ETV Bharat / bharat

ಪಂಜಾಬ್‌ನಲ್ಲಿ 1,200 ಕೋಟಿ ರೂ ಬಾಕಿ ವಿದ್ಯುತ್ ಬಿಲ್ ಮನ್ನಾ ಮಾಡಿದ ಹೊಸ ಸರ್ಕಾರ

author img

By

Published : Sep 29, 2021, 3:50 PM IST

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಂದರ್ಭದಲ್ಲಿ ರಾಜ್ಯದಲ್ಲಿ ಬಾಕಿ ಇರುವ ವಿದ್ಯುತ್ ಬಿಲ್​ ಮನ್ನಾ ಮಾಡುವುದಾಗಿ ಚರಣ್​ಜಿತ್​ ಸಿಂಗ್​ ಚನ್ನಿ ಘೋಷಣೆ ಮಾಡಿದ್ದರು.

Punjab CM
Punjab CM

ಚಂಡೀಗಢ(ಪಂಜಾಬ್​): ಪಂಜಾಬ್​ ಕಾಂಗ್ರೆಸ್​​ನಲ್ಲಿ ರಾಜಕೀಯ ಬಿಕ್ಕಟ್ಟು ಉದ್ಭವವಾಗುತ್ತಿದೆ. ಪ್ರತಿದಿನ ಒಂದಿಲ್ಲೊಂದು ಅಚ್ಚರಿ ರೀತಿಯ ಬೆಳವಣಿಗೆಗೆ ರಾಜ್ಯ ಸಾಕ್ಷಿಯಾಗುತ್ತಿದೆ. ಇದರ ನಡುವೆ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಚರಣ್​ಜಿತ್ ಸಿಂಗ್​ ಚನ್ನಿ ನೇತೃತ್ವದ ಸರ್ಕಾರ ಇಂದು ಮಹತ್ವದ ನಿರ್ಧಾರ ಕೈಗೊಂಡಿದೆ.

ಸಿಎಂ ಚರಣ್​ಜಿತ್​ ಸಿಂಗ್​ ಚನ್ನಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ 55 ಲಕ್ಷ ಜನರ (ಡೀಫಾಲ್ಟರ್​​) ಬಾಕಿಯಿರುವ ವಿದ್ಯುತ್​ ಬಿಲ್​ ಮನ್ನಾ ಮಾಡಿ ಆದೇಶ ಹೊರಡಿಸಿದೆ. ಇದರಿಂದ ಸರ್ಕಾರಕ್ಕೆ ಬರೋಬ್ಬರಿ 1,200 ಕೋಟಿ ರೂ. ಹೆಚ್ಚಿನ ಹೊರೆ ಬೀಳಲಿದೆ ಎಂದು ಸಿಎಂ ತಿಳಿಸಿದ್ದಾರೆ.

ಇದನ್ನೂ ಓದಿ: ವಿದ್ಯುತ್, ನೀರು ಬಾಕಿ ಸಂಪೂರ್ಣ ಮನ್ನಾ ಮಾಡಿ ನಾನೇ 'ಆಮ್ ಆದ್ಮಿ' ಎಂದ ಚನ್ನಿ: ಅಮರೀಂದರ್ ಸಿಂಗ್‌ ಆಪ್ತ ಅಧಿಕಾರಿಗಳಿಗೂ ಗೇಟ್‌ಪಾಸ್‌!

ಕ್ಯಾಪ್ಟನ್​​ ಅಮರೀಂದರ್​​ ಸಿಂಗ್ ರಾಜೀನಾಮೆಯಿಂದ ತೆರವಾಗಿದ್ದ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆಯಾಗಿದ್ದ ಚರಣ್​ ಜಿತ್​ ಚನ್ನಿ, ಸೆಪ್ಟೆಂಬರ್​ 20ರಂದು ನೂತನ ಸಿಎಂ ಆಗಿ ಪದಗ್ರಹಣ ಮಾಡಿದ್ದರು. ಈ ವೇಳೆ ಮಹತ್ವದ ಘೋಷಣೆ ಮಾಡಿದ್ದ ಅವರು, ವಿದ್ಯುತ್​, ನೀರಿನ ಬಾಕಿ ಬಿಲ್​ ಸಂಪೂರ್ಣ ಮನ್ನಾ ಮಾಡುವುದಾಗಿ ಹೇಳಿದ್ದರು. ಇದೀಗ ಬಾಕಿ ಇರುವ ವಿದ್ಯುತ್​ ಬಿಲ್​ ಮನ್ನಾ ಮಾಡಿ ಆದೇಶ ಹೊರಡಿಸಲಾಗಿದ್ದು, ಗ್ರಾಮೀಣ ಹಾಗೂ ನಗರ ಪ್ರದೇಶದ ಜನರಿಗೆ ಸಹಾಯವಾಗಲಿದೆ ಎಂದಿದ್ದಾರೆ.​

ಪಂಜಾಬ್ ಕಾಂಗ್ರೆಸ್ ಬಿಕ್ಕಟ್ಟು

ಕ್ಯಾ.ಅಮರೀಂದರ್ ಸಿಂಗ್​ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಪಂಜಾಬ್‌ನಲ್ಲಿ ಎಲ್ಲವೂ ಸರಿಯಿಲ್ಲ ಅನ್ನೋದು ಮತ್ತೊಮ್ಮೆ ಸಾಬೀತಾಗಿದೆ. ನಿನ್ನೆ ಕಾಂಗ್ರೆಸ್​​​ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಸಚಿವೆ ರಜಿಯಾ ಸುಲ್ತಾನಾ ಸೇರಿದಂತೆ ಅನೇಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪಂಜಾಬ್​ನಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ.

ಚಂಡೀಗಢ(ಪಂಜಾಬ್​): ಪಂಜಾಬ್​ ಕಾಂಗ್ರೆಸ್​​ನಲ್ಲಿ ರಾಜಕೀಯ ಬಿಕ್ಕಟ್ಟು ಉದ್ಭವವಾಗುತ್ತಿದೆ. ಪ್ರತಿದಿನ ಒಂದಿಲ್ಲೊಂದು ಅಚ್ಚರಿ ರೀತಿಯ ಬೆಳವಣಿಗೆಗೆ ರಾಜ್ಯ ಸಾಕ್ಷಿಯಾಗುತ್ತಿದೆ. ಇದರ ನಡುವೆ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಚರಣ್​ಜಿತ್ ಸಿಂಗ್​ ಚನ್ನಿ ನೇತೃತ್ವದ ಸರ್ಕಾರ ಇಂದು ಮಹತ್ವದ ನಿರ್ಧಾರ ಕೈಗೊಂಡಿದೆ.

ಸಿಎಂ ಚರಣ್​ಜಿತ್​ ಸಿಂಗ್​ ಚನ್ನಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ 55 ಲಕ್ಷ ಜನರ (ಡೀಫಾಲ್ಟರ್​​) ಬಾಕಿಯಿರುವ ವಿದ್ಯುತ್​ ಬಿಲ್​ ಮನ್ನಾ ಮಾಡಿ ಆದೇಶ ಹೊರಡಿಸಿದೆ. ಇದರಿಂದ ಸರ್ಕಾರಕ್ಕೆ ಬರೋಬ್ಬರಿ 1,200 ಕೋಟಿ ರೂ. ಹೆಚ್ಚಿನ ಹೊರೆ ಬೀಳಲಿದೆ ಎಂದು ಸಿಎಂ ತಿಳಿಸಿದ್ದಾರೆ.

ಇದನ್ನೂ ಓದಿ: ವಿದ್ಯುತ್, ನೀರು ಬಾಕಿ ಸಂಪೂರ್ಣ ಮನ್ನಾ ಮಾಡಿ ನಾನೇ 'ಆಮ್ ಆದ್ಮಿ' ಎಂದ ಚನ್ನಿ: ಅಮರೀಂದರ್ ಸಿಂಗ್‌ ಆಪ್ತ ಅಧಿಕಾರಿಗಳಿಗೂ ಗೇಟ್‌ಪಾಸ್‌!

ಕ್ಯಾಪ್ಟನ್​​ ಅಮರೀಂದರ್​​ ಸಿಂಗ್ ರಾಜೀನಾಮೆಯಿಂದ ತೆರವಾಗಿದ್ದ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆಯಾಗಿದ್ದ ಚರಣ್​ ಜಿತ್​ ಚನ್ನಿ, ಸೆಪ್ಟೆಂಬರ್​ 20ರಂದು ನೂತನ ಸಿಎಂ ಆಗಿ ಪದಗ್ರಹಣ ಮಾಡಿದ್ದರು. ಈ ವೇಳೆ ಮಹತ್ವದ ಘೋಷಣೆ ಮಾಡಿದ್ದ ಅವರು, ವಿದ್ಯುತ್​, ನೀರಿನ ಬಾಕಿ ಬಿಲ್​ ಸಂಪೂರ್ಣ ಮನ್ನಾ ಮಾಡುವುದಾಗಿ ಹೇಳಿದ್ದರು. ಇದೀಗ ಬಾಕಿ ಇರುವ ವಿದ್ಯುತ್​ ಬಿಲ್​ ಮನ್ನಾ ಮಾಡಿ ಆದೇಶ ಹೊರಡಿಸಲಾಗಿದ್ದು, ಗ್ರಾಮೀಣ ಹಾಗೂ ನಗರ ಪ್ರದೇಶದ ಜನರಿಗೆ ಸಹಾಯವಾಗಲಿದೆ ಎಂದಿದ್ದಾರೆ.​

ಪಂಜಾಬ್ ಕಾಂಗ್ರೆಸ್ ಬಿಕ್ಕಟ್ಟು

ಕ್ಯಾ.ಅಮರೀಂದರ್ ಸಿಂಗ್​ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಪಂಜಾಬ್‌ನಲ್ಲಿ ಎಲ್ಲವೂ ಸರಿಯಿಲ್ಲ ಅನ್ನೋದು ಮತ್ತೊಮ್ಮೆ ಸಾಬೀತಾಗಿದೆ. ನಿನ್ನೆ ಕಾಂಗ್ರೆಸ್​​​ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಸಚಿವೆ ರಜಿಯಾ ಸುಲ್ತಾನಾ ಸೇರಿದಂತೆ ಅನೇಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪಂಜಾಬ್​ನಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.