ETV Bharat / bharat

'ಒಂದು ದಿನ ನಾನು ಸ್ಪರ್ಧಿಸಬೇಕು.. ಆದರೂ'.. ಯುಪಿ ಚುನಾವಣೆಯಲ್ಲಿ ಕಣಕ್ಕಿಳಿಯುವ ಬಗ್ಗೆ ಪ್ರಿಯಾಂಕಾ ಉತ್ತರ ನೋಡಿ! - ಉತ್ತರ ಪ್ರದೇಶ ಕಾಂಗ್ರೆಸ್​ ಉಸ್ತುವಾರಿ

ಉತ್ತರ ಪ್ರದೇಶ ಕಾಂಗ್ರೆಸ್​ ಉಸ್ತುವಾರಿಯಾಗಿರುವ ಪ್ರಿಯಾಂಕಾ ಗಾಂಧಿ, ಈಗಾಗಲೇ ಆಡಳಿತರೂಢ ಬಿಜೆಪಿ ಪಕ್ಷದ ವಿರುದ್ಧ ರಣಕಹಳೆ ಮೊಳಗಿಸಿದ್ದಾರೆ. ಯೋಗಿ ಸರ್ಕಾರದ ವಿರುದ್ಧ ಮೇಲಿಂದ ಮೇಲೆ ಹರಿಹಾಯುತ್ತಿದ್ದಾರೆ. ಲಖೀಂಪುರ ಖೇರಿಯಲ್ಲಿ ನಡೆದಿರುವ ರೈತರ ಹತ್ಯೆ ಪ್ರಕರಣ, ಯೋಗಿ ಸರ್ಕಾರದ ದುರಾಡಳಿತ ಸೇರಿದಂತೆ ಅನೇಕ ಜ್ವಲಂತ ಸಮಸ್ಯೆ ಮುಂದಿಟ್ಟುಕೊಂಡು ವಾಗ್ದಾಳಿ ನಡೆಸುತ್ತಿದ್ದಾರೆ..

Priyanka Gandhi
Priyanka Gandhi
author img

By

Published : Oct 19, 2021, 7:46 PM IST

ಲಖನೌ(ಉತ್ತರ ಪ್ರದೇಶ): ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್​​ ಭರ್ಜರಿ ತಯಾರಿ ನಡೆಸಿದೆ. ನಾಳೆಯಿಂದಲೇ ಪ್ರತಿಜ್ಞಾ ಯಾತ್ರೆ ಹಮ್ಮಿಕೊಳ್ಳಲು ಮುಂದಾಗಿದೆ. ಇದರ ಬೆನ್ನಲ್ಲೇ ಎಎನ್​ಐ ಸುದ್ದಿಸಂಸ್ಥೆಗೆ ಉತ್ತರಪ್ರದೇಶ ಕಾಂಗ್ರೆಸ್​ ಉಸ್ತುವಾರಿಯಾಗಿರುವ ಪ್ರಿಯಾಂಕಾ ವಿಶೇಷ ಸಂದರ್ಶನದಲ್ಲಿ ಭಾಗಿಯಾಗಿ ಮಾತನಾಡಿದ್ದಾರೆ.

ಯುಪಿ ಚುನಾವಣೆಯಲ್ಲಿ ಕಣಕ್ಕಿಳಿಯುವ ಬಗ್ಗೆ ಪ್ರಿಯಾಂಕಾ ಉತ್ತರ ನೋಡಿ..

'ಒಂದು ದಿನ ನಾನು ರಾಯಬರೇಲಿ ಅಥವಾ ಅಮೇಥಿ ಕ್ಷೇತ್ರದಿಂದ ಸ್ಪರ್ಧೆ ಮಾಡಲೇಬೇಕು. ಆದರೆ, ಇದರ ಬಗ್ಗೆ ಈವರೆಗೆ ಯಾವುದೇ ರೀತಿಯ ನಿರ್ಧಾರ ಕೈಗೊಂಡಿಲ್ಲ' ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. 2022ರ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವ ಬಗ್ಗೆ ಈವರೆಗೆ ಯಾವುದೇ ರೀತಿಯ ನಿರ್ಧಾರ ಕೈಗೊಂಡಿಲ್ಲ. ಇದಕ್ಕೆಲ್ಲ ಸಮಯವೇ ಉತ್ತರ ನೀಡಲಿದೆ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶ ಕಾಂಗ್ರೆಸ್​ ಉಸ್ತುವಾರಿಯಾಗಿರುವ ಪ್ರಿಯಾಂಕಾ ಗಾಂಧಿ, ಈಗಾಗಲೇ ಆಡಳಿತರೂಢ ಬಿಜೆಪಿ ಪಕ್ಷದ ವಿರುದ್ಧ ರಣಕಹಳೆ ಮೊಳಗಿಸಿದ್ದಾರೆ. ಯೋಗಿ ಸರ್ಕಾರದ ವಿರುದ್ಧ ಮೇಲಿಂದ ಮೇಲೆ ಹರಿಹಾಯುತ್ತಿದ್ದಾರೆ. ಲಖೀಂಪುರ ಖೇರಿಯಲ್ಲಿ ನಡೆದಿರುವ ರೈತರ ಹತ್ಯೆ ಪ್ರಕರಣ, ಯೋಗಿ ಸರ್ಕಾರದ ದುರಾಡಳಿತ ಸೇರಿದಂತೆ ಅನೇಕ ಜ್ವಲಂತ ಸಮಸ್ಯೆ ಮುಂದಿಟ್ಟುಕೊಂಡು ವಾಗ್ದಾಳಿ ನಡೆಸುತ್ತಿದ್ದಾರೆ.

ಇದನ್ನೂ ಓದಿರಿ: ಯುಪಿ ವಿಧಾನಸಭೆ ಚುನಾವಣೆಯಲ್ಲಿ ಶೇ.40ರಷ್ಟು ಮಹಿಳೆಯರಿಗೆ ಟಿಕೆಟ್​.. ಪ್ರಿಯಾಂಕಾ ಘೋಷಣೆ

ನಾಳೆಯಿಂದ ಆರಂಭಗೊಳ್ಳಲಿರುವ ಪ್ರತಿಜ್ಞಾ ಯಾತ್ರೆ ಕಾರ್ಯಕ್ರಮದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿರುವ ಪ್ರಿಯಾಂಕಾ, ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅತ್ಯಮೂಲ್ಯವಾಗಿದೆ. ಹೀಗಾಗಿ, ಶೇ.40ರಷ್ಟು ಟಿಕೆಟ್​ ಅವರಿಗೆ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.

2017ರ ವಿಧಾನಸಭೆ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿನ 403 ಕ್ಷೇತ್ರಗಳ ಪೈಕಿ ಬಿಜೆಪಿ 312 ಸ್ಥಾನ, ಸಮಾಜವಾದಿ ಪಕ್ಷ 47, ಬಿಎಸ್​ಪಿ 19 ಹಾಗೂ ಕಾಂಗ್ರೆಸ್​ ಕೇವಲ 7 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.

ಲಖನೌ(ಉತ್ತರ ಪ್ರದೇಶ): ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್​​ ಭರ್ಜರಿ ತಯಾರಿ ನಡೆಸಿದೆ. ನಾಳೆಯಿಂದಲೇ ಪ್ರತಿಜ್ಞಾ ಯಾತ್ರೆ ಹಮ್ಮಿಕೊಳ್ಳಲು ಮುಂದಾಗಿದೆ. ಇದರ ಬೆನ್ನಲ್ಲೇ ಎಎನ್​ಐ ಸುದ್ದಿಸಂಸ್ಥೆಗೆ ಉತ್ತರಪ್ರದೇಶ ಕಾಂಗ್ರೆಸ್​ ಉಸ್ತುವಾರಿಯಾಗಿರುವ ಪ್ರಿಯಾಂಕಾ ವಿಶೇಷ ಸಂದರ್ಶನದಲ್ಲಿ ಭಾಗಿಯಾಗಿ ಮಾತನಾಡಿದ್ದಾರೆ.

ಯುಪಿ ಚುನಾವಣೆಯಲ್ಲಿ ಕಣಕ್ಕಿಳಿಯುವ ಬಗ್ಗೆ ಪ್ರಿಯಾಂಕಾ ಉತ್ತರ ನೋಡಿ..

'ಒಂದು ದಿನ ನಾನು ರಾಯಬರೇಲಿ ಅಥವಾ ಅಮೇಥಿ ಕ್ಷೇತ್ರದಿಂದ ಸ್ಪರ್ಧೆ ಮಾಡಲೇಬೇಕು. ಆದರೆ, ಇದರ ಬಗ್ಗೆ ಈವರೆಗೆ ಯಾವುದೇ ರೀತಿಯ ನಿರ್ಧಾರ ಕೈಗೊಂಡಿಲ್ಲ' ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. 2022ರ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವ ಬಗ್ಗೆ ಈವರೆಗೆ ಯಾವುದೇ ರೀತಿಯ ನಿರ್ಧಾರ ಕೈಗೊಂಡಿಲ್ಲ. ಇದಕ್ಕೆಲ್ಲ ಸಮಯವೇ ಉತ್ತರ ನೀಡಲಿದೆ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶ ಕಾಂಗ್ರೆಸ್​ ಉಸ್ತುವಾರಿಯಾಗಿರುವ ಪ್ರಿಯಾಂಕಾ ಗಾಂಧಿ, ಈಗಾಗಲೇ ಆಡಳಿತರೂಢ ಬಿಜೆಪಿ ಪಕ್ಷದ ವಿರುದ್ಧ ರಣಕಹಳೆ ಮೊಳಗಿಸಿದ್ದಾರೆ. ಯೋಗಿ ಸರ್ಕಾರದ ವಿರುದ್ಧ ಮೇಲಿಂದ ಮೇಲೆ ಹರಿಹಾಯುತ್ತಿದ್ದಾರೆ. ಲಖೀಂಪುರ ಖೇರಿಯಲ್ಲಿ ನಡೆದಿರುವ ರೈತರ ಹತ್ಯೆ ಪ್ರಕರಣ, ಯೋಗಿ ಸರ್ಕಾರದ ದುರಾಡಳಿತ ಸೇರಿದಂತೆ ಅನೇಕ ಜ್ವಲಂತ ಸಮಸ್ಯೆ ಮುಂದಿಟ್ಟುಕೊಂಡು ವಾಗ್ದಾಳಿ ನಡೆಸುತ್ತಿದ್ದಾರೆ.

ಇದನ್ನೂ ಓದಿರಿ: ಯುಪಿ ವಿಧಾನಸಭೆ ಚುನಾವಣೆಯಲ್ಲಿ ಶೇ.40ರಷ್ಟು ಮಹಿಳೆಯರಿಗೆ ಟಿಕೆಟ್​.. ಪ್ರಿಯಾಂಕಾ ಘೋಷಣೆ

ನಾಳೆಯಿಂದ ಆರಂಭಗೊಳ್ಳಲಿರುವ ಪ್ರತಿಜ್ಞಾ ಯಾತ್ರೆ ಕಾರ್ಯಕ್ರಮದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿರುವ ಪ್ರಿಯಾಂಕಾ, ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅತ್ಯಮೂಲ್ಯವಾಗಿದೆ. ಹೀಗಾಗಿ, ಶೇ.40ರಷ್ಟು ಟಿಕೆಟ್​ ಅವರಿಗೆ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.

2017ರ ವಿಧಾನಸಭೆ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿನ 403 ಕ್ಷೇತ್ರಗಳ ಪೈಕಿ ಬಿಜೆಪಿ 312 ಸ್ಥಾನ, ಸಮಾಜವಾದಿ ಪಕ್ಷ 47, ಬಿಎಸ್​ಪಿ 19 ಹಾಗೂ ಕಾಂಗ್ರೆಸ್​ ಕೇವಲ 7 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.