೋಪಿಸಿದ್ದಾರೆ. ಜೂನ್ 13 ರ ತಡರಾತ್ರಿ ಪತ್ರಕರ್ತ ಸುಲಭ್ ಶ್ರೀವಾಸ್ತವ್​ ಅವರ ಮೃತದೇಹ ಪ್ರತಾಪ್​ಗಢದಲ್ಲಿ ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲ್ವಾಲಿ ಠಾಣಾ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್​ಐಆರ್ ದಾಖಲಿಸಿದ್ದಾರೆ.

ಇದನ್ನೂ ಓದಿ: ಕುತೂಹಲ ಕೆರಳಿಸಿದ ಮೋದಿ ಸಂಪುಟ ಕಸರತ್ತು: ಸುವೇಂದು, ಸಿಂಧಿಯಾಗೆ ಸಿಗುವುದೇ ಕೇಂದ್ರದಲ್ಲಿ ಸ್ಥಾನ?

ಇದಕ್ಕೂ ಮುನ್ನ ಪ್ರತಾಪ್​ಗಢದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರತಿಕ್ರಿಯಿಸಿ, ಸುಲಭ್ ಶ್ರೀವಾಸ್ತವ್​ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರು ಬೈಕ್​ನಲ್ಲಿ ಬರುತ್ತಿದ್ದ ವೇಳೆ ಅಪಘಾತವಾಗಿ ನರಳುತ್ತಿದ್ದಾಗ ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದರು. ಆದರೂ ಬದುಕುಳಿಯಲಿಲ್ಲ ಎಂದಿದ್ದರು.

ನವದೆಹಲಿ: ಉತ್ತರಪ್ರದೇಶದ ಪ್ರತಾಪಗಢ ಜಿಲ್ಲೆಯಲ್ಲಿ ನಿಗೂಢವಾಗಿ ಮೃತಪಟ್ಟಿದ್ದ ಪತ್ರಕರ್ತನ ಸಾವಿನ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ಗೆ ಕಾಂಗ್ರೆಸ್​​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಅಲಿಗಢದಿಂದ ಪ್ರತಾಪ್​ಗಢದವರೆಗೆ ಕೆಲವರು ಮದ್ಯ ಮಾಫಿಯಾದಲ್ಲಿ ತೊಡಗಿದ್ದು, ಇದರಿಂದ ನೂರಾರು ಮಂದಿ ಬಲಿಯಾಗಿದ್ದಾರೆ. ಈ ಪ್ರಕರಣಗಳನ್ನು ಬಯಲಿಗೆಳೆಯುತ್ತಿದ್ದ ಪತ್ರಕರ್ತರ ಮೇಲೆ ಹಲ್ಲೆ ನಡೆಸಿ, ಹತ್ಯೆಗೈಯಲಾಗಿದೆ ಎಂದು ಪ್ರಿಯಾಂಕಾ ಗಾಂಧಿ ಪತ್ರದಲ್ಲಿ ಆರೋಪಿಸಿದ್ದಾರೆ. ಜೂನ್ 13 ರ ತಡರಾತ್ರಿ ಪತ್ರಕರ್ತ ಸುಲಭ್ ಶ್ರೀವಾಸ್ತವ್​ ಅವರ ಮೃತದೇಹ ಪ್ರತಾಪ್​ಗಢದಲ್ಲಿ ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲ್ವಾಲಿ ಠಾಣಾ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್​ಐಆರ್ ದಾಖಲಿಸಿದ್ದಾರೆ.

ಇದನ್ನೂ ಓದಿ: ಕುತೂಹಲ ಕೆರಳಿಸಿದ ಮೋದಿ ಸಂಪುಟ ಕಸರತ್ತು: ಸುವೇಂದು, ಸಿಂಧಿಯಾಗೆ ಸಿಗುವುದೇ ಕೇಂದ್ರದಲ್ಲಿ ಸ್ಥಾನ?

ಇದಕ್ಕೂ ಮುನ್ನ ಪ್ರತಾಪ್​ಗಢದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರತಿಕ್ರಿಯಿಸಿ, ಸುಲಭ್ ಶ್ರೀವಾಸ್ತವ್​ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರು ಬೈಕ್​ನಲ್ಲಿ ಬರುತ್ತಿದ್ದ ವೇಳೆ ಅಪಘಾತವಾಗಿ ನರಳುತ್ತಿದ್ದಾಗ ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದರು. ಆದರೂ ಬದುಕುಳಿಯಲಿಲ್ಲ ಎಂದಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.