ETV Bharat / bharat

UP Polls: ಶೇ.99 V/S ಶೇ.1 ಎಂಬುದೇ ನಿಜ.. ಪ್ರಿಯಾಂಕಾ ಗಾಂಧಿ

author img

By

Published : Jan 22, 2022, 10:23 AM IST

Updated : Jan 22, 2022, 11:02 AM IST

ಉತ್ತರ ಪ್ರದೇಶದಲ್ಲಿರುವ ನಿರುದ್ಯೋಗಿಗಳ ಬಗ್ಗೆ ಏಕೆ ಮಾತನಾಡುತ್ತಿಲ್ಲ? ಸರ್ಕಾರ ಶಿಕ್ಷಣಕ್ಕೆ ಖರ್ಚು ಮಾಡುತ್ತಿರುವ ಬಜೆಟ್‌ ಬಗ್ಗೆ ಏಕೆ ಮಾತನಾಡುತ್ತಿಲ್ಲ? ಎಂದು ಸಿಎಂ ಯೋಗಿ ಆದಿತ್ಯನಾಥ್​ಗೆ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಶ್ನಿಸಿದ್ದಾರೆ.

CM Yogi is saying 80% vs 20%. Truth is that it's 99% vs 1% Priyanka Gandhi Vadra
UP Polls: ಶೇ.99 V/S ಶೇ.1 ಎಂಬುದೇ ನಿಜ.. ಪ್ರಿಯಾಂಕಾ ಗಾಂಧಿ

ಲಖನೌ, ಉತ್ತರಪ್ರದೇಶ: ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪರಸ್ಪರ ಆರೋಪ ಮತ್ತು ಪ್ರತ್ಯಾರೋಪಗಳ ಟೀಕಾಪ್ರಹಾರಗಳು ಸದ್ದು ಮಾಡುತ್ತಿವೆ. ಉತ್ತರ ಪ್ರದೇಶ ರಾಜ್ಯದ ಬಿಜೆಪಿ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ ನಡೆಸಿದ್ದಾರೆ.

'ಸಿಎಂ ಯೋಗಿ ಆದಿತ್ಯನಾಥ್ ಶೇಕಡಾ 80 ಮತ್ತು ಶೇಕಡಾ 20ರ ಬಗ್ಗೆ ಮಾತನಾಡುತ್ತಾರೆ. ಆದರೆ, ಶೇಕಡಾ 99 ಮತ್ತು ಶೇಕಡಾ 1ರ ಬಗ್ಗೆ ಮಾತನಾಡಬೇಕಿದೆ. ಉತ್ತರ ಪ್ರದೇಶ ಸೇರಿದಂತೆ ಇಡೀ ದೇಶದಲ್ಲಿ ಕೇಂದ್ರ ಸರ್ಕಾರದಿಂದ ಕೆಲವೇ ಕೆಲವೇ ಸ್ನೇಹಿತರು ಮತ್ತು ಉದ್ಯಮಿಗಳು ಮಾತ್ರ ಸೌಲಭ್ಯ ಪಡೆಯುತ್ತಿದ್ದಾರೆ.

ಪ್ರಿಯಾಂಕಾ ಗಾಂಧಿ

ಇನ್ನುಳಿದವರು ನೋವನ್ನು ಮಾತ್ರ ಅನುಭವಿಸುತ್ತಿದ್ದಾರೆ. ಶೇಕಡಾ 99ರಷ್ಟು ಮಂದಿಗೆ ಯಾವುದೇ ಸೌಲಭ್ಯ ಸಿಕ್ಕಿಲ್ಲ. ಶೇಕಡಾ 1ರಷ್ಟು ಮಂದಿ ಮಾತ್ರ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ' ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಶೇಕಡಾ 80 ಮತ್ತು ಶೇಕಡಾ 20 ನಡುವೆ ಚುನಾವಣೆ ನಡೆಯಲಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದರು. ಧರ್ಮದ ಆಧಾರದ ಮೇಲೆ ಅವರು ಈ ಹೇಳಿಕೆ ನೀಡಿದ್ದರೆಂಬುದು ಭಾರಿ ವಿವಾದಕ್ಕೆ ಕಾರಣವಾಗಿತ್ತು.

ಉತ್ತರ ಪ್ರದೇಶದಲ್ಲಿರುವ ನಿರುದ್ಯೋಗಿಗಳ ಬಗ್ಗೆ ಏಕೆ ಮಾತನಾಡುತ್ತಿಲ್ಲ? ಸರ್ಕಾರ ಶಿಕ್ಷಣಕ್ಕೆ ಖರ್ಚು ಮಾಡುತ್ತಿರುವ ಬಜೆಟ್‌ ಬಗ್ಗೆ ಏಕೆ ಮಾತನಾಡುತ್ತಿಲ್ಲ? ಉತ್ತರಪ್ರದೇಶದ ಪ್ರಗತಿಗೆ ಸಂಬಂಧವಿಲ್ಲದ ವಿಚಾರಗಳ ಬಗ್ಗೆ ಮಾತನಾಡುತ್ತಿರುವುದು ಏಕೆ? ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಬಂಡಾಯ ಶಾಸಕಿಗೆ ಬಿಜೆಪಿ ಟಿಕೆಟ್​​.. ರಾಯ್​ಬರೇಲಿ ಕ್ಷೇತ್ರದಿಂದ ಅದಿತಿ ಸ್ಪರ್ಧೆ..

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದಿಂದ ಸಿಎಂ ಅಭ್ಯರ್ಥಿ ನಾನು ಎಂದು ಹೇಳುತ್ತಿಲ್ಲ. ಈ ಪ್ರಶ್ನೆಗಳ್ನು ಮತ್ತೆ ಮತ್ತೆ ಕೇಳಿ ನನಗೆ ಮುಜುಗರ ಉಂಟಾಗುತ್ತಿದೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

'ನನಗೆ ಮಾಯಾವತಿ ಅರ್ಥವಾಗುತ್ತಿಲ್ಲ' : ಚುನಾವಣೆಗಳು ಸಮೀಪಿಸುತ್ತಿದ್ದಂತೆ ಎಲ್ಲ ಪಕ್ಷಗಳು ಚುರುಕಾಗುತ್ತವೆ, ಆದರೆ ಉತ್ತರ ಪ್ರದೇಶದ ಮಾಜಿ ಸಿಎಂ ಬಿಎಸ್​ಪಿ ಪಕ್ಷ ಪ್ರಬಲ ಪ್ರಚಾರಕ್ಕೆ ಮುಂದಾಗದೇ ಇರುವುದು ಪ್ರಿಯಾಂಕಾ ಗಾಂಧಿ ಅವರಿಗೆ ಅಚ್ಚರಿ ಉಂಟುಮಾಡಿದೆ.

ನನಗೆ ತುಂಬಾ ಆಶ್ಚರ್ಯವಾಗುತ್ತಿದೆ. ಆರೇಳು ತಿಂಗಳುಗಳಿಂದ ಅವರ ಪಕ್ಷ ಸಕ್ರಿಯವಾಗಿಲ್ಲ. ಬಹುಶಃ ಚುನಾವಣೆಗೆ ಅವರು ಸಕ್ರಿಯರಾಗಬಹುದು ಎಂದು ನಾವು ಭಾವಿಸಿದ್ದೆವು. ಆದರೆ ಚುನಾವಣೆ ಆರಂಭವಾಗಿದೆ. ಆದರೂ ಅವರು ಶಾಂತವಾಗಿದ್ದಾರೆ. ಅವರು ನನಗೆ ಅರ್ಥವಾಗುತ್ತಿಲ್ಲ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಲಖನೌ, ಉತ್ತರಪ್ರದೇಶ: ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪರಸ್ಪರ ಆರೋಪ ಮತ್ತು ಪ್ರತ್ಯಾರೋಪಗಳ ಟೀಕಾಪ್ರಹಾರಗಳು ಸದ್ದು ಮಾಡುತ್ತಿವೆ. ಉತ್ತರ ಪ್ರದೇಶ ರಾಜ್ಯದ ಬಿಜೆಪಿ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ ನಡೆಸಿದ್ದಾರೆ.

'ಸಿಎಂ ಯೋಗಿ ಆದಿತ್ಯನಾಥ್ ಶೇಕಡಾ 80 ಮತ್ತು ಶೇಕಡಾ 20ರ ಬಗ್ಗೆ ಮಾತನಾಡುತ್ತಾರೆ. ಆದರೆ, ಶೇಕಡಾ 99 ಮತ್ತು ಶೇಕಡಾ 1ರ ಬಗ್ಗೆ ಮಾತನಾಡಬೇಕಿದೆ. ಉತ್ತರ ಪ್ರದೇಶ ಸೇರಿದಂತೆ ಇಡೀ ದೇಶದಲ್ಲಿ ಕೇಂದ್ರ ಸರ್ಕಾರದಿಂದ ಕೆಲವೇ ಕೆಲವೇ ಸ್ನೇಹಿತರು ಮತ್ತು ಉದ್ಯಮಿಗಳು ಮಾತ್ರ ಸೌಲಭ್ಯ ಪಡೆಯುತ್ತಿದ್ದಾರೆ.

ಪ್ರಿಯಾಂಕಾ ಗಾಂಧಿ

ಇನ್ನುಳಿದವರು ನೋವನ್ನು ಮಾತ್ರ ಅನುಭವಿಸುತ್ತಿದ್ದಾರೆ. ಶೇಕಡಾ 99ರಷ್ಟು ಮಂದಿಗೆ ಯಾವುದೇ ಸೌಲಭ್ಯ ಸಿಕ್ಕಿಲ್ಲ. ಶೇಕಡಾ 1ರಷ್ಟು ಮಂದಿ ಮಾತ್ರ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ' ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಶೇಕಡಾ 80 ಮತ್ತು ಶೇಕಡಾ 20 ನಡುವೆ ಚುನಾವಣೆ ನಡೆಯಲಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದರು. ಧರ್ಮದ ಆಧಾರದ ಮೇಲೆ ಅವರು ಈ ಹೇಳಿಕೆ ನೀಡಿದ್ದರೆಂಬುದು ಭಾರಿ ವಿವಾದಕ್ಕೆ ಕಾರಣವಾಗಿತ್ತು.

ಉತ್ತರ ಪ್ರದೇಶದಲ್ಲಿರುವ ನಿರುದ್ಯೋಗಿಗಳ ಬಗ್ಗೆ ಏಕೆ ಮಾತನಾಡುತ್ತಿಲ್ಲ? ಸರ್ಕಾರ ಶಿಕ್ಷಣಕ್ಕೆ ಖರ್ಚು ಮಾಡುತ್ತಿರುವ ಬಜೆಟ್‌ ಬಗ್ಗೆ ಏಕೆ ಮಾತನಾಡುತ್ತಿಲ್ಲ? ಉತ್ತರಪ್ರದೇಶದ ಪ್ರಗತಿಗೆ ಸಂಬಂಧವಿಲ್ಲದ ವಿಚಾರಗಳ ಬಗ್ಗೆ ಮಾತನಾಡುತ್ತಿರುವುದು ಏಕೆ? ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಬಂಡಾಯ ಶಾಸಕಿಗೆ ಬಿಜೆಪಿ ಟಿಕೆಟ್​​.. ರಾಯ್​ಬರೇಲಿ ಕ್ಷೇತ್ರದಿಂದ ಅದಿತಿ ಸ್ಪರ್ಧೆ..

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದಿಂದ ಸಿಎಂ ಅಭ್ಯರ್ಥಿ ನಾನು ಎಂದು ಹೇಳುತ್ತಿಲ್ಲ. ಈ ಪ್ರಶ್ನೆಗಳ್ನು ಮತ್ತೆ ಮತ್ತೆ ಕೇಳಿ ನನಗೆ ಮುಜುಗರ ಉಂಟಾಗುತ್ತಿದೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

'ನನಗೆ ಮಾಯಾವತಿ ಅರ್ಥವಾಗುತ್ತಿಲ್ಲ' : ಚುನಾವಣೆಗಳು ಸಮೀಪಿಸುತ್ತಿದ್ದಂತೆ ಎಲ್ಲ ಪಕ್ಷಗಳು ಚುರುಕಾಗುತ್ತವೆ, ಆದರೆ ಉತ್ತರ ಪ್ರದೇಶದ ಮಾಜಿ ಸಿಎಂ ಬಿಎಸ್​ಪಿ ಪಕ್ಷ ಪ್ರಬಲ ಪ್ರಚಾರಕ್ಕೆ ಮುಂದಾಗದೇ ಇರುವುದು ಪ್ರಿಯಾಂಕಾ ಗಾಂಧಿ ಅವರಿಗೆ ಅಚ್ಚರಿ ಉಂಟುಮಾಡಿದೆ.

ನನಗೆ ತುಂಬಾ ಆಶ್ಚರ್ಯವಾಗುತ್ತಿದೆ. ಆರೇಳು ತಿಂಗಳುಗಳಿಂದ ಅವರ ಪಕ್ಷ ಸಕ್ರಿಯವಾಗಿಲ್ಲ. ಬಹುಶಃ ಚುನಾವಣೆಗೆ ಅವರು ಸಕ್ರಿಯರಾಗಬಹುದು ಎಂದು ನಾವು ಭಾವಿಸಿದ್ದೆವು. ಆದರೆ ಚುನಾವಣೆ ಆರಂಭವಾಗಿದೆ. ಆದರೂ ಅವರು ಶಾಂತವಾಗಿದ್ದಾರೆ. ಅವರು ನನಗೆ ಅರ್ಥವಾಗುತ್ತಿಲ್ಲ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

Last Updated : Jan 22, 2022, 11:02 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.