ETV Bharat / bharat

ಜಮ್ಮುವಿನಲ್ಲಿ ಪುನರ್ವಸತಿ ಕಲ್ಪಿಸುವಂತೆ ಒತ್ತಾಯಿಸಿ ಕಾಶ್ಮೀರಿ ಪಂಡಿತರ ಪ್ರತಿಭಟನೆ - ಈಟಿವಿ ಭಾರತ ಕನ್ನಡ

ಜಮ್ಮುವಿನಲ್ಲಿ ಪುನರ್ವಸತಿ ಕಲ್ಪಿಸುವಂತೆ ಒತ್ತಾಯಿಸಿ ನಿರಾಶ್ರಿತ ಕಾಶ್ಮೀರಿ ಪಂಡಿತರು ಪ್ರತಿಭಟನೆ ನಡೆಸುತ್ತಿದ್ದಾರೆ.

protest-of-kashmiri-pandits-in-jammu
ಜಮ್ಮುವಿನಲ್ಲಿ ಪುನರ್ವಸತಿ ಕಲ್ಪಿಸಲು ಕಾಶ್ಮೀರಿ ಪಂಡಿತರ ಪ್ರತಿಭಟನೆ
author img

By

Published : Sep 10, 2022, 11:03 PM IST

ಜಮ್ಮು ಮತ್ತು ಕಾಶ್ಮೀರ : ರಾಜಧಾನಿ ಜಮ್ಮುವಿನಲ್ಲಿ ನಿರಾಶ್ರಿತ ಕಾಶ್ಮೀರಿ ಪಂಡಿತರು ಪುನರ್ವಸತಿ ಕಲ್ಪಿಸುವಂತೆ ಪ್ರತಿಭಟನೆ ನಡೆಸುತ್ತಿದ್ದಾರೆ. 1989ರಲ್ಲಿ ಕಾಶ್ಮೀರದ ಕಣಿವೆಯಲ್ಲಿ ಪ್ರತ್ಯೇಕತಾವಾದಿಗಳು ಬಂದೂಕು ಹಿಡಿದು ಸರ್ಕಾರದ ವಿರುದ್ಧ ಕಾರ್ಯಾಚರಣೆ ನಡೆಸಿದಾಗ ಕಾಶ್ಮೀರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾಶ್ಮೀರಿ ಪಂಡಿತರು ವಲಸೆ ಬಂದಿದ್ದರು.

ಸರ್ಕಾರವು ಈ ಪಂಡಿತರಿಗೆ ಉಧಂಪುರ ಮತ್ತು ಜಮ್ಮುವಿನಲ್ಲಿ ತಾತ್ಕಾಲಿಕ ವಸತಿ ವ್ಯವಸ್ಥೆ ಕಲ್ಪಿಸಿತ್ತು. ಅದಲ್ಲದೇ ಇತರ ಅನೇಕ ಪಂಡಿತರು ದೇಶದ ವಿವಿಧ ನಗರಗಳಿಗೆ ವಲಸೆ ಹೋಗಿದ್ದರು.

ಒಂದೆಡೆ ಪಂಡಿತರ ಪುನರ್ವಸತಿಗಾಗಿ ಸಾವಿರಾರು ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಸರಕಾರ ಹೇಳುತ್ತಿದ್ದರೆ, ಇನ್ನೊಂದೆಡೆ ಸರ್ಕಾರ ಪಂಡಿತರಿಗೆ ಪುನರ್ವಸತಿ ಕಲ್ಪಿಸಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪಂಡಿತರು ಆರೋಪಿಸಿದ್ದಾರೆ.

ಇದನ್ನೂ ಓದಿ : ಯುವತಿ ಮೇಲೆ ಅತ್ಯಾಚಾರ ಯತ್ನ: ಕೊನೆಗೆ ಸಜೀವ ದಹನ... ಪ್ರಕರಣದ ಬೆನ್ನಟ್ಟಿದ ಪೊಲೀಸರು

ಜಮ್ಮು ಮತ್ತು ಕಾಶ್ಮೀರ : ರಾಜಧಾನಿ ಜಮ್ಮುವಿನಲ್ಲಿ ನಿರಾಶ್ರಿತ ಕಾಶ್ಮೀರಿ ಪಂಡಿತರು ಪುನರ್ವಸತಿ ಕಲ್ಪಿಸುವಂತೆ ಪ್ರತಿಭಟನೆ ನಡೆಸುತ್ತಿದ್ದಾರೆ. 1989ರಲ್ಲಿ ಕಾಶ್ಮೀರದ ಕಣಿವೆಯಲ್ಲಿ ಪ್ರತ್ಯೇಕತಾವಾದಿಗಳು ಬಂದೂಕು ಹಿಡಿದು ಸರ್ಕಾರದ ವಿರುದ್ಧ ಕಾರ್ಯಾಚರಣೆ ನಡೆಸಿದಾಗ ಕಾಶ್ಮೀರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾಶ್ಮೀರಿ ಪಂಡಿತರು ವಲಸೆ ಬಂದಿದ್ದರು.

ಸರ್ಕಾರವು ಈ ಪಂಡಿತರಿಗೆ ಉಧಂಪುರ ಮತ್ತು ಜಮ್ಮುವಿನಲ್ಲಿ ತಾತ್ಕಾಲಿಕ ವಸತಿ ವ್ಯವಸ್ಥೆ ಕಲ್ಪಿಸಿತ್ತು. ಅದಲ್ಲದೇ ಇತರ ಅನೇಕ ಪಂಡಿತರು ದೇಶದ ವಿವಿಧ ನಗರಗಳಿಗೆ ವಲಸೆ ಹೋಗಿದ್ದರು.

ಒಂದೆಡೆ ಪಂಡಿತರ ಪುನರ್ವಸತಿಗಾಗಿ ಸಾವಿರಾರು ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಸರಕಾರ ಹೇಳುತ್ತಿದ್ದರೆ, ಇನ್ನೊಂದೆಡೆ ಸರ್ಕಾರ ಪಂಡಿತರಿಗೆ ಪುನರ್ವಸತಿ ಕಲ್ಪಿಸಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪಂಡಿತರು ಆರೋಪಿಸಿದ್ದಾರೆ.

ಇದನ್ನೂ ಓದಿ : ಯುವತಿ ಮೇಲೆ ಅತ್ಯಾಚಾರ ಯತ್ನ: ಕೊನೆಗೆ ಸಜೀವ ದಹನ... ಪ್ರಕರಣದ ಬೆನ್ನಟ್ಟಿದ ಪೊಲೀಸರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.