ETV Bharat / bharat

ಭಕ್ತರಿಗೆ ಗುಡ್​ನ್ಯೂಸ್​: ಫೆ.1ರಿಂದ ಐತಿಹಾಸಿಕ ಪುರಿ ಜಗನ್ನಾಥ ದೇವಾಲಯ ಓಪನ್​!

author img

By

Published : Jan 28, 2022, 9:53 PM IST

ಕೋವಿಡ್​ನಿಂದಾಗಿ ಬಂದ್​ ಆಗಿದ್ದ ಐತಿಹಾಸಿ ಒಡಿಶಾದ ಪುರಿ ಜಗನ್ನಾಥ ದೇವಾಲಯ ಇದೀಗ ಭಕ್ತರಿಗಾಗಿ ಓಪನ್ ಆಗಲಿದ್ದು, ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯವಾಗಿದೆ..

Puri Jagannath temple to reopen
Puri Jagannath temple to reopen

ಪುರಿ(ಒಡಿಶಾ) : ದೇಶದಲ್ಲಿ ಕೋವಿಡ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚಾದ ಕಾರಣ ಜನವರಿ 31ರವರೆಗೆ ಬಂದ್​ ಆಗಿರುವ ಐತಿಹಾಸಿಕ ದೇವಾಲಯ ಪುರಿ ಜಗನ್ನಾಥ ಇದೀಗ ಫೆಬ್ರವರಿ 1ರಿಂದಲೇ ಓಪನ್​ ಆಗಲಿದೆ. ಇದಕ್ಕೆ ಸಂಬಂಧಿಸಿದಂತೆ ಪುರಿ ಜಿಲ್ಲಾಧಿಕಾರಿ ಮಹತ್ವದ ಸೂಚನೆ ಹೊರಡಿಸಿದ್ದಾರೆ.

ದೇಶದಲ್ಲಿ ಮೂರನೇ ಕೋವಿಡ್ ಅಲೆ ಜೋರಾಗಿದ್ದ ಕಾರಣ ದೇಶದ ಬಹುತೇಕ ಎಲ್ಲ ದೇವಾಲಯಗಳು ಬಂದ್​ ಆಗಿದ್ದವು. ಈ ಸಾಲಿನಲ್ಲಿ ಐತಿಹಾಸಿಕ ಒಡಿಶಾದ ಪುರಿ ಜಗನ್ನಾಥ ದೇವಾಲಯ ಸಹ ಸೇರಿಕೊಂಡಿತ್ತು. ಆದರೆ, ಇದೀಗ ಭಕ್ತರಿಗಾಗಿ ಓಪನ್​ ಆಗಲಿದ್ದು, ಫೆ.1ರಿಂದ ಭಕ್ತಾಧಿಗಳು ಇಲ್ಲಿಗೆ ಭೇಟಿ ನೀಡಬಹುದು ಎಂದು ಜಿಲ್ಲಾಧಿಕಾರಿ ಸಮರ್ಥ್​ ವರ್ಮಾ ತಿಳಿಸಿದ್ದಾರೆ.

ಜಗನ್ನಾಥ ದೇವಾಲಯದ ಆಡಳಿತ ಮಂಡಳಿ ಮತ್ತು ದೇವಾಲಯದ ದಾಸ್ಯಕಾರರ ಅತ್ಯುನ್ನತ ಸಂಸ್ಥೆ ಜೊತೆ ನಡೆದ ಸಭೆ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.

ಇದನ್ನೂ ಓದಿರಿ: ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರಾಗಿ ವಿ. ಅನಂತ ನಾಗೇಶ್ವರನ್ ನೇಮಕ

ಸ್ಯಾನಿಟೈಸ್ ಮಾಡುವ ಉದ್ದೇಶದಿಂದ ಪ್ರತಿ ಭಾನುವಾರ ದೇವಾಲಯ ಬಂದ್ ಮಾಡಲಾಗುವುದು ಎಂದು ತಿಳಿಸಿರುವ ಡಿಸಿ, ಎರಡು ಡೋಸ್ ಕೋವಿಡ್ ವ್ಯಾಕ್ಸಿನ್ ಪಡೆದುಕೊಂಡವರು ಹಾಗೂ 72 ಗಂಟೆಯೊಳಗಿನ ಆರ್​​ಟಿಪಿಸಿಆರ್​​ ರಿಪೋರ್ಟ್ ತೆಗೆದುಕೊಂಡು ಬರುವುದು ಅನಿವಾರ್ಯ ಎಂದಿದ್ದಾರೆ. ದೇವಸ್ಥಾನದ ಆವರಣದಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡುವುದು ಕಡ್ಡಾಯಗೊಳಿಸಲಾಗಿದೆ.

ಕಳೆದ ಜನವರಿ ತಿಂಗಳಲ್ಲಿ ಈ ಐತಿಹಾಸಿಕ ದೇವಸ್ಥಾನದೊಳಗೆ ಕೋವಿಡ್ ಪ್ರಕರಣ ಪತ್ತೆಯಾದ ಕಾರಣ ಈ ದೇಗುಲ ಬಂದ್ ಮಾಡಲು ನಿರ್ಧಾರ ಕೈಗೊಳ್ಳಲಾಗಿತ್ತು.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಪುರಿ(ಒಡಿಶಾ) : ದೇಶದಲ್ಲಿ ಕೋವಿಡ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚಾದ ಕಾರಣ ಜನವರಿ 31ರವರೆಗೆ ಬಂದ್​ ಆಗಿರುವ ಐತಿಹಾಸಿಕ ದೇವಾಲಯ ಪುರಿ ಜಗನ್ನಾಥ ಇದೀಗ ಫೆಬ್ರವರಿ 1ರಿಂದಲೇ ಓಪನ್​ ಆಗಲಿದೆ. ಇದಕ್ಕೆ ಸಂಬಂಧಿಸಿದಂತೆ ಪುರಿ ಜಿಲ್ಲಾಧಿಕಾರಿ ಮಹತ್ವದ ಸೂಚನೆ ಹೊರಡಿಸಿದ್ದಾರೆ.

ದೇಶದಲ್ಲಿ ಮೂರನೇ ಕೋವಿಡ್ ಅಲೆ ಜೋರಾಗಿದ್ದ ಕಾರಣ ದೇಶದ ಬಹುತೇಕ ಎಲ್ಲ ದೇವಾಲಯಗಳು ಬಂದ್​ ಆಗಿದ್ದವು. ಈ ಸಾಲಿನಲ್ಲಿ ಐತಿಹಾಸಿಕ ಒಡಿಶಾದ ಪುರಿ ಜಗನ್ನಾಥ ದೇವಾಲಯ ಸಹ ಸೇರಿಕೊಂಡಿತ್ತು. ಆದರೆ, ಇದೀಗ ಭಕ್ತರಿಗಾಗಿ ಓಪನ್​ ಆಗಲಿದ್ದು, ಫೆ.1ರಿಂದ ಭಕ್ತಾಧಿಗಳು ಇಲ್ಲಿಗೆ ಭೇಟಿ ನೀಡಬಹುದು ಎಂದು ಜಿಲ್ಲಾಧಿಕಾರಿ ಸಮರ್ಥ್​ ವರ್ಮಾ ತಿಳಿಸಿದ್ದಾರೆ.

ಜಗನ್ನಾಥ ದೇವಾಲಯದ ಆಡಳಿತ ಮಂಡಳಿ ಮತ್ತು ದೇವಾಲಯದ ದಾಸ್ಯಕಾರರ ಅತ್ಯುನ್ನತ ಸಂಸ್ಥೆ ಜೊತೆ ನಡೆದ ಸಭೆ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.

ಇದನ್ನೂ ಓದಿರಿ: ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರಾಗಿ ವಿ. ಅನಂತ ನಾಗೇಶ್ವರನ್ ನೇಮಕ

ಸ್ಯಾನಿಟೈಸ್ ಮಾಡುವ ಉದ್ದೇಶದಿಂದ ಪ್ರತಿ ಭಾನುವಾರ ದೇವಾಲಯ ಬಂದ್ ಮಾಡಲಾಗುವುದು ಎಂದು ತಿಳಿಸಿರುವ ಡಿಸಿ, ಎರಡು ಡೋಸ್ ಕೋವಿಡ್ ವ್ಯಾಕ್ಸಿನ್ ಪಡೆದುಕೊಂಡವರು ಹಾಗೂ 72 ಗಂಟೆಯೊಳಗಿನ ಆರ್​​ಟಿಪಿಸಿಆರ್​​ ರಿಪೋರ್ಟ್ ತೆಗೆದುಕೊಂಡು ಬರುವುದು ಅನಿವಾರ್ಯ ಎಂದಿದ್ದಾರೆ. ದೇವಸ್ಥಾನದ ಆವರಣದಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡುವುದು ಕಡ್ಡಾಯಗೊಳಿಸಲಾಗಿದೆ.

ಕಳೆದ ಜನವರಿ ತಿಂಗಳಲ್ಲಿ ಈ ಐತಿಹಾಸಿಕ ದೇವಸ್ಥಾನದೊಳಗೆ ಕೋವಿಡ್ ಪ್ರಕರಣ ಪತ್ತೆಯಾದ ಕಾರಣ ಈ ದೇಗುಲ ಬಂದ್ ಮಾಡಲು ನಿರ್ಧಾರ ಕೈಗೊಳ್ಳಲಾಗಿತ್ತು.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.