ETV Bharat / bharat

ಫೆ.15ರಂದು ಬಿಜ್ನೋರ್​, ಮೀರತ್​ಗೆ ಪ್ರಿಯಾಂಕಾ ಭೇಟಿ.. ರೈತರೊಂದಿಗೆ ಚರ್ಚೆ..

author img

By

Published : Feb 12, 2021, 12:44 PM IST

Updated : Feb 12, 2021, 12:51 PM IST

ಆರಂಭದಿಂದಲೂ ಕೃಷಿ ಕಾಯ್ದೆಗಳ ವಿರುದ್ಧದ ರೈತರ ಧರಣಿಗೆ ಬೆಂಬಲ ನೀಡಿರುವ ಕಾಂಗ್ರೆಸ್​, ಕಳೆದ ವಾರ ಅನ್ನದಾತರ 'ಚಕ್ಕಾ ಜಾಮ್'ಗೆ ಕೂಡ ಸಂಪೂರ್ಣ ಬೆಂಬಲ ನೀಡಿತ್ತು..

Priyanka Gandhi
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ

ಬಿಜ್ನೋರ್ (ಉತ್ತರ ಪ್ರದೇಶ): ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಫೆಬ್ರವರಿ 15ರಂದು ಉತ್ತರಪ್ರದೇಶದ ಬಿಜ್ನೋರ್ ಹಾಗೂ ಮೀರತ್​ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ.

ಭೇಟಿ ವೇಳೆ ಕಿಸಾನ್​ ಮಹಾ ಪಂಚಾಯತ್​ನಲ್ಲಿ ಪಾಲ್ಗೊಂಡು, ರೈತ ಕುಟುಂಬಗಳೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೊನ್ನೆ ಬುಧವಾರ ಸಹರಾನ್‌ಪುರಕ್ಕೆ ಭೇಟಿ ನೀಡಿದ್ದ ಕೈ ನಾಯಕಿ, ಕಿಸಾನ್ ಮಹಾ ಪಂಚಾಯತ್​ನಲ್ಲಿ ರೈತರನ್ನುದ್ದೇಶಿಸಿ ಭಾಷಣ ಮಾಡಿದ್ದರು. ಕೋಟ್ಯಧಿಪತಿಗಳಿಗೆ ಸಹಾಯ ಮಾಡಲೆಂದು ಕೃಷಿ ಕಾನೂನುಗಳನ್ನು ವಿನ್ಯಾಸಗೊಳಿಸಲಾಗಿದೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಮಂಡಿ, ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆಯ ಅಂತ್ಯ ಎಂದು ಎಲ್ಲಿ ಬರೆದಿದೆ ತೋರಿಸಿ: ಪ್ರತಿಪಕ್ಷಗಳಿಗೆ ಅನುರಾಗ್​ ಸವಾಲು

ಇನ್ನು, ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಒಗ್ಗಟ್ಟು ಬಲಪಡಿಸುವ ಸಲುವಾಗಿ ಫೆ.12 ಹಾಗೂ 13ರಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

ಆರಂಭದಿಂದಲೂ ಕೃಷಿ ಕಾಯ್ದೆಗಳ ವಿರುದ್ಧದ ರೈತರ ಧರಣಿಗೆ ಬೆಂಬಲ ನೀಡಿರುವ ಕಾಂಗ್ರೆಸ್​, ಕಳೆದ ವಾರ ಅನ್ನದಾತರ 'ಚಕ್ಕಾ ಜಾಮ್'ಗೆ ಕೂಡ ಸಂಪೂರ್ಣ ಬೆಂಬಲ ನೀಡಿತ್ತು.

ಬಿಜ್ನೋರ್ (ಉತ್ತರ ಪ್ರದೇಶ): ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಫೆಬ್ರವರಿ 15ರಂದು ಉತ್ತರಪ್ರದೇಶದ ಬಿಜ್ನೋರ್ ಹಾಗೂ ಮೀರತ್​ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ.

ಭೇಟಿ ವೇಳೆ ಕಿಸಾನ್​ ಮಹಾ ಪಂಚಾಯತ್​ನಲ್ಲಿ ಪಾಲ್ಗೊಂಡು, ರೈತ ಕುಟುಂಬಗಳೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೊನ್ನೆ ಬುಧವಾರ ಸಹರಾನ್‌ಪುರಕ್ಕೆ ಭೇಟಿ ನೀಡಿದ್ದ ಕೈ ನಾಯಕಿ, ಕಿಸಾನ್ ಮಹಾ ಪಂಚಾಯತ್​ನಲ್ಲಿ ರೈತರನ್ನುದ್ದೇಶಿಸಿ ಭಾಷಣ ಮಾಡಿದ್ದರು. ಕೋಟ್ಯಧಿಪತಿಗಳಿಗೆ ಸಹಾಯ ಮಾಡಲೆಂದು ಕೃಷಿ ಕಾನೂನುಗಳನ್ನು ವಿನ್ಯಾಸಗೊಳಿಸಲಾಗಿದೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಮಂಡಿ, ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆಯ ಅಂತ್ಯ ಎಂದು ಎಲ್ಲಿ ಬರೆದಿದೆ ತೋರಿಸಿ: ಪ್ರತಿಪಕ್ಷಗಳಿಗೆ ಅನುರಾಗ್​ ಸವಾಲು

ಇನ್ನು, ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಒಗ್ಗಟ್ಟು ಬಲಪಡಿಸುವ ಸಲುವಾಗಿ ಫೆ.12 ಹಾಗೂ 13ರಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

ಆರಂಭದಿಂದಲೂ ಕೃಷಿ ಕಾಯ್ದೆಗಳ ವಿರುದ್ಧದ ರೈತರ ಧರಣಿಗೆ ಬೆಂಬಲ ನೀಡಿರುವ ಕಾಂಗ್ರೆಸ್​, ಕಳೆದ ವಾರ ಅನ್ನದಾತರ 'ಚಕ್ಕಾ ಜಾಮ್'ಗೆ ಕೂಡ ಸಂಪೂರ್ಣ ಬೆಂಬಲ ನೀಡಿತ್ತು.

Last Updated : Feb 12, 2021, 12:51 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.